ರಾಯಚೂರು: ಪಕ್ಷದಲ್ಲಿ ಸಮರ್ಥ ಅಭ್ಯರ್ಥಿಗಳು ಇದ್ದಾಗ, ನಾವು ಕುಟುಂಬದಿಂದ ಯಾರನ್ನೂ ಸ್ಪರ್ಧೆಗೆ ಇಳಿಸಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.
ಹಾಸನದಲ್ಲಿ (Hassan) ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ರಾಯಚೂರಿನ (Raichur) ಕಲ್ಮಲಾ ಗ್ರಾಮದಲ್ಲಿಂದು ಮಾತನಾಡಿದ್ದಾರೆ. ಇದನ್ನೂ ಓದಿ: ನನ್ನ ರಾಜಕೀಯ ನಿವೃತ್ತಿ ಜೊತೆಗೆ ನನ್ನ ಆಸೆ ಆಕಾಂಕ್ಷೆಗಳು ನಿವೃತ್ತವಾಗಿವೆ: ಎಸ್.ಎಂ.ಕೃಷ್ಣ
ನಾಲ್ವರು ಮಹಿಳೆಯರಿಗೆ ಟಿಕೆಟ್ ಘೋಷಣೆ ಮಾಡಿದ್ದೇವೆ. ನಾಲ್ಕು-ಐದು ಜನ ಹೇಳಿದ ತಕ್ಷಣ ಅವರು ಹೇಳಿದಂತೆ ಆಗಲ್ಲ. ಚುನಾವಣೆಯಲ್ಲಿ ಸಮರ್ಥ ಅಭ್ಯರ್ಥಿಗಳು ಇದ್ದಾಗ, ನಾವು ಕುಟುಂಬದಿಂದ ಯಾರನ್ನು ಸ್ಪರ್ಧೆಗೆ ಇಳಿಸಲ್ಲ. ಕೆಲವರಿಗೆ ವೈಯಕ್ತಿಕ ಪ್ರೀತಿ ವಿಶ್ವಾಸವಿರುತ್ತೆ. ಹಾಗಾಗಿ, ಅಭಿಮಾನದಿಂದ ಮಾತನಾಡಿದ್ದಾರೆ. ಅಭಿಮಾನದಿಂದ ಮಾತನಾಡಿದ್ದು ಎಲ್ಲಾ ಅಭಿಪ್ರಾಯವೆಂದು ತೀರ್ಮಾನಿಸಲು ಆಗಲ್ಲ. ಇನ್ನುಳಿದಿದ್ದು ಮನೆಯಲ್ಲಿ ಕುಳಿತು ಮತ್ತು ಪಕ್ಷದ ಚೌಕಟ್ಟಿನಲ್ಲಿ ಕುಳಿತು ತೀರ್ಮಾನ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಚುನಾವಣೆಗೆ (Election) ಸಂಬಂಧಿಸಿದಂತೆ ಬಿ.ಫಾರ್ಮ್ ದೇವೇಗೌಡರು ಕೊಡ್ತಾರೆ. ಅಂತಿಮವಾಗಿ ಪಕ್ಷದ ನಾಯಕರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಟಿ.ನರಸೀಪುರದಲ್ಲಿ ಕೊನೆಗೂ ಚಿರತೆ ಸೆರೆ – ಸ್ಥಳದಲ್ಲೇ ಕೊಂದುಹಾಕಿ ಅಂತಾ ಜನರ ಪಟ್ಟು
ಕುಮಾರಸ್ವಾಮಿ ಕುಟುಂಬದಲ್ಲಿ ಭಿನ್ನಾಭಿಪ್ರಾಯ ವಿಚಾರಕ್ಕೆ ಪ್ರತಿಕ್ರಿಯಿಸಿ, ನಮ್ಮ ಕುಟುಂಬದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಬರಲ್ಲ. ಯಾವುದೇ ರೀತಿಯ ಸಂಘರ್ಷವೂ ಆಗಲ್ಲ. ಎಲ್ಲಾ ಕ್ಲಿಯರ್ ಮಾಡಲು, ಸಮಸ್ಯೆಗಳು ಏನು ಇಲ್ಲ. ಯಾರೂ ಕುತೂಹಲ, ಆತಂಕಕ್ಕೆ ಒಳಗಾಗೋದು ಬೇಡ ಎಂದು ಸ್ಪಷ್ಟನೆ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k