Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತುಮಕೂರಿನ ಈ ಪುಟ್ಟ ಕ್ಷೇತ್ರದಲ್ಲಿ ಯಾರಾಗ್ತಾರೆ ಸಾಮ್ರಾಟ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Karnataka Election 2023 | ತುಮಕೂರಿನ ಈ ಪುಟ್ಟ ಕ್ಷೇತ್ರದಲ್ಲಿ ಯಾರಾಗ್ತಾರೆ ಸಾಮ್ರಾಟ?

Karnataka Election 2023

ತುಮಕೂರಿನ ಈ ಪುಟ್ಟ ಕ್ಷೇತ್ರದಲ್ಲಿ ಯಾರಾಗ್ತಾರೆ ಸಾಮ್ರಾಟ?

Public TV
Last updated: April 18, 2023 6:58 pm
Public TV
Share
3 Min Read
g.parameshwara sudhakar lal anil kumar
SHARE

ತುಮಕೂರು: ತುಮಕೂರು (Tumakuru) ಜಿಲ್ಲೆಯಲ್ಲೇ ಕೊರಟಗೆರೆ ಅತಿ ಚಿಕ್ಕ ಕ್ಷೇತ್ರ. ಈ ವಿಧಾನಸಭಾ ಕ್ಷೇತ್ರ ಚಿಕ್ಕದಾದರೂ ಚುನಾವಣೆ ಹಾಗೂ ರಾಜಕೀಯ ವಿಚಾರದಲ್ಲಿ ರಾಜ್ಯದ ಗಮನ ಸೆಳೆಯುತ್ತಲೇ ಬಂದಿದೆ. ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿರುವ ಕೊರಟಗೆರೆಯಲ್ಲಿ (Koratagere) ಪ್ರಸ್ತುತ ಚುನಾವಣಾ ರಾಜಕೀಯ ಬೆಳವಣಿಗೆ ಹೇಗಿದೆ ಎಂಬುದನ್ನು ನೋಡೋಣ.

ಕೊರಟಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಹಾಗೂ ಜೆಡಿಎಸ್ (JDS) ನಡುವೆ ನೇರಾನೇರ ಫೈಟ್ ಇದೆ. ಕಾಂಗ್ರೆಸ್ ಅಭ್ಯರ್ಥಿ ಹಾಲಿ ಶಾಸಕ ಹಾಗೂ ಮಾಜಿ ಡಿಸಿಎಂ ಜಿ.ಪರಮೇಶ್ವರ (G.Parameshwara) ಹಾಗೂ ಜೆಡಿಎಸ್ ಮಾಜಿ ಶಾಸಕ ಸುಧಾಕರ್ ಲಾಲ್ (Sudhakar Lal) ನಡುವೆ ಹಣಾಹಣಿ ನಡೆಯಲಿದೆ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್‌ಗೆ (Anil Kumar) ಬಿಜೆಪಿ (BJP) ಟಿಕೆಟ್‌ ನೀಡಿದ್ದು, ಜಿ.ಪರಮೇಶ್ವರ ನಿರಾಯಾಸ ಗೆಲುವಿಗೆ ತೊಡಕಾಗಿದೆ. ಇದನ್ನೂ ಓದಿ: ಸಕ್ಕರೆ ನಾಡು ಮೀಸಲು ಕ್ಷೇತ್ರದಲ್ಲಿ ಕೈ, ಕಮಲ, ತೆನೆ ಪೈಪೋಟಿ

Dr. G Parameshwara

ಅನಿಲ್ ಕುಮಾರ್ ಎಡಗೈ ಸಮುದಾಯಕ್ಕೆ ಸೇರಿದವರಾಗಿದ್ದು, ಆ ಸಮುದಾಯದ ಸುಮಾರು 40,000 ಮತಗಳಿವೆ. ಆದರೆ ಜಿ.ಪರಮೇಶ್ವರ ಬಲೈಗೆ ಸಮುದಾಯಕ್ಕೆ ಸೇರಿದ್ದು, ಕೇವಲ 4-5 ಸಾವಿರ ಮತಗಳು ಮಾತ್ರ ಇದೆ. ಹಾಗಾಗಿ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಹೆಚ್ಚು ಮತಗಳನ್ನು ಪಡೆದರೆ ಅದು ಜಿ.ಪರಮೇಶ್ವರರಿಗೆ ಮುಳುವಾಗಬಹುದು. ಈ ಹಿಂದಿನ ಚುನಾವಣೆಗಳಲ್ಲಿ ಎಡಗೈ ಸಮುದಾಯದವರು ಹೆಚ್ಚಿನದಾಗಿ ಪರಮೇಶ್ವರ ಕೈ ಹಿಡಿಯುತ್ತಿದ್ದರು. ಆದರೀಗ ತಮ್ಮದೇ ಸಮುದಾಯದ ಪ್ರಬಲ ವ್ಯಕ್ತಿ ಸ್ಪರ್ಧೆಗೆ ಇಳಿದಿರುವುದರಿಂದ ಎಡಗೈ ಸಮುದಾಯದ ಬಹುಪಾಲು ಮತಗಳು ಬಿಜೆಪಿ ಅಭ್ಯರ್ಥಿ ಕಡೆಗೆ ವಾಲಿ ಪರಮೇಶ್ವರಗೆ ಹಿನ್ನಡೆ ಆಗಬಹುದು. ಇದರ ಲಾಭ ಜೆಡಿಎಸ್‌ಗೆ ಆಗಲಿದೆ ಎಂಬ ಲೆಕ್ಕಾಚಾರ ಶುರುವಾಗಿದೆ. ಆದರೂ ಸದ್ಯದ ಪರಿಸ್ಥಿತಿಯಲ್ಲಿ ಜೆಡಿಎಸ್ ಅಭ್ಯರ್ಥಿ ಅಷ್ಟೊಂದು ಪ್ರಚಾರದಲ್ಲಿ ತೊಡಗಿಲ್ಲ. ಜಿ.ಪರಮೇಶ್ವರ ಅವರು ಕಾಲಿಗೆ ಚಕ್ರಕಟ್ಟಿಕೊಂಡು ಮತದಾರರನ್ನು ತಲುಪುತ್ತಿದ್ದಾರೆ. ಜೆಡಿಎಸ್ ಇದೇ ರೀತಿ ಕ್ಷೀಣವಾಗಿದ್ದರೆ ಕಾಂಗ್ರೆಸ್‌ಗೆ ಗೆಲುವಿನ ಹಾದಿ ಸುಗಮವಾಗಲಿದೆ.

ವೈಯಕ್ತಿಕ ವರ್ಚಸ್ಸು, ಅಭಿವೃದ್ಧಿ ಕೆಲಸ ಪರಮೇಶ್ವರ್‌ ‘ಕೈ’ ಹಿಡಿಯುತ್ತಾ?
ಕೊರಟಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಜಿ.ಪರಮೇಶ್ವರ ಪ್ರಬಲರಾಗಿದ್ದಾರೆ. ಪರಮೇಶ್ವರಗೆ ತನ್ನದೇ ಆದ ವರ್ಚಸ್ಸಿದೆ. ಸಚಿವರಾಗಿ, ಡಿಸಿಎಂ ಆಗಿ ಕೆಲಸ ಮಾಡಿದವರು. ಅಲ್ಲದೇ ಪಕ್ಷದಲ್ಲಿ ಪ್ರಭಾವಿ ನಾಯಕರಾಗಿದ್ದು, ಮುಖ್ಯಮಂತ್ರಿ ಸ್ಥಾನ ಆಕಾಂಕ್ಷಿಗಳ ಲಿಸ್ಟ್‌ನಲ್ಲಿದ್ದಾರೆ. ಕಳೆದ ಎರಡು ವರ್ಷದಿಂದಲೇ ಚುನಾವಣೆ ತಯಾರಿ ಮಾಡಿಕೊಂಡಿರುವ ಜಿ‌.ಪರಮೇಶ್ವರ, ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಈ ಹಿಂದಿನದಕ್ಕಿಂತಲೂ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಿರುವುದು ಚುನಾವಣೆಯಲ್ಲಿ ಅವರ ಕೈ ಹಿಡಿಯಬಹುದು. ಇದನ್ನೂ ಓದಿ: ಸಂತೋಷ್ ಹೆಸರು ತಂದಿದ್ದು ಶೆಟ್ಟರ್‌ಗೆ ಶೋಭೆ ತರಲ್ಲ – ಇನ್ನು ಅವ್ರ ದಾರಿ ಅವರಿಗೆ ನಮ್ಮ ದಾರಿ ನಮಗೆ: ಬಿಎಸ್‌ವೈ

Congress BJP JDS

ಇನ್ನೊಂದು ದೃಷ್ಟಿಕೋನದಲ್ಲಿ ನೋಡುವುದಾದರೆ, ಜಿ.ಪರಮೇಶ್ವರ ಸಮುದಾಯದ ಮತ ಅತಿ ಕಡಿಮೆ ಇದೆ. ಈ ಬಾರಿ ಪರಮೇಶ್ವರರನ್ನೇ ಟಾರ್ಗೆಟ್‌ ಮಾಡಿರುವ ಬಿಜೆಪಿ ಈ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಎಡಗೈ ಸಮುದಾಯದ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದೆ. ಇದು ಪರಮೇಶ್ವರರಿಗೆ ಹೊಡೆತ ಕೊಡುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೇ ಕಾಂಗ್ರೆಸ್‌ ಆಡಳಿತದ ಅವಧಿಯಲ್ಲಿ ಸದಾಶಿವ ಆಯೋಗದ ವರದಿ ಜಾರಿ ಮಾಡಲು ಹಿಂದೇಟು ಹಾಕಿದ್ದು ಸಹ ಈ ಬಾರಿ ಕೊರಟಗೆರೆ ಕ್ಷೇತ್ರದ ಚುನಾವಣೆಯಲ್ಲಿ ಪರಿಣಾಮ ಬೀರಬಹುದು. ಪರಮೇಶ್ವರ ವೈಟ್ ಕಾಲರ್ ರಾಜಕಾರಣಿ ಎಂಬ ಹಣೆಪಟ್ಟಿ ಕೂಡ ಹೊತ್ತಿರುವುದು ಪಕ್ಷಕ್ಕೆ ಹಿನ್ನಡೆ ತಂದೊಡ್ಡಬಹುದು ಎಂಬುದು ರಾಜಕೀಯ ತಜ್ಞರ ವಿಶ್ಲೇಷಣೆ.

ಜೆಡಿಎಸ್‌ ಪರಿಸ್ಥಿತಿ ಹೇಗಿದೆ?
ಜೆಡಿಎಸ್‌ ಅಭ್ಯರ್ಥಿಯಾಗಿರುವ ಪಿ.ಆರ್‌.ಸುಧಾಕರ್‌ ಲಾಲ್‌ ಅವರು 2013ರಲ್ಲಿ ಪರಮೇಶ್ವರ ವಿರುದ್ಧವೇ ಜಯಭೇರಿ ಸಾಧಿಸಿ ಶಾಸಕರಾಗಿದ್ದರು. ಮೂರು ಬಾರಿ ಜಿಪಂ ಸದಸ್ಯರಾಗಿ, ಒಂದು ಬಾರಿ ಶಾಸಕರಾಗಿ ಗುರುತಿಸಿಕೊಂಡಿದ್ದಾರೆ. ಸ್ಥಳೀಯವಾಗಿ ಕ್ಷೇತ್ರದ ಜನರಿಗೆ ಲಭ್ಯ ಇರುವ ವ್ಯಕ್ತಿ ಎಂದೂ ಸಹ ಹೇಳಲಾಗುತ್ತಿದೆ. ಲಂಬಾಣಿ ಸಮುದಾಯಕ್ಕೆ ಸೇರಿದವರಾದರೂ, ಜೆಡಿಎಸ್‌ ಅಭ್ಯರ್ಥಿಯಾಗಿರುವುದರಿಂದ ಒಕ್ಕಲಿಗ ಸಮುದಾಯದ ಸುಮಾರು 40,000 ಮತ ಗಟ್ಟಿಯಾಗಿದೆ. ಇದು ಜೆಡಿಎಸ್‌ ಪಕ್ಷಕ್ಕೆ ವರದಾನವಾಗಬಹುದು ಎಂದು ಹೇಳಲಾಗಿದೆ. ಮತ್ತೊಂದು ದಿಕ್ಕಿನಲ್ಲಿ ನೋಡುವುದಾದರೆ, ಆರ್ಥಿಕ ಬಲ ಇಲ್ಲದಿರುವುದು, ರಾಜ್ಯಮಟ್ಟದ ನಾಯಕರ ಸಂಪರ್ಕ ಅಷ್ಟೊಂದು ಇಲ್ಲದಿರುವುದು, ಪ್ರಚಾರದಲ್ಲಿ ಹಿಂದೆ ಉಳಿದಿರುವುದು ಪಕ್ಷಕ್ಕೆ ಹಿನ್ನಡೆಯಾಗಲು ಕಾರಣವಾಗಬಹುದು. ಅಲ್ಲದೇ ಸಮುದಾಯದ ಮತ ಕೇವಲ 7,000 ಇದೆ. ಇದು ಜೆಡಿಎಸ್‌ ಪಕ್ಷಕ್ಕೆ ಮೈನಸ್‌ ಪಾಯಿಂಟ್‌ನಂತಿದೆ. ಇದನ್ನೂ ಓದಿ: ನನ್ನ ಎದುರಾಳಿ ಪ್ರಬಲ ಅಭ್ಯರ್ಥಿ: ರಮೇಶ್ ಜಾರಕಿಹೊಳಿ

ಜಾತಿ‌ ಲೆಕ್ಕಾಚಾರ ಏನು?
ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 2,02,977 ಇದೆ. ಜಾತಿ ಲೆಕ್ಕಾಚಾರದಲ್ಲಿ ನೋಡುವುದಾದರೆ, ಎಸ್ಸಿ-60,009, ಎಸ್ಟಿ- 20,000, ಒಕ್ಕಲಿಗರು-36,000, ಲಿಂಗಾಯತರು- 35,000, ಗೊಲ್ಲರು- 15,000, ಮುಸ್ಲಿಂ- 18,000, ಕುರುಬರು- 15,000, ಬ್ರಾಹ್ಮಣರು- 3,000, ಬಲಿಜ- 4,000 ಇದ್ದಾರೆ.

TAGGED:congressG ParameshwarajdsKoratageretumakuruಕಾಂಗ್ರೆಸ್ಕೊರಟಗೆರೆಜಿ.ಪರಮೇಶ್ವರಜೆಡಿಎಸ್ತುಮಕೂರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
9 minutes ago
hassana rain
Districts

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Public TV
By Public TV
13 minutes ago
Karwar Port
Districts

6,000 ಮೆಟ್ರಿಕ್ ಟನ್ ಕಚ್ಚಾ ಡಾಂಬರ್ ತುಂಬಿದ ಹಡಗು ಯುಎಇ ಯಿಂದ ಕಾರವಾರಕ್ಕೆ ಆಗಮನ

Public TV
By Public TV
29 minutes ago
Chamarajanagar BRT Forest Fire
Chamarajanagar

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

Public TV
By Public TV
34 minutes ago
Russian firms india
Latest

ರಷ್ಯಾ, ಇರಾನ್‌ ತೈಲ ಖರೀದಿಗೆ ಭಾರತಕ್ಕೆ ಅವಕಾಶ ನೀಡುವ ವಿನಾಯಿತಿಯಲ್ಲಿ ವಿಸ್ತರಣೆ ಇಲ್ಲ: ಅಮೆರಿಕ

Public TV
By Public TV
52 minutes ago
Siddaramaiah
Bengaluru City

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?