Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ವಿರಾಜಪೇಟೆ ಕ್ಷೇತ್ರದಲ್ಲಿ ನೇರಾನೇರ ಹಣಾಹಣಿ- ಯಾರ ಕೊರಳಿಗೆ ಬೀಳುತ್ತೆ ಜಯದ ಮಾಲೆ?

Public TV
Last updated: May 6, 2023 11:26 pm
Public TV
Share
3 Min Read
BOPAIAH PONNANNA
SHARE

ಮಡಿಕೇರಿ: ವಿರಾಜಪೇಟೆ ಕ್ಷೇತ್ರ (Virajpete Constituency) ದಲ್ಲಿ ಭಾರತೀಯ ಜನತಾ ಪಾರ್ಟಿ (BJP)- ಕಾಂಗ್ರೆಸ್ (Congress) ಅಭ್ಯರ್ಥಿಗಳು ಈ ಬಾರಿ ನೇರ ಸ್ಪರ್ಧಿಗಳಾಗಿ ಸೆಣಸುತ್ತಾರೆ. ಕಾಂಗ್ರೆಸ್‍ನಿಂದ ಈ ಬಾರಿ ಎ.ಎಸ್ ಪೊನ್ನಣ್ಣ ಸ್ಪರ್ಧಿಸಿದರೆ ಬಿಜೆಪಿಯಿಂದ ಎಂದಿನಂತೆ ಕೆ.ಜಿ ಬೋಪಯ್ಯ ಅಖಾಡದಲ್ಲಿದ್ದಾರೆ.

ಉತ್ಸಾಹಿ ರಾಜಕಾರಣಿ, ಕರ್ನಾಟಕ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ, ಸುಪ್ರೀಂಕೋರ್ಟ್ ವಕೀಲ ಎ.ಎಸ್ ಪೊನ್ನಣ್ಣ ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಕೊಡಗಿನಲ್ಲಿ ಚುನಾವಣೆಗೆ ಪೂರ್ವತಯಾರಿ ಮಾಡಿಕೊಂಡಿದ್ದು, ಕ್ಷೇತ್ರದಲ್ಲಿ ಅವರ ಪರವಾಗಿ ಮತದಾರರಲ್ಲಿ ಒಂದಿಷ್ಟು ಒಲವು ಮೂಡಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಕಾಂಗ್ರೆಸ್‍ನಿಂದ ಯಾವುದೇ ಬಂಡಾಯ ವಿರಾಜಪೇಟೆ ಕ್ಷೇತ್ರದಲ್ಲಿ ಕಾಣಿಸಿಕೊಳ್ಳದೆ ಇರುವುದು ಪೊನ್ನಣ್ಣನವರಿಗೆ ಸಮಾಧಾನವನ್ನೂ ತಂದಿರುತ್ತದೆ.

ponnanna

ಎ.ಕೆ ಸುಬ್ಬಯ್ಯನವರ ಮಗ ಎ.ಎಸ್ ಪೊನ್ನಣ್ಣ: ಕೊಡಗಿನಿಂದ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ರಾಜಕಾರಣದಲ್ಲಿ ಹೆಸರುಗಳಿಸಿರುವ ಎ.ಕೆ ಸುಬ್ಬಯ್ಯನವರ ಶಿಷ್ಯ ಬಣ ರಾಜ್ಯದಾದ್ಯಂತ ಈಗಲೂ ಇದ್ದು ನೇರ ಹಾಗೂ ನಿಷ್ಠುರತೆಗೆ ಹೆಸರು ವಾಸಿಯಾಗಿದ್ದ ಸುಬ್ಬಯ್ಯನವರ ಪುತ್ರ ಈ ಬಾರಿ ಕಾಂಗ್ರೆಸ್‍ನಿಂದ ಸ್ಪರ್ಧೆ ಮಾಡುತ್ತಿರುವುದು ವಿಶೇಷ. ಸಾವಿರಾರು ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದ ಸುಬ್ಬಯ್ಯನವರಿಗೆ ಅಷ್ಟೇ ಸಂಖ್ಯೆಯ ವಿರೋಧಿಗಳು ಇದ್ದಾರೆ. ಹೋರಾಟ ಹಾಗೂ ಕೊಡಗಿನ ನಾಡು, ನುಡಿ, ವೈಚಾರಿಕತೆಗಳ ವಿಚಾರದಲ್ಲಿ ಇದ್ದ ಅವರ ನಿಲುವು ಈ ಚುನಾವಣೆಯಲ್ಲಿ ಪೊನ್ನಣ್ಣನವರಿಗೆ ವ್ಯತಿರಿಕ್ತ ಪರಿಣಾಮ ಬೀರುತ್ತದಾ? ಅಥವಾ ಮತವಾಗಿ ಪರಿವರ್ತನೆ ಆಗುತ್ತದಾ ಎಂಬುದು ಯಕ್ಷಪ್ರಶ್ನೆಯಾಗಿದೆ. ನಯವಾದ ಮಾತುಗಾರಿಕೆ, ವಿನಯವಂತಿಕೆ ಹಾಗೂ ವೈಚಾರಿಕವಾಗಿ ಪೊನ್ನಣ್ಣನವರ ನಿಲುವು ತಂದೆಗಿಂತ ಭಿನ್ನವಾಗಿದೆ ಎಂದು ಈಗಾಗಲೇ ಹಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

congress

ಇತ್ತ ಟಿಕೆಟ್‍ಗಾಗಿ ಭಾಜಪದಲ್ಲಿ ಈ ಹಿಂದೆ ಎಂದೂ ಕಾಣಿಸದಷ್ಟು ಪೈಪೋಟಿಯ ನಡುವೆಯೂ ಸತತವಾಗಿ ಗೆಲುವು ಸಾಧಿಸುತ್ತಾ ಬಂದಿರುವ ಕೆ.ಜಿ ಬೋಪಯ್ಯನವರಿಗೆ ಈ ಬಾರಿಯೂ ಬಿಜೆಪಿ ಹೈಕಮಾಂಡ್ ಅಸ್ತು ಅಂದಿದೆ. ಆದರೂ ಇತರೆ ಟಿಕೆಟ್ ಆಕಾಂಕ್ಷಿಗಳು ಹಾಗೂ ಅವರ ಬೆಂಬಲಿಗರು ಈ ವಿಚಾರದಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿರುವುದು ಬೋಪಯ್ಯನವರಿಗೆ ಒಂದಿಷ್ಟು ತಲೆ ಬಿಸಿ ತಂದಂತೆ ಕಾಣುತ್ತಿದೆ. ಬೋಪಯ್ಯನವರು ಎಂದಿನಂತೆ ಗೆಲ್ಲುವ ವಿಶ್ವಾಸದಲ್ಲಿ ಇದ್ದಾರೆ. ಬೂತ್ ಮಟ್ಟದಲ್ಲಿ ಸಧೃಡವಾಗಿರುವ ಪಕ್ಷದ ಕಾರ್ಯಕರ್ತರೂ ಹಾಗೂ ಬಿಜೆಪಿಯ ಕಾಯಂ ಮತದಾರರು ಅವರನ್ನು ಗೆಲ್ಲಿಸುತ್ತಾರೆ ಅನ್ನುವುದು ಅವರ ನಂಬಿಕೆಯಾಗಿದೆ.

kg bopaiah

ಯಾರಿಗೆ ಪ್ಲಸ್:
ಹಿಂದೂ ಪರ ಸಂಘಟನೆಗಳು ಪ್ರಬಲವಾಗಿರುವ ಕೊಡಗಿನಲ್ಲಿ ಬಿಜೆಪಿ ಗೆಲುವಿಗೆ ಪ್ರತಿಬಾರಿಯಂತೆ ಈ ಬಾರಿಯೂ ಆಂತರಿಕ ಅಸಮಾಧಾನವನ್ನು ಬದಿಗಿಟ್ಟು ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಪ್ರಯತ್ನ ಮಾಡುತ್ತಾರೆ ಅನ್ನುವುದು ಬಿಜೆಪಿಯ ಮಡಿಕೇರಿ ಹಾಗೂ ವಿರಾಜಪೇಟೆ ಈ ಎರಡೂ ಕ್ಷೇತ್ರದ ಅಭ್ಯರ್ಥಿಗಳ ನಂಬಿಕೆ. ಮೋದಿ ಅಲೆ ಕೊಡಗಿನಲ್ಲಿ ಒಂದಿಷ್ಟು ಕಡಿಮೆ ಆಗಿದೆ ಅನ್ನುವುದು ಬಿಟ್ಟರೆ ಮೋದಿ ಹೆಸರಿನಲ್ಲಿ ಬಿಜೆಪಿಗೆ ಮತಚಲಾವಣೆ ಮಾಡುವ ಮತದಾರರು ಅಧಿಕ ಸಂಖ್ಯೆಯಲ್ಲಿ ಕೊಡಗಿನಲ್ಲಿ ಇದ್ದು ಕೆ.ಜಿ ಬೋಪಯ್ಯ ಅವರು ಕಳೆದ 20 ವರ್ಷಗಳಿಂದ ಮಾಡಿರುವ ಅಭಿವೃದ್ಧಿ ಕಾರ್ಯಗಳು ಶ್ರೀ ರಕ್ಷೆಯಾಗುವ ಸಾಧ್ಯತೆಯು ಇದೆ. ಇದನ್ನೂ ಓದಿ: ಜಿದ್ದಾಜಿದ್ದಿನ ಹೋರಾಟಕ್ಕಿಳಿದ ಕೈ, ಬಿಜೆಪಿ ಅಭ್ಯರ್ಥಿಗಳು- ಯಾರಿಗೆ ಒಲಿಯಲಿದೆ ಮಡಿಕೇರಿ ಕ್ಷೇತ್ರ?

bjp flag

ಯಾರಿಗೆ ಮೈನಸ್:
ಎಎಸ್ ಪೊನ್ನಣ್ಣ ಕಳೆದ ನಾಲ್ಕು ವರ್ಷಗಳಿಂದ ವಿರಾಜಪೇಟೆ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಹಾಗೂ ಕೊಡಗಿನ ಕೋವಿ ಹಕ್ಕು ಜಮ್ಮಬಾಣೆ ಸಮಸ್ಯೆಗಳ ಬಗ್ಗೆ ನ್ಯಾಯಲಯದಲ್ಲಿ ಧ್ವನಿ ಎತ್ತಿ ಜಿಲ್ಲೆಯ ಸಮಸ್ಯೆಗಳಿಗೆ ಮುಕ್ತಿ ನೀಡಿದ್ದಾರೆ. ಅಲ್ಲದೇ ಯುವಕರ ಹಾದಿಯಾಗಿ ಹಿಂದುಳಿದ ವರ್ಗ ಹಾಡಿ ಜನರೊಂದಿಗೆ ಸೇರಿ ಪಕ್ಷ ಸಂಘಟನೆ ಮಾಡಿದ್ದಾರೆ ತನ್ನ ತಂದೆ ಹೆಸರಿನಲ್ಲಿ ಸಮಾಜ ಸೇವೆ ಮಾಡಿಕೊಂಡು ಬರುತ್ತಿರುವ ಪೊನ್ನಣ್ಣ ಅವರಿಗೆ ವಿರಾಜಪೇಟೆ ಕ್ಷೇತ್ರದಲ್ಲಿ ವರ್ಚಸ್ಸು ಜಾಸ್ತಿ ಅಗಿದೆ. ಕೊಡವ ಮತ್ತು ಅಲ್ಪಸಂಖ್ಯಾತ ಮತಗಳೇ ಈ ಬಾಗದಲ್ಲಿ ನಿರ್ಣಾಯಕವಾಗಿದು. ಕೊಡವ ಮತಗಳು ಬಿಜೆಪಿ ಕಾಂಗ್ರೆಸ್ ಗೆ ವಿಭಜನೆ ಅಗುವ ಲಕ್ಷಣಗಳು ಇರುವುದರಿಂದ ಪೊನ್ನಣ್ಣ ಅವರಿಗೆ ಸೋಲಿನ ಭೀತಿಯು ಎದುರಾಗಿದೆ.

kolkata vote

ತಲಾ 269 ಮತಗಟ್ಟೆಗಳಲ್ಲಿ ಎರಡೂ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದ್ದು. 4,19,550 ಕ್ಕೂ ಹೆಚ್ಚು ಮತದಾರರು ಕೊಡಗಿನ ಎರಡೂ ಕ್ಷೇತ್ರದಲ್ಲಿ ಇದ್ದಾರೆ. ಈ ಬಾರಿ ಶೇಕಡಾ 80%ಕ್ಕಿಂತಲೂ ಹೆಚ್ಚಿನ ಮತದಾನ ಆಗುವ ಸಾಧ್ಯತೆಯೂ ಕೊಡಗಿನಲ್ಲಿ ಇದೆ. ಎರಡೂ ಕ್ಷೇತ್ರಗಳ ಅಷ್ಟೂ ಮತಗಟ್ಟೆಗಳಲ್ಲೂ ಭಾರತೀಯ ಜನತಪಾರ್ಟಿಯ ಸಕ್ರಿಯ ಕಾರ್ಯಕರ್ತರು ಇರುವುದು ಬಿ.ಜೆ.ಪಿಗೆ ವರದಾನ ಆಗುತ್ತಾ ಬಂದಿದೆ. ಇತ್ತ ಕಾಂಗ್ರೆಸ್, ಜೆಡಿಎಸ್ ಹಾಗೂ ಇತರೆ ಪಕ್ಷಗಳ ಸ್ಥಿತಿ ಹಾಗಿಲ್ಲ. ಕೆಲವೊಂದು ಮತಗಟ್ಟೆಗಳಲ್ಲಿ ಅವರು ಕಾರ್ಯಕರ್ತರ ಕೊರತೆಯನ್ನು ಈ ಹಿಂದೆಯೂ ಎದುರಿಸುತ್ತಾ ಬಂದಿದ್ದಾರೆ. ಅಂತಹಾ ಬೂತ್‍ಗಳಲ್ಲಿ ಅವರಿಗೆ ಮತ ಕಡಿಮೆ ಬೀಳುವ ಸಾಧ್ಯತೆ ಇದೆ. ಈ ಬಾರಿ ಅಭ್ಯರ್ಥಿಗಳು ಈ ನಿಟ್ಟಿನಲ್ಲಿ ಹೇಗೆ ಕಾರ್ಯನಿರ್ವಹಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ವಿರಾಜಪೇಟೆ ಕ್ಷೇತ್ರದ ಜಾತಿವಾರು ಲೆಕ್ಕಾಚಾರ ಇಂತಿದೆ:
ಲಿಂಗಾಯತ _22117
ಒಕ್ಕಲಿಗ ಹಾಗೂ ಅರೇಬಾಷೆ ಗೌಡ _27708
ಪ.ಪಂಗಡ _25469
ಕುರುಬ _440
ಮುಸಲ್ಮಾನ_37273
ಕ್ರೈಸ್ತ_8800
ಬ್ರಾಹ್ಮಣ_1800
ಕೊಡವ ಹಾಗೂ ಕೊಡವ ಬಾಷಿಕ_47543
ಮಲಯಾಳಿ_11508
ತಮಿಳ_7118
ಬಿಲ್ಲವ_6241
ಬಂಟ್ಸ್_2800
ವಿಶ್ವಕರ್ಮ_1274
ಮಡಿವಾಳ_1900
ದೇವಾಂಗ ಶೆಟ್ಟಿ_3476
ಸವಿತಾ ಸಮಾಜ_2441
ನಾಯಕ್_1034
ಜೈನರು,_273
ಇತರೆ_5472

TAGGED:bjpcongressKarnataka Election 2023virajpeteಕರ್ನಾಟಕ ಚುನಾವಣೆಕಾಂಗ್ರೆಸ್ಬಿಜೆಪಿವಿರಾಜಪೇಟೆ
Share This Article
Facebook Whatsapp Whatsapp Telegram

Cinema Updates

namratha gowda
ರಾಜಕಾರಣಿಗಳ ಜೊತೆ ಡೇಟಿಂಗ್‌ಗೆ ಬಾ – ಟಾರ್ಚರ್ ಕೊಟ್ಟವನ ಚಳಿ ಬಿಡಿಸಿದ ನಮ್ರತಾ
14 hours ago
aamir khan
‘ಸಿತಾರೆ ಜಮೀನ್ ಪರ್’ ಬಾಯ್‌ಕಾಟ್‌ಗೆ ಆಗ್ರಹ- ಆಮೀರ್ ಖಾನ್ ವಿರುದ್ಧ ತಿರುಗಿಬಿದ್ದ ನೆಟ್ಟಿಗರು
15 hours ago
keerthy suresh 2
ಮದುವೆ ಬಳಿಕ 2ನೇ ಬಾಲಿವುಡ್ ಚಿತ್ರಕ್ಕೆ ಕೀರ್ತಿ ಸುರೇಶ್ ಗ್ರೀನ್ ಸಿಗ್ನಲ್
17 hours ago
ayush upendra
ಉಪೇಂದ್ರ ಪುತ್ರ ಚಿತ್ರರಂಗಕ್ಕೆ ಎಂಟ್ರಿ- ‘ಮೊದಲಾ ಸಲ’ ಖ್ಯಾತಿಯ ನಿರ್ದೇಶಕ ಆ್ಯಕ್ಷನ್ ಕಟ್
18 hours ago

You Might Also Like

mutton curry 3
Bengaluru City

ಸಿಂಪಲ್ಲಾಗಿ ಮಟನ್ ಕರಿ ಮಾಡಿ ನಾಲಿಗೆ ಚಪ್ಪರಿಸಿ!

Public TV
By Public TV
44 seconds ago
Magaluru Suhas Shetty Case
Crime

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳು ಅರೆಸ್ಟ್

Public TV
By Public TV
8 hours ago
bharat electronics Akashteer
Latest

ಪಾಕ್‌ ಕ್ಷಿಪಣಿಯನ್ನು ಧ್ವಂಸಗೊಳಿಸಿದ್ದ AI ಆಧಾರಿತ ಆಕಾಶ್‌ತೀರ್

Public TV
By Public TV
8 hours ago
Davangere Accident
Crime

ಬೈಕ್‌ಗೆ ಡಿಕ್ಕಿ ಹೊಡೆದ ಕಾರು – ಇಬ್ಬರು ಯುವತಿಯರು ಸಾವು

Public TV
By Public TV
8 hours ago
ಚೀನಿ HQ-9 ವಾಯು ರಕ್ಷಣಾ ವ್ಯವಸ್ಥೆ
Latest

ಚೀನಿ ಏರ್‌ ಡಿಫೆನ್ಸ್‌ ಜಾಮ್‌ ಮಾಡಿ 23 ನಿಮಿಷದಲ್ಲಿ ಮುಗಿಯಿತು ಕಾರ್ಯಾಚರಣೆ – ಭಾರತದ ದಾಳಿಯ ರೋಚಕ ಕಥೆ ಓದಿ

Public TV
By Public TV
8 hours ago
Met Gala 2025
Fashion

Met Gala 2025 | ಬಾಲಿವುಡ್ ತಾರೆಯರು ಕಾಣಿಸಿಕೊಂಡಿದ್ದು ಹೇಗೆ ಗೊತ್ತಾ?

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?