ಯಾದಗಿರಿ: ನಾಳೆ ಮತದಾನ (Vote), ಹೀಗಾಗಿ ಮತದಾರರಿಗೆ ಜಾಗೃತಿ ಮೂಡಿಸುವ ಕೆಲಸಗಳು ಆಗುತ್ತಿವೆ. ಈ ಹಿನ್ನೆಲೆಯಲ್ಲಿ ಯಾದಗಿರಿ (Yadgir) ಜಿಲ್ಲಾಡಳಿತ ಮತದಾನದ ಮಮತೆಯ ಕರೆಯೋಲೆ ಶೀರ್ಷಿಕೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದೆ.
ಮತದಾರರಲ್ಲಿ ಜಾಗೃತಿ ಮೂಡಿಸಲು ಯಾದಗಿರಿ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಈ ಆಮಂತ್ರಣದ ವಿಶೇಷವೆಂದರೆ ಯಾದಗಿರಿಯಲ್ಲೂ ಮತದಾರರಿಗೆ ಮತದಾನದ ಮಮತೆಯ ಕರೆಯೋಲೆ ನೀಡಲಾಯಿತು.
ಆಮಂತ್ರಣ ಪತ್ರಿಕೆಯಲ್ಲಿ ಏನಿದೆ?: ಚುನಾವಣಾ ಆಯೋಗ (Election Commission) ನಿಶ್ಚಯಿಸಿದಂತೆ ಕರ್ನಾಟಕ ವಿಧಾನಸಭಾ ಚುನಾವಣೆ-2023ರ (Karnataka Assembly Election 2023) ಮತದಾನ ದಿನ ಸಲ್ಲುವ ಶುಭ ಮಹೂರ್ತದಲ್ಲಿ ಭಾರತ ಮಾತೆಯ ಪ್ರಬುದ್ಧ ಪ್ರಜೆಯಾದ ಮತದಾರ ಜೊತೆ ಪ್ರಜಾಪ್ರಭುತ್ವ ಈ ಮಹತ್ವದ ಶುಭ ಕಾರ್ಯದಲ್ಲಿ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಎತ್ತಿ ಹಿಡಿದು ಜನರಿಂದ ಜನರಿಗೋಸ್ಕರ ಸಂವಿಧಾನಬದ್ಧ ಆಡಳಿತ ವ್ಯವಸ್ಥೆಯನ್ನು ಬಲಪಡಿಸಲು ವಿನಂತಿ ಎಂದು ಬರೆಯಲಾಗಿದೆ. ಇದನ್ನೂ ಓದಿ: Karnataka Election 2023; ಮತದಾರರ ಸೆಳೆಯಲು ಬೆಂಗಳೂರಲ್ಲಿ ವಿಶೇಷ ಮತಗಟ್ಟೆ
ಅದೇ ರೀತಿ ಕೊಪ್ಪಳದ (Koppala) ಕುಷ್ಠಗಿಯಲ್ಲಿ ನೂತ ವಧು, ವರರಿಂದ ಎಲ್ಲರೂ ಕಡ್ಡಾಯ ಮತದಾನ ಮಾಡಿ ಎಂದು ಪೋಸ್ಟರ್ ಹಿಡಿದು ಜಾಗೃತಿ ಮೂಡಿಸಿದರು. ಕೋಲಾರದಲ್ಲೂ (Kolar) ಅಧಿಕಾರಿಗಳು ವೋಟಿಂಗ್ ಅವೇರ್ನೆಸ್ ಮೂಡಿಸಿದರು. ಇದನ್ನೂ ಓದಿ: ಕೆಜಿಗೆ 50 ರೂ.ಗಿಂತ ಕಡಿಮೆಯಿರುವ ಸೇಬು ಆಮದು ನಿಷೇಧ – ಕೇಂದ್ರ ಸರ್ಕಾರ