ಕೊಪ್ಪಳ: ಕಾಂಗ್ರೆಸ್ (Congress) ಹಾಗೂ ಜೆಡಿಎಸ್ (JDS) ಸರ್ಕಾರ ತುಷ್ಟೀಕರಣ ರಾಜಕೀಯ ಮಾಡುತ್ತಿತ್ತು. ಅವರು ರಾಜ್ಯದ ಅಭಿವೃದ್ಧಿಗಿಂತ ಹೆಚ್ಚಾಗಿ ತುಷ್ಟೀಕರಣ ಮಾಡಿದ್ದಾರೆ ಎಂದು ಉತ್ತರ ಪ್ರದೇಶ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ವಾಗ್ದಾಳಿ ನಡೆಸಿದ್ದಾರೆ.
ಕೊಪ್ಪಳದ (Koppal) ಗಂಗಾವತಿಯಲ್ಲಿ (Gangavathi) ಬಿಜೆಪಿ ಅಭ್ಯರ್ಥಿಗಳ ಪರ ರೋಡ್ ಶೋ ನಡೆಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷವನ್ನು ಕಿತ್ತುಹಾಕಬೇಕು. ಇಂದು ದೇಶದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿಯ (BJP) ಡಬಲ್ ಎಂಜಿನ್ ಸರ್ಕಾರ ಇದೆ. ಇದು ಅತ್ಯಂತ ವೇಗವಾಗಿ ಕೆಲಸ ಮಾಡುತ್ತಿದೆ. ಈ ವೇಗವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಬಾರದು. ಕರ್ನಾಟಕ ಇಂದು ವಿಕಾಸದ ರಾಜ್ಯವಾಗುತ್ತಿದೆ. ಕರ್ನಾಟಕದ ಮಾಹಿತಿ ತಂತ್ರಜ್ಞಾನ (IT) ವಿಭಾಗವು ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಇದರಲ್ಲಿ ಯುವಕರ ಪಾತ್ರ ಬಹಳವಿದೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಪರ ಯೋಗಿ ಭರ್ಜರಿ ಪ್ರಚಾರ – ರಾಮಮಂದಿರ ಉದ್ಘಾಟನೆಗೆ ಆಹ್ವಾನ
ಉತ್ತರಪ್ರದೇಶದಲ್ಲಿ ಡಬಲ್ ಎಂಜಿನ್ ಸರ್ಕಾರದಿಂದ ಗಲಾಟೆ ಬಂದ್ ಆಗಿದೆ. ಉತ್ತರಪ್ರದೇಶ ಅಭಿವೃದ್ಧಿಯಾಗುತ್ತಿದ್ದು, ಶಾಂತಿ ಹಾಗೂ ನೆಮ್ಮದಿಯಿಂದ ಇದೆ. ಇದೆಲ್ಲಾ ಡಬಲ್ ಎಂಜಿನ್ ಸರ್ಕಾರದಿಂದ ಸಾಧ್ಯವಾಗಿದೆ. ಬಿಜೆಪಿಯ ಡಬಲ್ ಎಂಜಿನ್ ಕಾಂಗ್ರೆಸ್ನ ಪೇಡ್ ಎಂಜಿನ್ ಅಲ್ಲ. ಕಾಂಗ್ರೆಸ್ ಬರೀ ಯೊಜನೆಗಳನ್ನು ರೂಪಿಸಿದೆ. ಆದರೆ ಡಬಲ್ ಎಂಜಿನ್ ಸರ್ಕಾರ ಹಾಗಲ್ಲ. ಹಲವಾರು ಯೋಜನೆಗಳನ್ನು ರೂಪಿಸಿ ಅದನ್ನು ಜಾರಿಗೆ ತಂದು ಅಭಿವೃದ್ಧಿ ಮಾಡಿದೆ. ಇದು ಡಬಲ್ ಎಂಜಿನ್ ಸರ್ಕಾರದ ಶಕ್ತಿ. ನಾವು ಯಾವುದನ್ನೂ ಹೇಳುವುದಿಲ್ಲ, ಮಾಡಿ ತೋರಿಸುತ್ತೇವೆ. ಈ ದೇಶದಲ್ಲಿ ಮೋದಿ ಇದ್ದರೆ ಅದು ಸಾಧ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಲೂಟ್, ಜೂಟ್ ಸರ್ಕಾರ ಇದೆ- ಬಿಜೆಪಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ
ದೇಶದಲ್ಲಿ ಇಂದು ಅನ್ನದಾತ ತಲೆಯೆತ್ತಿ ತಿರುಗುತ್ತಿದ್ದಾನೆ. ಮೋದಿಯವರ ಕಿಸಾನ್ ಸಮ್ಮಾನ್ (Kisan Samman) ಯೋಜನೆಯಿಂದ ರೈತರು ಸಂತೋಷವಾಗಿದ್ದಾರೆ. ಎನ್ಇಪಿ (NEP) ಮೂಲಕ ಶಿಕ್ಷಣದಲ್ಲಿ ಬದಲಾವಣೆಗಳನ್ನು ತರಲಾಗುತ್ತಿದೆ. ಯುವಕರು ತಮ್ಮ ಪ್ರತಿಭೆ ತೋರಿಸಲು ಎನ್ಇಪಿ ಅನುಕೂಲವಾಗಿದೆ. ಎನ್ಇಪಿಯಿಂದ ದೇಶಕ್ಕೆ ಹಾಗೂ ರಾಜ್ಯಕ್ಕೆ ಬಹಳಷ್ಟು ಅನುಕೂಲವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ರೈತರ ಶೇ.85ರಷ್ಟು ಹಣವನ್ನ ಕಾಂಗ್ರೆಸ್ಸಿನವರೇ ನುಂಗಿ ನೀರು ಕುಡಿದಿದ್ದಾರೆ – ಮೋದಿ ಸಿಡಿಮಿಡಿ
‘ಮನ್ ಕಿ ಬಾತ್’ ಮುಖಾಂತರ ಪ್ರಧಾನಿ ಸಾಕಷ್ಟು ಜನರ ಮನಸ್ಸಿಗೆ ತಲುಪಿದ್ದಾರೆ. ಇಂದು ನಮ್ಮ ದೇಶ ಬದಲಾಗಿದೆ. ವಿಶ್ವದಲ್ಲಿ ಒಂದು ಶಕ್ತಿಯುತ ದೇಶವಾಗಿದೆ. ಇಂದು ಮನ್ ಕಿ ಬಾತ್ 100ನೇ ಸಂಚಿಕೆ ಹಿನ್ನೆಲೆ ಯುನೆಸ್ಕೋ (UNESCO) ಮೂಲಕ ಪ್ರಧಾನಿಗೆ ಅಭಿನಂದನೆ ತಿಳಿಸಲಾಗಿದೆ. ಇವತ್ತು ಭಾರತದ ಶಕ್ತಿಯನ್ನು ಇಡೀ ವಿಶ್ವ ಒಪ್ಪಿದೆ. ಇಡೀ ವಿಶ್ವವೇ ಇಂದು ಭಾರತ ಹಾಗೂ ಮೋದಿಯತ್ತ (Narendra Modi) ನೋಡುತ್ತಿದೆ. ಕೋವಿಡ್ ಸಂದರ್ಭದಲ್ಲಿ ಮೋದಿ ಅದನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಎಲ್ಲರಿಗೂ ವಾಕ್ಸಿನೇಷನ್ ಹಾಕಿಸಿದರು. ಜನರು ಉಪವಾಸ ಇರದಂತೆ ಆಹಾರ ಪೂರೈಕೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ನಾನು ಶಿವನ ಕೊರಳಿನಲ್ಲಿರುವ ಹಾವಿನಂತೆ – ಖರ್ಗೆ ಹೇಳಿಕೆಗೆ ಮೋದಿ ಕೌಂಟರ್