Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಹಳೇ ಮೈಸೂರಿನಲ್ಲಿ ಅಮಿತ್ ಶಾ ಸೂತ್ರ – ಕಲ್ಯಾಣ ಕರ್ನಾಟಕದಲ್ಲಿ ಮೋದಿ ಮೋಡಿ

Public TV
Last updated: January 19, 2023 11:38 am
Public TV
Share
2 Min Read
Narendra Modi Amit Shah 2
SHARE

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಬಿಜೆಪಿಯಲ್ಲಿ (BJP) ಭರ್ಜರಿ ತಂತ್ರಗಾರಿಕೆ ರೂಪಿಸಲಾಗುತ್ತಿದೆ. ಬಿಜೆಪಿಗೆ ಈ ಬಾರಿ ಹಳೇ ಮೈಸೂರು (Mysuru) ಜಿಲ್ಲೆಗಳು ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳೇ ದೊಡ್ಡ ಸವಾಲು. ವೀಕ್ ಇರುವ 2 ಭಾಗಗಳಲ್ಲೂ ಟಾರ್ಗೆಟ್ ಕ್ಷೇತ್ರಗಳನ್ನು ಗೆಲ್ಲುವುದಕ್ಕೆ ಬಿಜೆಪಿ ಪಕ್ಕಾ ಪ್ಲ್ಯಾನ್ ಮಾಡಿಕೊಂಡಿದೆ.

ಈ ಪ್ಲ್ಯಾನ್‍ನ ಭಾಗವಾಗಿಯೇ ಮೈಸೂರು ಕರ್ನಾಟಕಕ್ಕೆ (Karnataka) ಚಾಣಕ್ಯ ಅಮಿತ್ ಶಾ (Amit Shah) ಗೆಲ್ಲುವ ಸೂತ್ರ ಹೆಣೆದಿದ್ದಾರೆ. ಇತ್ತ ಕಲ್ಯಾಣ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಫಾರ್ಮುಲಾ ರೂಪಿಸಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಸೀಟ್ ಗೆಲ್ಲಲು ಅಮಿತ್ ಶಾ ಅವರು ಕಳೆದ ತಿಂಗಳು ರಾಜ್ಯದಲ್ಲಿ ಮಿಂಚಿನ ಸಂಚಾರ ನಡೆಸಿದ್ದರು. ಹಳೇ ಮೈಸೂರು ಭಾಗದಲ್ಲಿ ಗೆಲ್ಲುವುದಕ್ಕೆ, ಪಕ್ಷದ ಬಲವರ್ಧನೆಗೆ ಪಕ್ಕಾ ರೂಟ್‍ಮ್ಯಾಪ್ ಹಾಕಿ, ಒಂದಷ್ಟು ಟಾಸ್ಕ್‌ಗಳನ್ನು ಅಮಿತ್ ಶಾ ಕೊಟ್ಟು ಹೋಗಿದ್ದರು.

ಇನ್ನು ಕಲ್ಯಾಣ ಕರ್ನಾಟಕದ ಭಾಗದಲ್ಲಿ ಗುರುವಾರದಿಂದ ಮೋದಿ ಅಬ್ಬರ ಪ್ರಾರಂಭವಾಗಿದೆ. ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಮೋದಿ ಪ್ರವಾಸ ಕೈಗೊಂಡಿದ್ದು, ಸಂಚಲನ ಸೃಷ್ಟಿಸುವ ನಿರೀಕ್ಷೆ ಇದೆ. ಕಲ್ಯಾಣ ಭಾಗದಲ್ಲಿ ಕೊಂಚ ದುರ್ಬಲ ಇರುವ ಬಿಜೆಪಿಯನ್ನು ಸ್ಟ್ರಾಂಗ್ ಮಾಡಲು ಮೋದಿ ಮೋಡಿ ಮಾಡಲಿದ್ದಾರೆ ಎಂಬ ವಿಶ್ವಾಸದಲ್ಲಿ ಬಿಜೆಪಿ ಪಡೆ ಇದೆ. ಕಲ್ಯಾಣ ಭಾಗದಿಂದಲೇ ಕಲ್ಯಾಣ ಪರ್ವಕ್ಕೆ ಮೋದಿ ನಾಂದಿ ಹಾಡ್ತಾರೆ ಎಂದು ನಿರೀಕ್ಷಿಸಲಾಗಿದೆ.

ಕಲಬುರಗಿಯಲ್ಲಿ 52 ಸಾವಿರ ಬಂಜಾರ ಸಮುದಾಯದವರಿಗೆ ಹಕ್ಕು ಪತ್ರ ಕೊಡುವ ಮೂಲಕ ಬಿಜೆಪಿಗೆ ಆ ಸಮುದಾಯದ ಒಲವು ಸಿಗೋದು ಪಕ್ಕಾ ಎನ್ನಲಾಗುತ್ತಿದೆ. ಇನ್ನು ಯಾದಗಿರಿಯಲ್ಲಿ ನಾರಾಯಣಪುರದ ಬಸವ ಜಲಸಾಗರ ಡ್ಯಾಂಗೆ ಸ್ಕಾಡಾ ತಂತ್ರಜ್ಞಾನ ಅಲಕವಡಿಕೆಗೆ ಮೋದಿಯವರು ನೀರಾವರಿ ವಲಯಕ್ಕೆ ಬಿಜೆಪಿಯು ಹೆಚ್ಚಿನ ಆದ್ಯತೆ ಕೊಟ್ಟಿದೆ ಎಂಬ ಸಂದೇಶ ಸಾರಲಿದ್ದಾರೆ. ಇದರ ಮೂಲಕ ಆ ಭಾಗದ ರೈತರ ಒಲವು ಗಳಿಸಲು ಬಿಜೆಪಿ ಕಸರತ್ತು ನಡೆಸಿದೆ.

ಮೈಸೂರು ಭಾಗದಲ್ಲಿ ಏನು?: ಜೆಡಿಎಸ್ ಕೋಟೆಗಳನ್ನು ಗೆಲ್ಲುವುದಕ್ಕೆ ತಳಮಟ್ಟದ ಸ್ಟ್ರಾಟರ್ಜಿ ಮಾಡಲಾಗಿದೆ. ಕಾಂಗ್ರೆಸ್-ಜೆಡಿಎಸ್‍ನ ಪ್ರಭಾವಿಗಳಿಗೆ ಚುನಾವಣಾ ಪೂರ್ವ ಗಾಳ, ಜೆಡಿಎಸ್ ಜತೆ ನೋ ಅಡ್ಜಸ್ಟ್‌ಮೆಂಟ್, ಓನ್ಲಿ ಪೊಲಿಟಿಕಲ್ ವಿರೋಧ, ಜಾತಿ ಸಮೀಕರಣ ಮೂಲಕ ಮತ ಸೆಳೆಯಲು ತಂತ್ರಗಾರಿಕೆ ಹಾಗೂ ಹಿಂದುತ್ವ+ ಅಭಿವೃದ್ಧಿ ಅಜೆಂಡಾಗಳ ಪ್ರಯೋಗ ಮಾಡುವುದು. ಜತೆಗೆ ಬಿಜೆಪಿ ಭವಿಷ್ಯಕ್ಕೆ ಈಗಿಂದಲೇ ಸ್ಥಳೀಯ ನಾಯಕತ್ವ ಬೆಳೆಸುವ ತಂತ್ರ ಹೂಡಲಾಗಿದೆ. ಇದನ್ನೂ ಓದಿ: ಕಲ್ಯಾಣ ಕರ್ನಾಟಕದಲ್ಲಿ ಮೋದಿ ಮತ ಭೇಟೆ – ಏನಿದು ಬಿಜೆಪಿ ರಣತಂತ್ರ?

ಕಲ್ಯಾಣ ಕರ್ನಾಟಕದಲ್ಲಿ ಏನು?: ಕಲ್ಯಾಣ ಕರ್ನಾಟಕ ಭಾಗದ ಕಾಂಗ್ರೆಸ್ ಶಾಸಕರ ಕ್ಷೇತ್ರಗಳನ್ನು ಗುರಿಯಾಗಿಸಿ ಪಕ್ಷ ಸಂಘಟನೆ, ಡಬಲ್ ಇಂಜಿನ್ ಸರ್ಕಾರಗಳ ಕೊಡುಗೆಗಳನ್ನು ಜನರಿಗೆ ಮನವರಿಕೆ, ವಿವಿಧ ಜಾತಿಗಳ ಸಮಾವೇಶ, ಆ ಮೂಲಕ ಸಮುದಾಯವಾರು ಟಾರ್ಗೆಟ್ ಮಾಡುವುದು. ರೈತರು, ಹಿಂದುಳಿದ, ಪರಿಶಿಷ್ಟ ವರ್ಗಗಳನ್ನು ಸೆಳೆಯುವ ಗುರಿಯನ್ನು ಹೊಂಡಿದೆ. ಬೃಹತ್ ರೋಡ್ ಶೋ, ರ್ಯಾಲಿ, ಪ್ರಚಾರ ಸಭೆಗಳ ಆಯೋಜನೆ, ಕಲ್ಯಾಣ ಭಾಗದಲ್ಲಿ ಕಾಂಗ್ರೆಸ್‍ನ ದೌರ್ಬಲ್ಯಗಳನ್ನು ಅಸ್ತ್ರ ಮಾಡಿಕೊಳ್ಳುವುದು, ಅಭಿವೃದ್ಧಿ ಮಂತ್ರದ ಮೂಲಕ ಎಲೆಕ್ಷನ್ ಗೆಲ್ಲಲು ನಿರ್ಧಾರ ಮಾಡಿದೆ. ಇದನ್ನೂ ಓದಿ: ಕಾರ್ಯನಿರ್ವಹಿಸುವ ಸಾಮರ್ಥ್ಯ ನಾನು ಹೊಂದಿಲ್ಲ – ನ್ಯೂಜಿಲೆಂಡ್ ಪ್ರಧಾನಿ ಹಠಾತ್ ರಾಜೀನಾಮೆ ಘೋಷಣೆ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Amit Shahbjpnarendra modiಅಮಿತ್ ಶಾನರೇಂದ್ರ ಮೋದಿಬಿಜೆಪಿ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
4 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
4 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
5 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
6 hours ago

You Might Also Like

Ahmedabad Air India Plane Crash
Crime

ಬಿಜೆ ಮೆಡಿಕಲ್ ಆಸ್ಪತ್ರೆಗೆ ಬಡಿದ ಏರ್ ಇಂಡಿಯಾ ವಿಮಾನ – 7 ವಿದ್ಯಾರ್ಥಿಗಳು ಸಾವು ಶಂಕೆ

Public TV
By Public TV
1 minute ago
Boeing 787 air india dreamliner
Latest

ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌,? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

Public TV
By Public TV
6 minutes ago
Air India Bird Hit Ahmedabad Plane Crash
Latest

ಹಕ್ಕಿ ಡಿಕ್ಕಿಯಿಂದ ಟೇಕಾಫ್‌ ವೇಗ ಕಳೆದುಕೊಂಡು ವಿಮಾನ ಪತನ – ತಜ್ಞರು ಹೇಳೋದು ಏನು?

Public TV
By Public TV
9 minutes ago
gujarat cm vijay rupani
Latest

ವಿಮಾನ ಪತನ – ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಾವು

Public TV
By Public TV
14 minutes ago
Ahmedabad Planecrash 5
Latest

Photo Gallery | ಏರ್‌ ಇಂಡಿಯಾ ವಿಮಾನ ಪತನ – ಭೀಕರ ಅಪಘಾತದ ದೃಶ್ಯ ಫೋಟೋಗಳಲ್ಲಿ ಸೆರೆ …

Public TV
By Public TV
27 minutes ago
DK Shivakumar 6
Bengaluru City

ಅಹಮದಾಬಾದ್ ವಿಮಾನ ಪತನ ದುರಾದೃಷ್ಟಕರ ಘಟನೆ: ಡಿ.ಕೆ ಶಿವಕುಮಾರ್

Public TV
By Public TV
32 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?