ಹನುಮನಿಗೆ ನಮಸ್ಕರಿಸಿದ ಮೋದಿ

Public TV
1 Min Read
narendra modi 4

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra modi) ಅವರು ಭರ್ಜರಿ ರೋಡ್ ಶೋ (Road Show) ನಡೆಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ರಸ್ತೆ ಬದಿಯ ಆಂಜನೇಯ ಮೂರ್ತಿಗೆ ನಮಸ್ಕರಿಸಿದರು.

ಇತ್ತೀಚೆಗೆ ಕಾಂಗ್ರೆಸ್ ಬಿಡುಗಡೆಗೊಳಿಸಿದ್ದ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವಂತೆ ಸೂಚಿಸಿತ್ತು. ಈ ಪ್ರಣಾಳಿಕೆಯನ್ನು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರು ವಿರೋಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೋದಿ ರೋಡ್ ಶೋ ವೇಳೆ ಹನುಮಂತನ ಮುಖವಾಡ ಧರಿಸಿದ್ದರು. ಅಷ್ಟೇ ಅಲ್ಲದೇ ಬಿಜೆಪಿ ಬಾವುಟದ ಜೊತೆಗೆ ಬಜರಂಗಿ ಬಾವುಟವು ಕಂಡುಬಂತು. ಜೊತೆಗೆ ನರೇಂದ್ರ ಮೋದಿ ಅವರು ಆಂಜನೇಯನಿಗೆ ನಮಸ್ಕರಿಸಿದ್ದು ವಿಶೇಷವಾಗಿತ್ತು.

bajarangi in road show

ಚುನಾವಣಾ ಪ್ರಚಾರದ ಅಂತಿಮ ಘಟ್ಟದಲ್ಲಿ ಮತಶಿಕಾರಿ ನಡೆಸಲು ವಾರದ ಕೊನೆಯಲ್ಲಿ ಮೂರನೇ ಬಾರಿ ರಾಜ್ಯಕ್ಕೆ ಪ್ರಧಾನಿ ಮೋದಿ ಬಂದಿದ್ದಾರೆ. ಬೆಂಗಳೂರಿನ ಬ್ರಿಗೇಡ್ ಮಿಲೇನಿಯಂ ರಸ್ತೆಯಿಂದ ಪ್ರಾರಂಭವಾದ ರೋಡ್ ಶೋ ಮಲ್ಲೇಶ್ವರಂನಲ್ಲಿ ಅಂತ್ಯಗೊಂಡಿದೆ. ಪ್ರಧಾನಿ ಮೋದಿ ಅವರು ತೆರೆದ ವಾಹನದಲ್ಲಿ ಬರೋಬ್ಬರಿ 26.5 ಕಿ.ಮೀ ನಡೆದಿದೆ.

ಬ್ರಿಗೇಡ್ ಮಿಲೇನಿಯಂ ರಸ್ತೆಯಿಂದ ಮಲ್ಲೇಶ್ವರಂ 18ನೇ ಕ್ರಾಸ್ ವರೆಗೆ 11 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರೋಡ್ ಶೋ ನಡೆದಿದೆ. ತೆರೆದ ವಾಹನದಲ್ಲಿ ಮೋದಿ ಅಬ್ಬರದ ರೋಡ್ ಶೋ ನಡೆದಿದ್ದು, ಸಹಸ್ರಾರು ಜನರತ್ತ ಮೋದಿ ಕೈಬೀಸಿದರು. ರೇಷ್ಮೆಯ ಕೇಸರಿ ಮೈಸೂರು ಪೇಟಾದಲ್ಲಿ ಕಂಗೊಳಿಸಿದರು. ಪಿಸಿ ಮೋಹನ್, ತೇಜಸ್ವಿ ಸೂರ್ಯ ಸಾಥ್ ನೀಡಿದರು. ಇದನ್ನೂ ಓದಿ: ದಾಖಲೆ ಬರೆದ ಮೋದಿ ಬೆಂಗಳೂರು ರೋಡ್ ಶೋ

narendra modi 4

ಮೋದಿ ರೋಡ್ ಶೋಗೆ ಕಲಾತಂಡಗಳು ಮೆರುಗು ತಂದುಕೊಟ್ಟರು. ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಮುಗಿಲು ಮುಟ್ಟಿತ್ತು. ಹೂಮಳೆ ಸುರಿಸಿ ಸಂಭ್ರಮಿಸಿದರು. ಈ ವೇಳೆ ಜನರತ್ತ ಪ್ರಧಾನಿ ಮೋದಿ ಅವರು ಹೂವನ್ನು ಎಸೆದು ನಗು ಬೀರಿದರು. ಮೋದಿ ಮೋದಿ ಜೈಕಾರ ಘೋಷಣೆ ಜೋರಾಗಿದೆ. ರೋಡ್ ಶೋ ವೇಳೆ ಮೋದಿಯನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಯುವತಿಯರು ಸೇರಿದ್ದರು. ಇದನ್ನೂ ಓದಿ: ಗುಂಡ್ಲುಪೇಟೆಯಲ್ಲಿ ಕೈ, ಕಮಲದ ನಡುವೆ ಬಿಗ್‍ಫೈಟ್ – ಹುಲಿಗಳ ನಾಡಲ್ಲಿ ಘರ್ಜಿಸುವವರ‍್ಯಾರು?

Share This Article