ವಿಜಯಪುರ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Election) ಬಿಜೆಪಿ (BJP) ಅಭ್ಯರ್ಥಿಯಾಗಲು ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಹೇಂದ್ರ ನಾಯಕ್ ಪೊಲೀಸ್ (Police) ಹುದ್ದೆಗೆ ರಾಜೀನಾಮೆ ನೀಡಿರುವ ಅಧಿಕಾರಿ. 2010ರಲ್ಲಿ ಪೊಲೀಸ್ ಹುದ್ದೆಗೆ ನೇರ ನೇಮಕಾತಿ ಹೊಂದಿದ್ದರು. ಅವರು ಸದ್ಯ ಬಾಗಲಕೋಟೆಯಲ್ಲಿ (Bagalakote) ಲೋಕಾಯುಕ್ತ ಸಿಪಿಐ ಆಗಿ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: Union Budget 2023: ಬಜೆಟ್ನಲ್ಲಿ ಕೃಷಿ ಕೇತ್ರಕ್ಕೆ ಸಿಕ್ಕಿದ್ದೇನು?- ಯಾವ್ಯಾವ ವಲಯಕ್ಕೆ ಎಷ್ಟೆಷ್ಟು ಅನುದಾನ?
ಆದರೆ ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸಿರುವ ಪೊಲೀಸ್ ಅಧಿಕಾರಿ ಮಹೇಂದ್ರ ನಾಯಕ್ ವಿಜಯಪುರ (Vijayapura) ಜಿಲ್ಲೆಯ ನಾಗಠಣ (ಮೀಸಲು) ಮತಕ್ಷೇತ್ರದ ಬಿಜೆಪಿ ಆಕಾಂಕ್ಷಿ ಆಗಿದ್ದಾರೆ. ಇದನ್ನೂ ಓದಿ: 50 ಸಾವಿರ ವರ್ಷಕ್ಕೊಮ್ಮೆ ಗೋಚರಿಸುವ ವಿಸ್ಮಯ – ಬೆಂಗಳೂರಲ್ಲಿ ಗೋಚರಿಸಲಿಲ್ಲ ಹಸಿರು ಧೂಮಕೇತು
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k