– ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ
ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ತಿಳಿಸಿದರು.
ರಾಜ್ಯ ವಿಧಾನಸಭಾ ಚುನಾವಣೆಯ (Karnataka Election) ಫಲಿತಾಂಶ ಬಹುತೇಕ ಖಚಿತವಾಗಿದೆ. ಸ್ಪಷ್ಟ ಬಹುಮತ ಕಾಂಗ್ರೆಸ್ಗೆ ಬಂದಿದ್ದು, ಅಧಿಕಾರ ಹಿಡಿಯಲು ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಟ್ವೀಟ್ನಲ್ಲಿ ಏನಿದೆ?: ರಾಜ್ಯದ ಜನತೆಯ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ. ನಮ್ಮ ಪಕ್ಷವನ್ನು ಆಶೀರ್ವದಿಸಿದ ಮಹಾಜನತೆಗೆ ಅಭಿನಂದನೆಗಳು. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್ಗೆ ಸ್ಪಷ್ಟ ಬಹುಮತ; ಸಿಎಂ ಸ್ಥಾನಕ್ಕೆ ಬೊಮ್ಮಾಯಿ ಇಂದು ರಾಜೀನಾಮೆ LIVE Updates
ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ. ಈ ಹಿಂದೆ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ರೇವಣ್ಣ, ನಾನೂ ಸೋತಿದ್ದೆವು. ಹಾಗೆಯೇ ಗೆದ್ದಾಗ ಬದ್ಧತೆಯಿಂದ ಜನಸೇವೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ.
ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸರ್ಕಾರಕ್ಕೆ ಶುಭವಾಗಲಿ. ಜನರ ಆಶೋತ್ತರಳಿಗೆ ಸ್ಪಂದಿಸಲಿ ಎಂದು ಹಾರೈಸುತ್ತೇನೆ. ಈ ಚುನಾವಣೆಯಲ್ಲಿ ಪಕ್ಷದ ಪರವಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಮುಖಂಡರು, ಅಭ್ಯರ್ಥಿಗಳಿಗೆ ನನ್ನ ಕೃತಜ್ಞತೆಗಳು. ಯಾವುದೇ ಕಾರಣಕ್ಕೂ ಯಾರೂ ಧೃತಿಗೆಡುವುದು ಬೇಡ, ನಿಮ್ಮ ಜತೆಯಲ್ಲಿ ನಾನಿದ್ದೇನೆ. ಇದನ್ನೂ ಓದಿ: ಕಾಂಗ್ರೆಸ್ಗೆ ಆಲ್ ದಿ ಬೆಸ್ಟ್: ಶೋಭಾ ಕರಂದ್ಲಾಜೆ