ನವದೆಹಲಿ: ರಾಹುಲ್ ಗಾಂಧಿ ನೇತೃತ್ವದಲ್ಲಿ ನಮ್ಮ ನಾಯಕರು ಒಗ್ಗಟ್ಟಾಗಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರಸ್ ಮ್ಯಾಜಿಕ್ ನಂಬರ್ ತಲುಪಲಿದೆ ಎಂದು ತುಮಕೂರಿನ ಕಾಂಗ್ರೆಸ್ ಸಂಸದ ಎಸ್.ಪಿ ಮುದ್ದಹನುಮೇಗೌಡ ಹೇಳಿದ್ದಾರೆ.
ಪಬ್ಲಿಕ್ ಟಿವಿ ಸಮೀಕ್ಷೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಪೈಪೋಟಿ ನೀಡಲಿದ್ದು ಜೆಡಿಎಸ್ ನಿರ್ಣಾಯಕ ಸ್ಥಾನ ವಹಿಸಲಿದೆ. ಚುನಾವಣೆಗೆ ಇನ್ನು ನಾಲ್ಕು ತಿಂಗಳು ಬಾಕಿ ಇದೆ. ಈ ವೇಳೆಗೆ ಕಾಂಗ್ರೆಸ್ ಮತ್ತಷ್ಟು ಸ್ಥಾನಗಳನ್ನು ಪಡೆದು ಮತ್ತೆ ಅಧಿಕಾರಕ್ಕೆ ಏರಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಡಿಕೆ ರವಿ, ಗಣಪತಿ ಕೇಸನ್ನು ಪರಿಗಣಿಸಿದ್ದು ಯಾಕೆ: ಪಬ್ಲಿಕ್ ಟಿವಿ ಸಮೀಕ್ಷೆಗೆ ಜಾರ್ಜ್ ಪ್ರಶ್ನೆ
ಪಬ್ಲಿಕ್ ಟಿವಿ ಸರ್ವೆಯಲ್ಲಿ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಈ ನಾಲ್ಕು ವರ್ಷದಲ್ಲಿ ಸಮರ್ಥ ಆಡಳಿತ ಕಾಂಗ್ರೆಸ್ ನೀಡಿದೆ. ಸಾಕಷ್ಟು ಜನಪರ ಯೋಜನೆಗಳು ಗ್ರಾಮೀಣ ಭಾಗದಲ್ಲಿ ತಲುಪಿದೆ ಎಂದರು. ಇದನ್ನೂ ಓದಿ: ಯಾರಿಗೂ ಬಹುಮತವಿಲ್ಲ, ಮತ್ತೊಮ್ಮೆ ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣ!
ಕಾಂಗ್ರೆಸ್ ಸರ್ಕಾರ ಎಲ್ಲ ವರ್ಗಕ್ಕೆ ಸಮಾನ ನ್ಯಾಯ ನೀಡಿದ್ದು, ಹತ್ತು ಹದಿನೈದು ಸ್ಥಾನ ಹೆಚ್ಚು ಮಾಡಿಕೊಳ್ಳುವುದು ಅಸಾಧ್ಯವಲ್ಲ. ಉಳಿದಿರುವ ನಾಲ್ಕು ತಿಂಗಳಲ್ಲಿ ಕಾಂಗ್ರೆಸ್ ವೇಗವನ್ನು ಹೆಚ್ಚಿಸಿಕೊಳ್ಳಲಿದೆ ಎಂದು ಹೇಳಿದರು.ಇದನ್ನೂ ಓದಿ: :ಹೊಸ ವರ್ಷಕ್ಕೆ ಪಬ್ಲಿಕ್ ಟಿವಿ ಚುನಾವಣಾ ಪೂರ್ವ ಸಮೀಕ್ಷೆ-ಕರ್ನಾಟಕ ಮತದಾರರ ಮನದಾಳದ ಉತ್ತರ ಇಲ್ಲಿದ