ಬೆಳಗಾವಿ: ಕಳೆದ ಎಲೆಕ್ಷನ್ನಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) 51 ಸಾವಿರ ಲೀಡ್ನಿಂದ ಗೆದ್ದಿದ್ದರು. ಈ ಜನಸಾಗರ ನೋಡಿದ್ರೆ ಲಕ್ಷ್ಮಿ ಹೆಬ್ಬಾಳ್ಕರ್ ಒಂದೂವರೆ ಲಕ್ಷ ಲೀಡ್ನಲ್ಲಿ ಬರಬಹುದು ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.
ತಾಲೂಕಿನ ಪಂತ ಬಾಳೇಕುಂದ್ರಿಯಲ್ಲಿ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದಿನ ಎಲೆಕ್ಷನ್ನಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ 51 ಸಾವಿರ ಲೀಡ್ನಿಂದ ಗೆದ್ದಿದ್ದರು. ಈ ಜನಸಾಗರ ನೋಡಿದ್ರೆ ಲಕ್ಷ್ಮಿ ಹೆಬ್ಬಾಳ್ಕರ್ ಒಂದೂವರೆ ಲಕ್ಷ ಲೀಡ್ ನಲ್ಲಿ ಬರಬಹುದು. ಕರ್ನಾಟಕದಲ್ಲಿ ನಿಮ್ಮ ಗೆಲುವು ಇತಿಹಾಸ ಮಾಡುತ್ತದೆ. ಈ ಕ್ಷೇತ್ರದ ಹೆಣ್ಣು ಮಕ್ಕಳು ಲಕ್ಷ್ಮಿ ಹೆಬ್ಬಾಳ್ಕರ್ ಜೊತೆಗಿದ್ದಾರೆ ಎಂದು ಕೇಳಿದ್ದೇವೆ. ಇಂದು ಅದು ಸಾಬೀತಾಗಿದೆ. ಪ್ರಜಾಧ್ವನಿ ಯಾತ್ರೆ ಎಲ್ಲಿ ಹೋದರೂ ಜನಸಾಗರ ಸೇರುತ್ತಿದೆ ಎಂದರು. ಇದನ್ನೂ ಓದಿ: ಚೀನಾದಿಂದ ತೈಲಕ್ಕೆ ಭಾರೀ ಬೇಡಿಕೆ – ಆದ್ರೂ ರಷ್ಯಾಗೆ ಭಾರತದ ಕಡೆ ಒಲವೇಕೆ?
ಇದೇ ವೇಳೆ ಸಿದ್ದರಾಮಯ್ಯ (Siddaramaiah) ಸರ್ಕಾರದ ಅವಧಿಯ ಯೋಜನೆಗಳ ಮಾಹಿತಿ ನೀಡುವ ವೇಳೆ ಜಮೀರ್ ಅಹ್ಮದ್ ಖಾನ್ ಎಡವಟ್ಟು ಮಾಡಿಕೊಂಡ ಘಟನೆ ಕೂಡ ನಡೆಯಿತು. ಕ್ಷೀರ ಭಾಗ್ಯ ಎನ್ನುವ ಬದಲು ಶೀಲಭಾಗ್ಯ ಎಂದು ತಪ್ಪಾಗಿ ಉಚ್ಚರಿಸಿದರು. ಇದನ್ನೂ ಓದಿ: ಪ್ರಧಾನಿ ಮೋದಿಯವರ ಆರೋಗ್ಯ ಚೆನ್ನಾಗಿರಲಿ: ಸಿದ್ದರಾಮಯ್ಯ