Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈತ್ರಿ ಸರ್ಕಾರದ ಸ್ಟ್ರಾಟಜಿ ಅನುಸರಿಸಲು ಯಡಿಯೂರಪ್ಪ ಆಲೋಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮೈತ್ರಿ ಸರ್ಕಾರದ ಸ್ಟ್ರಾಟಜಿ ಅನುಸರಿಸಲು ಯಡಿಯೂರಪ್ಪ ಆಲೋಚನೆ

Districts

ಮೈತ್ರಿ ಸರ್ಕಾರದ ಸ್ಟ್ರಾಟಜಿ ಅನುಸರಿಸಲು ಯಡಿಯೂರಪ್ಪ ಆಲೋಚನೆ

Public TV
Last updated: December 14, 2019 12:30 pm
Public TV
Share
2 Min Read
yeddyurppa bsy 1
SHARE

ಬೆಂಗಳೂರು: ಉಪಚುನಾವಣೆಯ ಬಳಿಕ ರಾಜ್ಯ ಬಿಜೆಪಿ ಸರ್ಕಾರ ಭೌತಿಕವಾಗಿಯೇನೋ ಸ್ಥಿರತೆ ಕಾಪಾಡಿಕೊಂಡಿದೆ. ಆದರೆ ಆಂತರಿಕವಾಗಿ ಒಂದು ಸುಭದ್ರ ಸರ್ಕಾರಕ್ಕಿರಬೇಕಾದ ಯಾವ ಲಕ್ಷಣಗಳೂ ಇಲ್ಲ. ಸರ್ಕಾರದಲ್ಲಿ ಸದ್ಯ ಗುಂಪುಗಾರಿಕೆಗೆ ತಾತ್ಕಾಲಿಕ ತಡೆ ಬಿದ್ದಿರಬಹುದು. ಆದರೆ ಸಂಪುಟ ವಿಸ್ತರಣೆ ಕುರಿತ ಜಟಾಪಟಿ, ಸವಾಲುಗಳು ಬಗೆಹರಿಯುವ ಲಕ್ಷಣಗಳು ಕಾಣ್ತಿಲ್ಲ.

ಸಂಪುಟ ಸರ್ಕಸ್ ಸುಸೂತ್ರವಾಗಿ ನಿಭಾಯಿಸುವ ದಾರಿಗಳನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಹುಡುಕುತ್ತಲೇ ಇದ್ದಾರೆ. ನಿತ್ಯ ಆಪ್ತರ ಜೊತೆ ಮಾತುಕತೆಗಳನ್ನು ನಡೆಸುತ್ತಿದ್ದರೂ ಸಮಸ್ಯೆಗಳನ್ನು ಬಗೆಹರಿಸುವ ದಾರಿ ಸಿಕ್ತಿಲ್ಲ. ಈ ನಡುವೆ ಮೈತ್ರಿ ಸರ್ಕಾರದಲ್ಲೂ ಆರಂಭದಲ್ಲಿ ಇಂಥದ್ದೇ ಸನ್ನಿವೇಶ ನಿರ್ಮಾಣವಾಗಿದ್ದಾಗ ಕಾಂಗ್ರೆಸ್-ಜೆಡಿಎಸ್ ನಾಯಕರು ಅನುಸರಿಸಿದ್ದ ಸ್ಟ್ರಾಟಜಿಯ ಜಾರಿ ಕುರಿತು ಸಿಎಂ ಯಡಿಯೂರಪ್ಪ ಗಂಭೀರವಾಗಿ ಆಲೋಚನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಮಂತ್ರಿಗಿರಿ ಕೊಡದಿದ್ರೆ ಮುಖ್ಯಮಂತ್ರಿ ಸ್ಥಾನ ಕೊಡಲಿ: ಉಮೇಶ್ ಕತ್ತಿ ಹೊಸ ಬಾಂಬ್

yeddyurppa bsy Smile A

ಮೈತ್ರಿ ಸರ್ಕಾರದ ಭಾಗವಾಗಿದ್ದ ಕಾಂಗ್ರೆಸ್ ಪಕ್ಷದಲ್ಲಿ ಸಚಿವ ಸ್ಥಾನಕ್ಕೆ ಆಕಾಂಕ್ಷಿಗಳ ಪಟ್ಟಿ ಉದ್ದವೇ ಇತ್ತು. ಅಲ್ಲಿ ಎಲ್ಲರೂ ಸಚಿವ ಸ್ಥಾನ ಕೇಳೋರೆ ಅನ್ನುವಂತಾಗಿತ್ತು. ಆಗ ಕಾಂಗ್ರೆಸ್ ಹೈಕಮಾಂಡ್ ಒಂದು ಪರಿಹಾರಾತ್ಮಕ ಸೂತ್ರವನ್ನು ರಾಜ್ಯ ನಾಯಕರಿಗೆ ಕಳಿಸಿಕೊಟ್ಟಿತ್ತು. ಅದರ ಪ್ರಕಾರ ಆಗಿದ್ದ ಮೊದಲ ಹಂತದ ಸಂಪುಟ ಸಚಿವರ ಮೌಲ್ಯಮಾಪನ ಮಾಡುವುದು. ಒಂದು ವರ್ಷಕ್ಕೊಮ್ಮೆ ಮೌಲ್ಯಮಾಪನ ಮಾಡಿ ಆ ಪೈಕಿ ಯಾರು ಕೆಲಸ ಮಾಡದ ಸಚಿವರು ಇರುತ್ತಾರೋ ಅವರನ್ನು ಬದಲಾಯಿಸುವ ನಿರ್ಧಾರ ಆಗಿತ್ತು. ಹಾಗೆ ಬದಲಾದ ಸಚಿವರ ಸ್ಥಾನಕ್ಕೆ ಉಳಿದ ಆಕಾಂಕ್ಷಿಗಳ ಪೈಕಿ ಕೆಲವರನ್ನು ತುಂಬುವುದು ಆ ಸ್ಟ್ರಾಟಜಿಯ ಮುಖ್ಯ ಉದ್ದೇಶ. ಇದರಿಂದ ಅಸಮಧಾನವೂ ತಣಿಯುತ್ತೆ, ಆಕಾಂಕ್ಷಿಗಳ ಬೇಗುದಿಯನ್ನೂ ನಿಯಂತ್ರಿಸಬಹುದು ಎಂಬ ಲೆಕ್ಕಾಚಾರ ಹಾಕಿತ್ತು ಕಾಂಗ್ರೆಸ್. ಆದರೆ ನಂತರದ ರಾಜಕೀಯ ಸನ್ನಿವೇಶಗಳು ಕಾಂಗ್ರೆಸ್‍ಗೆ ತನ್ನ ಆ ಸ್ಟ್ರಾಟಜಿ ಜಾರಿಗೆ ಅವಕಾಶ ಮಾಡಿಕೊಡಲಿಲ್ಲ.

bjp siddu

ಅದೇ ಸ್ಟ್ರಾಟಜಿಯನ್ನು ಬಿಜೆಪಿ ಸರ್ಕಾರದಲ್ಲೂ ಅಳವಡಿಸಲು ಯಡಿಯೂರಪ್ಪನವರು ಒಲವು ತೋರಿದ್ದಾರೆ ಎನ್ನಲಾಗಿದೆ. ಹೇಳಿಕೇಳಿ ಸರ್ಕಾರ ಸ್ಥಿರವಾಗಿದೆ. ವರ್ಷಕ್ಕೊಮ್ಮೆ ಸಚಿವರ ಬದಲಾವಣೆ ಪ್ರಸ್ತಾಪಕ್ಕೆ ಸ್ವಲ್ಪ ಕಷ್ಟವಿದ್ದರೂ ಎಲ್ಲರನ್ನೂ ಒಪ್ಪಿಸಬಹುದು. ಒಂದೊಮ್ಮೆ ಯಾರಾದರೂ ಅಸಮಧಾನಗೊಂಡರೂ ಅವರಿಗೆ ಪಕ್ಷದ ಶಿಸ್ತು ದಾಟಲು ಅವಕಾಶ ಮತ್ತು ಧೈರ್ಯ ಎರಡೂ ಇರೋದಿಲ್ಲ. ಜೊತೆಗೆ ಸದ್ಯದ ಪರಿಸ್ಥಿತಿಯಲ್ಲಿ ಬೇರೆ ಪಕ್ಷ ಬಿಟ್ಟು ಬಂದಿರೋ ಅಪೇಕ್ಷಿತ ಶಾಸಕರೇ ಇರಲಿ ಪಕ್ಷದ ಅಸಮಧಾನಗೊಂಡವರೇ ಇರಲಿ ಬಿಜೆಪಿ ಬಿಟ್ಟು ಹೋಗಲು ಸಾಧ್ಯವೇ ಇಲ್ಲ. ಅವರ ಸಿಟ್ಟು ಏನೇ ಇದ್ರೂ ಪಕ್ಷದ ಚೌಕಟ್ಟು ದಾಟಿ ಹೋಗಲ್ಲ. ಒಂದೊಮ್ಮೆ ಅಂಥ ಸ್ಥಿತಿ ಬಂದರೂ ಅಂತಹವರ ಸಂಖ್ಯೆ ಒಂದೆರಡಷ್ಟೇ.

ಈ ಎಲ್ಲ ಲೆಕ್ಕಾಚಾರಗಳನ್ನೂ, ಸಂಭಾವ್ಯ ಅಪಾಯಗಳನ್ನೂ ಯಡಿಯೂರಪ್ಪ ಆಲೋಚನೆ ಮಾಡುತ್ತಿದ್ದಾರೆ. ಒಂದೊಮ್ಮೆ ಹೈಕಮಾಂಡ್ ಸಹ ಕೊನೆಯಲ್ಲಿ ಕೈ ಹಿಡಿಯದಿದ್ರೆ ಇದೇ ದಾರಿಯಲ್ಲಿ ಸಾಗುವುದು ಯಡಿಯೂರಪ್ಪ ಅವರಿಗೆ ಅನಿವಾರ್ಯ ಆಗಲೂಬಹುದು.

TAGGED:bjpcabinetkannada newskarnatakayeddyurppaಕನ್ನಡಕರ್ನಾಟಕಕಾಂಗ್ರೆಸ್ಬಿಜೆಪಿಮೈತ್ರಿ ಸರ್ಕಾರಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Siddaramaiah 10
Bengaluru City

ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ: ವಿರೋಧಿಗಳಿಗೆ ಸಿಎಂ ತಿರುಗೇಟು

Public TV
By Public TV
4 minutes ago
Bird Flu 3
Districts

ಆಂಧ್ರದ ಚಿತ್ತೂರಲ್ಲಿ ಹಕ್ಕಿ ಜ್ವರ ಪತ್ತೆ – ಕೊಪ್ಪಳ ಜಿಲ್ಲೆಯಲ್ಲಿ ತೀವ್ರ ನಿಗಾ

Public TV
By Public TV
14 minutes ago
Narendra Modi great friend of mine Donald Trump Announces 26 percentage Discounted Reciprocal Tariff On India
Latest

ಟ್ರಂಪ್ ಟ್ಯಾರಿಫ್‌ ಗೆ ಭಾರೀ ಹಿನ್ನಡೆ – ಸುಂಕ ಹೇರಲು ಅಧಿಕಾರ ಇಲ್ಲ; ಯುಎಸ್‌ ಸುಪ್ರೀಂ ಕೋರ್ಟ್‌ ಚಾಟಿ

Public TV
By Public TV
44 minutes ago
rottweiler dog
Bengaluru City

ಬೆಂಗಳೂರು | 4 ವರ್ಷದ ಬಾಲಕನ ಮೇಲೆ ರಾಟ್ ವೀಲರ್ ದಾಳಿ

Public TV
By Public TV
46 minutes ago
Pralhad Joshi 2
Bagalkot

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ – ಕಾಂಗ್ರೆಸ್‌ ಸರ್ಕಾರ ಇದ್ದಾಗಲೇ ಯಾಕೆ ಹೀಗಾಗುತ್ತೆ: ಜೋಶಿ ಪ್ರಶ್ನೆ

Public TV
By Public TV
1 hour ago
Yathindra Siddaramaiah 1
Latest

ಆಧಾರರಹಿತ ಆರೋಪ ಮಾಡಿ ಅವಮಾನಿಸಿದ್ದರೆ ಸ್ನೇಹಮಯಿ ವಿರುದ್ಧ ಕ್ರಮ ಆಗ್ಬೇಕು: ಯತೀಂದ್ರ ಸಿದ್ದರಾಮಯ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?