ದಶಮಾನೋತ್ಸವ ಆಚರಣೆಗೆ ಸರ್ಕಾರಿ ನೌಕರರಿಂದ 500 ರೂ. ವಸೂಲಿ- ಸರ್ಕಾರದ ಬಳಿ ದುಡ್ಡು ಇಲ್ವಾ?

Public TV
1 Min Read
CKB jatre

ಚಿಕ್ಕಬಳ್ಳಾಪುರ: ಜಿಲ್ಲೆಗೆ 10 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಜಿಲ್ಲಾ ದಶಮಾನೋತ್ಸವ ಆಚರಣೆಗೆ ಜಿಲ್ಲಾಡಳಿತ ಮುಂದಾಗಿದೆ. ಆದರೆ ಜಿಲ್ಲೆಯ ಸರ್ಕಾರಿ ನೌಕರರ ವೇತನದಲ್ಲಿ 500 ರೂಪಾಯಿ ಕಡಿತ ಮಾಡಿಕೊಳ್ಳಲು ನಿರ್ಧಾರಕ್ಕೆ ಆಕ್ಷೇಪ ಕೇಳಿ ಬಂದಿದೆ.

ಫೆಬ್ರವರಿ 2, 3 ಹಾಗೂ 4 ಮೂರು ದಿನಗಳ ಕಾಲ ಚಿಕ್ಕಬಳ್ಳಾಪುರ ನಗರದಲ್ಲಿರುವ ಸರ್.ಎಂ.ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ದಶಮಾನೋತ್ಸವ ಆಚರಿಸಲು ಸಿದ್ಧತೆ ನಡೆದಿದೆ. ಆದರೆ ಈ ದಶಮಾನೋತ್ಸವ ಆಚರಣೆಗೆ ಸರ್ಕಾರಿ ನೌಕರರ ವೇತನದಲ್ಲಿ ಹಣ ಕಡಿತ ಮಾಡಿಕೊಳ್ಳುತ್ತಿರುವುದರಿಂದ ನೌಕರರ ಅಸಮಾಧಾನಕ್ಕೆ ಕಾರಣವಾಗಿದೆ. ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಸರ್ಕಾರಿ ಕಾರ್ಯಕ್ರಮ ಮಾಡೋಕೆ ಹಣದ ಕೊರತೆ ಇದೆಯಾ ಎಂಬ ಮಾತುಗಳು ಕೇಳಿಬರುತ್ತಿದೆ.

CKB JATRE 3

ಕೋಲಾರ ಜಿಲ್ಲೆಯಿಂದ ಬೇರ್ಪಟ್ಟು ಚಿಕ್ಕಬಳ್ಳಾಪುರ ಜಿಲ್ಲೆಯಾಗಿ 10 ವರ್ಷಗಳಾಗಿವೆ. ದಶಮಾನೋತ್ಸವ ಆಚರಣೆಗೆ ಸ್ವತಃ ರಾಜ್ಯ ಸರ್ಕಾರ ಸೂಕ್ತ ಅನುದಾನ ನೀಡಬೇಕಿತ್ತು. ಆದರೆ ಜಿಲ್ಲೆಯಲ್ಲಿ ಪ್ರಭಾವಿ ಮೂರು ಜನ ಕಾಂಗ್ರೆಸ್ ಶಾಸಕರಿದ್ದರೂ ಅನುದಾನ ತರಲು ಸಾಧ್ಯವಾಗಿಲ್ಲ. ಹೀಗಾಗಿ ದಶಮಾನೋತ್ಸವ ಆಚರಣೆಗೆ ಜಿಲ್ಲಾಧಿಕಾರಿ ದೀಪ್ತಿ ಆದಿತ್ಯಾ ಕಾನಡೆ, ಎಲ್ಲಾ ರೀತಿಯ ಸರ್ಕಾರಿ ನೌಕರರ ವೇತನದಲ್ಲಿ ತಲಾ 1000-2000 ರೂ. ಕೊಡಿ ಎಂದು ನೌಕರರ ಸಂಘಗಳ ಜೊತೆ ಸಭೆಗಳನ್ನು ನಡೆಸಿದ್ದಾರೆ.

ಜಿಲ್ಲೆಯ ಸರ್ಕಾರಿ ನೌಕರರು ಮೊದಲೇ ಕಡಿಮೆ ವೇತನ ಪಡೆದುಕೊಳ್ಳುತ್ತಿದ್ದಾರೆ. ಈ ಮಧ್ಯೆ ಇಂಥದೊಂದು ವಿವಾದಾತ್ಮಕ ನಿರ್ಧಾರವನ್ನು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಕೈಗೊಂಡಿದೆ. ಜಿಲ್ಲಾಧಿಕಾರಿಯ ಒತ್ತಡಕ್ಕೆ ಮಣಿದ ನೌಕರರು ಕೊನೆಗೆ ಒಲ್ಲದ ಮನಸ್ಸಿನಿಂದಲೇ 500 ರೂಪಾಯಿ ನೀಡಲು ಒಪ್ಪಿದ್ದಾರೆ.

ದಶಮಾನೋತ್ಸವ ಆಚರಣೆಗೆ ರಾಜ್ಯ ಸರ್ಕಾರದಿಂದ ಭರ್ಜರಿ ಅನುದಾನ ಮಂಜೂರು ಮಾಡಿಸಿಕೊಳ್ಳೊದನ್ನು ಬಿಟ್ಟು ಸರ್ಕಾರಿ ನೌಕರರ ವೇತನವನ್ನು ಕಡಿತ ಮಾಡಿಕೊಳ್ಳಲು ಮುಂದಾಗಿದೆ.

CKB LETTER

CKB JATRE 4

CKB JATRE 5

CKB JATRE 9

CKB JATRE 10

CKB JATRE 11

Share This Article
Leave a Comment

Leave a Reply

Your email address will not be published. Required fields are marked *