ಚಾಮರಾಜನಗರ: ಸರ್ಕಾರಿ ನೌಕರರ ಮುಷ್ಕರದಿಂದ (Government employees strike) ಜನಸಾಮಾನ್ಯರಿಗೆ ತೊಂದರೆಯಾದರೆ ನೌಕರರಿಗೆ ಒಳ್ಳೆಯದಾಗುವುದಿಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (K.S.Eshwarappa) ಕಿಡಿಕಾರಿದ್ದಾರೆ.
ಮಲೆಮಹದೇಶ್ವರ ಬೆಟ್ಟದಲ್ಲಿ (Male Mahadeshwara Hills) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ (BJP) ಅಧಿಕಾರಕ್ಕೆ ಬಂದ ನಂತರ ಸರ್ಕಾರಿ ನೌಕರರನ್ನು ಅಣ್ಣ-ತಮ್ಮಂದಿರಂತೆ ನೋಡಿಕೊಂಡಿದೆ. ಯಾವ ಮುಷ್ಕರಕ್ಕೂ ಅವಕಾಶ ನೀಡದೆ, ಎಲ್ಲಾ ಸೌಲಭ್ಯಗಳನ್ನು ನೀಡಲಾಗಿತ್ತು. ಚುನಾವಣಾ ಸಂದರ್ಭದಲ್ಲಿ ಮುಷ್ಕರ ಮಾಡಿದರೆ ಸರ್ಕಾರ ಬಗ್ಗುತ್ತದೆ ಎಂಬುದು ನೌಕರರ ನಂಬಿಕೆ. ಸಮಸ್ಯೆ ಆದಷ್ಟು ಬೇಗ ಪರಿಹಾರವಾಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: ರೈಲುಗಳ ನಡುವೆ ಭೀಕರ ಅಪಘಾತ- 16 ಮಂದಿ ದುರ್ಮರಣ
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸರ್ಕಾರಿ ನೌಕರರಿಗೆ ಅನೂಕೂಲಕರ ವಾತಾವರಣ ಮಾಡಿಕೊಟ್ಟಿದ್ದಾರೆ. ಕಾಂಗ್ರೆಸ್ (Congress) ಆರೋಪ ಮಾಡುವಷ್ಟು ಯಡಿಯೂರಪ್ಪ ನೀಚ ಮಟ್ಟಕ್ಕೆ ಹೋಗಲ್ಲ. ಅವರ ಮೇಲೆ ಆರೋಪ ಮಾಡುವವರು ಯಾವ ಪಾಪಕ್ಕೆ ಹೋಗುತ್ತಾರೋ ಗೊತ್ತಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ಯಡಿಯೂರಪ್ಪ (B.S.Yediyurappa) ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸಹೋದರರಂತೆ ಇದ್ದಾರೆ. ಸರ್ಕಾರಿ ನೌಕರರ ಮುಷ್ಕರಕ್ಕೂ ಯಡಿಯೂರಪ್ಪ ಅವರಿಗೂ ಸಂಬಂಧ ಕಲ್ಪಿಸುವ ಮಟ್ಟಕ್ಕೆ ಕಾಂಗ್ರೆಸ್ ಇಳಿಯಬಾರದಿತ್ತು ಎಂದಿದ್ದಾರೆ. ಇದನ್ನೂ ಓದಿ: ಪತ್ನಿಗೆ ಮೆಸೇಜ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಗೆಳೆಯ ಮಟಾಶ್!