ಬಿಟ್ ಕಾಯಿನ್ ಹಗರಣ ಮರುತನಿಖೆಗೆ ಎಸ್‍ಐಟಿ ರಚನೆ – ನಾಳೆಯಿಂದಲೇ ತನಿಖೆಗೆ ಮರುಜೀವ

Public TV
1 Min Read
BIT COIN

ಬೆಂಗಳೂರು: ಬಿಜೆಪಿ ಕಾಲದ ಬಿಟ್ ಕಾಯಿನ್ ಹಗರಣದ (Bitcoin Scam) ವಿರುದ್ಧ ಮರು ತನಿಖೆ ನಡೆಸುವಂತೆ ಸರ್ಕಾರ ಆದೇಶ (Karnataka Government) ಹೊರಡಿಸಿದೆ. ತನಿಖೆಗೆ ಎಸ್‍ಐಟಿ (SIT ) ರಚನೆ ಮಾಡಲಾಗಿದ್ದು, ತನಿಖೆ ಮಂಗಳವಾರದಿಂದಲೇ ಪ್ರಾರಂಭಗೊಳ್ಳಲಿದೆ.

MANISH KARBIKARಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್ ನೇತೃತ್ವದಲ್ಲಿ ಈಗಾಗಲೇ ಎಸ್‍ಐಟಿಯನ್ನು ರಚನೆ ಮಾಡಲಾಗಿದೆ. ಸಿಐಡಿ ಸೈಬರ್ ಸೆಲ್‍ನ ಎಸ್ಪಿ ಶರತ್ ಪ್ರಕರಣದ ತನಿಖಾಧಿಕಾರಿ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಈ ಬಿಟ್ ಕಾಯಿನ್ ಹಗರಣವನ್ನು ಈ ಹಿಂದೆ ಸಿಸಿಬಿ ತನಿಖೆ ಮಾಡಿತ್ತು. ಆಗ ತನಿಖೆಯಲ್ಲಿ ಹಗರಣ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ರಾಜಕಾರಣಿಗಳು ಹಣ ತನಿಖೆಯ ದಾರಿ ತಪ್ಪಿಸಿದ್ದಾರೆ ಎನ್ನಲಾಗಿತ್ತು. ಇದನ್ನೂ ಓದಿ: ನಿಗದಿಗಿಂತ ಚುನಾವಣೆಯಲ್ಲಿ ಅಧಿಕ ವೆಚ್ಚ – ಇಬ್ಬರೂ ಬಿಜೆಪಿ ನಾಯಕರಿಗೆ ನೋಟಿಸ್

ಈ ಬಗ್ಗೆ ಸಿಐಡಿ ಡಿಜಿ ಸಲೀಂ ಅಧಿಕಾರಿಗಳ ಜೊತೆ ಸೋಮವಾರ ಸಭೆ ನಡೆಸಿದ್ದಾರೆ. ಎಸ್‍ಐಟಿ ಮುಖ್ಯಸ್ಥ ಮನೀಷ್ ಕರ್ಬೀಕರ್ ಜೊತೆ ಮಾತುಕತೆ ನಡೆಸಿದ ಅವರು, ತನಿಖೆಯ ರೂಪುರೇಷೆ, ಫೈಲ್ ವರ್ಗಾವಣೆ, ಕೆಳ ಹಂತದಲ್ಲಿ ಯಾವೆಲ್ಲ ಅಧಿಕಾರಿಗಳು ಟೀಂನಲ್ಲಿ ಇರಬೇಕು ಎಂಬುದನ್ನು ಚರ್ಚಿಸಿದ್ದಾರೆ. ಈ ಹಿಂದಿನ ತನಿಖೆಯಲ್ಲಿ ಸಿಸಿಬಿಯಿಂದ ಚಾರ್ಜ್‍ಶೀಟ್ ಸಲ್ಲಿಕೆಯಾಗಿದೆ. ಇದರಿಂದಾಗಿ ಎಸ್‍ಐಟಿ ತನಿಖೆ ನಡೆಸಲು ಕೋರ್ಟ್‍ನಿಂದ ಅನುಮತಿ ಪಡೆಯಬೇಕಿದೆ. ಈ ಬಗ್ಗೆ ಸಿದ್ಧತೆ ನಡೆಸಲಾಗಿದೆ.

ಸಿಸಿಬಿಯಿಂದ ಫೈಲ್‍ಗಳ ವರ್ಗಾವಣೆ ಕೋರಿ ಪತ್ರ ಬರೆಯುವಂತೆ ಸಹ ಸೂಚಿಸಲಾಗಿದೆ. ಸಿಸಿಬಿಯ ತನಿಖಾ ಫೈಲ್ ಎಸ್‍ಐಟಿ ಕೈ ಸೇರಿದ ಬಳಿಕ ಮಂಗಳವಾರ ಅಥವಾ ಬುಧವಾರದಿಂದ ಅಧಿಕೃತವಾಗಿ ಎಸ್‍ಐಟಿ ತನಿಖೆ ಆರಂಭಿಸಲಿದೆ. ಇದನ್ನೂ ಓದಿ: ಮಂಗಳೂರಿನ ಶ್ವಾನ ಪ್ರೇಮಿ ರಜನಿ ಶೆಟ್ಟಿ ಮೇಲೆ ಹಲ್ಲೆ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article