Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಮಿಳುನಾಡಿಗೆ ಕಾವೇರಿ – ನಿತ್ಯ 8 ಸಾವಿರ ಕ್ಯುಸೆಕ್‌ ನೀರು ಹರಿಸಲು ಸರ್ಕಾರ ನಿರ್ಧಾರ: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಮಿಳುನಾಡಿಗೆ ಕಾವೇರಿ – ನಿತ್ಯ 8 ಸಾವಿರ ಕ್ಯುಸೆಕ್‌ ನೀರು ಹರಿಸಲು ಸರ್ಕಾರ ನಿರ್ಧಾರ: ಸಿಎಂ

Bengaluru City

ತಮಿಳುನಾಡಿಗೆ ಕಾವೇರಿ – ನಿತ್ಯ 8 ಸಾವಿರ ಕ್ಯುಸೆಕ್‌ ನೀರು ಹರಿಸಲು ಸರ್ಕಾರ ನಿರ್ಧಾರ: ಸಿಎಂ

Public TV
Last updated: July 14, 2024 8:17 pm
Public TV
Share
3 Min Read
Siddaramaiah 6
SHARE

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ನೀರಿಗೆ ಬದಲಾಗಿ, ಜುಲೈ 31ರ ವರೆಗೆ 8 ಸಾವಿರ ಕ್ಯುಸೆಕ್‌ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ.

Contents
  • ನಿರ್ಣಯ – 1
  • ನಿರ್ಣಯ – 2

ಜುಲೈ 31ರ ವರೆಗೆ ತಮಿಳುನಾಡಿಗೆ (Tamil Nadu) ನಿತ್ಯ 1 ಟಿಎಂಸಿ ನೀರು ಹರಿಸಬೇಕೆಂಬ ಕಾವೇರಿ ನೀರು ನಿಯಂತ್ರಣಾ ಸಮಿತಿ ಶಿಫಾರಸು ಹಿನ್ನೆಲೆಯಲ್ಲಿ ಭಾನುವಾರ ವಿಧಾನಸೌಧದಲ್ಲಿ ಸರ್ವಪಕ್ಷಗಳ ಸಭೆ ನಡೆಸಲಾಯಿತು. ಸಭೆಯಲ್ಲಿ ಆಡಳಿತ ಹಾಗೂ ಪ್ರತಿಪಕ್ಷಗಳ ಘಟಾನುಘಟಿ ನಾಯಕರು ಪಾಲ್ಗೊಂಡಿದ್ದರು. ಸಮಗ್ರ ಚರ್ಚೆಯ ಬಳಿಕ ಎರಡು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು.

KRS

ನಿರ್ಣಯ – 1

ಲೀಗಲ್ ಟೀಂ ಮೋಹನ್ ಕಾತರಕಿ ಅವರ ಸಲಹೆ ಮೇರೆಗೆ ತಮಿಳುನಾಡಿಗೆ 1 ಟಿಎಂಸಿ ಬದಲಾಗಿ 8 ಸಾವಿರ ಕ್ಯುಸೆಕ್ ನೀರು ಬಿಡಲು ತೀರ್ಮಾನ.

ನಿರ್ಣಯ – 2

1 ಟಿಎಂಸಿ ನೀರು ಬಿಡಬೇಕು ಎಂಬ ಕಾವೇರಿ ನೀರು ನಿಯಂತ್ರಣಾ ಸಮಿತಿ ಆದೇಶಕ್ಕೆ ವಿರುದ್ಧವಾಗಿ ಕಾವೇರಿ ನೀರು ನಿರ್ವಹಣಾ ಸಮಿತಿ (ಸಿಡಬ್ಲ್ಯೂಎಂಎ) ಮುಂದೆ ಮೇಲ್ಮನವಿ ಸಲ್ಲಿಸಲು ತೀರ್ಮಾನ.

Siddaramaiah 2 2

ಸಭೆಯ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸರ್ವಪಕ್ಷಗಳ ಸಭೆಯಲ್ಲಿ ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ನೀರಿಗೆ ಬದಲಾಗಿ, 8 ಸಾವಿರ ಕ್ಯೂಸೆಕ್‌ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೇ ಕಾವೇರಿ ನೀರು ನಿಯಂತ್ರಣಾ ಸಮಿತಿ ಆದೇಶಕ್ಕೆ ವಿರುದ್ಧವಾಗಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಕಾವೇರಿ ವಿಚಾರವಾಗಿ ಕೇಂದ್ರಕ್ಕೆ ಸರ್ವ ಪಕ್ಷ ನಿಯೋಗ ತೆಗೆದುಕೊಂಡು ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇಂದಿನ ಸರ್ವ ಪಕ್ಷಗಳ ಸಭೆ ಕರೆಯಲಾಗಿತ್ತು. ಅಶೋಕ್, ಸದಾನಂದಗೌಡ, ಜಿ.ಟಿ ದೇವೇಗೌಡ, ಸಿಟಿ ರವಿ, ಎ.ಮಂಜು, ರೈತ ಸಂಘದವರು, ಯದವೀರ್, ಕಾವೇರಿ ಭಾಗದ ಶಾಕಸರ ಇದ್ದರು. ಸಭೆಯಲ್ಲಿ ವಸ್ತು ಸ್ಥಿತಿಯನ್ನ ನಾನು, ಡಿಕೆ ಶಿವಕುಮಾರ್ ಕೊಟ್ಟಿದ್ದೇವೆ. ಲೀಗಲ್ ಟೀಂ ಕಾತರಕಿ, ಎ.ಜಿ ಶಶಿಕಿರಣ್ ಶೆಟ್ಟಿ ಅವರು ಸಭೆಯಲ್ಲಿ ಇದ್ದರು.

ಸಂಗ್ರಹವಿರುವ ನೀರು 2 ತಿಂಗಳಿಗೆ ಆಗುತ್ತೆ:
ಜುಲೈ 11 ರಂದು ನಡೆದ ಕಾವೇರಿ ನೀರು ನಿಯಂತ್ರಣಾ ಸಮಿತಿ ಸಭೆಯಲ್ಲಿ 31ರ ವರೆಗೆ ತಮಿಳುನಾಡಿಗೆ ನಿತ್ಯ 1 ಟಿಎಂಸಿ ನೀರು ಬಿಡುವಂತೆ ಶಿಫಾರಸು ಮಾಡಲಾಗಿತ್ತು. ಸಾಮಾನ್ಯವಾಗಿ ಜೂನ್‌ ತಿಂಗಳಲ್ಲಿ 9.14 ಟಿಎಂಸಿ ನೀರು ಬಿಡಬೇಕಿತ್ತು. ಜುಲೈನಲ್ಲಿ 31.24 ಟಿಎಂಸಿ ನೀರು ಬಿಡಬೇಕಿತ್ತು. ಆದ್ರೆ ಸಂಗ್ರಹವಿರುವ 40.43 ಟಿಎಂಸಿ ನೀರು 2 ತಿಂಗಳಿಗೆ ಆಗುತ್ತೆ. ಈಗ ನಾವು 5 ಟಿಎಂಸಿಗೂ ಹೆಚ್ಚು ನೀರು ಬಿಡುಗಡೆ ಮಾಡಿದ್ದೇವೆ ಎಂದು ವಿವರಿಸಿದರು.

1 ಟಿಎಂಸಿ ನೀರು ಬಿಡೋಕೆ ಆಗಲ್ಲ: 
ಸಭೆಯಲ್ಲಿ ಕಾತರಕಿ ಅವರು ನೀರಿನ ಸಂಗ್ರಹದ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಬಾರಿ ಸುಮಾರು 30% ಒಳಹರಿವು ಕಡಿಮೆಯಾಗಿದೆ. ಕಬಿನಿಯಲ್ಲಿ 96%, ಹಾರಂಗಿಯಲ್ಲಿ 76%, ಹೇಮಾವತಿಯಲ್ಲಿ 56%, ಕೆಆರ್‌ಎಸ್‌ನಲ್ಲಿ 54% ನೀರು ಸಂಗ್ರಹವಾಗಿದೆ. ಒಟ್ಟಾರೆಯಾಗಿ 63% ಮಾತ್ರ ನೀರು ಸಂಗ್ರಹ ಆಗಿದೆ. ಜುಲೈ 12ರಂದು 5 ಸಾವಿರ ಕ್ಯುಸೆಕ್‌ ಒಳಹರಿವು ಆಗಿತ್ತು, ಅಷ್ಟೇ ಹೊರಹರಿವೂ ಆಗಿದೆ. ಜು.13 ಮತ್ತು 14ರಂದು ಒಳಹರಿವು ಹೆಚ್ಚಾಗಿದ್ದರೂ, ಒಂದು ಟಿಎಂಸಿ ನೀರು ಬಿಡೋಕೆ ಕಷ್ಟಸಾಧ್ಯವಾಗಿದೆ. ಆದ್ದರಿಂದ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಮಳೆ ಕಡಿಮೆಯಾದ್ರೆ ಬಿಡೋ ನೀರೂ ಕಡಿಮೆ ಮಾಡ್ತೀವಿ: 
ಸದ್ಯ 8 ಸಾವಿರ ಕ್ಯುಸೆಕ್‌ ನೀರು ಬಿಡುವ ನಿರ್ಧಾರ ಆಗಿದೆ. 1 ಟಿಎಂಸಿ ನೀರಿನ ಬದಲಾಗಿ 8 ಸಾವಿರ ಕ್ಯುಸೆಕ್ ಬಿಡಲು ಕಾತರಕಿ ಸಲಹೆ ಕೊಟ್ಟರು. ಮಳೆ ಬಾರದೇ ಹೋದರೆ ಕ್ಯುಸೆಕ್ ನೀರಿನಲ್ಲೂ ಕಡಿಮೆ ಮಾಡೋಣ, ಜೊತೆಗೆ ಅಪೀಲು ಹಾಕೋಣ ಅಂತಾ ಸಲಹೆ ಕೊಟ್ಟರು. ಅದರಂತೆ ತೀರ್ಮಾನ ಆಗಿದೆ. ಒಂದು ವೇಳೆ ಮಳೆ ಜಾಸ್ತಿ ಆದಲ್ಲಿ ಎಷ್ಟು ಬಿಡಬೇಕೋ ಅಷ್ಟು ನೀರು ಬಿಡ್ತೀವಿ. ಮಳೆ ಕಡಿಮೆ ಆದರೆ ಈಗ ಬಿಡುವ 8 ಸಾವಿರ ಕ್ಯುಸೆಕ್ ನೀರಿನಲ್ಲೂ ಕಡಿಮೆ ಮಾಡುತ್ತೇವೆ ಎಂದು ಸಿಎಂ ಸ್ಪಷ್ಟಪಡಿಸಿದರು.

TAGGED:bjpcauvery waterCWRCDK ShivakumarR. Ashokasiddaramaiahtamil naduಕಾವೇರಿ ನೀರುಕಾವೇರಿ ನೀರು ನಿಯಂತ್ರಣಾ ಸಮಿತಿಡಿಕೆ ಶಿವಕುಮಾರ್ತಮಿಳುನಾಡುಸಿಡಬ್ಲ್ಯೂಆರ್‌ಸಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows

You Might Also Like

Raichuru Dowry Death
Crime

ಗೃಹಿಣಿ ಅನುಮಾನಾಸ್ಪದ ಸಾವು – ಪತಿ ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ

Public TV
By Public TV
6 minutes ago
Mysuru Child Death After Eating Hibiscus Flower
Crime

ಒಣಗಿದ ದಾಸವಾಳ ನುಂಗಿ 6 ತಿಂಗಳ ಮಗು ಸಾವು

Public TV
By Public TV
14 minutes ago
Shell Petrol Bunk
Bengaluru City

ಜನರಿಗೆ ಶಾಕ್‌ ಮೇಲೆ ಶಾಕ್‌ – ಲೀಟರ್ ಪೆಟ್ರೋಲ್‌ ಬೆಲೆ 6 ರೂ., ಡೀಸೆಲ್‌ 7 ರೂ. ಹೆಚ್ಚಳ

Public TV
By Public TV
21 minutes ago
Raichuru Lorry Seize
Districts

8 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ – 600 ಚೀಲಗಳಿದ್ದ ಲಾರಿ ಜಪ್ತಿ

Public TV
By Public TV
1 hour ago
DK Suresh
Bengaluru City

IPL ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ – ಡಿಕೆ ಸುರೇಶ್‌

Public TV
By Public TV
2 hours ago
Iran Israel War 1
Bengaluru City

ತಿಂಗಳಾದ್ರೂ ಮುಗಿಯದ ಮಧ್ಯಪ್ರಾಚ್ಯ ಸಂಘರ್ಷ – ಯುದ್ಧ ಮುಂದುವರಿದ್ರೆ ಭಾರತದ ಮೇಲೇನು ಪರಿಣಾಮ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?