Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂಡಿ ನಿಂಬೆಗೆ ಜಿಐ ಮಾನ್ಯತೆ ಪಡೆಯಲು ಸದ್ದಿಲ್ಲದೆ ನಡೆಯುತ್ತಿದೆ ಸಿದ್ಧತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಇಂಡಿ ನಿಂಬೆಗೆ ಜಿಐ ಮಾನ್ಯತೆ ಪಡೆಯಲು ಸದ್ದಿಲ್ಲದೆ ನಡೆಯುತ್ತಿದೆ ಸಿದ್ಧತೆ

Districts

ಇಂಡಿ ನಿಂಬೆಗೆ ಜಿಐ ಮಾನ್ಯತೆ ಪಡೆಯಲು ಸದ್ದಿಲ್ಲದೆ ನಡೆಯುತ್ತಿದೆ ಸಿದ್ಧತೆ

Public TV
Last updated: November 20, 2017 5:42 pm
Public TV
Share
3 Min Read
Indi lemon GI
SHARE

ಬೆಂಗಳೂರು: ಮೈಸೂರ್ ಪಾಕ್  ಭೌಗೋಳಿಕ ಸೂಚ್ಯಂಕಕ್ಕಾಗಿ(ಜಿಐ) ಕರ್ನಾಟಕ ಮತ್ತು ತಮಿಳುನಾಡು ಮಂದಿ ಈಗ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಚರ್ಚೆ ನಡೆಸುತ್ತಿದ್ದರೆ, ರಾಜ್ಯ ಸರ್ಕಾರ ಸದ್ದಿಲ್ಲದೇ ನಿಂಬೆಹಣ್ಣಿನ ಜಿಯೋಗ್ರಫಿಕಲ್ ಐಡೆಂಟಿಫಿಕೇಷನ್ ಪಡೆಯಲು ಸಿದ್ಧತೆ ನಡೆಸುತ್ತಿದೆ.

ಹೌದು, ಕರ್ನಾಟಕ ಸರ್ಕಾರ ವಿಜಯಪುರದ ಇಂಡಿ ತಾಲೂಕಿನಲ್ಲಿ ಬೆಳೆಯಲಾಗುತ್ತಿರುವ ವಿಶೇಷ ನಿಂಬೆಹಣ್ಣಿನ ಜಿಐ ಮಾನ್ಯತೆ ಪಡೆಯಲು ಸಿದ್ಧತೆ ನಡೆಸುತ್ತಿದೆ. ಒಂದು ವೇಳೆ ಈ ಪ್ರಯತ್ನ ಸಫಲವಾದರೆ ಮಣಿಪುರದ ಕಚಯ್ ಬಳಿಕ ನಿಂಬೆಹಣ್ಣಿನ ಜಿಐ ಪಡೆದ ಎರಡನೇ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಲಿದೆ.

ತೋಟಗಾರಿಕಾ ವಿಜ್ಞಾನಿಗಳು, ಸಸ್ಯಶಾಸ್ತ್ರಜ್ಞರು, ಹಣ್ಣಿನ ತಜ್ಞರ ತಂಡವೊಂದು ನಿಂಬೆ ಹಣ್ಣು ಮತ್ತು ಅದರಲ್ಲಿನ ಅಪರೂಪದ ಗುಣಗಳನ್ನು ಈಗ ಅಧ್ಯಯನ ಮಾಡಲು ಸಿದ್ಧತೆ ನಡೆಸುತ್ತಿದೆ.

Lemons4

ಇಂಡಿ ನಿಂಬೆಹಣ್ಣಿನ ವಿಶೇಷತೆ ಏನು?
ಇಂಡಿ ತಾಲೂಕಿನಲ್ಲಿ ಬೆಳೆಯಲಾಗುತ್ತಿರುವ ನಿಂಬೆ ಹಣ್ಣಲ್ಲಿ ರಸ ಹೆಚ್ಚು. ವಾರಗಟ್ಟಲೆ ಇಟ್ಟರೂ ಒಣಗುವುದಿಲ್ಲ ಮತ್ತು ಹಾಳಾಗುವುದಿಲ್ಲ. ಈ ನಿಂಬೆಯನ್ನು ಬೇರೆ ಕಡೆ ಬೆಳೆದರೂ ಇಲ್ಲಿನ ಗುಣಮಟ್ಟ, ವಿಶೇಷತೆ ಇರುವುದಿಲ್ಲ. ಈ ಪರಿಸರದ ಮಣ್ಣು ಮತ್ತು ಹವಾಗುಣದಿಂದ ಗುಣಮಟ್ಟದ ನಿಂಬೆ ಬೆಳೆಯಲಾಗುತ್ತಿದ್ದು, ಈ ವಿಶೇಷತೆಯನ್ನು ಇಟ್ಟುಕೊಂಡು ಸರ್ಕಾರ ಈಗ ಜಿಐ ಮಾನ್ಯತೆ ಪಡೆಯಲು ಪ್ರಯತ್ನ ನಡೆಸುತ್ತಿದೆ.

ಭಾರತ ನಿಂಬೆ ಉತ್ಪಾದನೆಯಲ್ಲಿ ವಿಶ್ವದಲ್ಲೇ 3ನೇ ಸ್ಥಾನ ಪಡೆದಿದ್ದು, 25 ದೇಶಗಳಿಗೆ ರಫ್ತಾಗುತ್ತಿದೆ. ಕರ್ನಾಟಕದ ಒಟ್ಟು 12,357 ಹೆಕ್ಟೇರ್ ನಿಂಬೆ ಪ್ರದೇಶದಲ್ಲಿ ವಿಜಯಪುರ ಜಿಲ್ಲೆಯಲ್ಲೇ 6,814 ಹೆಕ್ಟೇರ್ (ರಾಜ್ಯ ವಿಸ್ತೀರ್ಣದ ಶೇ.55ರಷ್ಟು) ಇದೆ. ಜಿಲ್ಲೆಯ ಇಂಡಿ ತಾಲೂಕಿನಲ್ಲಿ 3,994 ಹೆಕ್ಟೇರ್, ಸಿಂದಗಿ 1,056 ಹೆಕ್ಟೇರ್, ವಿಜಯಪುರದಲ್ಲಿ 1,055 ಹೆಕ್ಟೇರ್, ಬಸವನಬಾಗೇವಾಡಿ 741 ಹೆಕ್ಟೇರ್, ಮುದ್ದೇಬಿಹಾಳ ತಾಲೂಕಲ್ಲಿ 13 ಹೆಕ್ಟೇರ್ ನಲ್ಲಿ ನಿಂಬೆ ಬೆಳೆಯಿದೆ.

ಇಂಡಿಯಲ್ಲಿ ಬೆಳೆಯಲಾಗುತ್ತಿರುವ ನಿಂಬೆ ಹಣ್ಣು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ. ತೋಟಗಾರಿಕಾ ಇಲಾಖೆಯ ಮಾಹಿತಿ ಪ್ರಕಾರ ಒಟ್ಟ ಇಂಡಿ ತಾಲೂಕು ಒಂದರಲ್ಲೇ ಪ್ರತಿ ವರ್ಷ ಹತ್ತಿರ ಹತ್ತಿರ 2 ಲಕ್ಷ ಟನ್ ನಿಂಬೆಹಣ್ಣನ್ನು ಬೆಳೆಯಲಾಗುತ್ತಿದೆ. ಪ್ರತಿ ವಾರ ಇಂಡಿಯಿಂದ 80 ರಿಂದ 100 ಟನ್ ನಿಂಬೆ ಹಣ್ಣನ್ನು ಮಧ್ಯಪೂರ್ವ ಮತ್ತು ಅಮೆರಿಕಕ್ಕೆ ರಫ್ತು ಮಾಡಲಾಗುತ್ತಿದೆ. ಅಷ್ಟೇ ಅಲ್ಲದೇ ಗುಜರಾತ್, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಜಮ್ಮು ಕಾಶ್ಮೀರಕ್ಕೆ ಇಂಡಿ ನಿಂಬೆ ಹಣ್ಣು ರಫ್ತು ಆಗುತ್ತದೆ.

ಕರ್ನಾಟಕದಲ್ಲಿ ಯಾವುದಕ್ಕೆ ಜಿಐ ಸಿಕ್ಕಿದೆ?
ಮೈಸೂರು ಸಿಲ್ಕ್, ಮೈಸೂರು ಅಗರಬತ್ತಿ, ಮೈಸೂರು ಗಂಧದ ಎಣ್ಣೆ, ಮೈಸೂರು ಸ್ಯಾಂಡಲ್ ಸೋಪ್, ಮೈಸೂರು ಸಾಂಪ್ರದಾಯಿಕ ವರ್ಣಚಿತ್ರಗಳು, ಕೊಡಗಿನ ಕಿತ್ತಳೆ, ಮೈಸೂರು ವೀಳ್ಯದ ಎಲೆ, ನಂಜನಗೂಡು ಬಾಳೆಹಣ್ಣು, ಮೈಸೂರು ಮಲ್ಲಿಗೆ, ಉಡುಪಿ ಮಲ್ಲಿಗೆ, ಮೊಳಕಾಲ್ಮುರು ಸೀರೆಗಳು, ಮಲಬಾರ್ ಅರಾಬಿಕಾ ಕಾಫಿ, ಮಲಬಾರ್ ರೋಬಸ್ಟಾ ಕಾಫಿ, ಕೊಡಗು ಹಸಿರು ಏಲಕ್ಕಿ, ಧಾರವಾಡ ಪೇಡಾ, ದೇವನಹಳ್ಳಿ ಚಕ್ಕೊತ್ತಾ, ಅಪ್ಪೆಮಿಡಿ ಮಾವು, ಕಮಲಾಪುರ ಕೆಂಪು ಬಾಳೆಹಣ್ಣು, ಚನ್ನಪಟ್ಟಣದ ಗೊಂಬೆ, ಇಳಕಲ್ ಸೀರೆಗಳು ಸೇರಿದಂತೆ ರಾಜ್ಯದ 40 ಉತ್ಪನ್ನಗಳಿಗೆ  ಜಿಐ ಮಾನ್ಯತೆ ಸಿಕ್ಕಿದೆ.

lemon2

ಅತಿ ಹೆಚ್ಚು ಜಿಐ ಮಾನ್ಯತೆ ಪಡೆದ ರಾಜ್ಯಗಳು?
ರಾಜ್ಯಗಳ ಪ್ರಸ್ತಾಪವನ್ನು ಒಪ್ಪಿ ಕೇಂದ್ರ ಸರ್ಕಾರ ಜಿಯೋಗ್ರಫಿಕಲ್ ಐಡೆಂಟಿಫಿಕೇಷನ್ ಮಾನ್ಯತೆಯನ್ನು ನೀಡುತ್ತದೆ. ಪಟ್ಟಿಯಲ್ಲಿ 40 ಉತ್ಪನ್ನಗಳಿಗೆ ಮಾನ್ಯತೆ ಪಡೆಯುವ ಮೂಲಕ ಅತಿ ಹೆಚ್ಚು ಜಿಐ ಸಂಪಾದಿಸಿದ ಹೆಗ್ಗಳಿಕೆಯನ್ನು ಕರ್ನಾಟಕ ಪಡೆದುಕೊಂಡಿದೆ. ರಾಜ್ಯಕ್ಕೆ ಸಿಕ್ಕಿರುವ 40ರಲ್ಲಿ 13 ಮೈಸೂರಿನಿಂದ ಬಂದಿರುವ ಉತ್ಪನಗಳು ಎನ್ನುವುದು ವಿಶೇಷ.

ಕರ್ನಾಟಕದ ಬಳಿಕ ಮಹಾರಾಷ್ಟ್ರ(30), ಕೇರಳ(27), ಉತ್ತರ ಪ್ರದೇಶ(24), ಆಂಧ್ರಪ್ರದೇಶ(18), ಪಶ್ಚಿಮ ಬಂಗಾಳ(15), ಒಡಿಶಾ(14), ರಾಜಸ್ಥಾನ(14), ಗುಜರಾತ್(13), ಬಿಹಾರ(11), ತೆಲಂಗಾಣ(11), ಅಸ್ಸಾಂ(8), ಮಧ್ಯಪ್ರದೇಶ(8), ಜಮ್ಮು ಕಾಶ್ಮೀರ(8) ರಾಜ್ಯಗಳ ಉತ್ಪನ್ನಗಳಿಗೆ ಜಿಐ ಸಿಕ್ಕಿದೆ.

ಇದನ್ನೂ ಓದಿ: ಮೈಸೂರು ಪಾಕ್ ಯಾರಿಗೆ ಸೇರಿದ್ದು? ಕನ್ನಡಿಗರು- ತಮಿಳಿಗರ ಮಧ್ಯೆ ಚರ್ಚೆ ಆರಂಭ

i lemon

 

TAGGED:Geographical IndicationindiIndi lemonkarnatakaKarnataka Governmentlemonvijayapuraಇಂಡಿಕರ್ನಾಟಕಜಿಐಜಿಯೋಗ್ರಫಿಕಲ್ ಐಡೆಂಟಿಫಿಕೇಷನ್ನಿಂಬೆಹಣ್ಣುಮೈಸೂರ್‍ಪಾಕ್ವಿಜಯಪುರ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

rahul gandhi
Bengaluru City

ಕರ್ನಾಟಕ ಬಿಜೆಪಿ ವಿರುದ್ಧ 40% ಕಮಿಷನ್‌ ಜಾಹೀರಾತು – ರಾಹುಲ್‌ಗೆ ರಿಲೀಫ್‌, ವಿಚಾರಣೆಯೇ ರದ್ದು

Public TV
By Public TV
11 seconds ago
Ramanagar Arrest
Districts

16.8 ಲಕ್ಷ ಮೌಲ್ಯದ 120 ಗ್ರಾಂ ಚಿನ್ನದ ಗಟ್ಟಿ ಕಳ್ಳತನ – ಇಬ್ಬರು ಅರೆಸ್ಟ್

Public TV
By Public TV
15 minutes ago
Fire breaks out at bike garage more than 8 bikes burnt Ilkal Bagalkote
Bagalkot

ಬೈಕ್ ಗ್ಯಾರೇಜ್‌ಗೆ ಬೆಂಕಿ- 8ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಭಸ್ಮ

Public TV
By Public TV
31 minutes ago
IMRAN KHAN
Cricket

ಕಪಿಲ್, ಸುನಿಲ್ ಗವಾಸ್ಕರ್ ಸೇರಿ 14 ಕ್ರಿಕೆಟ್ ದಿಗ್ಗಜರಿಂದ ಪಾಕ್‌ಗೆ ಪತ್ರ – ಇಮ್ರಾನ್‌ಗೆ ವೈದ್ಯಕೀಯ ಸೇವೆ ನೀಡುವಂತೆ ಮನವಿ

Public TV
By Public TV
1 hour ago
IAF Rafale main
Bengaluru City

ಭಾರತದಲ್ಲೇ ತಯಾರಾಗಲಿದೆ ರಫೇಲ್‌ ಹ್ಯಾಮರ್‌ – ಈ ಕ್ಷಿಪಣಿಯ ವಿಶೇಷತೆ ಏನು?

Public TV
By Public TV
2 hours ago
Yadagiri Bus Accident
Crime

ಶಾಲಾ ಬಸ್ಸಿನಿಂದ ಇಳಿಸಿ ರಿವರ್ಸ್ ತೆಗೆಯುವಾಗ ಹರಿದ ಬಸ್ – ಬಾಲಕ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?