ಬೆಂಗಳೂರು: ಕನ್ನಡ ಉಳಿಸುವ ನಿಟ್ಟಿನಲ್ಲಿ ಸರ್ಕಾರದ ಮಂತ್ರಿಗಳ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಯಲ್ಲಿ ಓದುವ ಮಸೂದೆಯನ್ನು ಮಂಡಿಸಲು ರಾಜ್ಯಸರ್ಕಾರ ಮುಂದಾಗಿದೆ.
ಸರ್ಕಾರಿ ನೌಕರರ, ರಾಜ್ಯದ ಮುಖ್ಯಮಂತ್ರಿಗಳ ಮತ್ತು ಕ್ಯಾಬಿನೆಟ್ ಸಚಿವರ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಯಲ್ಲಿ ಓದಿಸುವ ಮಸೂದೆಯನ್ನು ಪರಿಷತನ್ ನಲ್ಲಿ ಮಂಡಿಸಲಾಗುವುದು ಎಂದು ಕರ್ನಾಟಕ ಸರ್ಕಾರದ ಕರ್ನಾಟಕ ವಾರ್ತೆ ತನ್ನ ಅಧಿಕೃತ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿ ತಿಳಿಸಿದೆ.
ಕರ್ನಾಟಕ ವಾರ್ತೆ ಮಂಗಳವಾರ ಮಧ್ಯಾಹ್ನ 2.56ಕ್ಕೆ ಟ್ವೀಟ್ ಮಾಡಿ ಈ ವಿಚಾರವನ್ನು ತಿಳಿಸಿದ್ದರೂ ನಂತರ ಈ ಟ್ವೀಟ್ ಡಿಲೀಟ್ ಮಾಡಿದೆ. ಟ್ವೀಟ್ ಡಿಲೀಟ್ ಮಾಡಿದ್ದು ಯಾಕೆ ಎನ್ನುವುದು ಇನ್ನೂ ತಿಳಿದು ಬಂದಿಲ್ಲ.
ಕನ್ನಡ ಉಳಿಯಬೇಕಾದರೆ ಸರ್ಕಾರಿ ಅಧಿಕಾರಿಗಳ ಮಕ್ಕಳು ಮತ್ತು ಸಚಿವರ ಮಕ್ಕಳು ಸರ್ಕಾರಿ ಶಾಲೆಯಲ್ಲೇ ಓದಬೇಕು ಎನ್ನುವ ಆಗ್ರಹ ಹಿಂದಿನಿಂದಲೂ ಕೇಳಿ ಬಂದಿದೆ. ಆದರೆ ಇಲ್ಲಿಯವರೆಗೆ ಇದು ಕಾರ್ಯಗತವಾಗಿರಲಿಲ್ಲ. ಈಗ ರಾಜ್ಯ ಸರ್ಕಾರ ಮಸೂದೆಯನ್ನು ಮುಂಡಿಸುತ್ತಾ ಕಾದು ನೋಡಬೇಕಿದೆ.
https://youtu.be/b6b-L07xLUg