Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಂಗಳೂರಿನ 2ನೇ ಏರ್‌ಪೋರ್ಟ್‌ ಎಲ್ಲಿ ನಿರ್ಮಾಣ ಆಗುತ್ತೆ? – 3 ಜಾಗ ಫೈನಲ್‌, ಕೇಂದ್ರಕ್ಕೆ ರವಾನೆ

Public TV
Last updated: March 7, 2025 7:07 pm
Public TV
Share
3 Min Read
AI ಚಿತ್ರ
AI ಚಿತ್ರ
SHARE

ಬೆಂಗಳೂರು: ಕಳೆದ ಕೆಲ ತಿಂಗಳಿನಿಂದ ಸುದ್ದಿಯಾಗುತ್ತಿರುವ ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Bengaluru Second International Airport) ನಿರ್ಮಾಣದ ಸ್ಥಳ ಗುರುತಿಸುವಿಕೆಗೆ ಕೆಲಸವನ್ನು ಸರ್ಕಾರ ಫೈನಲ್‌ ಮಾಡಿದೆ. ಒಟ್ಟು ಮೂರು ಸ್ಥಳಗಳನ್ನು ಗುರುತು ಮಾಡಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪ್ರಸ್ತಾಪವನ್ನು ಕಳುಹಿಸಿದೆ.

ಕನಕಪುರ (Kanakapura) ರಸ್ತೆಯ ಎರಡು ಸ್ಥಳ ಮತ್ತು ನೆಲಮಂಗಲ-ಕುಣಿಗಲ್ (Nelamangala-Kunigal) ರಸ್ತೆಯಲ್ಲಿ ಒಂದು ಜಾಗವನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ. ಕನಕಪುರ ರಸ್ತೆಯ ಒಂದು ಜಾಗ 4,800 ಎಕ್ರೆ ಇದ್ದರೆ ಇನ್ನೊಂದು ಜಾಗ 5,000 ಎಕ್ರೆ ಇದೆ. ನೆಲಮಂಗಲ-ಕುಣಿಗಲ್‌ ರಸ್ತೆಯಲ್ಲಿರುವ ಜಾಗ 5,200 ಎಕ್ರೆ ಇದೆ.

ಈ ಮೂರು ಸ್ಥಳಗಳು ನಗರ ಕೇಂದ್ರದಿಂದ 50 ಕಿ.ಮೀ ವ್ಯಾಪ್ತಿಯಲ್ಲಿ ಬರಲಿದೆ. ಪ್ರಸ್ತಾವಿತ ಜಾಗಕ್ಕೆ ರಾಷ್ಟ್ರೀಯ ಹೆದ್ದಾರಿಯ ಸಂಪರ್ಕವೂ ಸಿಗಲಿದೆ. ಯಾವ ಸ್ಥಳದಲ್ಲಿ ನಿರ್ಮಿಸಿದರೂ ಆರ್ಥಿಕವಾಗಿ ಲಾಭ ಎಂದು ತಿಳಿಸಿದೆ. ಈ ಸ್ಥಳಗಳಲ್ಲಿ ಒಂದು ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬಂದರೆ, ಇನ್ನೊಂದು ರಾಮನಗರ ಜಿಲ್ಲೆಯಲ್ಲಿದೆ. ಇವುಗಳಲ್ಲಿ ಹಾರೋಹಳ್ಳಿ ಬಳಿಯ ಒಂದು ಸ್ಥಳವು ಮೆಟ್ರೋದ ಹಸಿರು ಮಾರ್ಗದ ಕೊನೆಯ ನಿಲ್ದಾಣದಿಂದ 10 ಕಿ.ಮೀ ದೂರದಲ್ಲಿದೆ.  ಇದನ್ನೂ ಓದಿ: HAL ವಿಮಾನ ನಿಲ್ದಾಣವನ್ನು ಆದಷ್ಟು ಬೇಗ ತೆರೆಯಬೇಕು: ತೇಜಸ್ವಿ ಸೂರ್ಯ

airport ai photo

ಮುಂದೇನು?
ಕೇಂದ್ರದ ವಿಮಾನಯಾನ ಪ್ರಾಧಿಕಾರ ಸ್ಥಳ ವರದಿಗೆ ತಂಡವನ್ನು ಕಳುಹಿಸಿ ಕೊಡಲಿದೆ. ಈ ವರದಿಯ ಶಿಫಾರಸ್ಸಿನ ನಂತರ ಸ್ಥಳವನ್ನು ಫೈನಲ್‌ ಮಾಡಲಾಗುತ್ತದೆ.

2ನೇ ವಿಮಾನ ನಿಲ್ದಾಣ ಯಾಕೆ?
ಬೆಂಗಳೂರಿನ ಪ್ರಯಾಣಿಕರನ್ನು ಸೆಳೆಯಲು ಮತ್ತು ತಮಿಳುನಾಡಿಗೂ ಅನುಕೂಲವಾಗುವಂತೆ ಕರ್ನಾಟಕ ಗಡಿ ಭಾಗವಾದ ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಣಕ್ಕೆ ತಮಿಳುನಾಡು ಸರ್ಕಾರ ಸಿದ್ಧತೆ ನಡೆಸುತ್ತಿದೆ.

ಸದ್ಯ ಈಗ ದೇವನಹಳ್ಳಿಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣ ಬೆಂಗಳೂರು ಉತ್ತರ ಭಾಗದಲ್ಲಿದೆ. ಈ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ದಕ್ಷಿಣ ಭಾಗ, ಎಲೆಕ್ಟ್ರಾನಿಕ್‌ ಸಿಟಿಯಿಂದ ಪ್ರಯಾಣಿಕರು ಹೋಗುತ್ತಿದ್ದಾರೆ. ಒಂದು ವೇಳೆ ಹೊಸೂರಿನಲ್ಲಿ ನಿಲ್ದಾಣವಾದರೆ ದಕ್ಷಿಣ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ತೆರಳುವ ಸಾಧ್ಯತೆಯಿದೆ. ಈ ಕಾರಣಕ್ಕೆ ದಕ್ಷಿಣ ಭಾಗದಲ್ಲಿ ವಿಮಾನ ನಿಲ್ದಾಣಕ್ಕೆ ಜಾಗವನ್ನು ಗುರುತಿಸಲಾಗಿದೆ.

Bengaluru Kempegowda International Airport 1
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ರಾಜ್ಯ ಸರ್ಕಾರ ನಿಗದಿಪಡಿಸಿರುವ ಕನಕಪುರದ ಎರಡು ಜಾಗ ನೈಸ್ ರಸ್ತೆಯಿಂದ ಕೇವಲ 10 ಕಿಲೋಮೀಟರ್ ದೂರದಲ್ಲಿದ್ದು, ಸಮೀಪದ ಮೆಟ್ರೋ ನಿಲ್ದಾಣ ಸಹ 5 ಕಿಲೋಮೀಟರ್ ವ್ಯಾಪ್ತಿಯಲ್ಲಿದೆ. ಈ ಮೂಲಕ ತುಮಕೂರು ಭಾಗದಿಂದ ಬರುವ ಪ್ರಯಾಣಿಕರು ಹಾಗೂ ಬೆಂಗಳೂರು ಸೇರಿದಂತೆ ಮೈಸೂರು ಕಡೆಯಿಂದ ಬರುವ ಪ್ರಯಾಣಿಕರಿಗೂ ಅನುಕೂಲವಾಗುವಂತೆ ಸ್ಥಳ ನಿಗದಿಪಡಿಸಲಾಗಿದೆ.

2033ರವರೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 150 ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಹೊಸ ವಿಮಾನ ನಿಲ್ದಾಣ ಇರಬಾರದು ಎಂಬ ಒಪ್ಪಂದ ಇದೆ. ಈ ಒಪ್ಪಂದ ಅಂತ್ಯವಾಗಲು ಇನ್ನು 8 ವರ್ಷ ಇರುವಾಗಲೇ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗ ಕರ್ನಾಟಕ ಮತ್ತು ತಮಿಳುನಾಡು ಮುಂದಾಗುತ್ತಿವೆ. ಇದನ್ನೂ ಓದಿ: 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರ್ನಾಟಕ ಮುಂದಾಗುತ್ತಿದ್ದಂತೆ ಹೊಸೂರಿನಲ್ಲಿ ಏರ್ಪೋರ್ಟ್ ಘೋಷಿಸಿದ ಸ್ಟಾಲಿನ್

ಕಳೆದ ಅಕ್ಟೋಬರ್‌ನಲ್ಲಿ ವಿಮಾನ ನಿಲ್ದಾಣ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್‌, ಎಂಬಿ ಪಾಟೀಲ್‌, ಪ್ರಿಯಾಂಕ್‌ ಖರ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಸಭೆಯ ನಂತರ ಪ್ರತಿಕ್ರಿಯಿಸಿದ್ದ ಎಂಬಿ ಪಾಟೀಲ್‌, ಎರಡನೇ ವಿಮಾನ ನಿಲ್ದಾಣ (Second Airport) ನಿರ್ಮಾಣಕ್ಕೆ 5 ಸ್ಥಳ ಗುರುತಿಸಲಾಗಿದೆ. ಆದರೆ ಯಾವುದೇ ಸ್ಥಳ ಅಂತಿಮವಾಗಿಲ್ಲ. ದಾಬಾಸ್ ಪೇಟೆ,‌ ನೆಲಮಂಗಲ, ಕುಣಿಗಲ್ ರಸ್ತೆಯಲ್ಲಿಎರಡು ಜಾಗ, ಹಾರೋಹಳ್ಳಿ ಹಾಗೂ ಬಿಡದಿ ಜಾಗ ಗುರುತಿಸಿದ್ದೇವೆ ಎಂದು ಮಾಹಿತಿ ನೀಡಿದ್ದರು.

ಈ ಹಿಂದೆ ರಾಮನಗರ, ಕನಕಪುರ ಭಾಗದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಡಿಕೆ ಶಿವಕುಮಾರ್‌, ಈ ಭಾಗದ ಜನರಿಗೆ ಮನವಿ ಮಾಡುತ್ತಿದ್ದೇನೆ. ಯಾವುದೇ ಕಾರಣಕ್ಕೂ ನಿಮ್ಮ ಆಸ್ತಿಯನ್ನು ಮಾರಬೇಡಿ. ಮುಂದಿನ ದಿನಗಳಲ್ಲಿ ಇಲ್ಲಿನ ಭೂಮಿಗೆ ಚಿನ್ನದ ಬೆಲೆ ಬರಲಿದೆ. ಆದ್ದರಿಂದ ಆಸ್ತಿಯನ್ನ ಮಾರದೇ ಉಳಿಸಿಕೊಳ್ಳಿ. ಒಂದಲ್ಲ ಒಂದು ದಿನ ಇಲ್ಲಿನ ಗ್ರಾಮಗಳು ಬೆಂಗಳೂರು ಆಗೇ ಆಗುತ್ತವೆ. ಪ್ರತಿ ಅಡಿ ಲೆಕ್ಕದಲ್ಲಿ ಬೆಲೆ ಕಟ್ಟಲಾಗುತ್ತದೆ. ಆದ ಕಾರಣ ನನ್ನ ಮಾತನ್ನು ನೆನಪಿನಲ್ಲಿ ಇಟ್ಟುಕೊಳ್ಳಿ ಎಂದಿದ್ದರು.

ರಾಮನಗರವನ್ನು ಬೆಂಗಳೂರು ದಕ್ಷಿಣಕ್ಕೆ ಸೇರಿಸಬೇಕು ಎಂದು ಈ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಒತ್ತಾಯ ಮಾಡಿದ್ದರು. ಈ ಒತ್ತಾಯದ ಬೆನ್ನಲ್ಲೇ ವಿಮಾನ ನಿಲ್ದಾಣ ತರಲು ಪ್ಲ್ಯಾನ್‌ ಮಾಡಲಾಗಿದ್ಯಾ ಎಂಬ ಪ್ರಶ್ನೆ ಎದ್ದಿದೆ.

 

TAGGED:airportbengalurukanakapurakarnatakaಕನಕಪುರಕರ್ನಾಟಕಬೆಂಗಳೂರುರಾಮನಗರವಿಮಾನ ನಿಲ್ದಾಣ
Share This Article
Facebook Whatsapp Whatsapp Telegram

You Might Also Like

Pavithra Gowda enters D Boss Safari Stonny Brook Bengaluru 1
Cinema

ಡಿ ಬಾಸ್ ಸಫಾರಿಗೆ ಪವಿತ್ರಾ ಗೌಡ ಎಂಟ್ರಿ!

Public TV
By Public TV
14 minutes ago
IndiGo Flight
Latest

‘ಮೇಡೇ’ ಘೋಷಿಸಿ 168 ಪ್ರಯಾಣಿಕರಿದ್ದ‌ ಇಂಡಿಗೋ ಫ್ಲೈಟ್‌ ಬೆಂಗಳೂರಿನಲ್ಲಿ ತುರ್ತು ಲ್ಯಾಂಡಿಂಗ್!

Public TV
By Public TV
19 minutes ago
K Venkatesh
Chamarajanagar

ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಶೀಘ್ರದಲ್ಲೇ ಸರ್ಕಾರಿ ಉದ್ಯೋಗ: ಸಚಿವ ವೆಂಕಟೇಶ್

Public TV
By Public TV
22 minutes ago
Ankool Mishra Vaishnavi Gowda
Cinema

ಪತಿ ಜೊತೆಗೆ ಬಂಗೀ ಜಂಪ್‌ ಮಾಡಿ ಸಂಭ್ರಮಿಸಿದ ವೈಷ್ಣವಿ ಗೌಡ

Public TV
By Public TV
48 minutes ago
Rishabh Pant
Cricket

ಪಲ್ಟಿ ಹೊಡೆದು ಪಂತ್‌ ಶತಕ ಸಂಭ್ರಮ – ಧೋನಿ ರೆಕಾರ್ಡ್‌ ಬ್ರೇಕ್‌

Public TV
By Public TV
1 hour ago
R.N.Ravi push ups
Latest

ಯೋಗ ದಿನದಲ್ಲಿ 51 ಪುಷ್‌-ಅಪ್‌ ಸಲೀಸಾಗಿ ಪೂರ್ಣಗೊಳಿಸಿದ ತ.ನಾಡು ರಾಜ್ಯಪಾಲ ರವಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?