ಬೆಂಗಳೂರು: ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಪ್ರಯುಕ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ರಾಜಭವನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ರಾಜಭವನದ ಆಡಳಿತ ಕಚೇರಿಯಲ್ಲಿ ತಾಯಿ ಚಾಮುಂಡೇಶ್ವರಿ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದ ರಾಜ್ಯಪಾಲರು, ಆಯುಧ ಪೂಜೆ ಅಂಗವಾಗಿ ರಾಜಭವನದ ಪೊಲೀಸ್ ಗಾರ್ಡ್ ಕೊಠಡಿಯಲ್ಲಿ ಭದ್ರತಾ ಸಿಬ್ಬಂದಿಯ ಶಸ್ತ್ರಾಸ್ತ್ರಗಳನ್ನು ಇರಿಸಿ ಪೂಜೆ ನೆರವೇರಿಸಿದರು. ಇದನ್ನೂ ಓದಿ: ನಾಡಿನೆಲ್ಲೆಡೆ ಆಯುಧಪೂಜೆಯ ಸಂಭ್ರಮ – ರಾಜವಂಶಸ್ಥರ ಆಯುಧಗಳಿಗೆ ಪೂಜೆ ಸಲ್ಲಿಸಲಿರುವ ಯದುವೀರ್
On the occasion of Mahanavami Shri Thaawarchand Gehlot , Hon’ble Governor of Karnataka performed Ayudha puja at various departments of Raj Bhavan. pic.twitter.com/Xc3LoFtdCm
— Thaawarchand Gehlot Office (@TcGehlotOffice) October 14, 2021
ನಂತರ ರಾಜಭವನದ ವಾಹನಗಳಿಗೆ ಪೂಜೆ ಸಲ್ಲಿಸಿ, ಎಲ್ಲರಿಗೂ ಶುಭ ಕೋರಿದರು. ಈ ಸಂಧರ್ಭದಲ್ಲಿ ರಾಜಭವನದ ಆಡಳಿತ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು. ಇದನ್ನೂ ಓದಿ: ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಯ ಮಹತ್ವವೇನು?