ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ, ಅನುದಾನರಹಿತ ಶಾಲೆಗಳಿಗೆ ಮಾರ್ಗಸೂಚಿ ಪ್ರಕಟ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು (Covid-19) ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ (Schools) ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ.
ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಗೈಡ್ಲೈನ್ಸ್ ಹೊರಡಿಸಲಾಗಿದೆ. ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಅವ್ಯವಸ್ಥೆ, ಚಿಕಿತ್ಸೆ ಕೊರತೆ ಇದ್ರೆ ದೂರು ಕೊಡಿ – ಆರೋಗ್ಯ ಇಲಾಖೆಯಿಂದ ವಾಟ್ಸಪ್ ನಂಬರ್ ರಿಲೀಸ್
ಶಾಲಾ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಹಾಗೂ ಇತರೆ ಲಕ್ಷಣಗಳು ಕಂಡು ಬಂದಲ್ಲಿ, ಅವರನ್ನು ಶಾಲೆಗೆ ಕಳುಹಿಸದೇ ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆ ಹಾಗೂ ಆರೈಕಾ ಕ್ರಮಗಳನ್ನು ಪಾಲಿಸಬೇಕು. ಸದರಿ ಲಕ್ಷಣಗಳು ಸಂಪೂರ್ಣವಾಗಿ ಗುಣಮುಖವಾದ ನಂತರವೇ ಮಕ್ಕಳನ್ನು ಶಾಲೆಗೆ ಕಳುಹಿಸುವುದು ಎಂದು ಸೂಚನೆ ನೀಡಲಾಗಿದೆ.
ಜ್ವರ, ಕೆಮ್ಮು, ನೆಗಡಿ ಮತ್ತು ಇತರೆ ಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದಲ್ಲಿ, ಪೋಷಕರಿಗೆ ಮಾಹಿತಿಯನ್ನು ನೀಡಿ, ಅಂತಹ ಮಕ್ಕಳನ್ನು ಸುರಕ್ಷಿತವಾಗಿ ಪೋಷಕರೊಂದಿಗೆ ಮನೆಗೆ ಕಳುಹಿಸುವುದು. ಶಾಲಾ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗಳಲ್ಲಿ ಜ್ವರ, ಕೆಮ್ಮು, ನೆಗಡಿ ಹಾಗೂ ಇತರೆ ಲಕ್ಷಣಗಳು ಕಂಡು ಬಂದಲ್ಲಿ, ಅಗತ್ಯ ಮುಂಜಾಗೃತಾ ಕ್ರಮಗಳನ್ನು ಪಾಲಿಸುವಂತೆ ಸಲಹೆ ನೀಡಲಾಗಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಬಾಲಕಿ ಸಾವು ಪ್ರಕರಣ – ಭುಗಿಲೆದ್ದ ಆಕ್ರೋಶ, ತನಿಖೆಗೆ ವೈದ್ಯರ ತಂಡ ರಚನೆ
ಶಾಲಾ ಅವಧಿಯಲ್ಲಿ ಮುಂಜಾಗೃತಾ ಕ್ರಮಗಳಾದ ಸಾಮಾನ್ಯ ಸ್ವಚ್ಛತೆಯೊಂದಿಗೆ ಪ್ರಮುಖವಾಗಿ ಕೈಗಳ ಸ್ವಚ್ಛತೆ ಮತ್ತು ಕೆಮ್ಮುವಾಗ, ಸೀನುವಾಗ ಎಚ್ಚರ ವಹಿಸಿ Covid-19 Appropirate Behaviour (CAB) ನ ಪಾಲನೆಯನ್ನು ಖಚಿತಪಡಿಸಿಕೊಳ್ಳುವುದು ಎಂದು ತಿಳಿಸಲಾಗಿದೆ.