Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಹೋರಾಟ – ಸರ್ಕಾರದಿಂದ ವರ್ಷದ ನಂತರ ಕೈಗೊಂಡ ಕ್ರಮದ ಬಗ್ಗೆ ವಿವರ ನೀಡಲು KIMSಗೆ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಹೋರಾಟ – ಸರ್ಕಾರದಿಂದ ವರ್ಷದ ನಂತರ ಕೈಗೊಂಡ ಕ್ರಮದ ಬಗ್ಗೆ ವಿವರ ನೀಡಲು KIMSಗೆ ಪತ್ರ

Latest

ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಹೋರಾಟ – ಸರ್ಕಾರದಿಂದ ವರ್ಷದ ನಂತರ ಕೈಗೊಂಡ ಕ್ರಮದ ಬಗ್ಗೆ ವಿವರ ನೀಡಲು KIMSಗೆ ಪತ್ರ

Public TV
Last updated: January 7, 2025 8:43 pm
Public TV
Share
3 Min Read
KIMS
SHARE

ಕಾರವಾರ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಆಗಬೇಕು ಎನ್ನುವುದು ಉತ್ತರ ಕನ್ನಡ ಜಿಲ್ಲೆಯ ಜನರ ದಶಕದ ಬೇಡಿಕೆ. ಆದರೆ, ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಹೋರಾಟ ಮಾಡಿ ನೀಡಿದ ಮನವಿ ಅರ್ಜಿಗೆ ಬರೋಬ್ಬರಿ ಒಂದು ವರ್ಷದ ನಂತರ ಇದೀಗ ಕಾರವಾರದ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸರ್ಕಾರ ಪತ್ರ ಬರೆದು ಮಾಹಿತಿ ಕೇಳಿದೆ.

ಹೌದು, ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಆಗಬೇಕು ಎಂದು ಹೋರಾಟಗಾರ ಅನಂತಮೂರ್ತಿಯವರು 2023ರ ನವೆಂಬರ್‌ ತಿಂಗಳಲ್ಲಿ ಪಾದಯಾತ್ರೆ ನಡೆಸಿ ಕಾರವಾರದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಲವು ಸಂಘಟನೆಗಳೊಂದಿಗೆ ಮನವಿ ನೀಡಿದ್ದರು.

ಈ ಮನವಿ ಅಂದೇ ಜಿಲ್ಲಾಧಿಕಾರಿ ಮೂಲಕ ಸ್ವೀಕೃತವಾಗಿ ಸಂಬಂಧಪಟ್ಟ ಇಲಾಖೆಗೆ ತಲುಪಿತ್ತು. ಆದರೆ, ಈ ಬಗ್ಗೆ ರಾಜ್ಯ ಸರ್ಕಾರದ ನಿರ್ಲಕ್ಷ ಎಷ್ಟಿದೆ ಎಂದರೆ, ಒಂದು ವರ್ಷದ ನಂತರ ಇದೀಗ 2025 ಜ.6 ರಂದು ಕಾರವಾರದ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಪತ್ರ ಬರೆದು 15 ದಿನದೊಳಗೆ ಅರ್ಜಿದಾರರಿಗೆ ಹಾಗೂ ಸಂಬಂಧಪಟ್ಟ ನಿರ್ದೇಶನಾಲಯಕ್ಕೆ ಮಾಹಿತಿ ನೀಡಲು ಸೂಚಿಸಿದೆ.

ಹಿಂದೆ ಏನಾಗಿತ್ತು?
ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಇಲ್ಲದ ಪರಿಣಾಮ ಪ್ರತಿನಿತ್ಯ ಚಿಕಿತ್ಸೆಗಾಗಿ ಹೊರ ಜಿಲ್ಲೆ, ಹೊರ ರಾಜ್ಯದ ಆಸ್ಪತ್ರೆಗಳಿಗೆ ಓಡಾಡುವ ಪರಿಸ್ಥಿತಿ ಇದ್ದು, ಜಿಲ್ಲೆಯಲ್ಲಿಯೇ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂದು ಈ ಹಿಂದೆ ಅನೇಕ ಹೋರಾಟಗಳು ನಡೆದಿತ್ತು.

ಅದರಲ್ಲಿ ಮುಖ್ಯವಾಗಿ, ಸಾಮಾಜಿಕ ಜಾಲತಾಣದ ಹ್ಯಾಷ್ ಟ್ಯಾಗ್ ಹೋರಾಟ, ರಕ್ತದಲ್ಲಿ ಪತ್ರ ಬರೆದು ಹೋರಾಟ, ಪಾದಯಾತ್ರೆ ಹಾಗೂ ಉಪವಾಸ ಕುಳಿತು ಜಿಲ್ಲೆಯ ಹಲವು ಸಂಘಟನೆಗಳು ಹೋರಾಟ ನಡೆಸಿದ್ದವು. ಕಳೆದ ಬಿಜೆಪಿ ಸರ್ಕಾರ ಅವಧಿಯಲ್ಲಿ ಈ ಸಂಬಂಧ ದೊಡ್ಡ ಅಭಿಯಾನವೇ ನಡೆದಿತ್ತು. ಅಂದು ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್ ಈ ವಿಚಾರವನ್ನ ರಾಜಕೀಯವಾಗಿ ಬಳಸಿಕೊಂಡಿತ್ತು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಹೋರಾಟದ ಪರಿಣಾಮವಾಗಿ ಸ್ವತಃ ಆರೋಗ್ಯ ಸಚಿವರೇ ಜಿಲ್ಲೆಗೆ ಬಂದು ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ಮಾಡಿ ತೆರಳಿದ್ದರು. ಆದರೆ, ಇದು ಕೇವಲ ನೋಡಿ ಪರಿಶೀಲನೆ ಮಾಡುವ ಹಂತದಲ್ಲೇ ಮುಗಿಯಿತೇ ವಿನಾ ಆಸ್ಪತ್ರೆ ನಿರ್ಮಾಣದ ಕಾರ್ಯವಾಗಿರಲಿಲ್ಲ. ಅಂದು ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್ ಈ ವಿಚಾರವನ್ನ ರಾಜಕೀಯವಾಗಿ ಬಳಸಿಕೊಂಡು, ತಮ್ಮ ಸರ್ಕಾರ ಆಡಳಿತಕ್ಕೆ ಬಂದ ಕೆಲವೇ ದಿನದಲ್ಲಿ ಶಂಕುಸ್ಥಾಪನೆ ಮಾಡುವುದಾಗಿ ಹೇಳಿತ್ತು.

ಹೋರಾಟದ ತೀವ್ರತೆಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲೆಯ ಕುಮಟಾದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ಮಾಡಿ ಜಾಗ ನಿಗದಿ ಮಾಡಿದ್ದರು. ಅಂದಿನ ಮುಖ್ಯಮಂತ್ರಿ ಬೊಮ್ಮಾಯಿ ಅವರು ತಕ್ಷಣ ಶಂಕುಸ್ಥಾಪನೆ ಮಾಡುವ ಹೇಳಿಕೆ ನೀಡಿದ್ದರು‌. ಆದರೆ, ಮಂಡನೆಯಾದ ಬಜೆಟ್‌ನಲ್ಲಿ ಸಹ ಇದಕ್ಕಾಗಿ ಹಣ ಮೀಸಲಿಡಲಿಲ್ಲ. ಇನ್ನು, ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡದೇ ಇರುವುದು ವಿಧಾನಸಭಾ ಚುನಾವಣೆಯ ಸೋಲಿಗೂ ಕಾರಣವಾಗಿತ್ತು.

ಜನಪ್ರತಿನಿಧಿಗಳ ಕಿತ್ತಾಟ! ಕೊನೆಗೂ ಮರೀಚಿಕೆಯಾಯ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ
ಬಿಜೆಪಿ-ಕಾಂಗ್ರೆಸ್ ಎರಡು ಪಕ್ಷಗಳೂ ಅಂದಿನ ವಿಧಾನಸಭಾ ಚುನಾವಣೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವಿಷಯವನ್ನು ಬಳಸಿಕೊಂಡರು. ಗ್ಯಾರಂಟಿ ಆಶ್ವಾಸನೆ ಕಾರಣದಿಂದಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಕಾರವಾರದ ಶಾಸಕ ಸತೀಶ್ ಸೈಲ್, ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ತಮ್ಮ ಭೂಮಿಯನ್ನು ಕೊಡಲು ಸಿದ್ಧವಾಗಿದ್ದು, ಹೂಡಿಕೆಗಾಗಿ ಉದ್ಯಮಿ ಬಿ.ಆರ್.ಶಟ್ಟಿ ಅವರು ಸಹ ಕಾರವಾರಕ್ಕೆ ಆಗಮಿಸಿ ಮಾತುಕತೆ ನಡೆಸಿದ್ದರು. ಶಾಸಕ ಆರ್.ವಿ ದೇಶಪಾಂಡೆ ಸಹ ಹಳಿಯಾಳದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಇಲ್ಲವೇ, ಇರುವ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವುದಾಗಿ ಹೇಳಿದ್ದರು.

ಕೆಲವು ಜನಪ್ರತಿನಿಧಿಗಳು ಕಾರವಾರದಲ್ಲಿ ಆಗಲಿ ಎಂದರೆ, ಇನ್ನು ಕೆಲವರು ಶಿರಸಿ, ಕುಮಟಾ, ಹೊನ್ನಾವರ ಎಂದು ಗೊಂದಲ ಸೃಷ್ಟಿಸಿದ್ದರು. ಕುದ್ದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಸಹ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯನ್ನು ಕುಮಟಾ ಅಥವಾ ಹೊನ್ನಾವರದಲ್ಲಿ ಮಾಡ್ಬೇಕು ಎಂದು ಗಲಾಟೆ ಮಾಡ್ತಿದ್ದಾರೆ. ಅಲ್ಲಿ ನಾವು ಮಾಡ್ತೇವೆ ಎಂದು ಅವರಿಗೆ ಆಶ್ವಾಸನೆ ಕೊಟ್ಟಿದ್ದೇವೆ. ಶೀಘ್ರದಲ್ಲೇ ಶಂಕುಸ್ಥಾಪನೆ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದರು. ಹೀಗೆ ಗೊಂದಲದಲ್ಲಿ ಜಿಲ್ಲೆಯ ಜನರಿಗೆ ಸರ್ಕಾರ ಹಾಗೂ ಜನಪ್ರತಿನಿಧಿಗಳು ಮೂಗಿಗೆ ತುಪ್ಪ ಸವರಿ ಜನರನ್ನು ತ್ರಿಶಂಕು ಸ್ಥಿತಿಗೆ ತಳ್ಳಿದರೇ ವಿನಃ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕನಸು ಮಾತ್ರ ಗಗನ ಕುಸುಮವಾಗಿದೆ. ಸದ್ಯ ರಾಜ್ಯ ಸರ್ಕಾರ ಬಜೆಟ್ ಮಂಡನೆ ಮಾಡಲಿದ್ದು, ಈ ಬಜೆಟ್‌ನಲ್ಲಿಯಾದರೂ ನಿಗದಿ ಮಾಡಿದ ಸ್ಥಳದಲ್ಲಿ ಮಂಜೂರಾರಿ ನೀಡಿ ಹಣ ಬಿಡುಗಡೆ ಮಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

TAGGED:karwarkimsMultiSpeciality Hospitalಕಾರವಾರಕಿಮ್ಸ್
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Byrati Basavaraj
Bengaluru City

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್ ಜೈಲಿಗೆ

Public TV
By Public TV
1 minute ago
tumakuru refuse entry to temple for dalits
Latest

ಗೃಹ ಸಚಿವರ ತವರಲ್ಲಿ ಅಸ್ಪೃಶ್ಯತೆ ಜೀವಂತ – ದೇವರು ಬಂದಂತೆ ನಾಟಕವಾಡಿ ದಲಿತರನ್ನ ದೇವಾಲಯದಿಂದ ಹೊರಕಳಿಸಿದ ಗ್ರಾಮಸ್ಥ

Public TV
By Public TV
17 minutes ago
Shivamogga Suicide
Crime

ಪತಿ ಸಾವಿನ ಬಳಿಕ ಪೇದೆ ಕಾಟ, ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ – ಪೊಲೀಸ್ ಸಿಬ್ಬಂದಿ ಪತ್ನಿ ಆತ್ಮಹತ್ಯೆ

Public TV
By Public TV
46 minutes ago
Anekal Old Man Arrest For Sexually Harassing Minors
Bengaluru City

ಚಾಕೊಲೇಟ್ ಆಸೆ ತೋರಿಸಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪ – 64ರ ವೃದ್ಧ ಅರೆಸ್ಟ್

Public TV
By Public TV
55 minutes ago
terrorist arshad khan
Bengaluru City

ಬೆಂಗಳೂರಲ್ಲಿ ಮೋಸ್ಟ್‌ ವಾಂಟೆಡ್‌ ಶಂಕಿತ ಉಗ್ರ ಅರೆಸ್ಟ್

Public TV
By Public TV
1 hour ago
Siddaramaiah 15
Bengaluru City

ರಣರಂಗವನ್ನ ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ: ವಿರೋಧಿಗಳ ವಿರುದ್ಧ ಸಿಎಂ ಸಮರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?