Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಮುಂದುವರಿದ ವರುಣನ ಆರ್ಭಟ- ಚರಂಡಿಯಲ್ಲಿ ಬಿದ್ದು ಓರ್ವ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಮುಂದುವರಿದ ವರುಣನ ಆರ್ಭಟ- ಚರಂಡಿಯಲ್ಲಿ ಬಿದ್ದು ಓರ್ವ ಸಾವು

Bengaluru City

ರಾಜ್ಯದಲ್ಲಿ ಮುಂದುವರಿದ ವರುಣನ ಆರ್ಭಟ- ಚರಂಡಿಯಲ್ಲಿ ಬಿದ್ದು ಓರ್ವ ಸಾವು

Public TV
Last updated: August 18, 2019 11:43 pm
Public TV
Share
2 Min Read
DVG Rain B
SHARE

– ದಾವಣಗೆರೆಯ ನಿಲ್ದಾಣ, ದೇವಸ್ಥಾನಗಳು ಜಲಾವೃತ

ಬೆಂಗಳೂರು: ಬೆಂಗಳೂರು, ಮೈಸೂರು, ದಾವಣಗೆರೆ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮತ್ತೆ ವರುಣ ಅಬ್ಬರಿಸಿದ್ದಾನೆ. ದಾವಣಗೆರೆಯಲ್ಲಿ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣವು ಜಲಾವೃತಗೊಂಡಿದೆ.

ದಾವಣಗೆರೆಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ಸುರಿದ ಮಳೆ ಅವಾಂತರವನ್ನೇ ಸೃಷ್ಠಿ ಮಾಡಿದೆ. ಭಾನುವಾರ ಸಂಜೆ 4 ಗಂಟೆಗೆ ಶುರುವಾದ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಯಿತು. ನಗರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ಮನೆಗಳು ಸಂಪೂರ್ಣ ಜಲಾವೃತವಾಗಿವೆ. ಮನೆಯಲ್ಲಿದ್ದ ಸಾಮಗ್ರಿಗಳು ನೀರುಪಾಲಾಗಿದ್ದು, ಕೆಲ ಕಡೆ ಮನೆಯ ಗೋಡೆಗಳು ಸಹ ಬಿದ್ದಿವೆ.

DVG Rain

ಅಜಾದ್ ನಗರ ಬಾಷಾ ನಗರ, ಬೇತೂರು ರಸ್ತೆ, ಹಾಗೂ ಬೂದಾಳ್ ರಸ್ತೆ ಸೇರಿದಂತೆ ಹಲವು ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ. ಅಷ್ಟೇ ಅಲ್ಲದೇ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣ ಸಂಪೂರ್ಣ ಜಲಾವೃತವಾಗಿದ್ದು ಕೆಲ ಕಾಲ ಬಸ್ ಸಂಚಾರ ಸ್ಥಗಿತವಾಗಿತ್ತು. ಇದರಿಂದಾಗಿ ಪ್ರಯಾಣಿಕರು ಮೇಜುಗಳ ಮೇಲೆ ನಿಂತು ತೊಂದರೆ ಅನುಭವಿಸುವಂತಾಯಿತು.

ಸಾವು:
ದಾವಣಗೆರೆಯಲ್ಲಿ ಧಾರಕಾರ ಸುರಿದ ಮಳೆಯಿಂದಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ದೇವರಾಜ್ ಅರಸ್ ಬಡಾವಣೆಯ ಚರಂಡಿಯಲ್ಲಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆದರೆ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಹೀಗಾಗಿ ಗಾಂಧಿನಗರ ಪೊಲೀಸರು ಮೃತ ದೇಹವನ್ನು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಿದ್ದಾರೆ.

ಮೈಸೂರಿನಲ್ಲಿ ಭಾನುವಾರ ಸಂಜೆ ಅರ್ಧ ಗಂಟೆ ಎಡಬಿಡದೆ ಮಳೆ ಸುರಿದಿದೆ. ದಿಢೀರ್ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರ ಪರದಾಡುವಂತಾಗಿತ್ತು.

rain 3

ಮಳೆ ಕಡಿಮೆ ಆಗಿ ಪ್ರವಾಹ ಇಳಿದ ಬಳಿಕ ಪ್ರಳಯ ಸೃಷ್ಟಿಸಿದ ಅನಾಹುತಗಳ ಅನಾವರಣ ಹೆಚ್ಚಾಗುತ್ತಿದೆ. ವಿರಾಜಪೇಟೆ ತಾಲೂಕಿನ ತೋರಾದಲ್ಲಿ ಕೊಚ್ಚಿಬಂದ ಗುಡ್ಡದ ರಾಶಿಯಿಂದ ಶಂಕರ್ ಮೃತದೇಹವನ್ನು ಹೊರತೆಗೆಯಲಾಗಿದ್ದು, ಇನ್ನುಳಿದ ಐವರಿಗಾಗಿ ಹುಡುಕಾಟ ನಡೆಯುತ್ತಿದೆ. ಇತ್ತ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಮಾವನ ಅಂಗಡಿ ನೋಡಲು ಹೋಗಿ ಕೃಷ್ಣಾ ನದಿ ಪಾಲಾಗಿದ್ದ ಶಾಂತಿನಾಥ್ ಸಮಾಜ್ ಮತ್ತು ಲಕ್ಷ್ಮಣ ಸಮಾಜ್‍ರ ಮೃತದೇಹ ಪತ್ತೆಯಾಗಿದೆ. ಗದಗದ ಬೂದಿಹಾಳದಲ್ಲಿ ಮಳೆಗೆ ಕುಸಿದ ಮನೆಯನ್ನು ನೋಡಿ ಹಣಮವ್ವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಜೊಯಿಡಾದಲ್ಲಿ ಅನಾರೋಗ್ಯ ಪೀಡಿತ ವೃದ್ಧೆಯನ್ನು 1.5 ಕಿಮೀ ಕಂಬಳಿಯಲ್ಲಿ ಹೊತ್ತುತಂದು ಆಸ್ಪತ್ರೆಗೆ ದಾಖಲಿಸಲಾಯಿತು. ಭೂಕುಸಿತಗೊಂಡ ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿಗೆ ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು ಭೇಟಿ ನೀಡಿ ಸಂತ್ರಸ್ತರಿಗೆ ಪರಿಹಾರ ಸಾಮಗ್ರಿ ವಿತರಿಸಿದರು. ಬಾಗಲಕೋಟೆಯ ಚಿಕ್ಕಪಡಸಲಗಿಯಲ್ಲಿ ಸೇತುವೆ ಕೊಚ್ಚಿಕೊಂಡು ಹೋಗಿದ್ದು, ಅಥಣಿಯ ದರೂರು-ಹಲ್ಯಾಳ ಸೇತುವೆ ಬಿರುಕು ಬಿಟ್ಟಿದ್ದರಿಂದ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಹೊಳೆನರಸೀಪುರ ತಾಲೂಕಿನ ಸೋಮನ ಹಳ್ಳಿಯಲ್ಲಿ ಹೇಮಾವತಿ ಜಲಾಶಯದ ಕಾಲುವೆ ಒಡೆದು ರೈತರ ಜಮೀನಿಗೆ ನೀರು ನುಗ್ಗಿದೆ.

ckm rain

ದಕ್ಷಿಣ ಭಾರತವನ್ನು ಕಾಡಿದ್ದ ಪ್ರವಾಹ ಈಗ ಉತ್ತರ ಭಾರತವನ್ನೇ ಮುಳುಗಿಸುತ್ತಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ್, ಕೊಲ್ಕತ್ತಾದಲ್ಲಿ ಭಾರೀ ಮಳೆ ಆಗುತ್ತದೆ. ವರುಣನ ಅವಾಂತರಕ್ಕೆ ಹಿಮಾಚಲ ಪ್ರದೇಶದಲ್ಲಿ 18 ಮಂದಿ ಮೃತಪಟ್ಟಿದ್ದು, ಹೆದ್ದಾರಿ ಮೇಲೆ ಗುಡ್ಡ ಕುಸಿದಿದೆ. ಸೇತುವೆಗಳು ಕೊಚ್ಚಿಕೊಂಡು ಹೋಗಿದ್ದು, ಬಿಯಾಸ್ ನದಿ ದಡದಲ್ಲಿ ಹಳೆಯ ಶಾಲಾ ಕಟ್ಟಡ ಕುಸಿದಿದೆ. ಉತ್ತರಕಾಶಿಯಲ್ಲಿ ವಾಹನವೊಂದು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದೆ. ಪಂಜಾಬ್‍ನಲ್ಲೂ ಕಟ್ಟೆಚ್ಚರ ಘೋಷಿಸಲಾಗಿದೆ.

TAGGED:bus standdavanagereheavy rainkarnatakaPublic TVದಾವಣಗೆರೆಪಬ್ಲಿಕ್ ಟಿವಿಪ್ರವಾಹಬೆಂಗಳೂರುಮಳೆ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

bill gates
Latest

ಎಪ್‌ಸ್ಟೈನ್‌ ವಿವಾದ; ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆಗೆ ಬಿಲ್ ಗೇಟ್ಸ್ ಗೈರು

Public TV
By Public TV
2 minutes ago
Supreme Court 1
Court

ಉಚಿತ ಯೋಜನೆಗಳು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕು – ಸುಪ್ರೀಂ

Public TV
By Public TV
5 minutes ago
Priyank kharge 1
Karnataka

AI Impact ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ – ಎಐ ಕ್ಷೇತ್ರ, ನವೋದ್ಯಮಗಳ ಮುಖ್ಯಸ್ಥರ ಜೊತೆ ಪ್ರಿಯಾಂಕ್ ಖರ್ಗೆ ಸಮಾಲೋಚನೆ

Public TV
By Public TV
6 minutes ago
India AI Impact Summit Guinness World Record
Latest

ಇಂಡಿಯಾ ಎಐ ಶೃಂಗದಲ್ಲಿ ಗಿನ್ನೆಸ್‌ ವರ್ಲ್ಡ್‌ ರೆಕಾರ್ಡ್‌ – ಜವಾಬ್ದಾರಿಯುತವಾಗಿ AI ಬಳಸುವ ಪ್ರತಿಜ್ಞೆ ಮಾಡಿದ 2.5 ಲಕ್ಷ ಜನರು

Public TV
By Public TV
8 minutes ago
poultry mysuru
Latest

ಮೈಸೂರು| ಸರ್ಕಾರದ ಜಾಗದಲ್ಲಿ ಹೈಟೆಕ್ ಪೌಲ್ಟ್ರಿ

Public TV
By Public TV
27 minutes ago
Cocaine Seized in kempegowda airport
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 23.8 ಕೋಟಿ ಮೌಲ್ಯದ ಕೊಕೇನ್ ಜಪ್ತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?