Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಪವಾಸ ಸತ್ಯಾಗ್ರಹ ಆರಂಭಿಸಿದ ಹೈಕೋರ್ಟ್ ಹಿರಿಯ ವಕೀಲರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉಪವಾಸ ಸತ್ಯಾಗ್ರಹ ಆರಂಭಿಸಿದ ಹೈಕೋರ್ಟ್ ಹಿರಿಯ ವಕೀಲರು

Bengaluru City

ಉಪವಾಸ ಸತ್ಯಾಗ್ರಹ ಆರಂಭಿಸಿದ ಹೈಕೋರ್ಟ್ ಹಿರಿಯ ವಕೀಲರು

Public TV
Last updated: February 5, 2018 9:42 pm
Public TV
Share
2 Min Read
high court protest main 1
SHARE

ಬೆಂಗಳೂರು: ಹೈಕೋರ್ಟ್ ನ್ಯಾಯಾಧೀಶರ ಶೀಘ್ರ ನೇಮಕಾತಿಗೆ ಆಗ್ರಹಿಸಿ ಹಿರಿಯ ವಕೀಲರು ಹೈಕೋರ್ಟ್ ಬಳಿಯ ಗೋಲ್ಡನ್ ಜ್ಯೂಬ್ಲಿ ಗೇಟ್ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಮಾಜಿ ಅಡ್ವೊಕೇಟ್ ಜನರಲ್ ಬಿವಿ ಆಚಾರ್ಯ ಜೊತೆ ಹಿರಿಯ ವಕೀಲರಾದ ಸಜ್ಜನ್ ಪೂವಯ್ಯ, ನಂಜುಂಡ ರೆಡ್ಡಿ, ಬಿಎಲ್ ಜಗದೀಶ್ ಸೇರಿದಂತೆ ಹಲವು ಮಂದಿ ಭಾಗವಹಿಸಿ ಪ್ರತಿಭಟಿಸಿದ್ದರು.

high court protest 2

ಕೇಂದ್ರ ಸರ್ಕಾರ ಹೈಕೋರ್ಟ್‍ಗೆ ನ್ಯಾಯಮೂರ್ತಿಗಳ ಭರ್ತಿ ವಿಚಾರದಲ್ಲಿ ತಾರತಮ್ಯ ಮಾಡುತ್ತಿದೆ. ಇದರಿಂದ ಕರ್ನಾಟಕದಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದರೂ ಭರ್ತಿ ಮಾಡಲು ಮೀನಮೇಷ ಎಣಿಸುತ್ತಿದೆ ಎಂದು ಹಿರಿಯ ವಕೀಲರು ಆರೋಪ ಮಾಡಿದರು. ಧರಣಿ ನಿರತ ಸ್ಥಳಕ್ಕೆ ಮಾಜಿ ಕಾನೂನು ಸಚಿವ, ಹಾಲಿ ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಸದಾನಂದಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಕೇಂದ್ರ ಸರ್ಕಾರದ ಜೊತೆ ಮಾತನಾಡಿ ಸಮಸ್ಯೆ ಪರಿಹರಿಸೋ ನಿಟ್ಟಿನಲ್ಲಿ ಕಾರ್ಯ ಮಾಡುತ್ತೇವೆ ಎಂದು ಹೇಳಿದರು.

ಸತ್ಯಾಗ್ರಹಕ್ಕೆ ಸ್ಟೇಜ್ ಹಾಕಿರುವ ಅಡ್ವೋಕೇಟ್ಸ್ ಅಸೋಸಿಯೇಷನ್ ಆಫ್ ಬೆಂಗಳೂರು(ಎಎಬಿ) ಬೆಳಗ್ಗೆ 10:30 ರಿಂದ 5:30 ರ ವರೆಗೆ ಒಂದು ವಾರದ ಕಾಲ ಧರಣಿ ಮಾಡಲಿದ್ದು, ಪ್ರತಿಭಟನೆಗೆ ಸರ್ಕಾರ ಮಣಿಯದೆ ಹೋದರೆ ಇಡೀ ರಾಜ್ಯಾದ್ಯಂತ ಕೋರ್ಟ್ ಕಲಾಪ ಬಹಿಷ್ಕಾರ ಮಾಡುವುದಾಗಿ ಹಿರಿಯ ವಕೀಲರು ಎಚ್ಚರಿಕೆ ನೀಡಿದ್ದಾರೆ.

high court protest main 2

ಬೇಡಿಕೆ ಏನು? ಹೈಕೋರ್ಟ್ ನ್ಯಾಯಾಧೀಶ ಹುದ್ದೆ ಖಾಲಿ ಇರುವುದರಿಂದ ಸುಮಾರು 3 ಲಕ್ಷ ಪ್ರಕರಣಗಳು ವಿಲೇವಾರಿಯಾಗದೇ ಉಳಿದಿದ್ದು, ವಕೀಲರಿಗೆ ಹಾಗೂ ಕಕ್ಷಿದಾರರಿಗೆ ನ್ಯಾಯದಾನ ವಿಳಂಬವಾಗುತ್ತಿದೆ. ಕಳೆದ ಮೂರು ವರ್ಷಗಳಿಂದ ಬೆಂಗಳೂರು ವಕೀಲರ ಸಂಘವು ರಾಷ್ಟ್ರಪತಿ, ಪ್ರಧಾನ ಮಂತ್ರಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ, ಕೇಂದ್ರ ಕಾನೂನು ಮಂತ್ರಿ ಮತ್ತು ಅಟಾರ್ನಿ ಜನರಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಗೆ ನ್ಯಾಯಮೂರ್ತಿಗಳನ್ನು ನೇಮಕ ಮಾಡಲು ಮನವಿ ಸಲ್ಲಿಸಿದ್ದರೂ ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ.

ಸುಪ್ರೀಂ ಕೋರ್ಟ್ ಕರ್ನಾಟಕದ ಹೈಕೋರ್ಟ್ ಗೆ 62 ನ್ಯಾಯಮೂರ್ತಿಗಳನ್ನು ಅನುಮೋದಿಸಿದೆ. ಪ್ರಸ್ತುತ 24 ನ್ಯಾಯಮೂರ್ತಿಗಳೂ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಅದರಲ್ಲಿ 8 ನ್ಯಾಯಮೂರ್ತಿಗಳು ಧಾರವಾಡ ಮತ್ತು ಕಲಬುರುಗಿ ಸಂಚಾರಿ ಪೀಠದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಿನ್ಸಿಪಲ್ ಬೆಂಚ್‍ನಲ್ಲಿ 16 ನ್ಯಾಯಮೂರ್ತಿಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ 38 ನ್ಯಾಯಮೂರ್ತಿಗಳ ಹುದ್ದೆ ಖಾಲಿ ಇದೆ.

high court protest main 4

ನೆರೆಯ ರಾಜ್ಯದ ಹೈಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆಗೆ ಹೋಲಿಸಿದರೆ ರಾಜ್ಯದ ಹೈಕೋರ್ಟ್ ನಲ್ಲಿ ಸುಮಾರು ಶೇ.60 ರಷ್ಟು ಹುದ್ದೆಗಳು ಖಾಲಿ ಇವೆ. ಕೇಂದ್ರ ಸರ್ಕಾರ ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ನ್ಯಾಯಮೂರ್ತಿಗಳಿಗೆ ಕೆಲಸದ ಒತ್ತಡ ಹೆಚ್ಚಾಗಿದ್ದು, ಪ್ರಕರಣಗಳು ನಿಗದಿತ ಸಮಯಕ್ಕೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬರದೆ ಕಕ್ಷಿದಾರರಿಗೆ ತೊಂದರೆಯಾಗುತ್ತಿದೆ. ಅಲ್ಲದೇ ಅವರಿಗೆ ನ್ಯಾಯಾಂಗದ ಮೇಲೆ ನಂಬಿಕೆ ಕ್ರಮೇಣ ಕಡಿಮೆಯಾಗುತ್ತಿದೆ.

ಕಣ್ಣೀರಿಟ್ಟಿದ್ದ ಸಿಜೆ: 2016ರ ನರೇಂದ್ರ ಮೋದಿ ಅವರ ಸ್ವಾತಂತ್ರ್ಯ ಭಾಷಣದಲ್ಲಿ ನ್ಯಾಯಾಧೀಶರ ನೇಮಕಕ್ಕೆ ಸಂಬಂಧಿಸಿದಂತೆ ಯಾವುದೇ ವಿಚಾರವನ್ನು ಪ್ರಸ್ತಾಪ ಮಾಡದಕ್ಕೆ ಅಂದಿನ ಮುಖ್ಯ ನ್ಯಾಯಾಧೀಶರಾಗಿದ್ದ ಟಿ.ಎಸ್.ಠಾಕೂರ್ ಅವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೇ ನ್ಯಾಯಾಲಯಗಳಿಗೆ ನ್ಯಾಯಮೂರ್ತಿಗಳನ್ನು ನೇಮಿಸುವಲ್ಲಿ ಕೇಂದ್ರ ಸರ್ಕಾರದ ವಿಳಂಬ ನೀತಿಯಿಂದ ಬೇಸರಗೊಂಡು ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೆದುರೇ ಟಿ.ಎಸ್.ಠಾಕೂರ್ ಗದ್ಗದಿತರಾಗಿ ಕಣ್ಣೀರಿಟ್ಟಿದ್ದರು.

high court protest 3

high court protest 2

high court protest 4

high court protest 5

ADVOCATE PROTEST 1

high court protest main 3

TAGGED:advocateAppointment of JusticesbengaluruCentral Governmenthigh courthunger strikePublic TVಉಪವಾಸ ಸತ್ಯಾಗ್ರಹಕೇಂದ್ರ ಸರ್ಕಾರನ್ಯಾಯಮೂರ್ತಿಗಳ ನೇಮಕಪಬ್ಲಿಕ್ ಟಿವಿಬೆಂಗಳೂರುವಕೀಲರುಹೈಕೋರ್ಟ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
2 hours ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
2 hours ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
2 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
2 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
2 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?