ಎಂಜಿನಿಯರ್‌ ಮಿದುಳು ನಿಷ್ಕ್ರಿಯ – ಬೆಂಗಳೂರಿನಿಂದ ತಮಿಳುನಾಡಿಗೆ ಜೀವಂತ ಹೃದಯ ರವಾನೆ

Public TV
1 Min Read
organ donation

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಐಟಿ ಎಂಜಿನಿಯರ್‌ ಮಿದುಳು ನಿಷ್ಕ್ರಿಯಗೊಂಡ ಪರಿಣಾಮ ಅವರ ಅಂಗಾಂಗಗಳನ್ನು ಕುಟುಂಬಸ್ಥರು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಹೈಟಿ ಎಂಜಿನಿಯರ್‌ ವಿಷ್ಣು ತೀರ್ಥ ವಡವಿ (54) ಮೃತ ದುರ್ದೈವಿ. ಮಿದುಳು ಸಂಬಂಧಿ ಕಾಯಿಲೆಯಿಂದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದಾರೆ. ಸಾವಿನ ಬಳಿಕ ಅವರ ಅಂಗಾಂಗಗಳನ್ನು ಕುಟುಂಬಸ್ಥರು ದಾನ ಮಾಡಿದ್ದಾರೆ. ಇದನ್ನೂ ಓದಿ: ಇಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ಹೈವೋಲ್ಟೇಜ್ ಸಭೆ

ವಡವಿ ಅವರ ಎರಡು ಕಣ್ಣು, ಎರಡು ಕಿಡ್ನಿ, ಒಂದು ಹೃದಯ, ಒಂದು ಲಿವರ್ ದಾನ ಮಾಡಲಾಗಿದೆ. ಚೆನ್ನೈನ ಎಂಜಿಎಂ ಆಸ್ಪತ್ರೆಗೆ ಅಂಬುಲೆನ್ಸ್‌ ಮೂಲಕ ಇಂದು ಬೆಳಗ್ಗೆ ಜೀವಂತ ಹೃದಯ ರವಾನೆ ಮಾಡಲಾಗಿದೆ.

2001 ರಲ್ಲಿ ಕರ್ನಾಟಕ ಹೈಕೋರ್ಟ್‌ನ ಮೊದಲ ಐಟಿ ಇಂಜಿನಿಯರ್ ಆಗಿ ನೇಮಕ ವಿಷ್ಣು ತೀರ್ಥ ವಡವಿ ನೇಮಕಗೊಂಡಿದ್ದರು. ಕಳೆದ ಸೆಪ್ಟೆಂಬರ್ 7 ನೇ ತಾರೀಖು ಮಿದುಳು ಸಂಬಂಧಿ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ರಾತ್ರಿ ಮಿದುಳು ನಿಷ್ಕ್ರಿಯಗೊಂಡಿತು. ಬಳಿಕ ಅಂಗಾಂಗ ದಾನ ಮಾಡಿ ಕುಟುಂಬದವರು ಮಾನವೀಯತೆ ಮೆರೆದಿದ್ದಾರೆ. ಇದನ್ನೂ ಓದಿ: ಸರ್ಕಾರಿ ಬಸ್, ಕಾರು ಮುಖಾಮುಖಿ ಡಿಕ್ಕಿ – 9 ಮಂದಿಗೆ ಗಂಭೀರ ಗಾಯ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article