Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ – ತ್ರಿಸದಸ್ಯ ಪೀಠಕ್ಕೆ ಕೇಸ್‌ ವರ್ಗಾವಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ – ತ್ರಿಸದಸ್ಯ ಪೀಠಕ್ಕೆ ಕೇಸ್‌ ವರ್ಗಾವಣೆ

Bengaluru City

ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ – ತ್ರಿಸದಸ್ಯ ಪೀಠಕ್ಕೆ ಕೇಸ್‌ ವರ್ಗಾವಣೆ

Public TV
Last updated: August 30, 2022 6:29 pm
Public TV
Share
2 Min Read
SUPREME COURT 1
SHARE

ನವದೆಹಲಿ: ಬೆಂಗಳೂರಿನ ಚಾಮರಾಜಪೇಟೆಯ ಮೈದಾನದ ಗಣೇಶೋತ್ಸವ ಪ್ರಕರಣ ಸುಪ್ರೀಂ ಕೋರ್ಟ್‌ ಮುಖ್ಯ ತ್ರಿಸದಸ್ಯರ ಪೀಠಕ್ಕೆ ವರ್ಗಾವಣೆ

ಹೈಕೋರ್ಟ್‌ ದ್ವಿಸದಸ್ಯ ಪೀಠ ಗಣೇಶೋತ್ಸವ ಆಚರಣೆ ಅನುಮತಿ ನೀಡುವುದು ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರ ಎಂದು ಆದೇಶ ಪ್ರಕಟಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ವಕ್ಫ್‌ ಬೋರ್ಡ್‌ ಸುಪ್ರೀಂ ಮೊರೆ ಹೋಗಿತ್ತು. ಇಂದು ನ್ಯಾ. ಹೇಮಂತ್ ಗುಪ್ತಾ ನೇತೃತ್ವದ ದ್ವಿ ಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ವಕ್ಫ್‌ ಬೋರ್ಡ್‌ ಪರವಾಗಿ ಹಿರಿಯ ವಕೀಲ ಕಪಿಲ್‌ ಸಿಬಲ್‌ ವಾದ ಮಂಡಿಸಿದರು. ಸರ್ಕಾರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು.

ಎರಡು ಕಡೆಯ ವಾದ ಆಲಿಸಿದ ಜಡ್ಜ್‌ಗಳ ಮಧ್ಯೆ ನಡುವೆ ಭಿನ್ನಾಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಮಧ್ಯಂತರ ಆದೇಶ ನೀಡಲು ಕೋರ್ಟ್ ನಿರಾಕಣೆ ಮಾಡಿತು. ಈ ಹಿನ್ನೆಲೆಯಲ್ಲಿ ಈ ಪ್ರಕರಣ ಸುಪ್ರೀಂ ಕೋರ್ಟ್‌  ನ್ಯಾ.ಇಂದಿರಾ ಬ್ಯಾನರ್ಜಿ, ನ್ಯಾ. ಎಎಸ್‌ ಒಕಾ, ನ್ಯಾ. ಎಂಎಂ ಸುಂದರೇಶ್‌ ಅವರ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ.

ವಕ್ಫ್‌ ಬೋರ್ಡ್‌ ವಾದ ಏನು?
ಸರ್ವೆ 40 ಜಾಗ ಸಾಕಷ್ಟು ವರ್ಷಗಳಿಂದ ಬಳಕೆಯಾಗುತ್ತಿದ್ದು, ವಕ್ಫ್ ತನ್ನ ಆಸ್ತಿ ಎಂದು ಘೋಷಣೆ ಮಾಡಿದೆ. ಈಗ ವಕ್ಫ್ ತಿರ್ಮಾನವನ್ನು ಪ್ರಶ್ನೆ ಮಾಡಲಾಗುತ್ತಿದೆ. 200 ಅಧಿಕ ವರ್ಷಗಳಿಂದ ಒಂದು ಸಮುದಾಯ ಬಳಕೆ ಮಾಡುತ್ತಿದೆ.

ಇಲ್ಲಿ ಬೇರೆ ಸಮುದಾಯದವರು ಹಬ್ಬ ಆಚರಿಸುವುದು ಸರಿಯಲ್ಲ. ಇದು ಸಮಸ್ಯೆಗೆ ಕಾರಣ ಆಗಬಹುದು. ಹೈಕೋರ್ಟ್ ಏಕ ಸದಸ್ಯ ಪೀಠ ನೀಡಿದ ಆದೇಶದ ಬೆನ್ನಲ್ಲೇ ದ್ವಿಸದಸ್ಯ ಪೀಠ ಅದರ ವಿರುದ್ಧ ಆದೇಶ ನೀಡಿದೆ. ಆದರೆ ಈದ್ಗಾ ವಕ್ಪ್ ಆಸ್ತಿಯಾಗಿದ್ದು ಮುಸ್ಲಿಂ ಸಮುದಾಯ ಇದನ್ನು ಪ್ರಾರ್ಥನೆಗೆ ಬಳಸುತ್ತಿದೆ. ವರ್ಷಕ್ಕೆ ಎರಡು ಹಬ್ಬಗಳನ್ನು ಇಲ್ಲಿ ಆಚರಣೆ ಮಾಡಲಾಗುತ್ತಿದೆ. ಬಯಲು ಜಾಗ ಎನ್ನುವ ಕಾರಣಕ್ಕೆ ಬೇಕಾದ ಹಾಗೆ ಬಳಕೆ ಮಾಡಲು ಸಾಧ್ಯವಿಲ್ಲ. ವಕ್ಫ್ ಆಸ್ತಿ ಎನ್ನುವುದಕ್ಕೆ ಎಲ್ಲಾ ದಾಖಲೆಗಳು ಇದೆ.

ಕಂದಾಯ ಅಧಿಕಾರಿಗಳು ಈ ಆಸ್ತಿ ಬಗ್ಗೆ ನಿರ್ಧರಿಸಲು ಸಾಧ್ಯವಿಲ್ಲ. ವಕ್ಪ್ ಆಸ್ತಿ ಅಲ್ಲ ಎನ್ನುವುದಾದರೆ ಅದನ್ನು ಪ್ರಶ್ನೆ ಮಾಡಬಹುದು. ಆದರೆ ಯಾರು ಇದನ್ನು ಪ್ರಶ್ನೆ ಮಾಡಿಲ್ಲ. ಹೈಕೋರ್ಟ್ ನಲ್ಲಿ ಒಂದೇ ದಿನದ ಅಂತರದಲ್ಲಿ ಹೇಗೆ ಆದೇಶಗಳು ಬದಲಾದವು? ಕರ್ನಾಟಕದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ. ಈಗ ಏಕಾಏಕಿ ಈ ವಿಚಾರ ಮುನ್ನಲೆಗೆ ಬಂದಿದೆ.

ಸರ್ಕಾರದ ವಾದ ಏನು?
ಎರಡು ದಿನ ಸರ್ಕಾರ ಈ ಸ್ಥಳ ಬಳಕೆ ಮಾಡಲಿದೆ. ಬಳಿಕ ಆಟದ ಮೈದಾನವಾಗಿ ಮುಂದುವರೆಯಲಿದೆ. ಭದ್ರತೆ ಬಗ್ಗೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ. ಗಣೇಶ ಚತುರ್ಥಿ ಆಚರಿಸಲು ಬಳಕೆ ಮಾಡಲಾಗುತ್ತದೆ.

ವಕ್ಪ್ ಆಸ್ತಿ ಎನ್ನಲು ತೃಪ್ತಿಕರ ದಾಖಲೆಗಳಿಲ್ಲ. ಇದಕ್ಕೆ ಯಾವುದೇ ಮಾಲೀಕರು ಇಲ್ಲ. ಇದೊಂದು ಖಾಲಿ ಮೈದಾನ. 1930ರಲ್ಲಿ ಈದ್ಗಾ ಎಂದು ದಾಖಲಿಸಲಾಗಿದೆ. ಆಸ್ತಿ ಬಗ್ಗೆ ಸಿವಿಲ್ ಕೋರ್ಟ್ ನಿರ್ಧರಿಸಬೇಕು. ವಕ್ಫ್ ಬೋರ್ಡ್ ಇಲ್ಲಿಯವರೆಗೂ ಸಿವಿಲ್ ನ್ಯಾಯಾಲಯಕ್ಕೆ ಹೋಗಿಲ್ಲ. ಸರ್ಕಾರ ಹಲವು ದಾಖಲೆಗಳಲ್ಲಿ ಸರ್ಕಾರಿ ಜಾಗ, ಇನ್ನು ಕೆಲವು ದಾಖಲೆಗಳಲ್ಲಿ ಆಟದ ಮೈದಾನ ಎಂದು ದಾಖಲೆಗಳಿವೆ.

ಸುಪ್ರೀಂ ಪ್ರಶ್ನೆ
ಹಳೆಯ ಸ್ಥಳಗಳನ್ನು ಏಕಾಏಕಿ ಬದಲಿಸಲು ಸಾಧ್ಯವಿಲ್ಲ. ಈ ಬಗ್ಗೆ ಸುಪ್ರೀಂಕೋರ್ಟ್ ಈ ಹಿಂದೆ ಆದೇಶ ನೀಡಿದೆ. ಈದ್ಗಾ ಆಗಿ ಇದು ಬಹಳಷ್ಟು ವರ್ಷಗಳಿಂದ ಬಳಕೆ ಮಾಡಲಾಗುತ್ತಿದೆ. ಮೆಹ್ತಾ ನಿಮಗೆ ಈ ಕಾನೂನು ಬಗ್ಗೆ ಗೊತ್ತಿದೆ ಅಲ್ವಾ? ತುಷಾರ್ ಮೆಹ್ತಾಗೆ ನ್ಯಾಯಾಧೀಶರ ಪ್ರಶ್ನೆ ಮಾಡಿದರು.

Live Tv
[brid partner=56869869 player=32851 video=960834 autoplay=true]

TAGGED:CJI Benchhigh courtIdgah Maidankarnatakaಈದ್ಗಾ ಮೈದಾನಚಾಮರಾಜಪೇಟೆವಕ್ಫ್ ಬೋರ್ಡ್ಸಿಜಿಐಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows

You Might Also Like

Suryakumar Yadav
Cricket

ಒಂದೇ ಓವರ್‌ನಲ್ಲಿ 24 ರನ್‌ ಚಚ್ಚಿ 24 ಇನ್ನಿಂಗ್ಸ್‌ ಬಳಿಕ ಫಿಫ್ಟಿ ಹೊಡೆದ ಸ್ಕೈ

Public TV
By Public TV
7 hours ago
ed enters into nagamangala land scam
Crime

ನಾಗಮಂಗಲ ಭೂ ಹಗರಣಕ್ಕೆ ಇಡಿ ಎಂಟ್ರಿ

Public TV
By Public TV
7 hours ago
PREGNENT
Bengaluru City

ಭ್ರೂಣ ಹತ್ಯೆ ತಡೆಗೆ ಸರ್ಕಾರದ  ದಿಟ್ಟ ಕ್ರಮ – ಮಾಹಿತಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ

Public TV
By Public TV
7 hours ago
Ishan Kishan Suryakumar Yadav
Cricket

ಸೂರ್ಯ, ಕಿಶನ್‌ ಸ್ಫೋಟಕ ಆಟಕ್ಕೆ ಪಾಕ್‌ ದಾಖಲೆ ಉಡೀಸ್‌ – ರನ್‌ ಮಳೆಯಲ್ಲಿ ಗೆದ್ದ ಭಾರತ

Public TV
By Public TV
8 hours ago
Chickpea
Dharwad

ರಾಜ್ಯ ಕಡಲೆ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ – 1 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಅಸ್ತು

Public TV
By Public TV
9 hours ago
Lakkundi Excavation Gadag 2
Districts

ಲಕ್ಕುಂಡಿಯಲ್ಲಿ ಕಬ್ಬಿಣದ ಉಂಡೆ, ಪಚ್ಚೆ ಕಲ್ಲು ಪತ್ತೆ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?