Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿ.ಟಿ.ರವಿಗೆ ಬಿಗ್‌ ರಿಲೀಫ್‌ – ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ

Public TV
Last updated: December 20, 2024 6:25 pm
Public TV
Share
3 Min Read
CT Ravi
SHARE

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ತಕ್ಷಣವೇ ಸಿ.ಟಿ.ರವಿ (C.T.Ravi) ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ ಹೊರಡಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಎಂ.ಜಿ.ಉಮಾ ನೇತೃತ್ವದ ಪೀಠವು ಆರೋಪಿಯನ್ನು ತಕ್ಷಣವೇ ಬಿಡುಗಡೆ ಮಾಡಿ. ಸಿ.ಟಿ.ರವಿ ಈಗ ಎಲ್ಲಿದ್ದಾರೋ ಅಲ್ಲಿಯೇ ಬಿಡುಗಡೆ ಮಾಡಿ ಎಂದು ಮಧ್ಯಂತರ ಆದೇಶ ನೀಡಿದ್ದಾರೆ. ಅಲ್ಲದೇ, ತನಿಖೆಗೆ ಸಹಕರಿಸಬೇಕು ಎಂದು ಸಿ.ಟಿ.ರವಿಗೆ ಷರತ್ತನ್ನು ಕೋರ್ಟ್‌ ವಿಧಿಸಿದೆ. ಇದನ್ನೂ ಓದಿ: ಸಿ.ಟಿ ರವಿ ಕೊಲೆಗಡುಕ ಅಂತ ಹೇಳಿರೋ ಲಕ್ಷ್ಮಿ ಹೆಬ್ಬಾಳ್ಕರ್, ಬೆಂಬಲಿಗರನ್ನು ಬಂಧಿಸಬೇಕು – ಜನಾರ್ದನ ರೆಡ್ಡಿ

Lakshmi Hebbalkar 1

ಸಿ.ಟಿ.ರವಿ ಪರ ವಕೀಲ ಅಶೋಕ್ ಹಾರನಹಳ್ಳಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಪರ ವಕೀಲ ಶ್ಯಾಮ್‌ಸುಂದರ್ ವಾದ ಮಂಡಿಸಿದರು.

ಆರೋಪಿ ಇನ್ನೂ ಪೊಲೀಸ್ ಕಸ್ಟಡಿಯಲ್ಲಿ ಇದ್ದಾರೆ. ಜಾಮೀನು ಅರ್ಜಿ ವಿಚಾರಣೆ ಮಾಡಲು ಸಾಧ್ಯವಿಲ್ಲ. ಇವತ್ತು ಬೆಳಗಾವಿ ಕೋರ್ಟ್ಗೆ ಹಾಜರುಪಡಿಸಿದರು. ಬಳಿಕ ಜನಪ್ರತಿನಿಧಿಗಳ ನ್ಯಾಯಾಲಯದ ವ್ಯಾಪ್ತಿಯಲ್ಲಿ ಪ್ರಕರಣ ಇದೆ ಅಂತ ಬೆಂಗಳೂರಿಗೆ ಕಳಿಸಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಪರ ವಕೀಲ ಶ್ಯಾಮ್‌ಸುಂದರ್ ವಾದಿಸಿದರು.

ಸಿ.ಟಿ.ರವಿ ಪರ ವಕೀಲ ಅಶೋಕ್ ವಾದ ಮಂಡಿಸಿ, 4 ಪುಟಗಳ ದೂರಿನ ಪ್ರತಿ ಇದೆ. ಆಕ್ಷೇಪಣಾ ಪದ ಬಳಕೆ ಮಾಡಿದ್ದಾರೆ ಅಂತ ಆಪ್ತ ಸಹಾಯಕ ಮೂಲಕ ದೂರು ನೀಡಿದ್ದಾರೆ. ದೂರಿನಲ್ಲಿ ದೂರುದಾರರ ಸಹಿ ಇಲ್ಲ. ಲಕ್ಷ್ಮಿ ಹೆಬ್ಬಾಳ್ಕರ್ ಸಹಿ ಇಲ್ಲ ಎಂದು ದೂರಿನ ಪ್ರತಿ ಓದಿದರು. ಇದನ್ನೂ ಓದಿ: ಸಿ.ಟಿ ರವಿ ಕೇಸ್‌ ಬೆಂಗಳೂರಿಗೆ ಶಿಫ್ಟ್‌ – ಬೆಳಗಾವಿ ಕೋರ್ಟ್‌ ಆದೇಶ

CT ravi 2 1

ದಸ್ತಗಿರಿ ಮಾಡದೇ ಇದ್ದಲ್ಲಿ ಎಂಬುದನ್ನು ದೂರಿನಲ್ಲಿ ದೂರುದಾರರೇ ಬರೆದಿದ್ದಾರೆ. ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಾರೆ ಅಂತ ಹೇಳಿದ್ದಾರೆ. ಸಾಕ್ಷಿಗಳು ಎಲ್ಲಾ ಆಡಳಿತ ಪಕ್ಷದವರೇ ಆಗಿದ್ದಾರೆ. ಅವರ ಮೇಲೆ ಪ್ರಭಾವ ಬೀರುತ್ತಾರೆ ಎನ್ನಲಾಗಿದೆ. ನೋಟಿಸ್ ನೀಡುವ ವಿಚಾರದಲ್ಲಿ ಸಹಿ ಮಾಡಿಲ್ಲ ಅರೆಸ್ಟ್ ಮಾಡಿದ್ದಾರೆ. 19ನೇ ತಾರೀಖು ನೋಟಿಸ್ ನೀಡಿದ್ದಾರೆ. 19ನೇ ತಾರೀಖು ವಿಚಾರಣೆ ನೋಟಿಸ್ ನೀಡಿದ್ದಾರೆ. ತಕ್ಷಣವೇ ಅರೆಸ್ಟ್ ಮಾಡಿದ್ದಾರೆ. ಖಾನಾಪುರದ ಬಳಿ ಅರೆಸ್ಟ್ ಮಾಡಲಾಗಿದೆ ಅಂತ ಉಲ್ಲೇಖ ಮಾಡಿದ್ದಾರೆ. ಸುವರ್ಣಸೌಧದಲ್ಲಿ ಅರೆಸ್ಟ್ ಮಾಡಿದ್ದಾರೆ. ಖಾನಾಪುರ ಅಂತ ಅರೆಸ್ಟ್ ಮೊಮೋದಲ್ಲಿ ಇದೆ. ಅರೆಸ್ಟ್ ಮೆಮೋದಲ್ಲಿ ಆರೋಪಿತ ನ್ಯಾಯಾಲಯಕ್ಕೆ ಹಾಜರಾಗೋದಿಲ್ಲ ಪರಾರಿ ಆಗುತ್ತಾರೆ ಅಂತ ಪೊಲೀಸರು ಬರೆದಿದ್ದಾರೆ. ಒಂದೇ ದಿನಕ್ಕೆ ಎಲ್ಲಾ ವಿಚಾರದ ಅಂತಿಮ ತೀರ್ಮಾನಕ್ಕೆ ಪೊಲೀಸರು ಬಂದಿದ್ದಾರೆ. ದೂರುದಾರರ ಸಹಿ ಇಲ್ಲದೇ ಇದ್ದಾಗ ಕೋರ್ಟ್ ಆದೇಶಗಳು ಏನು ಹೇಳುತ್ತವೆ ಎನ್ನೋದರ ಬಗ್ಗೆ ವಕೀಲ ಅಶೋಕ್ ವಾದ ಮಂಡಿಸಿದರು. ಈ ಪ್ರಕರಣದಲ್ಲಿ ಮಧ್ಯಂತರ ಜಾಮೀನು ನೀಡಬಹುದು ಎಂದು ಧನಂಜಯ್ ಪೀಠದ ಆದೇಶ ಉಲ್ಲೇಖಿಸಿ ವಾದಿಸಿದರು.

ಸದನದಲ್ಲಿ ಏನನ್ನಾದರೂ ಮಾತಾಡಲು ಅವಕಾಶ ಇದೆ ಎಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಜನಪ್ರತಿನಿಧಿಗಳಿಗೆ ಇರುವ ಅಧಿಕಾರದ ಬಗ್ಗೆ ಕೋರ್ಟ್ ಗಮನಕ್ಕೆ ತಂದರು. ಜಸ್ಟೀಸ್ ಚಂದ್ರಚೂಡ್ ನೀಡಿದ ಆದೇಶ ಓದಿದ ಸಿ.ಟಿ.ರವಿ ಪರ ವಕೀಲರು, ಹೀಗೆ ಮಾಡಿದ್ರೆ ಪ್ರತಿಯೊಬ್ಬರು ದೂರು ನೀಡ್ತಾರೆ. ಪ್ರತಿಯೊಬ್ಬರೂ ಕೂಡ ಮಾನನಷ್ಟ ಮೊಕದ್ದಮೆ ಹಾಕ್ತಾರೆ. ಎಲ್ಲರೂ ಕೂಡ ಇದನ್ನೇ ಮಾಡಿದ್ರೆ ಎಷ್ಟು ಕೇಸ್ ದಾಖಲು ಮಾಡಬಹುದು. ಲಂಚದ ವಿಚಾರ ಬಿಟ್ಟು ಎಲ್ಲ ವಿಚಾರದ ಬಗ್ಗೆ ಮಾತನಾಡಬಹುದಾಗಿದೆ ಎಂದು ಸುಪ್ರೀಂ ಕೋರ್ಟ್ ಆದೇಶ ಉಲ್ಲೇಖಿಸಿ ತಮ್ಮ ವಾದ ಮುಕ್ತಾಯ ಮಾಡಿದರು. ಇದನ್ನೂ ಓದಿ: ಸಿ.ಟಿ ರವಿ ಅಶ್ಲೀಲ ಪದ ಬಳಸಿದ್ದರೆ ಅದನ್ನ ನಾನೂ ಸಮರ್ಥಿಸಲ್ಲ – ಹೆಚ್‌ಡಿಕೆ

CT Ravi 2

ಲಕ್ಷ್ಮಿ ಹೆಬ್ಬಾಳ್ಕರ್ ಪರ ವಕೀಲ ಶ್ಯಾಮ್‌ಸುಂದರ್ ವಾದಿಸಿ, ಮಹಿಳೆಗೆ ಪ್ರಾಸ್ಟಿಟ್ಯೂಟ್ ಅಂತ 10 ಬಾರಿ ಕೂಗಿದ್ದಾರೆ. ಒಬ್ಬ ಮಹಿಳೆಗೆ ಒಮ್ಮೆ ಅಲ್ಲ 10 ಬಾರಿ ಕೂಗಿದ್ದಾರೆ. ಅದು ಸದನದಲ್ಲಿ ಕೂಗಿರೋದು ಶೋಭೆ ತರುವಂತದ್ದಲ್ಲ. ಆರೋಪಿ ಹಾಜರುಪಡಿಸದೇ ಜಾಮೀನು ಪಡೆಯಲು ಸಾಧ್ಯವಿಲ್ಲ. ತನಿಖಾಧಿಕಾರಿ ಕೋರ್ಟ್ಗೆ ಎಫ್‌ಐಆರ್ ವರ್ಗಾವಣೆ ಕಳಿಸಿದ್ದಾರೆ. ಬೆಳಗಾವಿಯ ಹಾಜರುಪಡಿಸಿದಾಗ ಬೆಂಗಳೂರಿಗೆ ಹೇಳಿದ್ದಾರೆ. ಆರೋಪಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಹಾಜರುಪಡಿಸಬೇಕು. ಬೆಳಗಾವಿಯ ಕೋರ್ಟ್ ಮುಂದೆ ಹಾಜರುಪಡಿಸಿದಾಗ ಜಾಮೀನು ಅರ್ಜಿ ಸಲ್ಲಿಸಲಾಗಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಕೂಡ ಜಾಮೀನು ಅರ್ಜಿ ಪೆಂಡಿಂಗ್ ಇದೆ. ಹೀಗಿರುವಾಗ ಸೆಷನ್ಸ್ ಕೋರ್ಟ್ಗೆ ಹೇಗೆ ಅರ್ಜಿ ಸಲ್ಲಿಸಿದ್ದಾರೆ. ಒಂದೇ ಸಮಯದಲ್ಲಿ ಎರಡು ಕೋರ್ಟ್ನಲ್ಲಿ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ ಎಲ್ಲಿದೆ ಎಂದು ವಾದಿಸಿದರು.

ಯಾವುದೇ ಮಹಿಳೆಗೆ ಅವಮಾನ ಮಾಡುವುದನ್ನ ಯಾವ ಕಾನೂನು ಕೂಡ ಸಹಿಸುವುದಿಲ್ಲ. ಮಹಿಳೆಯರ ಬಗ್ಗೆ ಅವಹೇಳನ ಮಾಡುವುದನ್ನ ಸಂವಿಧಾನದ ಯಾವ ಕಾನೂನು ಸಹಿಸುವುದಿಲ್ಲ ಎಂದು ಶ್ಯಾಮ್‌ಸುಂದರ್ ತಮ್ಮ ವಾದ ಮುಗಿಸಿದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್, ಆರೋಪಿ ಬಿಡುಗಡೆ ಮಾಡುವಂತೆ ಮಧ್ಯಂತರ ಆದೇಶ ಹೊರಡಿಸಿದೆ.

TAGGED:c t ravihigh courtLakshmi Hebbalkar
Share This Article
Facebook Whatsapp Whatsapp Telegram

Cinema Updates

Vishal
47ನೇ ವಯಸ್ಸಲ್ಲಿ ಖ್ಯಾತ ನಟಿಯನ್ನು ಮದುವೆಯಾಗಲಿದ್ದಾರೆ ನಟ ವಿಶಾಲ್‌ – ಯಾರು ಗೊತ್ತಾ ಆ ಬೆಡಗಿ?
8 hours ago
Sanjjanaa Galrani 1
ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸಂಜನಾ ಗಲ್ರಾನಿ
9 hours ago
twinkle khanna
ಅಕ್ಷಯ್, ವಿಕ್ಕಿ ಕೌಶಲ್ ‘ಆಪರೇಷನ್ ಸಿಂಧೂರ’ ಸಿನಿಮಾಗಾಗಿ ಫೈಟ್ ಮಾಡ್ತಿಲ್ಲ: ಟ್ವಿಂಕಲ್ ಖನ್ನಾ
9 hours ago
Upendra 2
ಐಪಿಎಲ್ ಕುರಿತಾದ ಕ್ರೀಡಾ ಪ್ರಧಾನ ಚಿತ್ರದಲ್ಲಿ ಉಪ್ಪಿ-‘ಕರ್ವ’ ಡೈರೆಕ್ಟರ್ ಆ್ಯಕ್ಷನ್ ಕಟ್
10 hours ago

You Might Also Like

IPL 3
Cricket

ಹೈದರಾಬಾದ್‌ಗೆ 6 ವಿಕೆಟ್‌ಗಳ ಅಮೋಘ ಜಯ – ಪ್ಲೇ ಆಫ್‌ ರೇಸ್‌ನಿಂದ ಹೊರಬಿದ್ದ ಲಕ್ನೋ!

Public TV
By Public TV
5 hours ago
Trump and Putin
Latest

ಉಕ್ರೇನ್ ಸಂಘರ್ಷ ಕೊನೆಗೊಳಿಸಲು ರಷ್ಯಾ ಸಿದ್ಧ – 2 ಗಂಟೆಗೂ ಹೆಚ್ಚುಕಾಲ ಟ್ರಂಪ್‌-ಪುಟಿನ್‌ ಮಾತುಕತೆ

Public TV
By Public TV
6 hours ago
Raichuru Crime
Latest

CRPF ಯೋಧನ ಮೇಲೆ ಮಾರಣಾಂತಿಕ ಹಲ್ಲೆ: ಆರೋಪಿಗಳು ಅರೆಸ್ಟ್

Public TV
By Public TV
6 hours ago
Elderly man who survived Shirur Landslide Tragedy dies after being struck by lightning
Districts

ಶಿರೂರು ದುರಂತದಲ್ಲಿ ಜೀವ ಉಳಿಸಿಕೊಂಡಿದ್ದ ವೃದ್ಧ ಸಿಡಿಲಿಗೆ ಬಲಿ

Public TV
By Public TV
6 hours ago
Pakistani spy
Latest

3 ದಿನಗಳಲ್ಲಿ 11 ಪಾಕ್ ಸ್ಪೈಗಳ ಬಂಧನ – ವ್ಲಾಗರ್, ವಿದ್ಯಾರ್ಥಿ, ಉದ್ಯಮಿ, ಗಾರ್ಡ್‌ಗಳಾಗಿದ್ದವರು ಬೇಹುಗಾರರಾಗಿ ಕೆಲಸ

Public TV
By Public TV
6 hours ago
Chikkaballapur Priest Murder
Chikkaballapur

ಕೈ, ಕಾಲು ಕಟ್ಟಿ ಪೂಜಾರಿಯ ಕೊಲೆ – 3 ವಾರಗಳ ಹಿಂದೆಯೇ ಅರಣ್ಯದಲ್ಲಿ ಬೀಸಾಡಿರುವ ಶಂಕೆ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?