ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ (Primary School Teachers) ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಮಾಡಿ ಹೈಕೋರ್ಟ್ (Karnataka High Court) ಏಕಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ.
ನೇಮಕಾತಿ (Selection) ಮಾಡುವಾಗ ಕೆಲವೊಂದು ಕಾನೂನು ಬಾಹಿರ ಚಟುವಟಿಕೆಗಳನ್ನು ತೆಗೆದುಕೊಂಡಿದ್ದಾರೆ ಎಂದು ನೂರಾರು ಅಭ್ಯರ್ಥಿಗಳು ರಿಟ್ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ನ್ಯಾ.ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಪತಿಯ ಜಾತಿ, ಆದಾಯ ಪ್ರಮಾಣಪತ್ರ ಪರಿಗಣನೆ ಮಾಡಲಾಗಿದೆ. ತಂದೆಯ ಜಾತಿ, ಆದಾಯ ಪ್ರಮಾಣಪತ್ರ ಪರಿಗಣಿಸಬೇಕು ಅದನ್ನು ಪರಿಪಾಲನೆ ಮಾಡಿಲ್ಲ. ಶಿಕ್ಷಣ ಇಲಾಖೆಯ ನಿಯಮ ಕಾನೂನುಬಾಹಿರವೆಂದು ಅಭ್ಯರ್ಥಿಗಳ ಪರ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. ಇದನ್ನೂ ಓದಿ: ಸರ್ಜಾಪುರ ಸುಲಿಗೆ ಪ್ರಕರಣದ ಮತ್ತೊಂದು ವೀಡಿಯೋ ಬಹಿರಂಗ – ಡಿಕ್ಕಿ ಹೊಡೆದು ಬಾನೆಟ್ ಏರಿದ ಕಿಡಿಗೇಡಿ
ಸರ್ಕಾರದ ಕ್ರಮ ಸರಿಯಾಗಿಲ್ಲವೆಂದು ಶಿಕ್ಷಣ ಇಲಾಖೆಯ ಆಯ್ಕೆಪಟ್ಟಿ ರದ್ದುಪಡಿಸಿ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಅಭ್ಯರ್ಥಿ ತಂದೆಯ ಜಾತಿ, ಆದಾಯ ಪ್ರಮಾಣಪತ್ರ ಪರಿಗಣಿಸಿ ಹೊಸದಾಗಿ ಆಯ್ಕೆ ಪಟ್ಟಿ ಪ್ರಕಟಿಸಲು ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ. ಇದನ್ನೂ ಓದಿ: ಮುರುಘಾ ಶ್ರೀ ವಿರುದ್ಧ ಷಡ್ಯಂತ್ರ ಪ್ರಕರಣ – ಹೈಕೋರ್ಟ್ ಎಂಟ್ರಿ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k