ಬೆಂಗಳೂರು: ಗೌರಿ-ಗಣೇಶ ಹಬ್ಬ ಹಾಗೂ ಈದ್-ಮಿಲಾದ್ ಹಬ್ಬಕ್ಕೆ ಡಿಜೆ ನಿಷೇಧ ವಿಚಾರದಲ್ಲಿ ಪೊಲೀಸರ ನಿರ್ಧಾರಕ್ಕೆ ಹೈಕೋರ್ಟ್ ಅಸ್ತು ಅಂದಿದೆ.
ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ಅವರ ವಿಭಾಗೀಯ ಪೀಠವು ಅರ್ಜಿ ವಿಚಾರಣೆ ನಡೆಸಿತು. ಅರ್ಜಿದಾರ ಶಂಕರ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಡಿಜೆ ನಿಷೇಧ ಪ್ರಶ್ನಿಸಿ ಕರ್ನಾಟಕ ಲಘು ಸಂಗೀತ ಮತ್ತು ಸಾಂಸ್ಕೃತಿಕ ಕಲಾವಿದರ ಸಂಘದವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮೆರವಣಿಗೆ ಮತ್ತು ಸಾರ್ವಜನಿಕ ಮಂಟಪಗಳಲ್ಲಿ ಡಿಜೆ ನಿಷೇಧದ ಪೊಲೀಸರ ನಿರ್ಧಾರಕ್ಕೆ ಸಮ್ಮತಿ ಸೂಚಿಸಿದೆ.
ಪೊಲೀಸರ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಕರ್ನಾಟಕ ಲಘು ಸಂಗೀತ ಮತ್ತು ಸಾಂಸ್ಕೃತಿಕ ಕಲಾವಿದರ ಸಂಘದ ಅಧಿಕಾರಿಯೊಬ್ಬರು ಅರ್ಜಿ ಸಲ್ಲಿಸಿದ್ದರು.