ನವದೆಹಲಿ: ಶಾಲಾ-ಕಾಲೇಜುಗಳ ಕ್ಯಾಂಪಸ್ಗಳಲ್ಲಿ ವಿದ್ಯಾರ್ಥಿನಿಯರು ಹಿಜಬ್ (Hijab) ಧರಿಸುವುದನ್ನು ನಿಷೇಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆ ನಡೆಸುವ ಬಗ್ಗೆ ನಾವು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಸುಪ್ರೀಂಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (D Y Chandrachud) ಹೇಳಿದ್ದಾರೆ.
ಇಂದು ವಕೀಲ ಶಾದನ್ ಫರಾಸತ್ ಪ್ರಕರಣ ಬಗ್ಗೆ ಸಿಜೆಐ (CJI) ಪೀಠದ ಮುಂದೆ ಪ್ರಸ್ತಾಪಿಸಿದರು. ದ್ವಿ ಸದಸ್ಯ ಪೀಠದಲ್ಲಿ ಭಿನ್ನ ತೀರ್ಪು ಬಂದಿದೆ. ಸರ್ಕಾರಿ ಕಾಲೇಜುಗಳಲ್ಲಿ ಹಿಜಬ್ ನಿಷೇಧದಿಂದಾಗಿ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ, ಈಗಾಗಲೇ ಒಂದು ವರ್ಷವನ್ನು ವಿದ್ಯಾರ್ಥಿನಿಯರು ಕಳೆದುಕೊಂಡಿದ್ದಾರೆ. ಮಾರ್ಚ್ 9ರಿಂದ ಪರೀಕ್ಷೆಗಳು ಆರಂಭವಾಗುತ್ತಿರುವ ಹಿನ್ನೆಲೆ ಈ ಬಗ್ಗೆ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಮರು ಪ್ರಶ್ನೆ ಮಾಡಿದ ಸಿಜೆಐ ಡಿವೈ ಚಂದ್ರಚೂಡ್, ಪರೀಕ್ಷೆಗೆ ಹಾಜರಾಗಲು ಯಾಕೆ ಅವಕಾಶ ನೀಡುವುದಿಲ್ಲ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ವಕೀಲ ಶಾದನ್ ಫರಾಸತ್ ಶಾಲಾ-ಕಾಲೇಜುಗಳ ತರಗತಿಯಲ್ಲಿ ಹಿಜಬ್ ನಿಷೇಧಿಸಿದೆ. ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ಇಲ್ಲ, ವಿದ್ಯಾರ್ಥಿನಿಯರು ಹಿಜಬ್ ಧರಿಸದೆ ಪರೀಕ್ಷೆಗೆ ತೆರಳುವುದಿಲ್ಲ ಈ ಹಿನ್ನೆಲೆ ಪರೀಕ್ಷೆಗೆ ಅನುಮತಿ ಕೋರಿ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು. ತ್ರಿ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಸುವ ಬಗ್ಗೆ ನಾವು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸಿಜೆಐ ಭರವಸೆ ನೀಡಿದರು.
ಕಳೆದ ಜನವರಿ 23 ರಂದು ಹಿರಿಯ ವಕೀಲೆ ಮೀನಾಕ್ಷಿ ಅರೋರಾ ಪ್ರಕರಣ ಬಗ್ಗೆ ಸಿಜೆಐ ಪೀಠದ ಮುಂದೆ ಪ್ರಸ್ತಾಪಿಸಿದರು. ಪ್ರಾಯೋಗಿಕ ಪರೀಕ್ಷೆಗಳನ್ನು ನಿಗದಿಪಡಿಸಲಾಗಿದೆ. ಅದಕ್ಕಾಗಿ ಪ್ರಕರಣದಿಂದ ಮುಸ್ಲಿಂ ವಿದ್ಯಾರ್ಥಿನಿಯರು ಹಾಜರಾಗಲು ನಿರ್ಧರಿಸಿದ್ದಾರೆ. ಅವರು ಹಿಜಬ್ ಸಹಿತ ಹಾಜರಾಗಲು ಮಧ್ಯಂತರ ನಿರ್ದೇಶನಗಳ ಅಗತ್ಯವಿದ್ದು ಪ್ರಕರಣದ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ದರು.
ಕಳೆದ ವರ್ಷ ಅಕ್ಟೋಬರ್ ನಲ್ಲಿ ಸುಪ್ರೀಂ ಕೋರ್ಟ್ನ ವಿಭಾಗೀಯ ಪೀಠವು, ಕಾಲೇಜು ತರಗತಿಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿಷೇಧಿಸಲು ರಾಜ್ಯದ ಸರ್ಕಾರಿ ಕಾಲೇಜುಗಳಿಗೆ ರಾಜ್ಯ ಸರ್ಕಾರ ಅಧಿಕಾರ ನೀಡಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ವಿಭಜಿತ ತೀರ್ಪು ನೀಡಿತ್ತು. ಇದಕ್ಕೂ ಮುನ್ನ ಕರ್ನಾಟಕ ಹೈಕೋರ್ಟ್ನಲ್ಲಿ ರಾಜ್ಯ ಸರ್ಕಾರದ ಅದೇವನ್ನು ಎತ್ತಿ ಹಿಡಿದಿತ್ತು.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k