Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕ ನಕ್ಸಲ್ ಮುಕ್ತ ಆಗಿದೆ: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕ ನಕ್ಸಲ್ ಮುಕ್ತ ಆಗಿದೆ: ಸಿಎಂ

Bengaluru City

ಕರ್ನಾಟಕ ನಕ್ಸಲ್ ಮುಕ್ತ ಆಗಿದೆ: ಸಿಎಂ

Public TV
Last updated: January 8, 2025 11:41 pm
Public TV
Share
4 Min Read
naxals siddaramaiah
SHARE

– ಶರಣಾದವರಿಗೆ ತ್ವರಿತವಾಗಿ ನ್ಯಾಯ ಕೊಡುವ ಕೆಲಸ ಮಾಡ್ತೀವಿ
– ಸುನಿಲ್ ಕುಮಾರ್‌ಗೆ ಇತಿಹಾಸ, ಸಂವಿಧಾನ ಗೊತ್ತಿಲ್ಲ ಎಂದು ತಿರುಗೇಟು

ಬೆಂಗಳೂರು: ನನ್ನ ಪ್ರಕಾರ ಕರ್ನಾಟಕ ನಕ್ಸಲ್ ಮುಕ್ತ ಆಗಿದೆ. ಶರಣಾದ ನಕ್ಸಲರ ಬೇಡಿಕೆ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ತೀರ್ಮಾನ ಮಾಡ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

ನಗರದ ಗೃಹ ಕಚೇರಿ ಕೃಷ್ಣದಲ್ಲಿ ನಕ್ಸಲರು ತಮ್ಮ ಮುಂದೆ ಶರಣಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, 20 ವರ್ಷಗಳು ಹೆಚ್ಚು ಕಾಲ ನಕ್ಸಲ್ ಚಳುವಳಿ ದಾರಿಯಲ್ಲಿ ನಡೆದರು. ಕಾಡಿನಲ್ಲಿ ಇದ್ದು ಚಳುವಳಿ ಮಾಡಿದ 6 ಜನ ನಕ್ಸಲರು ಇಂದು ಶರಣಾಗತಿ ಆಗಿದ್ದಾರೆ. ಸರ್ಕಾರ ಅವರಿಗೆ ಆಹ್ವಾನ ನೀಡಿದ್ದರಿಂದ 6 ಜನ ಶರಣಾಗತಿ ಆಗಿದ್ದಾರೆ. ಹೋರಾಟ ಹಾದಿ ಬಿಟ್ಟು ಪರಿವರ್ತನೆಗೊಂಡು ಮುಖ್ಯವಾಹಿನಿಗೆ ಬರಲು ತೀರ್ಮಾನ ಮಾಡಿ ನನ್ನ ಮುಂದೆ ಶರಣಾಗತಿ ಆಗಿದ್ದಾರೆ. ಡಿಸಿಎಂ ಸೇರಿ ಸಚಿವರ ಮುಂದೆ ಶರಣಾಗತಿ ಆಗಿದ್ದಾರೆಂದು ಅಧಿಕೃತವಾಗಿ ಸಿಎಂ ತಿಳಿಸಿದರು. ಇದನ್ನೂ ಓದಿ: Naxal Surrender | ಶಸ್ತ್ರ ತ್ಯಜಿಸಿ ಶರಣಾದ ನಕ್ಸಲರ ಬದುಕು ರೋಚಕ – ಇಲ್ಲಿದೆ ಕಂಪ್ಲೀಟ್‌ ವಿವರ!

ಶಸ್ತ್ರ ತೊರೆದು, ಶರಣಾಗತರಾದ ಆರು ಮಂದಿ ನಕ್ಸಲರನ್ನು ಮುಖ್ಯಮಂತ್ರಿ @siddaramaiah ಅವರು ಇಂದು ಮುಖ್ಯವಾಹಿನಿಗೆ ಬರಮಾಡಿಕೊಂಡು ಮಾತನಾಡಿದರು.

ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆಯ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ,… pic.twitter.com/wBdmMUvfmo

— CM of Karnataka (@CMofKarnataka) January 8, 2025

ಕೆಲವು ದಿನಗಳ ಹಿಂದೆ ನಾಗರಿಕ ಸಮಿತಿ, ಪುನರ್ ವಸತಿ ಸಮಿತಿ ಅವರು ಭೇಟಿ ಆಗಿದ್ದರು. ಅವರ ಜೊತೆ ಮಾತುಕತೆ ನಡೆಸಿದರು. ಅವರು, 6 ನಕ್ಸಲರು ಶರಣಾಗತಿ ಆಗಲು ತೀರ್ಮಾನ ಮಾಡಿದ್ದಾರೆ. ಸರ್ಕಾರದ ವತಿಯಿಂದ ಆಹ್ವಾನ ಮಾಡಲು ಹೇಳಿದರು. ಅದಕ್ಕೆ ಪತ್ರಿಕಾ ಹೇಳಿಕೆ ಕೊಟ್ಟೆ. ಕಾನೂನು ರೀತಿ ಯಾವ ಸಹಾಯ ಮಾಡಲು ಸಾಧ್ಯವೋ ಮಾಡ್ತೀನಿ ಅಂತ ಹೇಳಿದ್ದೆ. ಕೆಟಗರಿ ಆಧಾರದಲ್ಲಿ ಅವರಿಗೆ ಪರಿಹಾರ ಕೊಡ್ತೀವಿ. ಕಾಡಿನಿಂದ ನಾಡಿಗೆ ಬರಲಿಕ್ಕೆ ಸರ್ಕಾರ ಎಲ್ಲಾ ಪ್ರಯತ್ನ ಮಾಡುತ್ತೆ ಅಂತ ಹೇಳಿದ್ವಿ. ಕಾನೂನು ರೀತಿ ಸಹಕಾರ ಕೊಡೋದಾಗಿ ಹೇಳಿದ್ವಿ. ಶಸ್ತ್ರಾಸ್ತ್ರಗಳ ಮೂಲಕ, ಅನ್ಯಾಯ, ದೌರ್ಜನ್ಯ, ಶೋಷಣೆ ವಿರುದ್ಧ ಹೋರಾಟ ಮಾಡುತ್ತಿದ್ದರು. ಹೋರಾಟದ ಮೂಲಕ ನ್ಯಾಯ ಸಿಗೊಲ್ಲ ಅಂತ ಅವರಿಗೆ ಅರಿವಾಗಿದೆ. ಸಂವಿಧಾನದ ಪ್ರಕಾರ ಹೋರಾಟಕ್ಕೆ ಅವಕಾಶ ಇದೆ ಅಂತ ಮುಖ್ಯವಾಹಿನಿಗೆ ಬರೋಕೆ ಒಪ್ಪಿದ್ದಾರೆ. ಒಟ್ಟಾರೆಯಾಗಿ ನಮ್ಮ ಸರ್ಕಾರ ಕರ್ನಾಟಕವನ್ನ ನಕ್ಸಲ್ ಮುಕ್ತವಾಗಿ ಮಾಡೋದು ನಮ್ಮ ಉದ್ದೇಶ ಎಂದು ಸ್ಪಷ್ಟಪಡಿಸಿದರು.

ಅನೇಕ ರಾಜ್ಯಗಳು ಇಂತಹ ಪ್ರಯತ್ನ ಮಾಡಿವೆ. ಅನೇಕ ರಾಜ್ಯದಲ್ಲಿ ನಕ್ಸಲ್ ಹೋರಾಟ ಇದೆ. ನಕ್ಸಲ್ ದಾರಿ ಬಿಡಿ, ಸಂವಿಧಾನಬದ್ಧ ಹೋರಾಟ ಮಾಡಿ ಅಂತ ಹೇಳಿದ ಮೇಲೆ ಶರಣಾಗತಿಯಾಗಿದ್ದಾರೆ. ಡಿಸಿ ಮುಂದೆ ಅವರನ್ನ ಪ್ರೊಡ್ಯೂಸ್ ಮಾಡಿದ್ದಾರೆ. 6 ಜನ ಶರಣಾಗತಿ ಆಗಿದ್ದಾರೆ. ಡಿಸಿ ಕೂಡಾ ಆದೇಶ ಮಾಡಿದ್ದಾರೆ ಎಂದು ಸಿಎಂ ಆದೇಶ ಪ್ರತಿ ತೋರಿಸಿದರು. ನಮ್ಮ ಮುಂದೆ ಬಂದು ಶರಣಾಗತಿ ಆಗಿದ್ದಾರೆ. ಸರ್ಕಾರ ಶರಣಾಗತಿ ಒಪ್ಪಿದೆ. ಅವರ ಶರಣಾಗತಿಗೆ ಪ್ರಯತ್ನ ಮಾಡಿದ ಎಲ್ಲಾ ಸಂಘಟನೆಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಎಎನ್‌ಎಫ್‌ನಲ್ಲಿ ಕೆಲಸ ಮಾಡಿರೋರಿಗೂ ಧನ್ಯವಾದ ಹೇಳ್ತೀನಿ. ನಿಂಬಾಳ್ಕರ್ ಅವರಿಗೂ ಧನ್ಯವಾದ ಹೇಳ್ತೀನಿ ಎಂದರು.

ಮಾವೋವಾದ ತೊರೆದು ಪ್ರಜಾಪ್ರಭುತ್ವವಾದಿಯಾಗುವ ಆಶಯದೊಂದಿಗೆ ಶಸ್ತ್ರ ತ್ಯಜಿಸಿ ಶರಣಾಗತರಾದ ಆರು ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡು, ಪ್ರೀತಿಯ ಸಂಕೇತವಾದ ಗುಲಾಬಿ ಹೂ ಹಾಗೂ ಸಂವಿಧಾನದ ಪುಸ್ತಕವನ್ನು ಕೈಗಿತ್ತು, ಇದರ ಆಶಯಗಳಡಿ ಬಾಳುವಂತೆ ಹಾರೈಸಿದೆ.
– ಮುಖ್ಯಮಂತ್ರಿ @siddaramaiah pic.twitter.com/Fe5qp1h97j

— CM of Karnataka (@CMofKarnataka) January 8, 2025

3-4 ದಿನಗಳ ಹಿಂದೆ ಶರಣಾಗತಿ ಬಗ್ಗೆ ಹೇಳಿದ್ದರು. ನಾನು ಯಾರಿಗೂ ಹೇಳಿರಲಿಲ್ಲ. ನಿನ್ನೆ ಅಲೋಕ್ ಮೋಹನ್, ಮೊಹಂತಿ ಅವರು ಬಂದು ಹೇಳಿದ್ದರು. ಎಲ್ಲರಿಗೂ ಧನ್ಯವಾದ ಹೇಳ್ತೀನಿ. ಶರಣಾಗತಿ ಆಗಿರೋರಿಗೆ ಅವರಿಗೆ ಶುಭವಾಗಲಿ. ಸರ್ಕಾರಕ್ಕೆ ಅಹವಾಲು, ಬೇಡಿಕೆ ಇಟ್ಟಿದ್ದಾರೆ. ಎಲ್ಲಾ ಬೇಡಿಕೆಯನ್ನ ಸಹಾನುಭೂತಿಯಿಂದ ಸರ್ಕಾರ ಪರಿಗಣಿಸುತ್ತದೆ. ಕೇರಳ, ತಮಿಳುನಾಡು ಸಿಎಂ ಜೊತೆ ಮಾತಾಡ್ತೀನಿ. ತ್ವರಿತವಾಗಿ ನ್ಯಾಯ ಕೊಡೋ ಕೆಲಸ ಮಾಡ್ತೀವಿ. ತ್ವರಿತ ನ್ಯಾಯಾಲಯ ಮಾಡಿ, ಕೇಸ್ ಇತ್ಯರ್ಥ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಸಿಎಂ ಸಮ್ಮುಖದಲ್ಲಿ ಶರಣಾದ 6 ನಕ್ಸಲರು

ಶಾಸಕ ಸುನಿಲ್ ಕುಮಾರ್ ವಿರುದ್ಧ ಕಿಡಿಕಾರಿದ ಸಿಎಂ, ಅವರಿಗೆ ಇತಿಹಾಸ, ಸಂವಿಧಾನ ಗೊತ್ತಿಲ್ಲ ಎಂದು ಸಂವಿಧಾನದ ಸಾಲು ಓದಿ ತಿರುಗೇಟು ನೀಡಿದರು. ಹಿಂದೆ ಶರಣಾಗತಿ ಆಗಿರೋರಿಗೆ ಬೇಡಿಕೆ ಈಡೇರದಿದ್ದರೆ, ಬೇಡಿಕೆಗಳನ್ನ ಈಡೇರಿಸೋ ಕೆಲಸ ಮಾಡ್ತೀವಿ. ನನ್ನ ಪ್ರಕಾರ ಕರ್ನಾಟಕ ನಕ್ಸಲ್ ಮುಕ್ತ ಆಗಿದೆ. ಸಂಪೂರ್ಣವಾಗಿ ಮಾಹಿತಿ ಸಿಕ್ಕ ಮೇಲೆ ಎಎನ್‌ಎಫ್ ಅವಶ್ಯಕತೆ ಇಲ್ಲ. ಸಂಪೂರ್ಣ ಮಾಹಿತಿ ಪಡೆದ ಮೇಲೆ ಈ ಬಗ್ಗೆ ನಿರ್ಧಾರ ಮಾಡ್ತೀನಿ. ನಕ್ಸಲರ ಬೇಡಿಕೆ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡ್ತೀವಿ. ವಿಕ್ರಂಗೌಡ ಎನ್‌ಕೌಂಟರ್ ಬಗ್ಗೆ ಸಿಐಡಿ ತನಿಖೆ ಆಗ್ತಿದೆ. ವಿರೋಧ ಪಕ್ಷದವರು ಟೀಕೆ ಮಾಡಲಿ. ನಮ್ಮ ಕೆಲಸ ನಾವು ರಾಜ್ಯಕ್ಕೆ ಮಾಡ್ತೀವಿ ಎಂದು ಸಿಎಂ ಟಾಂಗ್ ಕೊಟ್ಟರು.

TAGGED:naxalssiddaramaiahನಕ್ಸಲರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

two people die after drinking spirit one in critical condition two detained in koppal
Crime

ಸ್ಪಿರಿಟ್ ಕುಡಿದು ಇಬ್ಬರು ಸಾವು, ಓರ್ವನ ಸ್ಥಿತಿ ಚಿಂತಾಜನಕ – ಇಬ್ಬರು ವಶಕ್ಕೆ

Public TV
By Public TV
7 hours ago
Sri Lanka
Cricket

T20 World Cup: ಐರ್ಲೆಂಡ್‌ ವಿರುದ್ಧ ಶ್ರೀಲಂಕಾಗೆ 20 ರನ್‌ಗಳ ಗೆಲುವು

Public TV
By Public TV
8 hours ago
Narges Mohammadi
Latest

ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತೆಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಇರಾನ್‌

Public TV
By Public TV
8 hours ago
Banavar Car Accident
Crime

ಬಾಣಾವರ | ಮೂರು ಕಾರುಗಳ‌ ನಡುವೆ ಸರಣಿ‌‌ ಅಪಘಾತ – ಇಬ್ಬರ ಸಾವು‌, ಐವರಿಗೆ ಗಾಯ

Public TV
By Public TV
9 hours ago
Nagalakshmi Choudhary
Davanagere

ʻಕೈʼ ಮುಖಂಡನ ಪುತ್ರರಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ – ಕಾನೂನು ಎಲ್ಲರಿಗೂ ಒಂದೇ, ಶಿಕ್ಷೆ ಆಗುತ್ತೆ: ನಾಗಲಕ್ಷ್ಮೀ ಚೌಧರಿ

Public TV
By Public TV
9 hours ago
bidar bike accident three died
Bidar

ಬೀದರ್| ರಸ್ತೆ ಪಕ್ಕದ ಬ್ರಿಡ್ಜ್‌ಗೆ ಬೈಕ್ ಡಿಕ್ಕಿ – ಒಂದೇ ಕುಟುಂಬದ ಮೂವರು ದುರ್ಮರಣ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?