Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕ ದೇಶದ ತಂತ್ರಜ್ಞಾನ ವಲಯದ ಹೃದಯ ಬಡಿತ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕ ದೇಶದ ತಂತ್ರಜ್ಞಾನ ವಲಯದ ಹೃದಯ ಬಡಿತ: ಡಿಕೆಶಿ

Bengaluru City

ಕರ್ನಾಟಕ ದೇಶದ ತಂತ್ರಜ್ಞಾನ ವಲಯದ ಹೃದಯ ಬಡಿತ: ಡಿಕೆಶಿ

Public TV
Last updated: November 19, 2024 3:14 pm
Public TV
Share
2 Min Read
DK SHIVAKUMAR TECH SUMMIT
SHARE

ಬೆಂಗಳೂರು: ದೇಶದ ನೀತಿ ಆಯೋಗದ ಆವಿಷ್ಕಾರ ಸೂಚ್ಯಂಕದಲ್ಲಿ ಕರ್ನಾಟಕ (Karnataka) ಮೊದಲ ಸ್ಥಾನದಲ್ಲಿದೆ. ಅಲ್ಲದೇ ಐಟಿ- ಬಿಟಿ ಹಾಗೂ ನವೋದ್ಯಮ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಕರ್ನಾಟಕ ಅದರಲ್ಲೂ ಬೆಂಗಳೂರು (Bengaluru) ದೇಶದ ತಂತ್ರಜ್ಞಾನ ವಲಯದ ಹೃದಯ ಬಡಿತವಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ 27ನೇ ಆವೃತ್ತಿಯ ಬೆಂಗಳೂರು ಟೆಕ್ ಸಮ್ಮಿಟ್ 2024ರ (Tech Summit 2024) ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ದೆಹಲಿ, ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯಗಳಿಗೆ ಹೋಲಿಸಿದರೇ ಕರ್ನಾಟಕವು ಪೇಟೆಂಟ್ ವಿಚಾರದಲ್ಲಿ ಮುಂಚೂಣಿಯಲ್ಲಿದೆ. ಪೇಟೆಂಟ್ ಅರ್ಜಿಗಳ ಸಂಖ್ಯೆಯಲ್ಲಿ ಕರ್ನಾಟಕ ಇಡೀ ದೇಶದಲ್ಲಿಯೇ ಅಗ್ರಸ್ಥಾನದಲ್ಲಿದೆ. ಕರ್ನಾಟಕ ಮಾಹಿತಿ ತಂತ್ರಜ್ಞಾನದ ಜೊತೆಗೆ ಚಿಪ್ ವಿನ್ಯಾಸದಲ್ಲಿ ದೇಶದಲ್ಲಿಯೇ ತನ್ನದೇ ಆದ ಛಾಪು ಮೂಡಿಸಿದೆ ಎಂದರು. ಇದನ್ನೂ ಓದಿ: ತುಂಬಿ ಹರಿಯುತ್ತಿದ್ದ ಕಾಲುವೆಗೆ ಇಳಿದ ಗೂಡ್ಸ್ ಆಟೋ – ಕೂಲಿ ಕಾರ್ಮಿಕರು ಪಾರು

TECH SUMMIT 2024

ಯಂತ್ರೋಪಕರಣಗಳ ತಯಾರಿಕೆಯಲ್ಲಿಯೂ ಕರ್ನಾಟಕ ಮುಂದಿದ್ದು, ಸುಮಾರು 85ಕ್ಕೂ ಹೆಚ್ಚು ಫ್ಯಾಬ್ಲೆಸ್ ಚಿಪ್ ವಿನ್ಯಾಸ ಘಟಕಗಳು ನಮ್ಮ ರಾಜ್ಯದಲ್ಲಿವೆ. ಸೆಮಿಕಂಡಕ್ಟರ್ ತಯಾರಿಕೆಗೆ ಕರ್ನಾಟಕವೇ ಆಧಾರ. ದೇಶದ ಜೈವಿಕ ತಂತ್ರಜ್ಞಾನ ವಲಯಕ್ಕೆ 52%ರಷ್ಟು ಉದ್ಯೋಗಿಗಳನ್ನು ಕರ್ನಾಟಕವೇ ಪೂರೈಕೆ ಮಾಡುತ್ತದೆ ಎಂದು ಹೇಳಿದರು. ಇದನ್ನೂ ಓದಿ: ನವೆಂಬರ್ ಅಂತ್ಯದಿಂದ ಡಿಸೆಂಬರ್‌ವರೆಗೂ ಅಧಿಕ ಚಳಿ: ಹವಾಮಾನ ತಜ್ಞ ಸಿ.ಎಸ್. ಪಾಟೀಲ್

ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ಬೆಂಗಳೂರನ್ನು ಕೇಂದ್ರವಾಗಿಟ್ಟುಕೊಂಡು ಸಾರ್ವಜನಿಕ ಉದ್ದಿಮೆಗಳನ್ನು ಸ್ಥಾಪಿಸಿದ ಕಾರಣಕ್ಕೆ ಇಂದು ನಮ್ಮ ನಗರ ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ಹಲವಾರು ಶಿಕ್ಷಣತಜ್ಞರು ಹೆಸರಾಂತ ಎಂಜಿನಿಯರಿಂಗ್ ಕಾಲೇಜುಗಳು, ತಂತ್ರಜ್ಞಾನ ಸಂಸ್ಥೆಗಳನ್ನು ಸ್ಥಾಪಿಸಿದ ಕಾರಣಕ್ಕೆ ಇಂದು ಬೆಂಗಳೂರು ತನ್ನ ಅಸ್ತಿತ್ವವನ್ನು ಕಾಪಾಡಿಕೊಂಡಿದೆ. ಬೆಂಗಳೂರು ಬೆಳವಣಿಗೆಗೆ ನೆಹರು ಅವರು ಹಾಗೂ ಅನೇಕರ ದೂರದೃಷ್ಟಿಯ ಕೊಡುಗೆಯಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕೊಲೆ ಯತ್ನ ಕೇಸ್; ನಟ ತಾಂಡವೇಶ್ವರ್ ಅರೆಸ್ಟ್- ಕಮಿಷನರ್ ದಯಾನಂದ್ ಹೇಳೋದೇನು?

TECH SUMMIT 2024 1

ಅಜೀಂ ಪ್ರೇಮ್ ಜೀ ಅವರು ಮತ್ತು ನಾರಾಯಣ ಮೂರ್ತಿ ಅವರು ಬೆಂಗಳೂರು ಹೊರತು ಪಡಿಸಿ ಬೇರೆ ನಗರಗಳನ್ನು ಆಯ್ಕೆ ಮಾಡಿಕೊಂಡಿದ್ದರೆ ಬೆಂಗಳೂರು ಐಟಿ ಹಬ್ ಬೆಳೆಯುತ್ತಿರಲಿಲ್ಲ. ಸಾವಿರಾರು ಜನರು ತಮ್ಮ ಸ್ಟಾರ್ಟ್ಅಪ್‌ಗಳಿಗೆ ಬೆಂಗಳೂರನ್ನು ಆಯ್ಕೆ ಮಾಡದೇ ಇದ್ದಿದ್ದರೆ ಬೆಂಗಳೂರು ಲಕ್ಷಾಂತರ ಜನರಿಗೆ ಆಸರೆ ಒದಗಿಸುತ್ತಿರಲಿಲ್ಲ ಎಂದು ನುಡಿದರು. ಇದನ್ನೂ ಓದಿ:  ಚಿತ್ರದುರ್ಗ| ಪತಿ ಸಾವಿನಿಂದ ಖಿನ್ನತೆ – ತಾಯಿ, ಮಗಳು ನೇಣಿಗೆ ಶರಣು

ಬೆಂಗಳೂರು ಟೆಕ್ ಸಮ್ಮಿಟ್ ನವೋದ್ಯಮಿಗಳು, ಉದ್ಯಮಿಗಳು, ತಂತ್ರಜ್ಞರು, ಸೃಜನಶೀಲರು ಮತ್ತು ಅಸಾಧಾರಣ ಕನಸುಗಾರರ ಸಮ್ಮೇಳನ. ಕರ್ನಾಟಕ ದಾರ್ಶನಿಕರ, ಆಧುನಿಕ ಚಿಂತಕರ ಭೂಮಿ. ಭಾರತದ ಐಟಿ ಕ್ರಾಂತಿಯ ಹಾಗೂ ಜೈವಿಕ ತಂತ್ರಜ್ಞಾನದ ಹುಟ್ಟೂರು. ಮಾಹಿತಿ ತಂತ್ರಜ್ಞಾನದ ಮೂಲಕ ನಮ್ಮ ರಾಜ್ಯದ ಹೆಸರು ಜಾಗತಿಕ ಮಟ್ಟದಲ್ಲಿದೆ ಎಂದರು. ಇದನ್ನೂ ಓದಿ: ಯು.ಟಿ.ಪಿ ಕಾಲುವೆ ಒಡೆದು 1 ತಿಂಗಳಾದ್ರೂ ದುರಸ್ತಿ ಮಾಡದ ಅಧಿಕಾರಿಗಳು- ಕಂಗಾಲಾದ ರೈತರು

ಕರ್ನಾಟಕವು ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್, ಕಾಮಿಕ್ಸ್ ಮತ್ತು ಎಕ್ಸ್ಟೆಂಡೆಡ್ ರಿಯಾಲಿಟಿ ವಲಯಗಳಲ್ಲಿ ಅಂತಾರಾಷ್ಟ್ರೀಯ ಮಾನದಂಡಗಳನ್ನು ಅನುಸರಿಸುತ್ತಿದೆ. ಈ ವಲಯದಲ್ಲಿ ಜಾಗತಿಕವಾಗಿ ಗುರುತಿಸಿಕೊಂಡಿರುವ ನಮ್ಮ ಕರ್ನಾಟಕವು 2025ರ ವೇಳೆಗೆ ಈ ಕ್ಷೇತ್ರದಲ್ಲಿ ಸುಮಾರು 25,000 ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಗುರಿ ಹೊಂದಿದೆ. ಈ ಕ್ಷೇತ್ರಕ್ಕೆ ಬೆಂಬಲವಾಗಿ ನಿಂತ ಪರಿಣಾಮ ಸುಮಾರು 70% ರಷ್ಟು ಉದ್ಯೋಗ ಸೃಷ್ಟಿಯಾಗಿಯಾಗಿದೆ ಎಂದು ತಿಳಿಸಿದರು.  ಇದನ್ನೂ ಓದಿ: Tumakuru| ಶಾಲಾ ಶಿಕ್ಷಕಿಯ ವಾಹನ ಅಡ್ಡಗಟ್ಟಿ ಸರಗಳ್ಳತನ

TAGGED:bengaluruDK ShivakumarkarnatakaTech Summit 2024technologyಕರ್ನಾಟಕಕಾಂಗ್ರೆಸ್ಟೆಕ್ ಸಮ್ಮಿಟ್ 2024ಡಿಕೆ ಶಿವಕುಮಾರ್ತಂತ್ರಜ್ಞಾನಬೆಂಗಳೂರು
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

Ramanagar Monkey
Districts

ವೃದ್ಧೆ ಸಾವಿಗೆ ಮರುಗಿದ ಮಂಗ – ಮೃತದೇಹದ ಮೇಲೆ ಮಲಗಿ ಮೂಕರೋಧನೆ

Public TV
By Public TV
20 minutes ago
Accident on bengaluru mysuru expressway car overturns on side road
Districts

ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ – ಪಕ್ಕದ ರಸ್ತೆಗೆ ಉರುಳಿಬಿದ್ದ ಕಾರು

Public TV
By Public TV
50 minutes ago
income tax returns
Latest

ಆದಾಯ ತೆರಿಗೆ ಪದ್ದತಿಯಲ್ಲಿ ಏನು ಬದಲಾವಣೆ? ಇಲ್ಲಿದೆ ಪೂರ್ಣ ವಿವರ

Public TV
By Public TV
1 hour ago
gajendra elephant
Bengaluru City

ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ

Public TV
By Public TV
1 hour ago
AI Image
Bagalkot

ಹೆಚ್ಚಾದ ಬಿಸಿಲು – ಉ.ಕರ್ನಾಟಕದ 4 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

Public TV
By Public TV
1 hour ago
g.parameshwara 2
Bengaluru City

ಗೃಹಸಚಿವ ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಪೋಸ್ಟ್‌ – ಸುಮೋಟೋ ಕೇಸ್ ದಾಖಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?