Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕರ್ನಾಟಕದ 14 ಕ್ಷೇತ್ರಗಳ ಚುನಾವಣೆ ಅಂತ್ಯ-ಶೇ. 67.67 ಮತದಾನ

Public TV
Last updated: April 18, 2019 9:38 pm
Public TV
Share
4 Min Read
vote
SHARE

-ಮತದಾನದಲ್ಲಿ ಮಂಡ್ಯ ಫಸ್ಟ್, ಬೆಂಗಳೂರು ಉತ್ತರ ಲಾಸ್ಟ್

ಬೆಂಗಳೂರು: ಭವಿಷ್ಯದ ಬಲಿಷ್ಠ ಭಾರತಕ್ಕಾಗಿ ಕರ್ನಾಟಕದ ಮೊದಲ ಹಂತದಲ್ಲಿ ದಕ್ಷಿಣಾರ್ಧ ಭಾಗದ 14 ಕ್ಷೇತ್ರಗಳಲ್ಲಿ ನಡೆದ ಚುನಾವಣೆ ಮುಗಿದಿದೆ. ಕಾಂಗ್ರೆಸ್-ಜೆಡಿಎಸ್-ಬಿಜೆಪಿ ಅಭ್ಯರ್ಥಿಗಳ ಭವಿಷ್ಯ ಈಗ ಇವಿಎಂ-ವಿವಿಪ್ಯಾಟ್‍ಗಳಲ್ಲಿ ಭದ್ರವಾಗಿದ್ದು, ಸ್ಟ್ರಾಂಗ್‍ರೂಂ ಸೇರಿವೆ. ಚುನಾವಣೆ ನಡೆದ ಕರ್ನಾಟಕದ 14 ಕ್ಷೇತ್ರಗಳಲ್ಲಿ ಶೇ. 67.67 ಮತದಾನವಾಗಿದೆ.

Contents
-ಮತದಾನದಲ್ಲಿ ಮಂಡ್ಯ ಫಸ್ಟ್, ಬೆಂಗಳೂರು ಉತ್ತರ ಲಾಸ್ಟ್ಎಲ್ಲೆಲ್ಲಿ ಎಷ್ಟು ಮತದಾನ?

ಎಲ್ಲೆಲ್ಲಿ ಎಷ್ಟು ಮತದಾನ?

1. ಮಂಡ್ಯ: ಸಕ್ಕರೆ ನಾಡು ಮಂಡ್ಯದ 2014ರ ಚುನಾವಣೆಯಲ್ಲಿ ಶೇ.71.47ರಷ್ಟು ಮತದಾನವಾಗಿತ್ತು. ಇಂದು ನಡೆದ ಚುನಾವಣೆಯಲ್ಲಿ ಶೇ.79.98 ರಷ್ಟು ಮತದಾನವಾಗಿದೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆಯಾಗಿದ್ದರಿಂದ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಬೆಂಬಲ ಸೂಚಿಸಿದೆ. ನಟ ಅಂಬರೀಶ್ ಪತ್ನಿ ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಬಿಜೆಪಿ ಸಹ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಸುಮಲತಾರಿಗೆ ಬೆಂಬಲ ಸೂಚಿಸಿತ್ತು.

Vote HDK Family

2. ಹಾಸನ: ಜೆಡಿಎಸ್ ಭದ್ರಕೋಟೆ ಎಂದು ಕರೆಸಿಕೊಳ್ಳುವ 2014ರ ಹಾಸನದ ಚುನಾವಣೆಯಲ್ಲಿ ಶೇ.73.49ರಷ್ಟು ಮತದಾನ ಆಗಿತ್ತು. ಇಂದು ನಡೆದ ಚುನಾವಣೆಯಲ್ಲಿ ಶೇ.77.28 ರಷ್ಟು ಮತದಾನವಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಕ್ಷೇತ್ರವನ್ನು ತ್ಯಾಗ ಮಾಡಿ ತುಮಕೂರುದಿಂದ ಸ್ಪರ್ಧೆ ಮಾಡಿದ್ದಾರೆ. ಕಾಂಗ್ರೆಸ್‍ನಿಂದ ಹೊರ ಬಂದ ಮಾಜಿ ಸಚಿವ ಎ.ಮಂಜು ಬಿಜೆಪಿ ಬಾವುಟ ಹಿಡಿದು ಕಣದಲ್ಲಿದ್ದಾರೆ.

3. ತುಮಕೂರು: ಕಲ್ಪವೃಕ್ಷಗಳ ನಾಡು ತುಮಕೂರಿನ 2014ರ ಚುನಾವಣೆಯಲ್ಲಿ ಶೇ.72.57 ಮತದಾನವಾಗಿತ್ತು. ಇಂದು ನಡೆದ ಚುನಾವಣೆಯಲ್ಲಿ ಶೇ.77.01 ರಷ್ಟು ಮತದಾನವಾಗಿದೆ. ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ನಿಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಬಿಜೆಪಿಯಿಂದ ಜಿ.ಎಸ್.ಬಸವರಾಜು ಕಣದಲ್ಲಿದ್ದಾರೆ.

Vote Star

4. ಮೈಸೂರು: ಅರಮನೆಗಳ ನಗರಿ ಮೈಸೂರು-ಕೊಡಗು ಕ್ಷೇತ್ರದ 2014ರ ಚುನಾವಣೆಯಲ್ಲಿ ಶೇ.68.72 ರಷ್ಟು ಮತದಾನವಾಗಿತ್ತು. ಇಂದು ನಡೆದ ಚುನಾವಣೆಯಲ್ಲಿ ಶೇ.67.24ರಷ್ಟು ಮತದಾನವಾಗಿದೆ. ಕಾಂಗ್ರೆಸ್‍ನಿಂದ ವಿಜಯ್ ಶಂಕರ್, ಬಿಜೆಪಿಯಿಂದ ಪ್ರತಾಪ್ ಸಿಂಹ ಕಣದಲ್ಲಿರುವ ಪ್ರಮುಖ ಸ್ಪರ್ಧಿಗಳಾಗಿದ್ದಾರೆ.

5. ಚಿಕ್ಕಬಳ್ಳಾಪುರ: ಕಾಂಗ್ರೆಸ್ ಭದ್ರಕೋಟೆ ಎಂದು ಕರೆಸಿಕೊಳ್ಳುವ ಚಿಕ್ಕಬಳ್ಳಾಪುರದ 2014ರ ಚುನಾವಣೆಯಲ್ಲಿ ಶೇ.76.21ರಷ್ಟು ಮತದಾನವಾಗಿತ್ತು. ಇಂದು ನಡೆದ ಚುನಾವಣೆಯಲ್ಲಿ ಶೇ.76.14 ರಷ್ಟು ಮತದಾನವಾಗಿದೆ. ಕಾಂಗ್ರೆಸ್‍ನಿಂದ ಎಂ.ವೀರಪ್ಪ ಮೊಯ್ಲಿ, ಬಿಜೆಪಿಯಿಂದ ಬಿ.ಎನ್.ಬಚ್ಚೇಗೌಡ ಮತ್ತು ಬಿಎಸ್‍ಪಿ ಪಕ್ಷದಿಂದ ಸಿ.ಎಸ್.ದ್ವಾರಕನಾಥ್ ಚಿಕ್ಕಬಳ್ಳಾಪುರ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು.

6. ಚಾಮರಾಜನಗರ: 2014ರ ಚುನಾವಣೆಯಲ್ಲಿ ಶೇ.72.85 ರಷ್ಟು ಮತದಾನ ಆಗಿತ್ತು. ಇಂದು ನಡೆದ ಚುನಾವಣೆಯಲ್ಲಿ ಶೇ.73.45 ರಷ್ಟು ಮತದಾನವಾಗಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಧೃವ ನಾರಾಯಣ್ ಮತ್ತು ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ಪ್ರಸಾದ್ ಕಣದಲ್ಲಿದ್ದಾರೆ.

Vote Old

7. ಕೋಲಾರ: 2014ರ ಚುನಾವಣೆಯಲ್ಲಿ ಶೇ.75.51 ರಷ್ಟು ಮತದಾನವಾಗಿತ್ತು. ಈ ಬಾರಿ ಶೇ.75.94 ರಷ್ಟು ಮತದಾನ ನಡೆದಿದೆ. ಕಾಂಗ್ರೆಸ್‍ನಿಂದ ಕೆ.ಎಚ್.ಮುನಿಯಪ್ಪ ಮತ್ತು ಬಿಜೆಪಿಯ ಎಸ್.ಮುನಿಸ್ವಾಮಿ ಕಣದಲ್ಲಿದ್ದಾರೆ.

8. ಬೆಂಗಳೂರು ಉತ್ತರ: 2014ರ ಚುನಾವಣೆಯಲ್ಲಿ ಶೇ. 56.53 ರಷ್ಟು ಮತದಾನವಾಗಿತ್ತು. ಈ ಬಾರಿ ಶೇ.50.03 ರಷ್ಟು ಮತದಾನವಾಗಿದೆ. ರಾಜ್ಯ ಮೈತ್ರಿಯಲ್ಲಿ ಈ ಕ್ಷೇತ್ರ ಜೆಡಿಎಸ್ ಪಾಲಾಗಿತ್ತು. ಸೂಕ್ತ ಅಭ್ಯರ್ಥಿಗಳ ಸಿಗದ ಹಿನ್ನೆಲೆಯಲ್ಲಿ ಜೆಡಿಎಸ್ ಕ್ಷೇತ್ರವನ್ನು ಕಾಂಗ್ರೆಸ್‍ಗೆ ಬಿಟ್ಟುಕೊಟ್ಟಿತ್ತು. ಬಿಜೆಪಿಯಿಂದ ಡಿ.ವಿ.ಸದಾನಂದಗೌಡ ಎರಡನೇ ಬಾರಿ ಬೆಂಗಳೂರು ಉತ್ತರದಲ್ಲಿ ಸ್ಪರ್ಧೆ ಮಾಡಿದ್ದಾರೆ. ಕಾಂಗ್ರೆಸ್‍ನಿಂದ ಸಚಿವ ಕೃಷ್ಣಬೈರೇಗೌಡರು ಸ್ಪರ್ಧೆಯಲ್ಲಿದ್ದಾರೆ.

9. ಬೆಂಗಳೂರು ಗ್ರಾಮಾಂತರ: 2014ರ ಚುನಾವಣೆಯಲ್ಲಿ ಶೇ.66.45 ರಷ್ಟು ಮತದಾನವಾಗಿತ್ತು. ಈ ಬಾರಿ ಶೇ.64.09 ರಷ್ಟು ಮತದಾನವಾಗಿದೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ಸುರೇಶ್ ಮತ್ತು ಬಿಜೆಪಿ ಅಭ್ಯರ್ಥಿಯಾಗಿ ಅಶ್ವಥ್ ನಾರಾಯಣದಲ್ಲಿ ಬೆಂಗಳೂರು ಗ್ರಾಮಾಂತರ ಕಣದಲ್ಲಿರುವ ಪ್ರಮುಖರು.

190418kpn54

10. ಬೆಂಗಳೂರು ಕೇಂದ್ರ: 2014ರ ಚುನಾವಣೆಯಲ್ಲಿ ಶೇ.55.64ರಷ್ಟು ಮತದಾನ ನಡೆದಿತ್ತು. ಈ ಬಾರಿ ಶೇ.49.76 ರಷ್ಟು ಮತದಾನವಾಗಿದೆ. ಬೆಂಗಳೂರು ಕೇಂದ್ರದಿಂದ ಮೊದಲ ಬಾರಿಗೆ ನಟ ಪ್ರಕಾಶ್ ರೈ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ಬಿಜೆಪಿಯಿಂದ ಪಿ.ಸಿ.ಮೋಹನ್ ಮತ್ತು ಕಾಂಗ್ರೆಸ್‍ನಿಂದ ರಿಜ್ವಾನ್ ಅರ್ಷದ್ ಸ್ಪರ್ಧೆ ಮಾಡಿದ್ದಾರೆ. ಹೀಗಾಗಿ ಬೆಂಗಳೂರು ಕೇಂದ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

11. ಬೆಂಗಳೂರು ದಕ್ಷಿಣ: 2014ರ ಚುನಾವಣೆಯಲ್ಲಿ ಶೇ.55.75 ರಷ್ಟು ಮತದಾನವಾಗಿತ್ತು. ಈ ಬಾರಿ ಶೇ.53.53 ರಷ್ಟು ಮತದಾನವಾಗಿದೆ. ಬೆಂಗಳೂರು ದಕ್ಷಿಣದಿಂದ ಯುವ ನಾಯಕ ತೇಜಸ್ವಿ ಸೂರ್ಯರಿಗೆ ಬಿಜೆಪಿ ಟಿಕೆಟ್ ನೀಡಿತ್ತು. ಕಾಂಗ್ರೆಸ್‍ನಿಂದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಕಣದಲ್ಲಿದ್ದಾರೆ.

12. ಚಿತ್ರದುರ್ಗ: 2014ರ ಚುನಾವಣೆಯಲ್ಲಿ ಶೇ.66.07ರಷ್ಟು ಮತದಾನವಾಗಿತ್ತು. ಈ ಬಾರಿ 70.59 ರಷ್ಟು ಮತದಾನ ನಡೆದಿದೆ. ಚಿತ್ರದುರ್ಗದಲ್ಲಿ ಕೈ ಅಭ್ಯರ್ಥಿಯಾಗಿ ಬಿ.ಎನ್.ಚಂದ್ರಪ್ಪ ಮತ್ತು ಬಿಜೆಪಿಯಿಂದ ಎ.ನಾರಾಯಣ ಸ್ವಾಮಿ ಸ್ಪರ್ಧೆಯಲ್ಲಿದ್ದಾರೆ.

Vote Yaduveer

13. ದಕ್ಷಿಣ ಕನ್ನಡ: 2014ರ ಚುನಾವಣೆಯಲ್ಲಿ ಶೇ. 77.15ರಷ್ಟು ಮತದಾನ ಆಗಿತ್ತು. ಈ ಬಾರಿ ಶೇ.77.70 ರಷ್ಟು ಮತದಾನ ನಡೆದಿದೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಳಿನ್ ಕುಮಾರ್ ಕಟೀಲ್, ಕಾಂಗ್ರೆಸ್‍ನಿಂದ ಮಿಥುನ್ ರೈ ಸ್ಪರ್ಧಿಸಿದ್ದಾರೆ.

14. ಉಡುಪಿ-ಚಿಕ್ಕಮಗಳೂರು: 2014ರ ಚುನಾವಣೆಯಲ್ಲಿ ಶೇ.74.56ರಷ್ಟು ಮತದಾನ ನಡೆದಿತ್ತು. ಇಂದು ನಡೆದ ಚುನಾವಣೆಯಲ್ಲಿ ಶೇ.75.26 ರಷ್ಟು ಮತದಾನವಾಗಿದೆ. ಇಲ್ಲಿ ಶೋಭಾ ಕರಂದ್ಲಾಜೆ ಬಿಜೆಪಿ ಅಭ್ಯರ್ಥಿಯಾಗಿ ಎರಡನೇ ಬಾರಿ ಸ್ಪರ್ಧೆ ಮಾಡಿದ್ದರೆ, ಮೈತ್ರಿಯ ಒಮ್ಮತ ಅಭ್ಯರ್ಥಿಯಾಗಿ ಜೆಡಿಎಸ್‍ನಿಂದ ಪ್ರಮೋದ್ ಮಧ್ವರಾಜ್ ಕಣದಲ್ಲಿದ್ದಾರೆ.

TAGGED:BangalorekarnatakaLok Sabha Election 2019mandyaPublic TVvoteಕರ್ನಾಟಕಪಬ್ಲಿಕ್ ಟಿವಿಬೆಂಗಳೂರುಮಂಡ್ಯಮತಲೋಕಸಭಾ ಚುನಾವಣೆ 2019
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Is Dhanush Dating Mrunal Thakur
ಧನುಶ್ ಜೊತೆ ಮೃಣಾಲ್ ಠಾಕೂರ್ ಡೇಟಿಂಗ್?
Cinema Karnataka Latest
Actress Sumalatha condoles the death of Malayalam Actor Shanawas
ʼಕೇರಂ, ಬ್ಯಾಡ್ಮಿಂಟನ್ ಆಡುವಾಗ ಸೆಕೆಂಡ್‍ನಲ್ಲಿ ಸೋಲಿಸುತ್ತಿದ್ದರು’- ಸುಮಲತಾ ನೆನಪು ಹಂಚಿಕೊಂಡಿದ್ದು ಯಾರ ಬಗ್ಗೆ?
Cinema Latest South cinema Top Stories
janaki vs state of kerala
ಜಾನಕಿ V v/s ಸ್ಟೇಟ್ ಆಫ್ ಕೇರಳ ಚಿತ್ರ ಸ್ಟ್ರೀಮಿಂಗ್: ಸ್ವಾತಂತ್ರ್ಯ ದಿನಕ್ಕೆ ಗಿಫ್ಟ್
Cinema Latest South cinema Top Stories
Santhosh balaraj 1
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ
Cinema Latest Sandalwood Top Stories
Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories

You Might Also Like

dk shivakumar 1 1
Bengaluru City

ಬೆಂಗಳೂರಿಗೆ ಮತ್ತೊಂದು ಟನಲ್‌ ರೋಡ್‌ ಘೋಷಿಸಿದ ಡಿಕೆಶಿ

Public TV
By Public TV
37 minutes ago
karnataka High Court
Bengaluru City

ಚಿನ್ನಸ್ವಾಮಿ ಕಾಲ್ತುಳಿತ | ಕುನ್ಹಾ ಆಯೋಗದ ವರದಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿ – ರಾಜ್ಯಕ್ಕೆ ಹೈಕೋರ್ಟ್ ಸೂಚನೆ

Public TV
By Public TV
44 minutes ago
Pralhad Joshi 1
Belgaum

ಬೆಂಗಳೂರು-ಬೆಳಗಾವಿ ನೂತನ `ವಂದೇ ಭಾರತ್’ ರೈಲು; ಆ.10ಕ್ಕೆ ಪ್ರಧಾನಿ ಹಸಿರು ನಿಶಾನೆ – ಸಚಿವ ಪ್ರಹ್ಲಾದ್ ಜೋಶಿ

Public TV
By Public TV
1 hour ago
G Parameshwar Andhra Congress
Bengaluru City

ಪರಮೇಶ್ವರ್ ಪರ ಆಂಧ್ರ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಿಂದ ಮುಂದಿನ ಸಿಎಂ ಘೋಷಣೆ

Public TV
By Public TV
1 hour ago
Young woman dies suspiciously after falling from three story building Kadabagere Nelamangala bengaluru 1
Bengaluru Rural

ಮೂರಂತಸ್ತಿನ ಕಟ್ಟಡದಿಂದ ಬಿದ್ದು ಯುವತಿ ಅನುಮಾನಾಸ್ಪದ ಸಾವು

Public TV
By Public TV
2 hours ago
Raichuru Hatti gold mine program
Districts

ಆ.6ಕ್ಕೆ ರಾಯಚೂರಿಗೆ ಸಿಎಂ, ಡಿಸಿಎಂ – ಹಟ್ಟಿ ಚಿನ್ನದಗಣಿಯ 998 ಕೋಟಿ ಕಾಮಗಾರಿಗೆ ಶಂಕುಸ್ಥಾಪನೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?