ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು (Bengaluru), ಮಂಡ್ಯ, ರಾಮನಗರ, ಬಳ್ಳಾರಿ ಸೇರಿದಂತೆ ರಾಜ್ಯದ ಸುಮಾರು 30 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ನಡೆಸಿದ್ದಾರೆ.
ಬೆಂಗಳೂರು ನಗರದಲ್ಲಿ 10 ಕಡೆ, ಬಳ್ಳಾರಿಯಲ್ಲಿ 7 ಕಡೆ ಸೇರಿದಂತೆ ರಾಜ್ಯಾದ್ಯಂತ ಏಕಕಾಲಕ್ಕೆ 30 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಬಿಬಿಎಂಪಿ ಅಧಿಕಾರಿಗಳು (BBMP Officials) ಸೇರಿದಂತೆ ಇತರ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ. ಇದನ್ನೂ ಓದಿ: ಲೋಕಾ ಚುನಾವಣೆಗೆ ಬಿಜೆಪಿ ತಯಾರಿ – ಸಭೆಯಲ್ಲಿ ಏನಾಯ್ತು? ಇನ್ಸೈಡ್ ವರದಿ ಇಲ್ಲಿದೆ
ಬೆಸ್ಕಾಂ (BESCOM) ಕಚೇರಿಯಲ್ಲಿ ಚೀಫ್ ಜನರಲ್ ಮ್ಯಾನೇಜರ್ ಆಗಿದ್ದ ಎಂ.ಎಲ್ ನಾಗರಾಜ್ ಮನೆ, ಕಚೇರಿಗಳ ಮೇಲೂ ದಾಳಿ ನಡೆದಿದೆ. ಕೆಲ ದಿನಗಳ ಹಿಂದೆ ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದಿದ್ದ ನಾಗರಾಜ್ ಕಳೆದ ಒಂದೂವರೆ ತಿಂಗಳಿನಿಂದ ಅಮಾನತಿನಲ್ಲಿದ್ದರು. ಈಗ ಆತನ ಮನೆಯ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ಹಲವು ಆಸ್ತಿಗಳನ್ನ ಬಯಲಿಗೆಳೆದಿದ್ದಾರೆ. ನಾಗರಾಜ್ ಈ ಹಿಂದೆ ವಾಣಿಜ್ಯ ಲೈಸೆನ್ಸ್ ಕೊಡುವ ವಿಚಾರಕ್ಕೆ 7.50 ಲಕ್ಷ ರೂ. ಲಂಚ ಕೇಳಿದ್ದರು. ನಾಗರಾಜ್ ಪರವಾಗಿ ಡ್ರೈವರ್ ಮುರಳಿಕೃಷ್ಣ 7 ಲಕ್ಷ ರೂ. ಪಡೆದಿದ್ದ, ಹಣ ಪಡೆಯುವಾಗಲೇ ಸಿಕ್ಕಿಬಿದ್ದಿದ್ದರಿಂದ ನಾಗರಾಜ್ ಅವರನ್ನ ಒಂದೂವರೆ ತಿಂಗಳಿನಿಂದ ಅಮಾನತ್ತಿನಲ್ಲಿಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಇದೀಗ ನಾಗರಾಜ್ಗೆ ಸೇರಿದ ಬಳ್ಳಾರಿಯ 7 ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಈ ವೇಳೆ ನಾಗರಾಜ್ ಹೆಸರಲ್ಲಿ 9 ಸೈಟ್ಗಳು, 3 ಮನೆಗಳು, 3 ಪೆಟ್ರೋಲ್ ಬಂಕ್, ಕೃಷಿ ಜಮೀನು, ಶಿಕ್ಷಣ ಸಂಸ್ಥೆಗಳು ಪತ್ತೆಯಾಗಿದೆ. ದಾಳಿ ವೇಳೆ ಹಲವಾರು ದಾಖಲೆಗಳನ್ನ ಪತ್ತೆಹಚ್ಚಿರುವ ಲೋಕಾಯುಕ್ತ ಅಧಿಕಾರಿಗಳು ಶೋಧಕಾರ್ಯ ಮುಂದುವರಿಸಿದ್ದಾರೆ. ಇದನ್ನೂ ಓದಿ: ಅಶ್ಲೀಲ ಪದ ಬಳಸುತ್ತಿದ್ದ, ಖಾಸಗಿ ಅಂಗ ಮುಟ್ಟುತ್ತಿದ್ದ – ಪ್ರಾಧ್ಯಾಪಕನ ವಿರುದ್ಧ 500 ವಿದ್ಯಾರ್ಥಿನಿಯರಿಂದ ಮೋದಿ ಕಚೇರಿಗೆ ಪತ್ರ