Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಾಂಗ್ರೆಸ್ ಮಾಡಿರುವ ಕರ್ಮಕಾಂಡ ಮುಚ್ಚಿಹಾಕಲೆಂದೇ ಲೋಕಾಯುಕ್ತ ಮುಚ್ಚಿದರು: ಬೊಮ್ಮಾಯಿ

Public TV
Last updated: January 23, 2023 4:08 pm
Public TV
Share
3 Min Read
BASAVARAJ BOMMAI 13
SHARE

ಬೆಂಗಳೂರು: ಕಾಂಗ್ರೆಸ್ (Congress) ಮಾಡಿರುವ ಕರ್ಮಕಾಂಡ ಮುಚ್ಚಿಹಾಕಲೆಂದೇ ಲೋಕಾಯುಕ್ತ (Lokayukta) ಸಂಸ್ಥೆಯನ್ನು ಮುಚ್ಚಿಹಾಕಿದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Karnataka Lokayukta

ಭ್ರಷ್ಟಾಚಾರ ನಿಲ್ಲಿಸಿ ಬೆಂಗಳೂರು (Bengaluru) ಉಳಿಸಿ ಎಂದು ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ. ಶೇ.60 ರಷ್ಟು ಪ್ರೀಮಿಯಂ ಬೆಂಗಳೂರಿನಲ್ಲಿ ನೀಡಿರುವ ದಾಖಲೆ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದ ಸರ್ಕಾರದ ದಾಖಲೆಗಳಲ್ಲಿದೆ. ಸುಮಾರು 800 ಕೋಟಿ ರೂ.ಗಳಲ್ಲಿ ಶೇ.60 ರಷ್ಟು ಪ್ರೀಮಿಯಂನ್ನು ದೇಶದಲ್ಲಿ ಎಲ್ಲಿಯಾದರೂ ಕೊಟ್ಟಿದ್ದಾರೆಯೇ? ಇವರು ಅಂತಹ ಶೂರರು. ಇಷ್ಟು ಮುಕ್ತವಾಗಿ 40-60 ಪ್ರೀಮಿಯಂ ಕೊಟ್ಟು ಭ್ರಷ್ಟಾಚಾರ ನಡೆಸಿ, ಭ್ರಷ್ಟಾಚಾರದ ಬಗ್ಗೆ ಮಾತನಾಡಿದರೆ ಅದು ಸೊಗಲಾಡಿತನ. ತಾವು ಮಾಡಿರುವುದನ್ನು ಮುಚ್ಚಿಕೊಳ್ಳುವ ಸಲುವಾಗಿ ಈ ರೀತಿ ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಈಗಾಗಲೇ ಲೋಕಾಯುಕ್ತಕ್ಕೆ ದೂರು ನೀಡಿದೆ. ಆರೋಪ ಮಾಡುತ್ತಿರುವುದರ ಪ್ರಕರಣದ ಬಗ್ಗೆ ವಿವರಗಳನ್ನು ಲೋಕಾಯುಕ್ತಕ್ಕೆ ನೀಡಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿಧಾನಸೌಧದ ಮುಂಭಾಗದಲ್ಲಿ ಬೋಸ್ ಪ್ರತಿಮೆ ಮರು ಪ್ರತಿಷ್ಠಾಪನೆ: ಬೊಮ್ಮಾಯಿ

CONGRESS 4

ನೈತಿಕ ಹಕ್ಕಿಲ್ಲ:
ಲೋಕಾಯುಕ್ತ ಮುಚ್ಚಿದ ಪುಣ್ಯಾತ್ಮರು ಇವರು. 300 ಕಡೆ ಪ್ರತಿಭಟನೆ ಮಾಡುತ್ತಿರುವವರು ಲೋಕಾಯುಕ್ತ ಎಂಬ ಸ್ವತಂತ್ರ, ಸಂವಿಧಾನಬದ್ಧ ಸಂಸ್ಥೆಯನ್ನು ಮುಚ್ಚಿರುವ ಇವರು ನಮಗೆ ಪಾಠ ಹೇಳುತ್ತಾರೆ. ಲೋಕಾಯುಕ್ತ ಯಾಕೆ ಮುಚ್ಚಿದರು? ಇವರ ವಿರುದ್ಧ 59 ಪ್ರಕರಣಗಳು ಮುಖ್ಯಮಂತ್ರಿಗಳ ಸಮೇತವಾಗಿ ದಾಖಲಾಗಿತ್ತು. ಎಸಿಬಿ ತಂದು ಪ್ರಕರಣ ಮುಚ್ಚಿಹಾಕಲು ಬಿ ವರದಿ ಹಾಕಿದರು. ಅವೆಲ್ಲವನ್ನೂ ಲೋಕಾಯುಕ್ತಕ್ಕೆ ಶಿಫಾರಸು ಮಾಡುತ್ತಿದ್ದೇವೆ. ಇವರಿಗೆ ಯಾವ ನೈತಿಕ ಹಕ್ಕಿದೆ. ಲೋಕಾಯುಕ್ತ ಮುಚ್ಚಿದ ಪ್ರಶಸ್ತಿ ಭ್ರಷ್ಟಾಚಾರ ಬೆಂಬಲಿಸಲು, ಅದರ ಪರವಾಗಿ, ಕುಮ್ಮಕ್ಕು ನೀಡಲು, ಭ್ರಷ್ಟಾಚಾರದೊಂದಿಗೆ ಕೈಜೋಡಿಸಿ ಸರ್ಕಾರ ನಡೆಸಿದವರು. ಭ್ರಷ್ಟಾಚಾರ ಇವರ ಸರ್ಕಾರದ ಆಡಳಿತದ ಒಂದು ಭಾಗವಾಗಿದೆ. ಅದಕ್ಕಾಗಿ ಅದನ್ನು ಮುಚ್ಚಿಹಾಕಿದರು. ದಾಖಲೆ ಸಮೇತ ದೂರು ನೀಡಿದರೆ ವಿಚಾರಣೆಯನ್ನೂ ಮುಚ್ಚಿಹಾಕುವ ಕೆಲಸ ಮಾಡಿದ್ದಾರೆ. ತಾವು ಮಾಡಿರುವ ಕೆಲಸವನ್ನು ಮುಚ್ಚಿಕೊಳ್ಳಲು ಈ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಾಧುಸ್ವಾಮಿ ಮೊದಲು ಮಾತಾಡಲಿ- ಸಚಿವರ ಹೇಳಿಕೆಗೆ ಸಿಎಂ ವ್ಯಂಗ್ಯ

BASAVARAJ BOMMAI 1 8

ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ:
ಜನ ಇದನ್ನು ಒಪ್ಪುವುದಿಲ್ಲ. ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಎಂದರೆ ನಿಜವಾಗಿಯೂ ಹಾಸ್ಯಾಸ್ಪದ. ಇದು ನ್ಯಾಯವೇ ಎಂದು ಪ್ರಶ್ನಿಸಿದರು. ತಮ್ಮ ಕೈಗೆ ಹತ್ತಿರುವ ಮಸಿಯನ್ನು ಮೊದಲು ನೋಡಿಕೊಳ್ಳಲಿ. ತಮ್ಮ ಎಲೆಯಲ್ಲಿ ಕತ್ತೆ ಬಿದ್ದಿರುವುದನ್ನು ನೋಡಿಕೊಳ್ಳಲಿ ಎಂದು ವ್ಯಂಗ್ಯವಾಡಿದ್ದಾರೆ.

ಜನ ಬೆಂಬಲವಿದೆ:
ಪ್ರಧಾನಿಗಳನ್ನು ಹಿಟ್ಲರ್ ಎಂದು ಕರೆದಿರುವ ಬಗ್ಗೆ ಪ್ರತಿಕ್ರಿಯಿಸಿ, ಟೀಕೆಗಳನ್ನು ನಾನು ಯಶಸ್ಸಿನ ಮೆಟ್ಟಿಲುಗಳನ್ನಾಗಿ ಮಾಡಿಕೊಳ್ಳುತ್ತೇನೆ. ಪ್ರಧಾನಿಗಳು ವಿಶ್ವವ್ಯಾಪಿ ನಾಯಕರು. ಇಡೀ ಭಾರತ ದೇಶದಲ್ಲಿ ಜನಮನ್ನಣೆ ಗಳಿಸಿದವರು. ಅವರ ಬಗ್ಗೆ ಇರುವ ಸದಭಿಪ್ರಾಯ ಬಹುತೇಕ ಯಾವುದೇ ಪ್ರಧಾನಿಗಳಿಗಿಲ್ಲ. ಅಂತವರ ಬಗ್ಗೆ ಮಾತನಾಡಿದರೆ ಜನ ನಂಬುವುದಿಲ್ಲ. ಆಕಾಶಕ್ಕೆ ಉಗುಳಿದಂತೆ. ಗುಜರಾತ್‍ನಲ್ಲಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ಕಾಂಗ್ರೆಸ್ ನಾಯಕಿ ಮೋತ್ ಕಾ ಸೌದಾಗರ್ ಎಂದಿದ್ದರು. ಆಗ ಅವರಿಗೆ ಹೆಚ್ಚು ಮತ ದೊರೆತು ಜಾಸ್ತಿ ಸ್ಥಾನಗಳು ದೊರೆಯಿತು. ಅವರು ಏನು ಹೇಳುತ್ತಾರೋ ಹೇಳಲಿ ಜನಬೆಂಬಲ ನಮ್ಮ ಜೊತೆಗಿದೆ. ಇನ್ನಷ್ಟು ಬೆಂಬಲ ಹೆಚ್ಚಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಮೊದಲು ಬಸವರಾಜ ಬೊಮ್ಮಾಯಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿಂದ ಅಂಗವಾಗಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ನಮನ ಸಲ್ಲಿಸಿದ್ದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Basavaraj Bommaikarnatakalokayuktaಎಸಿಬಿಕಾಂಗ್ರೆಸ್ಬಸವರಾಜ ಬೊಮ್ಮಾಯಿಲೋಕಾಯುಕ್ತ
Share This Article
Facebook Whatsapp Whatsapp Telegram

You Might Also Like

Ravindra Jadeja Shubman Gill 2
Cricket

ಜೈಸ್ವಾಲ್‌ ಅರ್ಧಶತಕ – ಶತಕ ಸಿಡಿಸಿ ಕೊಹ್ಲಿ ಸಾಧನೆ ಸರಿಗಟ್ಟಿದ ಗಿಲ್‌

Public TV
By Public TV
7 hours ago
weather
Districts

ಉತ್ತರ ಕನ್ನಡದ 2 ತಾಲೂಕು, ಕೊಡಗಿನ ಶಾಲೆಗಳಿಗೆ ಗುರುವಾರ ರಜೆ

Public TV
By Public TV
7 hours ago
warden head kitchen assistant not coming to hostel bilagi bagalkote 1
Bagalkot

ಡ್ಯೂಟಿಗೆ ಚಕ್ಕರ್ ಪಗಾರ್‌ಗೆ ಹಾಜರ್ – ಹಾಸ್ಟೆಲಿಗೆ ಬರುತ್ತಿಲ್ಲ ವಾರ್ಡನ್‌, ಮುಖ್ಯ ಅಡುಗೆ ಸಹಾಯಕ!

Public TV
By Public TV
8 hours ago
Microsoft
Latest

9 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾದ ಮೈಕ್ರೋಸಾಫ್ಟ್‌

Public TV
By Public TV
10 hours ago
Mandya Suicide
Crime

ಪತಿಯಿಂದ ದೂರವಿದ್ದ ತಾಯಿ, ಮಗಳು ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣು

Public TV
By Public TV
8 hours ago
Sir M Vishweshwaraiah Layout
Bengaluru City

ಬಿಡಿಎ ಕಾರ್ಯಾಚರಣೆ – ಸರ್ ಎಂ.ವಿಶ್ವೇಶ್ವರಯ್ಯ ಬಡಾವಣೆಯಲ್ಲಿ 7 ಕೋಟಿ ರೂ. ಆಸ್ತಿ ವಶ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?