Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೀರಾಬಾಯಿ ಕೊಪ್ಪಿಕರ್‌ಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಮೀರಾಬಾಯಿ ಕೊಪ್ಪಿಕರ್‌ಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

Bagalkot

ಮೀರಾಬಾಯಿ ಕೊಪ್ಪಿಕರ್‌ಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

Public TV
Last updated: September 29, 2021 10:18 pm
Public TV
Share
2 Min Read
MIRABAI KOPIKAR
SHARE

ಬಾಗಲಕೋಟೆ: ಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನೀಡುವ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಬಾಗಲಕೋಟೆಯ ಗಾಂಧಿವಾದಿ, ಸ್ವಾತಂತ್ರ್ಯ ಹೋರಾಟಗಾರ್ತಿ ಮೀರಾಬಾಯಿ ಕೊಪ್ಪಿಕರ್, ಹಾಗೂ ಸಿದ್ಧಗಂಗಾ ಶಿಕ್ಷಣ ಸಂಸ್ಥೆ ಹಾಗೂ ಸಿದ್ಧಗಂಗಾ ಮಠವನ್ನು ಆಯ್ಕೆ ಮಾಡಲಾಗಿದೆ.

MIRABAI KOPIKAR 1

ಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ 2020 ಮತ್ತು 2021 ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಕಳೆದ ವರ್ಷದ ಪ್ರಶಸ್ತಿಯನ್ನು ಸರ್ಕಾರ ಪ್ರಕಟಿಸಿರಲಿಲ್ಲ. ಈ ವರ್ಷ ಕೋವಿಡ್ ಪ್ರಕರಣ ಕಡಿಮೆಯಾಗುತ್ತಾ ಬಂದಿರುವ ಹಿನ್ನೆಲೆಯಲ್ಲಿ, ಸರ್ಕಾರವು ಈಬಾರಿ ಪ್ರಶಸ್ತಿಗಳನ್ನು ಪ್ರದಾನ ಮಾಡಲು ಇಚ್ಚಿಸಿದೆ. ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಕರ್ನಾಟಕ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಅಶೋಕ್ ಬಂಗಾರೆಪ್ಪಾ ಹಿಂಚಿಗೇರಿ ಇವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು. ಇದನ್ನೂ ಓದಿ: ಬಿಸಿಯೂಟ ಯೋಜನೆಗೆ ‘ಪಿಎಂ ಪೋಷಣ್’ ಮರುನಾಮಕರಣ ಮಾಡಿದ ಕೇಂದ್ರ

siddaganga mutt

ಆಯ್ಕೆ ಸಮಿತಿಯು 2020ರ ಸಾಲಿಗೆ ಬಾಗಲಕೋಟೆ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರಾದ ಮೀರಾಬಾಯಿ ಕೊಪ್ಪಿಕರ್ ಮತ್ತು 2021ನೇ ಸಾಲಿಗೆ ಶ್ರೀ ಸಿದ್ಧಗಂಗಾ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಸಿದ್ಧಗಂಗಾ ಮಠವನ್ನು ಪ್ರಶಸ್ತಿಗೆ ಆಯ್ಕೆಮಾಡಿದೆ. ಅಕ್ಟೋಬರ್ 2ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯಂದು ಬೆಂಗಳೂರಿನ ಗಾಂಧಿಭವನದಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ತಲಾ ಐದು ಲಕ್ಷ ರೂ. ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಗುತ್ತಿದೆ. ಮೀರಾಬಾಯಿ ಹುಬ್ಬಳ್ಳಿಯ ಅತ್ಯಂತ ಶ್ರೀಮಂತರಾಗಿದ್ದ ಕೊಪ್ಪಿಕರ್ ವಂಶದ ಕುಡಿ. ಇವರಿಗೆ 96 ವರ್ಷವಾಗಿದ್ದು, ಸದ್ಯ ಮುಧೋಳದಲ್ಲಿರುವ ವಾತ್ಸಲ್ಯ ಧಾಮದಲ್ಲಿ ವಾಸ್ತವ್ಯ ಮಾಡುತ್ತಿದ್ದಾರೆ.

MIRABAI KOPIKAR 2

ಗಾಂಧಿವಾದಿಯಾಗಿದ್ದ ಕೊಪ್ಪಿಕರ್ ಇವರು ಇತ್ತೀಚಿನವರೆಗೂ ತಾವೇ ನೂಲು ನೇಯ್ದು ಅದರಲ್ಲಿ ವಸ್ತ್ರವನ್ನು ಮಾಡಿಕೊಳ್ಳುತ್ತಿದ್ದರು. ಈಗ ವಯಸ್ಸಾದ ನಿಮಿತ್ತ ನೇಯ್ಗೆ ಮಾಡುತ್ತಿಲ್ಲ. ಗಾಂಧಿವಾದಿಗಳಾಗಿದ್ದ ಮೀರಾಬಾಯಿ ಕೊಪ್ಪಿಕರ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಸಬರಮತಿ ಆಶ್ರಮದಲ್ಲಿ ಇದ್ದರು. ವಿನೋಬಾ ಭಾವೆಯವರ ಜೊತೆಗೂಡಿ ಭೂದಾನ ಚಳವಳಿಯಲ್ಲಿ ಪಾಲ್ಗೊಂಡು, ಕರ್ನಾಟಕದಿಂದ ಒಟ್ಟು 40 ಸಾವಿರ ಎಕರೆ ಭೂಮಿಯನ್ನು ದಾನ ಮಾಡಿಸುವಲ್ಲಿ ಯಶಸ್ವಿಯಾಗಿದ್ದರು.

MIRA BAI KOPIKAR

ಸಾವಯವ ಕೃಷಿ ಮಾಡುತ್ತಿದ್ದ ಇವರು ತಾವೇ ಬೆಳೆದ ವಸ್ತುಗಳನ್ನು ಮಾರಿ ಅದರಲ್ಲಿ ಬಂದ ಆದಾಯದಿಂದ ಜೀವನ ಮಾಡುತ್ತಿದ್ದರು. ವಾತ್ಸಲ್ಯ ಧಾಮ ವಿನೋಬಾ ಭಾವೆಯವರ ತಾಯಿ ಮೂಲ ಜಮಖಂಡಿಯವರಾದ ರುಕ್ಮಿಣಿ ಭಾವೆಯವರದ್ದಾಗಿದ್ದು, ಮುಧೋಳದಲ್ಲಿ ಅವರು 2.5 ಎಕರೆ ಜಾಗವನ್ನು ಕೊಂಡು ಅದರಲ್ಲಿ ಆಶ್ರಮ ನಿರ್ಮಿಸಿದ್ದರು. ಆರಂಭದಲ್ಲಿ 20 ಜನರಿದ್ದರು. ಈಗ ಮೂರು ಜನರಷ್ಟೇ ವಾಸ ಮಾಡುತಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತಷ್ಟು ಇಳಿಕೆ ಕಂಡ ಕೊರೊನಾ ಪ್ರಕರಣ – ಇಂದು 539 ಕೇಸ್, 17 ಸಾವು

ಕೊಪ್ಪಿಕರ್ ಅವರಿಗೆ 2008 ರಲ್ಲಿ ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿತ್ತು. ಪ್ರಶಸ್ತಿಯನ್ನು ಇವರಿಗೆ ಕೊಡಲು ಆಗಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೇ ಆಶ್ರಮಕ್ಕೆ ಆಗಮಿಸಿ, ಚೆಕ್ ಹಾಗೂ ಮೂರು ಗ್ರಾಂ ಬಂಗಾರದ ಪದಕವನ್ನು ಕೊಟ್ಟಿದ್ದರು. ಅವರು ನೀಡಿದ ಚೆಕ್ ಹಣ ಇನ್ನೂ ಬ್ಯಾಂಕ್‍ನಲ್ಲಿದ್ದು, ಅದನ್ನು ಜನತೆಯ ಕಲ್ಯಾಣಕ್ಕೆ ಬಳಸಲು ಹೇಳಿದ್ದಾರೆ. ಬಂಗಾರದ ಪದಕವನ್ನು ಬಡವರಿಗೆ ದಾನ ಮಾಡಿದ್ದಾರೆ.

TAGGED:bagalkotkarnatakaMahatma Gandhi Seva AwardMirabai KoppikarPublic TVಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಪಬ್ಲಿಕ್ ಟಿವಿಬಾಗಲಕೋಟೆಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಮೀರಾಬಾಯಿ ಕೊಪ್ಪಿಕರ್ಸಿದ್ಧಗಂಗಾ ಮಠ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
3 hours ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
3 hours ago
Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
4 hours ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
4 hours ago
01 13
Big Bulletin

ಬಿಗ್‌ ಬುಲೆಟಿನ್‌ 18 April 2026 ಭಾಗ-1

Public TV
By Public TV
4 hours ago
02 13
Big Bulletin

ಬಿಗ್‌ ಬುಲೆಟಿನ್‌ 18 April 2026 ಭಾಗ-2

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?