ಬೆಂಗಳೂರು:ಪಾದಯಾತ್ರೆ(Padayatra) ಅಂದ್ರೆ ನಮ್ ತಾಯಾಣೆ ಹೀಗೆ ಅಂತ ಗೊತ್ತಿರಲಿಲ್ಲ ಎಂದು ಹೇಳುವ ಮೂಲಕ ವಸತಿ ಸಚಿವ ವಿ. ಸೋಮಣ್ಣ(V Somanna) ರಾಹುಲ್ ಗಾಂಧಿ ಪಾದಯಾತ್ರೆಯನ್ನು ವ್ಯಂಗ್ಯಮಾಡಿದ್ದಾರೆ.
ಭಾರತ್ ಜೋಡೋ(Bharat Jodo Yatra) ಪಾದಯಾತ್ರೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸುಲ್ತಾನ್ ಬತ್ತೇರಿ ಇಂದ ಗುಂಡ್ಲುಪೇಟೆ ವರೆಗೂ 60 ಕಿ.ಮೀ ಇದೆ. ಪಾದಯಾತ್ರೆ ಅಂದರೆ ನಡೆದುಕೊಂಡು ಹೋಗುವುದು ಅಂದುಕೊಂಡಿದ್ದೆ. ಆದರೆ ವಾಹನ ಹತ್ತಿ ಓಡಾಡುವುದು ಅಂದುಕೊಂಡಿರಲಿಲ್ಲ.ರಾಹುಲ್ ಗಾಂಧಿ ಪಾದಯಾತ್ರೆ ಹೀಗೆ ಅಂತ ಗೊತ್ತಿಲ್ಲ ಎಂದು ಹೇಳಿದರು.
ರಾಹುಲ್ ಗಾಂಧಿ(Rahul Gandhi) ಅವರ ಭಾರತ್ ಜೋಡೋ ಪಾದಯಾತ್ರೆ ಇಂದು ಕರ್ನಾಟಕ ಪ್ರವೇಶಿಸಿದೆ. ಇಂದು ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ನಾಯಕರು ಸ್ವಾಗತ ಮಾಡಿದರು. ಇದನ್ನೂ ಓದಿ: ಸಿದ್ದು, ಡಿಕೆಶಿ ಮಧ್ಯೆ ಮುಸುಕಿನ ಗುದ್ದಾಟ – ರಾಹುಲ್ ಎದುರೇ ಒಬ್ಬರಿಗೊಬ್ಬರು ಠಕ್ಕರ್
ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 14 ರ ವರೆಗೆ ಒಟ್ಟು 15 ದಿನ ರಾಹುಲ್ ಪಾದಯಾತ್ರೆ ಕರ್ನಾಟಕದಲ್ಲಿ ನಡೆಯಲಿದೆ.