Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಡಿನ ಜನತೆ ಬಿಜೆಪಿ ವಿರುದ್ಧ ದಂಗೆ ಏಳಬೇಕು: ಸಿಎಂ ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾಡಿನ ಜನತೆ ಬಿಜೆಪಿ ವಿರುದ್ಧ ದಂಗೆ ಏಳಬೇಕು: ಸಿಎಂ ಎಚ್‍ಡಿಕೆ

Districts

ನಾಡಿನ ಜನತೆ ಬಿಜೆಪಿ ವಿರುದ್ಧ ದಂಗೆ ಏಳಬೇಕು: ಸಿಎಂ ಎಚ್‍ಡಿಕೆ

Public TV
Last updated: September 20, 2018 4:38 pm
Public TV
Share
3 Min Read
HDK BJP 2
SHARE

ಹಾಸನ: ಜನಪರ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿರುವ ಬಿಜೆಪಿ ವಿರುದ್ಧ ನಾಡಿನ ಜನತೆ ದಂಗೆ ಏಳಬೇಕೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕರೆ ನೀಡಿದ್ದಾರೆ.

ಚನ್ನರಾಯಪಟ್ಟಣ ತಾಲೂಕಿನ ತೋಟಿ ಗ್ರಾಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಜನಪರ ಸರ್ಕಾರವನ್ನು ಉರುಳಿಸಲು ಬಿಜೆಪಿಯವರು ಮುಂದಾಗಿದ್ದಾರೆ. ಇಂತವರ ವಿರುದ್ಧ ನಾಡಿನ ಜನ ದಂಗೆ ಏಳಬೇಕು. ಈ ನಾಡಿನ ಜನರಿಗೆ ಈ ಪುಣ್ಯ ಭೂಮಿಯಿಂದಲೇ ನಾನು ದಂಗೆಗೆ ಕರೆ ನೀಡುತ್ತೇನೆ. ಅಷ್ಟೇ ಅಲ್ಲದೇ ನನ್ನಿಂದಲೂ ಏನದರೂ ತಪ್ಪಾಗಿದ್ದರೆ ಅಥವಾ ನಾನೇದರೂ ನಿಮಗೆ ದ್ರೋಹವನ್ನು ಮಾಡಿದ್ದರೆ, ಈ ನಾಡಿನ ಜನತೆ ನನ್ನ ವಿರುದ್ಧವೂ ದಂಗೆ ಏಳಿ ಎಂದು ಹೇಳಿದ್ದಾರೆ.

42124743 1851539194894536 5306977434795507712 n

ನಾನು ಮಜಾ ಮಾಡಲು ಮುಖ್ಯಮಂತ್ರಿ ಆಗಿಲ್ಲ. ನಾಡಿನ ಯುವಕರು, ಮಹಿಳೆಯರು ಹಾಗೂ ಅಂಗವಿಕಲರು ಸ್ವಾವಲಂಬಿ ಜೀವನ ನಡೆಸಲು ಶಾಶ್ವತ ವ್ಯವಸ್ಥೆ ಮಾಡುವುದು ನನ್ನ ಕನಸಾಗಿದೆ. ಯಡಿಯೂರಪ್ಪ ಸರ್ಕಾರ ಟೇಕಾಫ್ ಆಗ್ತಿಲ್ಲ ಅಂತ ಹೇಳಿಕೆ ನೀಡುತ್ತಿದ್ದಾರೆ. ಅವರು ಸುಮ್ಮನೇ ಇದ್ದರೆ ಟೇಕಾಫ್ ಆಗುತ್ತೆ. ಈಗಾಗಲೇ ನಾವು ರೈತರ 45 ಸಾವಿರ ಕೋಟಿ ರೂಪಾಯಿ ಸಾಲಮನ್ನಾ ಮಾಡಿದ್ದೇವೆ. ಇನ್ನು ಸ್ವಲ್ಪ ದಿನಗಳಲ್ಲಿ ರಾಜ್ಯದ ಸಹಕಾರಿ ಬ್ಯಾಂಕುಗಳಲ್ಲಿರುವ ರೈತರ ಒಂದು ಲಕ್ಷದ ವರೆಗಿನ ಸುಮಾರು 9,450 ಕೋಟಿ ರೂಪಾಯಿ ಚಾಲ್ತಿ ಸಾಲಮನ್ನಾಗೆ ಆದೇಶ ಸಿದ್ದವಾಗಿದ್ದು, ಶೀಘ್ರದಲ್ಲಿಯೇ ಆದೇಶ ಹೊರಬೀಳಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.

ಪತ್ರಕರ್ತ ಮಿತ್ರರಿಗೆ ನನ್ನ ಮೇಲೆ ಪ್ರೀತಿ ಇದೆ. ಆದರೆ ಮಾಧ್ಯಮಗಳಲ್ಲಿ ಕೆಲವರ ಮೇಲೆ ಬೇರೆ ಬೇರೆ ರೀತಿಯ ಒತ್ತಡ ಹೇರುತ್ತಿದ್ದಾರೆ. ಹೀಗಾಗಿ ಅವರು ಸದಾ ಸರ್ಕಾರ ಬೀಳುತ್ತದೆ ಎನ್ನುವ ಸುದ್ದಿ ಪ್ರಸಾರ ಮಾಡುತ್ತಿದ್ದಾರೆ. ಮಾಧ್ಯಮಗಳು ಮೊದಲು ನನ್ನ ಕಾರ್ಯಕ್ರಮವನ್ನು ಅರ್ಥ ಮಾಡಿಕೊಳ್ಳಬೇಕು. ನನ್ನ ಶಾಸಕರನ್ನು ಯಾರೂ ಸಹ ಹಣ ಕೊಟ್ಟು ಕೊಂಡುಕೊಂಡು ಸರ್ಕಾರ ಉರುಳಿಸಲು ಸಾಧ್ಯವಿಲ್ಲವೆಂದು ಹೇಳಿದರು.

42182165 1851539208227868 8249524907277287424 n

ಇದಾದ ಬಳಿಕ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಪ್ರತಿನಿಧಿಸುವ ಚನ್ನರಾಯಪಟ್ಟಣದ ಉದಯಪುರ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಿಎಂ ಕುಮಾರಸ್ವಾಮಿ ಚಾಲನೆ ನೀಡಿದರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಕುಟುಂಬದ ಮೇಲೆ ಜಿಲ್ಲೆಯ ಋಣಭಾರ ಬಹಳ ಇದೆ. ದೇವೇಗೌಡರು ತಮ್ಮ ಜೀವನದ ಬಹುಕಾಲವನ್ನು ವಿರೋಧ ಪಕ್ಷದಲ್ಲೇ ಕಳೆದಿದ್ದಾರೆ. ಅವರು ಕೇವಲ ನಾಲ್ಕುವರೆ ವರ್ಷ ಮಾತ್ರ ಅಧಿಕಾರದಲ್ಲಿದ್ದರು. ಅವರು ಹೆಚ್ಚು ಕಾಲ ವಿರೋಧ ಪಕ್ಷದಲ್ಲಿದ್ದರೂ ಸಹ ಜಿಲ್ಲೆಯ ಜನತೆ ಅವರೊಂದಿಗೆ ಇದ್ದಾರೆ ಎಂದು ಸಂತೋಷ ಹಂಚಿಕೊಂಡರು.

ನಮ್ಮ ರೇವಣ್ಣನವರಿಗೆ ಆತುರ ಜಾಸ್ತಿ. ಕಳೆದ ಹತ್ತು ವರ್ಷಗಳಲ್ಲಿ ಅವರ ಜಿಲ್ಲೆ ಹಿಂದುಳಿದಿದೆ ಎನ್ನುವ ಬೇಸರ ಅವರಲ್ಲಿದೆ. ಹೀಗಾಗಿ ಅವರು ಒಂದೇ ರಾತ್ರಿಯಲ್ಲಿ ಎಲ್ಲಾ ಕೆಲಸಗಳು ಆಗಬೇಕು ಎನ್ನುವ ಹುಚ್ಚು ಕಲ್ಪನೆಯಲ್ಲಿದ್ದಾರೆ. ಆದರೆ ಅವರೂ ಸಹ ನನ್ನ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು. ಜಿಲ್ಲೆಯ ಅಭಿವೃದ್ಧಿಗೆ ರೇವಣ್ಣನವರು ಅತಿಯಾದ ಉತ್ಸುಕತೆಯನ್ನು ಹೊಂದಿದ್ದಾರೆ ಎನ್ನುವ ಮೂಲಕ ಪ್ರಶಂಸೆ ತೋರಿಸಿದರು.

3333

ಈ ಹಿಂದೆ ಬಿಜೆಪಿ ಜೊತೆಯಲ್ಲಿ ಮೈತ್ರಿಯಲ್ಲಿದ್ದಾಗಲೂ ಒತ್ತಡ ಅನುಭವಿಸಿದ್ದೆ. ಈಗಲೂ ಸಹ ಒತ್ತಡದಿಂದಲೇ ಕಾರ್ಯನಿರ್ವಹಿಸುತ್ತಿದ್ದೇನೆ. ಆದರೆ ನನ್ನ ರಾಜಕೀಯ ಒತ್ತಡದ ಕಾರಣದಿಂದ ನನ್ನ ಜವಾಬ್ದಾರಿಯಿಂದ ನಾನು ಎಂದಿಗೂ ಹಿಂದೆ ಸರಿಯುವವನಲ್ಲ. ಬಿಜೆಪಿಯ ಮಹಾನ್ ನಾಯಕರು ಸರ್ಕಾರ ಟೇಕಾಫ್ ಆಗಿಲ್ಲ ಅಂತಾರೆ. ಅಲ್ಲದೇ ಈ ರಾಜ್ಯದ ಖಜಾನೆಯನ್ನು ಅಪ್ಪ-ಮಕ್ಕಳು ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಾರೆ. ನೀವೇ ಹೇಳಿ ಯಾರಾದರೂ ಸಭ್ಯಸ್ಥರು ಈ ಮಾತನ್ನು ಹೇಳಿದ್ದರೆ, ನಾವು ಕೂಡ ಯೋಚನೆ ಮಾಡಬಹುದಿತ್ತು. ಆದರೆ ಮಾಡಬಾರದ್ದನ್ನು ಮಾಡಿದವರು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಬಿಎಸ್‍ವೈ ವಿರುದ್ಧ ಕಿಡಿಕಾರಿದರು.

BSY 2

ತಪ್ಪು ಮಾಡಿದ್ದವರು ಯಾರೇ ಆಗಲಿ ಅದು ನಮ್ಮ ಕುಟುಂದವರೇ ಇರಲಿ, ಇಲ್ಲಾ ಸಹೋದರನೇ ಇರಲಿ, ನಾನು ಯಾರಿಗೂ ರಾಜಿಯಾಗುವವನಲ್ಲ. ಕಾಂಗ್ರೆಸ್ ಮಾಜಿ ಸಚಿವ ಎ.ಮಂಜುರವರು ರೇವಣ್ಣನವರ ವಿರುದ್ಧ ಭೂ-ಕಬಳಿಕೆ ಆರೋಪದ ಬಗ್ಗೆ ಈಗಾಗಲೇ ಮಾಹಿತಿ ಪಡೆದುಕೊಂಡಿದ್ದೇನೆ. ಶೀಘ್ರವೇ ಇದಕ್ಕೆ ಅಧಿಕಾರಿಗಳೇ ಉತ್ತರ ನೀಡುತ್ತಾರೆ. ರಾಜ್ಯದ ಖಜಾನೆಯನ್ನು ಸುಭದ್ರವಾಗಿಟ್ಟು ಆಡಳಿತ ನಡೆಸಲು ನಾನು ಮುಖ್ಯಮಂತ್ರಿಯಾಗಿರುವುದು ಎಂದು ಹೇಳಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://www.youtube.com/watch?v=hoxHPHIYsCA

TAGGED:bjpBS YadiyurappaCM HD KumaraswamyhassanHD RevannaministerPublic TVಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬಿಜೆಪಿರೇವಣ್ಣಸಚಿವಸಿಎಂ ಹೆಚ್ ಡಿ ಕುಮಾರಸ್ವಾಮಿಹಾಸನಹೆಚ್.ಡಿ
Share This Article
Facebook Whatsapp Whatsapp Telegram

Cinema news

Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood

You Might Also Like

Byrati Basavaraj 1
Bengaluru City

ರೌಡಿಶೀಟರ್ ಕೊಲೆ ಕೇಸ್; ಬೈರತಿ ಬಸವರಾಜ್‌ಗೆ ಒಂದು ದಿನದ ರಿಲೀಫ್

Public TV
By Public TV
5 minutes ago
urus and shivaratri pooja performed Ladle Mashak Dargah aland Kalaburagi 1
Kalaburagi

ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆ; ಮತ್ತೆ 13 ಮಂದಿಗೆ ಪೂಜೆಗೆ ಕೋರ್ಟ್ ಅವಕಾಶ

Public TV
By Public TV
1 hour ago
Yadagiri Stone Mining
Districts

ಯಾದಗಿರಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ – ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ

Public TV
By Public TV
2 hours ago
VIJAYENDRA YATNAL
Latest

ಅಬಕಾರಿ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಏನೂ ಮಾತನಾಡಿಲ್ಲ: ವಿಜಯೇಂದ್ರ ವಿರುದ್ಧ ಯತ್ನಾಳ್ ಕಿಡಿ

Public TV
By Public TV
2 hours ago
TVK Vijay
Latest

ವಿಜಯ್‌ ರ‍್ಯಾಲಿಯಲ್ಲಿ ದುರಂತ – ಸ್ಥಳದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

Public TV
By Public TV
2 hours ago
Ashok Pattana
Bengaluru City

ಇಕ್ಬಾಲ್ ಹುಸೇನ್‌ಗೆ ಸ್ವಲ್ಪ ಮೆಚ್ಯೂರಿಟಿ ಕಡಿಮೆ ಇದೆ – ಅಶೋಕ್ ಪಟ್ಟಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?