Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಅಧಿಕ ಪವನ ವಿದ್ಯುತ್‌ ಸಾಮರ್ಥ್ಯ – ಗುಜರಾತ್‌ ಹಿಂದಿಕ್ಕಿ ಕರ್ನಾಟಕಕ್ಕೆ ಪ್ರಥಮ ಸ್ಥಾನ

Public TV
Last updated: June 15, 2025 10:33 pm
Public TV
Share
3 Min Read
Karnataka placed first in country for highest wind power capacity Karnataka overtakes Gujarat to take first place Pralhad Joshi KJ George 2
SHARE

– ಪವನ ವಿದ್ಯುತ್‌ ವಲಯಕ್ಕೆ ವರ್ಷದಲ್ಲಿ 1331.48 ಮೆ.ವ್ಯಾ. ಸಾಮರ್ಥ್ಯದ ಸೇರ್ಪಡೆ
– ಹನುಮನ ನಾಡಿನಲ್ಲಿ ಪವನ ಶಕ್ತಿಯ ಸಾಧನೆ: ಜೋಶಿ ಶ್ಲಾಘನೆ

ಬೆಂಗಳೂರು: ಕರ್ನಾಟಕ (Karnatraka) 2024-25ನೇ ಸಾಲಿನಲ್ಲಿ ಪವನ ವಿದ್ಯುತ್‌ ಕ್ಷೇತ್ರಕ್ಕೆ (Wind Power Capacity) 1331.48 ಮೆ.ವ್ಯಾ. ಸೇರ್ಪಡೆಗೊಳಿಸುವ ಮೂಲಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಬೆಂಗಳೂರಿನಲ್ಲಿ ಭಾನುವಾರ ಆಯೋಜಿಸಿದ್ದ ʼಗ್ಲೋಬಲ್ ವಿಂಡ್ ಡೇ 2025 ಪವನ್-ಉರ್ಜಾ ಪವರಿಂಗ್‌ ದಿ ಫ್ಯೂಚರ್ ಆಫ್ ಇಂಡಿಯಾ” ಸಮಾರಂಭದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಅವರಿಂದ ಇಂಧನ ಸಚಿವ ಕೆ.ಜೆ.ಜಾರ್ಜ್‌ (KJ George) ಅವರು ಪ್ರಶಸ್ತಿ ಸ್ವೀಕರಿಸಿದರು.

2024-25ನೇ ಸಾಲಿನಲ್ಲಿ ಪವನ ವಿದ್ಯುತ್‌ ವಲಯಕ್ಕೆ 1331.48 ಮೆ.ವ್ಯಾ. ಸಾಮರ್ಥ್ಯ ಸೇಪರ್ಡೆಗೊಳಿಸಿರುವ ರಾಜ್ಯ ಪ್ರಥಮ ಸ್ಥಾನದಲ್ಲಿದ್ದರೆ, 1136.37 ಮೆ.ವ್ಯಾ. ಸಾಮರ್ಥ್ಯವನ್ನು ಸೇರ್ಪಡೆಗೊಳಿಸಿರುವ ತಮಿಳುನಾಡು ಎರಡನೇ ಸ್ಥಾನದಲ್ಲಿದೆ. 954.74 ಮೆ.ವ್ಯಾ ಸೇರ್ಪಡೆಗೊಳಿಸಿರುವ ಗುಜರಾತ್‌ ಮೂರನೇ ಸ್ಥಾನದಲ್ಲಿದೆ. ಇದನ್ನೂ ಓದಿ: ಇರಾನ್‌ನಲ್ಲಿ ಸಿಲುಕಿದ್ದಾರೆ ಕರ್ನಾಟಕದ 9 ವಿದ್ಯಾರ್ಥಿಗಳು – ಭಾರತಕ್ಕೆ ಕರೆತರುವಂತೆ ಮನವಿ

Karnataka placed first in country for highest wind power capacity Karnataka overtakes Gujarat to take first place Pralhad Joshi KJ George 1

ಕಳೆದ ಸಾಲಿನಲ್ಲಿ ಗುಜರಾತ್‌ ಮೊದಲ ಸ್ಥಾನ, ಕರ್ನಾಟಕ ಎರಡನೇ ಸ್ಥಾನ ಹಾಗೂ ತಮಿಳುನಾಡು ಮೂರನೇ ಸ್ಥಾನದಲ್ಲಿತ್ತು. ಪ್ರಸಕ್ತ ಸಾಲಿನಲ್ಲಿ ಈ ಎರಡೂ ರಾಜ್ಯಗಳನ್ನು ಹಿಂದಿಕ್ಕಿ ಕರ್ನಾಟಕ ಅಗ್ರ ಸ್ಥಾನಕ್ಕೇರಿದೆ.

ವಿಶ್ವ ಪವನ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್‌,”2025ರ ಮೇ ವೇಳೆಗೆ ಪವನ ವಿದ್ಯುತ್ತಿನ ಸ್ಥಾಪಿತ ಸಾಮರ್ಥ್ಯ 7,351 ಮೆಗಾವ್ಯಾಟ್‌ನಷ್ಟಿತ್ತು. ಕಳೆದ ಆರ್ಥಿಕ ಸಾಲಿನಲ್ಲಿ 1,331 ಮೆಗಾವ್ಯಾಟ್‌ಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ ಅಗ್ರಮಾನ್ಯ ಸ್ಥಾನದಲ್ಲಿದ್ದೇವೆ,” ಎಂದು ತಿಳಿಸಿದರು.

ಇದು ಕೇವಲ ಅಂಕಿ-ಅಂಶವಲ್ಲ. ನಮ್ಮ ಬದ್ಧತೆ, ಯೋಜನೆಗಳನ್ನು ಕಾರ್ಯಗತಗೊಳಿಸುವ ನಮ್ಮ ಸಾಮರ್ಥ್ಯದ ಪ್ರತೀಕ. ರಾಜ್ಯದ ಕೈಗಾರಿಕೆಗಳಿಗೆ, ನಮ್ಮ ರೈತರಿಗೆ, ಮನೆಗಳಿಗೆ ಶುದ್ಧ ಇಂಧನ ಒದಗಿಸುವ ಇಚ್ಛಾ ಶಕ್ತಿಯಾಗಿದೆಎಂದು ಹೇಳಿದರು. ಇದನ್ನೂ ಓದಿ: ಹೆದರಿ ಬಂಕರ್‌ನಲ್ಲಿ ಕುಳಿತಿದ್ದೆವು, ರಸ್ತೆಗೆ ಇಳಿಯಲ್ಲ – ಇರಾನ್ ದಾಳಿಯ ಭೀಕರತೆ ಬಿಚ್ಚಿಟ್ಟ ಕರ್ನಾಟಕದ ಮಹಿಳೆ

 

Karnataka, a leader in #WindEnergy and the birthplace of Pavan Putra Lord Hanuman, has recognized the significance of wind since Vedic times. #GlobalWindDay #Karnataka #RenewableEnergy pic.twitter.com/W3DVEt7mkW

— Pralhad Joshi (@JoshiPralhad) June 15, 2025

 

ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಕರ್ನಾಟಕದ ಹೆಜ್ಜೆಗಳು ಹೊಸತೇನಲ್ಲ. 2009ರಲ್ಲಿ ನವೀಕರಿಸಬಹುದಾದ ಇಂಧನ ನೀತಿಯನ್ನು ಪ್ರಕಟಿಸಿದ ದೇಶದ ಮೊದಲ ರಾಜ್ಯ ನಮ್ಮದು. ನಾವು ಇಂದು ಈ ಎತ್ತರಕ್ಕೆ ಏರಲು ಅಂದೇ ಅಡಿಪಾಯ ಹಾಕಲಾಗಿತ್ತು. ನವೀಕರಿಸಬಹುದಾದ ಇಂಧನ ನೀತಿ 2022–2027 ನಮ್ಮ ದೂರದೃಷ್ಟಿಯ ಪ್ರತೀಕ. ಕೇವಲ ಸಾಮರ್ಥ್ಯ ಸೇರ್ಪಡೆ ಮಾತ್ರವಲ್ಲದೇ, ನಾವೀನ್ಯತೆ, ಹೂಡಿಕೆ ಮತ್ತು ಸಮಗ್ರ ಬೆಳವಣಿಗೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರೂಪಿಸಲಾದ ನೀತಿ ಇದು. ಐಎಸ್‌ಟಿಎಸ್‌ ಮತ್ತು ಐಎನ್‌ಎಸ್‌ಟಿಎಸ್‌ ಯೋಜನೆಗಳು, ಹೈಬ್ರಿಡ್ ಮಾದರಿಗಳು, ಹಳೆಯ ಟರ್ಬೈನ್‌ಗಳಿಗೆ ಮರುಶಕ್ತಿ ತುಂಬುವುದು ಸೇರಿದಂತೆ ಡಿಜಿಟಲೀಕರಣ ಮತ್ತು ಜಿಯೋ-ಟ್ಯಾಗಿಂಗ್ ಮೂಲಕ ಸುಲಲಿತ ವ್ಯವಹಾರವನ್ನು ಬೆಂಬಲಿಸುತ್ತಿದೆ ಎಂದು ವಿವರಿಸಿದರು.

ಪ್ರಹ್ಲಾದ್‌ ಜೋಶಿ ಮಾತನಾಡಿ,ಕರ್ನಾಟಕದವನಾಗಿ ರಾಜ್ಯ ಪವನ ವಿದ್ಯುತ್‌ ಕ್ಷೇತ್ರದಲ್ಲಿ ಮಾಡಿರುವ ಸಾಧನೆ ಬಗ್ಗೆ ನನಗೆ ಅಪಾರ ಹೆಮ್ಮೆ ಇದೆ. ಇದು ಹನುಮನ ಜನ್ಮ ಭೂಮಿ. ಇಲ್ಲಿ ವಿಶ್ವ ಪವನ ದಿನ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದರು.

“ಪವನ ವಿದ್ಯುತ್ ಸಾಮರ್ಥ್ಯದಲ್ಲಿ ಭಾರತ ಜಾಗತಿಕವಾಗಿ 4ನೇ ಸ್ಥಾನದಲ್ಲಿದ್ದು, 51.5 ಗಿಗಾವ್ಯಾಟ್‌ ಸಾಮರ್ಥ್ಯವನ್ನು ಈಗಾಗಲೇ ಸ್ಥಾಪಿಸಲಾಗಿದೆ. 2030ರ ವೇಳೆಗೆ ಒಟ್ಟಾರೆ ವಿದ್ಯುತ್‌ ಉತ್ಪಾದನೆಯಲ್ಲಿ ನವೀಕರಿಸಬಹುದಾದ ಇಂಧನದ ಪಾಲನ್ನು ಶೇ. 50ಕ್ಕೆ ಏರಿಸುವ ಜತೆಗೆ 2070ರ ವೇಳೆಗೆ ಇಂಗಾಲದ ಹೊರಸೂಸುವಿಕೆ ನಿವ್ವಳ ಶೂನ್ಯದ ಗುರಿ ಸಾಧಿಸಬೇಕಿದೆ. ಈ ನಿಟ್ಟಿನಲ್ಲಿ ಪವನ ವಿದ್ಯುತ್‌ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂಧು ತಿಳಿಸಿದರು.

ಭಾರತದಲ್ಲಿ ಶುದ್ಧ ಇಂಧನದ ಮೂಲಗಳನ್ನು ಅಳವಡಿಸಿಕೊಳ್ಳುವ ಪ್ರಯತ್ನಗಳನ್ನು ಮುಂದುವರೆಸುತ್ತಾ ಜಾಗತಿಕ ಪವನ ದಿನ 2025 ಅನ್ನು ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆಯ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ನನ್ನೊಂದಿಗೆ ಕೇಂದ್ರದ ಮಾನ್ಯ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಶ್ರೀ ಪ್ರಲ್ಹಾದ ಜೋಶಿ, ಕೇಂದ್ರದ ಮಾನ್ಯ ವಿದ್ಯುತ್ ಮತ್ತು ಹೊಸ… pic.twitter.com/QXDb8cuYKM

— KJ George (@thekjgeorge) June 15, 2025

2030ರ ವೇಳೆಗೆ 500 ಗಿಗಾ ವ್ಯಾಟ್‌ ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ಸ್ಥಾಪಿಸಲು ನಾವು ಬದ್ಧರಾಗಿದ್ದು. ಈ ಪೈಕಿ 30 ಗಿಗಾವ್ಯಾಟ್‌ ಕಡಲಾಚೆಯ ಪವನ ಶಕ್ತಿಯೂ ಸೇರಿ ಒಟ್ಟು 100 ಗಿಗಾವ್ಯಾಟ್‌ ಪವನ ವಿದ್ಯುತ್‌ ಕ್ಷೇತ್ರದ್ದಾಗಿರಲಿದೆ. ದೇಶೀಯ ನಿಯೋಜನೆ ಮಾತ್ರವಲ್ಲದೇ ಜಾಗತಿಕ ಶುದ್ಧ ಇಂಧನ ಪೂರೈಕೆ ಸರಪಳಿಗಳ ಭಾಗವಾಗಿಯೂ ದೇಶ ದೃಢ ಹೆಜ್ಜೆ ಇರಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತವು 3.5 ರಿಂದ 4 ಗಿ.ವ್ಯಾ. ಪವನ ಟರ್ಬೈನ್‌ಗಳು ಮತ್ತು ಘಟಕಗಳನ್ನು ರಫ್ತು ಮಾಡಿದೆ ಎಂದು ಹೇಳಿದರು.

TAGGED:gujaratkarnatakaWind Powerಕರ್ನಾಟಕಗುಜರಾತ್ಪವನ ವಿದ್ಯುತ್‌ವಿದ್ಯುತ್
Share This Article
Facebook Whatsapp Whatsapp Telegram

You Might Also Like

Expressway Swift Car Accident
Crime

ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ತಡೆಗೋಡೆಗೆ ಕಾರು ಡಿಕ್ಕಿ – ನಾಲ್ವರ ದುರ್ಮರಣ

Public TV
By Public TV
19 minutes ago
Kota Srinivas Rao
Cinema

750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ವಿಧಿವಶ

Public TV
By Public TV
31 minutes ago
Tamil Nadu Goods Train Fire
Latest

Tamil Nadu | ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಭಾರೀ ಅಗ್ನಿ ಅವಘಡ

Public TV
By Public TV
37 minutes ago
Sinner vs Alcaraz
Latest

Wimbledon Final | ಪ್ರಶಸ್ತಿಗಾಗಿ ಅಲ್ಕರಾಜ್‌ Vs ಸಿನ್ನ‌ರ್ ನಡುವೆ ಕಾದಾಟ – ಹ್ಯಾಟ್ರಿಕ್‌ ಗೆಲ್ಲುವ ತವಕದಲ್ಲಿ ಅಲ್ಕರಾಜ್‌

Public TV
By Public TV
46 minutes ago
Gali Anjaneya Temple Bengaluru
Bengaluru City

ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ – ಕೋರ್ಟ್ ಮೊರೆಹೋದ ಆಡಳಿತ ಮಂಡಳಿ

Public TV
By Public TV
2 hours ago
k.l.rahul test
Cricket

ಕನ್ನಡಿಗ ರಾಹುಲ್‌ ಆಕರ್ಷಕ ಶತಕ; ಇಂಗ್ಲೆಂಡ್‌ ಲೆಕ್ಕ ಚುಕ್ತಾ ಮಾಡಿದ ಟೀಂ ಇಂಡಿಯಾ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?