Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದೆ ವಿಶ್ವಾಸಮತಯಾಚನೆಗೆ ನಿರ್ದೇಶನ ನೀಡಿದಂತೆ ಈ ಪ್ರಕರಣದಲ್ಲೂ ಆದೇಶ ಪ್ರಕಟಿಸಿ: ರೋಹಟಗಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಿಂದೆ ವಿಶ್ವಾಸಮತಯಾಚನೆಗೆ ನಿರ್ದೇಶನ ನೀಡಿದಂತೆ ಈ ಪ್ರಕರಣದಲ್ಲೂ ಆದೇಶ ಪ್ರಕಟಿಸಿ: ರೋಹಟಗಿ

Latest

ಹಿಂದೆ ವಿಶ್ವಾಸಮತಯಾಚನೆಗೆ ನಿರ್ದೇಶನ ನೀಡಿದಂತೆ ಈ ಪ್ರಕರಣದಲ್ಲೂ ಆದೇಶ ಪ್ರಕಟಿಸಿ: ರೋಹಟಗಿ

Public TV
Last updated: July 16, 2019 12:39 pm
Public TV
Share
3 Min Read
mukul rohatgi
SHARE

ನವದೆಹಲಿ: ಈ ಹಿಂದೆ ವಿಶ್ವಾಸಮತಯಾಚನೆ ನಡೆಸಲು ನಿರ್ದೇಶನ ನೀಡಿದಂತೆ ಈ ಪ್ರಕರಣದಲ್ಲೂ ಆದೇಶ ನೀಡಬೇಕೆಂದು ಅತೃಪ್ತ ಶಾಸಕರ ಪರ ವಕೀಲ ಮುಕುಲ್ ರೋಹಟಗಿ ಸುಪ್ರೀಂ ಕೋರ್ಟಿನಲ್ಲಿ ಮನವಿ ಮಾಡಿದರು.

ಅತೃಪ್ತ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್, ನ್ಯಾ.ದೀಪಕ್ ಗುಪ್ತಾ, ಅನಿರುದ್ಧ ಬೋಸ್ ಅವರಿದ್ದ ತ್ರಿಸದಸ್ಯ ಪೀಠದಲ್ಲಿ ನಡೆಯಿತು.

supreme court

ಮೊದಲ ವಾದ ಆರಂಭಿಸಿದ ಮುಕುಲ್ ರೋಹಟಗಿ ಶಾಸಕರು ತಮ್ಮ ಕೈ ಬರಹದಲ್ಲಿ ರಾಜೀನಾಮೆ ನೀಡಿದ್ದಾರೆ. ಈ ಹಿಂದೆ ಉಮೇಶ್ ಜಾಧವ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ರಾಜೀನಾಮೆ ಅಂಗೀಕಾರಕೊಂಡಿತ್ತು. ಆದರೆ ಈಗ ಸ್ಪೀಕರ್ ರಾಜೀನಾಮೆ ಅಂಗೀಕಾರಕ್ಕೆ ತಡ ಮಾಡುತ್ತಿರುವುದು ಯಾಕೆ ಎಂದು ಪ್ರಶ್ನಿಸಿದರು.

rebel congress jds resigns e 1000x582 2

ರೋಹಟಗಿ ವಾದ ಹೀಗಿತ್ತು:
10 ಶಾಸಕರು ಜುಲೈ 10ರಂದೇ ರಾಜೀನಾಮೆ ನೀಡಿದ್ದಾರೆ. ಆರ್ಟಿಕಲ್ 190 ಮತ್ತು ಶೆಡ್ಯೂಲ್ 10ರ ನಡುವೆ ವ್ಯತ್ಯಾಸ ಇದ್ದು ಸ್ಪೀಕರ್ ನಿರ್ಧಾರವನ್ನು ಕೋರ್ಟ್ ಪ್ರಶ್ನಿಸಬಹುದು. ಅನರ್ಹತೆ ಬಾಕಿ ಇರೋದು ರಾಜೀನಾಮೆ ಸ್ವೀಕಾರಕ್ಕೆ ಅಡ್ಡಿಯಾಗಬಾರದು. ಉಮೇಶ್ ಜಾಧವ್ ಮೇಲೆ ಅನರ್ಹತೆ ದೂರು ಇದ್ದರೂ ರಾಜೀನಾಮೆ ಅಂಗೀಕರಿಸಲಾಗಿತ್ತು. ಅದೇ ರೀತಿ ಎಲ್ಲ ಶಾಸಕರು ರಾಜೀನಾಮೆಯನ್ನು ಅಂಗೀಕರಿಸಬೇಕು. ಈ ವಿಚಾರದಲ್ಲಿ ಸ್ಪೀಕರ್ ದ್ವಂದ್ವ ನೀತಿಯನ್ನು ಹೊಂದಿದ್ದಾರೆ. ಶಾಸಕರು ಅನರ್ಹ ಮಾಡುವಂತಹ ತಪ್ಪು ಏನು ಮಾಡಿದ್ದಾರೆ?

Rebel MLA 4

ನನ್ನ ಶಾಸಕರು ಪಕ್ಷ ವಿರೋಧಿ ಚಟುವಟಿಕೆ ಭಾಗಿಯಾಗಿಲ್ಲ. ರಾಜೀನಾಮೆ ನೀಡಿದ ಬಳಿಕ ವಿಪ್ ಜಾರಿಯಾದ್ರೆ ಅನರ್ಹಗೊಳಿಸಲು ಹೇಗೆ ಸಾಧ್ಯ? ಪಕ್ಷಾಂತರ ನಮ್ಮ ಉದ್ದೇಶ ಅಲ್ಲ, ಸರ್ಕಾರದಿಂದ ಹೊರಬರುವುದು ನಮ್ಮ ಉದ್ದೇಶವಾಗಿದೆ. ಶಾಸಕರು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇವೆ ಎಂದು ನ್ಯಾಯಾಲಯಕ್ಕೆ ಸಲ್ಲಿಸಿದ ಅಫಡವಿಟ್ ಮೂಲಕವೇ ಹೇಳಿದ್ದಾರೆ. ಹೀಗಿರುವಾಗ ರಾಜೀನಾಮೆ ಅಂಗೀಕಾರಕ್ಕೆ ವಿಳಂಬ ಮಾಡುವುದು ಸರಿಯೇ?

ನಾನು ಅನರ್ಹತೆ ಪ್ರಕರಣ ಕೈ ಬಿಡುವಂತೆ ಹೇಳಿಲ್ಲ. ಇಲ್ಲಿ ರಾಜೀನಾಮೆ ಸಲ್ಲಿಸಿದ ಬಳಿಕ ಅನಹರ್ತತೆಗೊಳಿಸುವ ಪ್ರಕ್ರಿಯೆ ಆರಂಭವಾಗಿದೆ. ಆರ್ಟಿಕಲ್ 191/2 ರಾಜೀನಾಮೆ ನೀಡುವುದು ಶಾಸಕರ ಹಕ್ಕು. ಈ ಹಕ್ಕನ್ನು ತಡೆಯಲು ಸ್ಪೀಕರ್ ಅವರಿಗೆ ಸಾಧ್ಯವಿಲ್ಲ. ಶಾಸಕರು ಇಷ್ಟಪಟ್ಟಲ್ಲಿ ನಿರ್ಧಾರ ತೆಗೆದುಕೊಳ್ಳಲು ಸರ್ವ ಸ್ವತಂತ್ರರು. ಎಲ್ಲ ಶಾಸಕರು ನಿಯಮಬದ್ಧವಾಗಿಯೇ ರಾಜೀನಾಮೆ ನೀಡಿದ್ದಾರೆ. ಹಾಗಾಗಿ ಈ ಕೂಡಲೇ ಸ್ಪೀಕರ್ ರಾಜೀನಾಮೆಯನ್ನು ಅಂಗೀಕರಿಸಬೇಕು.

RAMESH

ಅನರ್ಹತೆಗೊಳಿಸಲು ಯಾವುದೇ ಕಾರಣ ಇಲ್ಲ. ನಮ್ಮ ಕಕ್ಷಿದಾರರ ಮೇಲೆ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಆರೋಪವನ್ನು ಹೊರಿಸಲಾಗಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರವೂ ಸದನದ ಹೊರಗಿನ ಸಭೆಯಲ್ಲಿ ಭಾಗಿಯಾಗುತ್ತಿಲ್ಲ. ವಿಧಾನಸಭಾ ಕಲಾಪಕ್ಕೆ ಹಾಜರಾಗುವಂತೆ ಒತ್ತಡ ಹಾಕುವುದು ಸರಿಯೇ?

ಒಂದು ವೇಳೆ ವಿರೋಧ ಪಕ್ಷಗಳ ಜೊತೆ ಬಹಿರಂಗವಾಗಿ ಹೇಳಿಕೆ ನೀಡುವ ಮೂಲಕ ಕಾಣಿಸಿಕೊಂಡರೆ ಅನರ್ಹತೆ ಪ್ರಶ್ನೆ ಬರುತ್ತದೆ. ಶಾಸಕಾಂಗ ಸಭೆಯಲ್ಲಿ ಭಾಗಿಯಾಗದ ಕಾರಣ ಅನರ್ಹತೆ ದೂರನ್ನು ನೀಡಲಾಗಿದೆ. ಅನರ್ಹತೆ ಮೂಲಕ ನಮ್ಮ ಶಾಸಕರನ್ನು ಬೆದರಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದರ ಜೊತೆ ವಿಪ್ ಬಳಸಿಕೊಂಡು ನಮ್ಮ ಶಾಸಕರನ್ನು ಸದನಕ್ಕೆ ಬಲವಂತವಾಗಿ ಕರೆತರುವ ಪ್ರಯತ್ನ ಮಾಡಲಾಗುತ್ತಿದೆ. ಅನರ್ಹತೆಯ ಅಸ್ತ್ರದಿಂದ ಸರ್ಕಾರ ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತಿದೆ.

Hearing in the matter of rebel Karnataka MLAs: Mukul Rohatgi submitted before SC, "Umesh Jadhav had resigned and his resignation was accepted." pic.twitter.com/aJO3kAX0Qb

— ANI (@ANI) July 16, 2019

ಆರ್ಟಿಕಲ್ 90ರ ಪ್ರಕಾರ ಶಾಸಕರು ಕೈಬರಹದ ರಾಜೀನಾಮೆ ಪತ್ರ ನೀಡಿದಾಗ ಬೇರೆ ವಿಚಾರ ಪ್ರಸ್ತುತವಾಗುವುದಿಲ್ಲ. ಎಲ್ಲರೂ ನಿಯಮಬದ್ಧವಾಗಿಯೇ, ಸ್ವಇಚ್ಛೆಯಿಂದ ರಾಜೀನಾಮೆ ಕೊಟ್ಟಿದ್ದಾರೆ. ಒಬ್ಬ ವ್ಯಕ್ತಿಗೆ ರಾಜೀನಾಮೆ ನೀಡಲು ಮಿಲಿಯನ್ ಕಾರಣಗಳಿರುತ್ತವೆ. ಕೆಲವರು ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ ತೆಗೆದುಕೊಳ್ಳಬಹುದು. ಇನ್ನೂ ಕೆಲವರು ಬೇರೆ ವೃತ್ತಿಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಮಧ್ಯಪ್ರದೇಶ, ಗೋವಾ ಸೇರಿ ಹಲವು ರಾಜ್ಯಗಳಲ್ಲಿ ರಾಜೀನಾಮೆ ಶೀಘ್ರ ಅಂಗೀಕಾರವಾಗಿದೆ. ಅನರ್ಹತೆ ಕಾರಣ ನೀಡಿ ಕೇರಳದ ಸ್ಪೀಕರ್ ರಾಜೀನಾಮೆ ಅಂಗೀಕಾರ ಮಾಡಿರಲಿಲ್ಲ. ಕೇರಳ ಮತ್ತು ಕರ್ನಾಟಕ ಪ್ರಕರಣಕ್ಕೂ ಬಹಳಷ್ಟು ಸಾಮ್ಯತೆ ಇದೆ. ಸ್ವಇಚ್ಛೆಯಿಂದ ರಾಜೀನಾಮೆ ನೀಡಿಲ್ಲ ಎಂಬುದಕ್ಕೆ ಸ್ಪೀಕರ್ ಬಳಿ ಸಾಕ್ಷಿ ಏನಿದೆ? ಕೂಡಲೇ ರಾಜೀನಾಮೆ ಅಂಗೀಕಾರ ಪ್ರಕರಣವನ್ನು ಇತ್ಯರ್ಥಪಡಿಸಬೇಕು. ಅನರ್ಹತೆಯ ಭೀತಿಯ ಕಾರಣದಿಂದ ರಾಜೀನಾಮೆಯನ್ನು ನೀಡಿಲ್ಲ. ನಾವು ನಿಗದಿತ ಸಮಯದಲ್ಲಿ ರಾಜೀನಾಮೆಯನ್ನು ಅಂಗೀಕಾರ ಮಾಡುವಂತೆ ಮನವಿ ಮಾಡಿಕೊಳ್ಳುತ್ತಿದ್ದೇವೆ. ಮೈತ್ರಿ ಸರ್ಕಾರ ರಚನೆ ವೇಳೆ ರಾಜ್ಯಪಾಲರಿಗೆ ನ್ಯಾಯಾಲಯ ಸೂಚನೆ ನೀಡಿತ್ತು. ಅದೇ ರೀತಿ ಸ್ಪೀಕರ್ ಅವರಿಗೂ ಆದೇಶದ ಮೂಲಕ ಸೂಚನೆಯನ್ನು ರವಾನಿಸಬೇಕು.

supreme court 1 647 111315092739

ರೋಹಟಗಿ ವಾದ ಮಾಡುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಮುಖ್ಯ ನ್ಯಾಯಾಮೂರ್ತಿಗಳು, ಸ್ಪೀಕರ್ ಕಾರ್ಯವ್ಯಾಪ್ತಿಯಲ್ಲಿ ನಾವು ಹಸ್ತಕ್ಷೇಪ ಮಾಡಲು ಬರುವುದಿಲ್ಲ. ರಾಜೀನಾಮೆ ಅಥವಾ ಅನರ್ಹತೆ ಪ್ರಕರಣ ಇತ್ಯರ್ಥ ಮಾಡುವಂತೆ ಸೂಚಿಸಲು ಆಗುವುದಿಲ್ಲ. ಇಲ್ಲಿ ನಿರ್ಧಾರ ತೆಗೆದುಕೊಳ್ಳಲು ಸಾಂವಿಧಾನಿಕ ಬಿಕ್ಕಟ್ಟು ಉದ್ಭವಿಸಿರಬಹುದು. ಸ್ಪೀಕರ್ ಅವರಿಗೆ ಹೀಗೆ ನಿರ್ಧಾರ ತೆಗೆದುಕೊಳ್ಳಿ ಎಂದು ಹೇಳಲು ನಮಗೆ ಸಾಧ್ಯವಿಲ್ಲ. ಇದು ನನ್ನ ಅಭಿಪ್ರಾಯ ಎಂದು ಹೇಳಿ ವಾದಕ್ಕೆ ಅನುವು ಮಾಡಿಕೊಟ್ಟರು.

TAGGED:aniruddha boseDeepak guptaKarnataka PoliticsMukul RohatgiPublic TVRanjan GogoiSupreme Courtಅನಿರುದ್ಧ ಬೋಸ್ಕರ್ನಾಟಕ ಪೊಲಿಟಿಕ್ಸ್ದೀಪಕ್ ಗುಪ್ತಾಪಬ್ಲಿಕ್ ಟಿವಿಮುಕುಲ್ ರೋಹಟಗಿರಂಜನ್ ಗೋಗೊಯ್ಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Tamil Nadu factory blast 20 killed several injured as massive blast rips through firecracker factory in Virudhunagar
Crime

ತಮಿಳುನಾಡಿನಲ್ಲಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 20 ಸಾವು, ಹಲವರ ಸ್ಥಿತಿ ಚಿಂತಾಜನಕ

Public TV
By Public TV
6 minutes ago
Anurag Thakur
Bengaluru City

ಹಿಂದಿನಿಂದ ಬಂದು ಮಹಿಳೆಯರಿಗೆ ಕಾಂಗ್ರೆಸ್‌ ಚೂರಿ, ದೇಶದ ತಾಯಂದಿರು ಇವರನ್ನು ಕ್ಷಮಿಸಲ್ಲ: ಅನುರಾಗ್‌ ಠಾಕೂರ್‌

Public TV
By Public TV
13 minutes ago
Mallikarjun Kharge 2
Bengaluru City

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ, ಮೋದಿಯ ಸುಳ್ಳು ಆರೋಪ ಖಂಡಿಸುತ್ತೇನೆ: ಖರ್ಗೆ ಕೆಂಡಾಮಂಡಲ

Public TV
By Public TV
57 minutes ago
Tejasvi Surya
Bengaluru City

ನಾರಿಶಕ್ತಿಗೆ ವಿಪಕ್ಷಗಳ ವಿರೋಧ – ಇದರ ಪರಿಣಾಮ ಪ.ಬಂಗಾಳ ಚುನಾವಣೆಯಲ್ಲೇ ಗೊತ್ತಾಗಲಿದೆ: ತೇಜಸ್ವಿ ಸೂರ್ಯ ಭವಿಷ್ಯ

Public TV
By Public TV
1 hour ago
Patahi Airport
Latest

ಬಿಹಾರದಲ್ಲಿ ಮತ್ತೊಂದು ಏರ್‌ಪೋರ್ಟ್‌ ನಿರ್ಮಾಣ – ಶೀಘ್ರದಲ್ಲೇ ವಿಮಾನ ಸೇವೆ ಆರಂಭ

Public TV
By Public TV
1 hour ago
a man from Belthangady who was going to sabarimala temple fell from the train and died in kerala
Dakshina Kannada

ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿ ರೈಲಿನಿಂದ ಬಿದ್ದು ದುರ್ಮರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?