Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

Rain Alert: ಉಡುಪಿಯ ಬ್ರಹ್ಮಾವರದಲ್ಲಿ ಕೃಷಿ ಭೂಮಿ ಜಲಾವೃತ – ಚಿಕ್ಕಮಗಳೂರು, ದಾವಣಗೆರೆ, ಕೊಪ್ಪಳದಲ್ಲೂ ಹೆಚ್ಚಿದ ಭೀತಿ

Public TV
Last updated: July 21, 2024 8:30 pm
Public TV
Share
3 Min Read
Urupi Rain 2
SHARE

ಬೆಂಗಳೂರು: ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ (Heavy Rain) ಮುಂದುವರಿದಿದೆ. ಉಡುಪಿಯ ಬ್ರಹ್ಮಾವರ ತಾಲೂಕಿನ ಬೇಸಾಯ ಭೂಮಿಗಳು ಜಲಾವೃತವಾಗಿದೆ. ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನೀರಿನಲ್ಲಿ ಭತ್ತದ ಗದ್ದೆಗಳು ಕೊಳೆಯುತ್ತಿವೆ. ಬೈಂದೂರು ಸೋಮೇಶ್ವರ ದೇವಳದ ಮೇಲ್ಭಾಗದಲ್ಲಿ ರಸ್ತೆಗೆ ಗುಡ್ಡಕುದಿದೆ. ಖಾಸಗಿ ರೆಸಾರ್ಟ್ ಕಾಮಗಾರಿ- ರಸ್ತೆ ನಿರ್ಮಾಣ ಹಿನ್ನೆಲೆಯಲ್ಲಿ ಸಮಸ್ಯೆ ಸಂಭವಿಸಿದೆ.

Urupi Rain

ಹೆಬ್ಬಾಳೆ-ಹೊರನಾಡು ಸಂಪರ್ಕ ಸೇತುವೆ ಮುಳುಗಡೆ:
ಇನ್ನೂ ಚಿಕ್ಕಮಗಳೂರಿನ (Chikkamagaluru) ಕಳಸ ಬಳಿ ಭದ್ರೆಯ ಅಬ್ಬರದಿಂದಾಗಿ ಹೆಬ್ಬಾಳೆ-ಹೊರನಾಡು ಸಂಪರ್ಕ ಸೇತುವೆ ಮುಳುಗಿದೆ. ಕೊಪ್ಪ ತಾಲೂಕಿನ ಬಸರೀಕಟ್ಟೆ ಸಮೀಪ ಅಬ್ಬಿಕಲ್ಲು ಜಲಪಾತ ಭೋರ್ಗರೆಯುತ್ತಿದೆ. ಮುಳ್ಳಯ್ಯನಗಿರಿಯಲ್ಲಿ ಭಾರೀ ಮಳೆ ಹಿನ್ನೆಲೆ ಚಿಕ್ಕಮಗಳೂರು ನಗರಕ್ಕೆ ನೀರುಣಿಸುವ ಹಿರೇಕೊಳಲೇ ಕೆರೆ ಕೋಡಿ ಬಿದ್ದಿದೆ. ಹೀಗಾಗಿ, ಕೆರೆಗೆ ಶಾಸಕ ಎಚ್‌.ಡಿ ತಮ್ಮಯ್ಯ, ಎಂಎಲ್‌ಸಿ ಸಿಟಿ ರವಿ, ಭೋಜೇಗೌಡ ಭಾಗಿನ ಅರ್ಪಿಸಿದ್ದಾರೆ.

Urupi Rain 3

ಮೈದುಂಬಿ ಹರಿಯುತ್ತಿದೆ ತುಂಗಾಭದ್ರಾ ನದಿ:
ಶಿವಮೊಗ್ಗದ ಸಾಗರದ ಶುಂಠಿಕೊಪ್ಪದ ಬಳಿ ವರದಾನದಿಯಿಂದಾಗಿ ಕೃಷಿ ಭೂಮಿ ಜಲಾವೃತಗೊಂಡಿದೆ. ಸೊರಬದ ಲಕ್ಕವಳ್ಳಿಯಲ್ಲಿ ವರದಾ-ದಂಡಾವತಿ ಸಂಗಮಕ್ಷೇತ್ರ ಜೈನಮಠ ಹೊಳೆಲಿಂಗೇಶ್ವರ ದೇವಾಲಯ ಸೇರಿದಂತೆ ಗದ್ದೆ, ತೋಟಗಳ ಮುಳುಗಿವೆ. ಶಿಕಾರಿಪುರದ ಧನರಾಜ್ ಹೇಮರಾಮ್ ಸರ್ಕಾರಿ ಶಾಲೆಯಲ್ಲಿ ನೀರು ತುಂಬಿಕೊಂಡಿದೆ. ದಾವಣಗೆರೆಯ ಹರಿಹರ ಪಕ್ಕದಲ್ಲಿ ತುಂಗಾಭದ್ರಾ ನದಿ ಮೈದುಂಬಿ ಹರೀತಿದೆ. ಕೊಪ್ಪಳದ ತುಂಗಭದ್ರಾ ಡ್ಯಾಮ್‌ಗೆ 1.27 ಲಕ್ಷ ಕ್ಯುಸೆಕ್‌ ಒಳಹರಿವಿದ್ದು, 105 ಟಿಎಂಸಿ ಪೈಕಿ 80 ಟಿಎಂಸಿಗೂ ಹೆಚ್ಚು ನೀರಿನ ಸಂಗ್ರವಾಗಿದೆ. 2 ಸಾವಿರ ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ. ವಿಜಯನಗರ ಹಗರಿಬೊಮ್ಮನಹಳ್ಳಿಯ ಮಾಲವಿ ಜಲಾಶಯಕ್ಕೆ ಶಾಸಕ ನೇಮಿರಾಜ್ ನಾಯ್ಕ್ ಮುಂದಾಳತ್ವದಲ್ಲಿ ರಾಜವಾಳ್ ಜಾಕ್ ವೆಲ್ ಮೂಲಕ ನೀರು ಬಿಡುಗಡೆ ಮಾಡಲಾಯಿತು.

Urupi Rain 4

ಬೆಳಗಾವಿಯಲ್ಲೂ ಪ್ರವಾಹ ಭೀತಿ:
ಮಹಾರಾಷ್ಟ್ರದಲ್ಲಿ ಭಾರೀ ಮಳೆಗೆ ಬೆಳಗಾವಿ, ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಭೀತಿ, ಅವಾಂತರಗಳು ಸಂಭವಿಸಿವೆ. ಕೃಷ್ಣೆಯ ಒಳ ಹರಿವು 1.50 ಲಕ್ಷ ಕ್ಯೂಸೆಕ್ ದಾಟಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ದೂದ್‌ಗಂಗಾ, ವೇದಗಂಗಾ ಹಾಗೂ ಹೀರಣ್ಯಕೇಶಿ ನದಿಗಳ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ. ರೈತರ ಜಮೀನುಗಳಿಗೆ ನದಿ ನೀರು ನುಗ್ಗಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ 4 ಸೇತುವೆಗಳು ಮುಳುಗಡೆಯಾಗಿವೆ. 4 ಸೇತುವೆಗಳ 2 ಬದಿಯಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸರನ್ನು ನಿಯೋಜಿಸಲಾಗಿದೆ.

ಕೃಷ್ಣಾ ನದಿಗೆ 1.60 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ:
ಪ್ರವಾಹ ಎದುರಾಗುವ ಭೀತಿಗೆ ನದಿ ದಡದಲ್ಲಿರುವ ಪಂಪ್‌ಸೆಟ್‌ಗಳನ್ನು ರೈತರು ತೆಗೆದಿಟ್ಟಿದ್ದಾರೆ. ಖಾನಾಪೂರ ತಾಲೂಕಿನ ಜಾಂಬೋಟಿ ಬಳಿ ಕಸಮಳಿ ಬ್ರಿಡ್ಜ್ ಮೇಲೆ ಭಾರೀ ವಾಹನ ಸಂಚಾರ ನಿಷೇಧಿಸಲಾಗಿದೆ. ಪರಿಣಾಮ ಬೆಳಗಾವಿ – ಗೋವಾ ಸರಕು ಸಾಗಣೆಯ ಮೇಲೆ ಭಾರೀ ಪರಿಣಾಮ ಬೀರಿದೆ. ಗೋವಾದಿಂದ ಬರುವ ಎಲ್ಲಾ ವಾಹನಗಳನ್ನು ತಡೆ ಹಿಡಿಯಲಾಗಿದೆ. ಕಿತ್ತೂರಿನ ಹುಣಶೀಕಟ್ಟಿಯ ಮಲಪ್ರಭಾ ನದಿಯಲ್ಲಿ ರೈತರ ಸಮಸ್ಯೆ ಹಿನ್ನೆಲೆಯಲ್ಲಿ ಡಿ.ಸಿ ಮೊಹಮ್ಮದ್ ರೋಷನ್ ಭೇಟಿ ನೀಡಿದರು. ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸಲು ಸರ್ಕಾರಕ್ಕೆ ಮನವಿ ಕಳುಹಿಸುವ ಭರವಸೆ ನೀಡಿದರು. ನಿಪ್ಪಾಣಿ ನಗರದ ಜತ್ರಾಟ್‌ವೇಸ್‌ನಲ್ಲಿ ಗೋಡೆ ಕುಸಿದು 45 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಯಾದಗಿರಿಯ ನಾರಾಯಣಪುರ ಜಲಾಶಯ 33 ಟಿಎಂಸಿ ಸಾಮರ್ಥ್ಯದ ಪೈಕಿ 28 ಟಿಎಂಸಿ ನೀರು ಸಂಗ್ರಹವಾಗಿದೆ. ಡ್ಯಾಮ್‌ನಿಂದ ಕೃಷ್ಣಾ ನದಿಗೆ 1.60 ಲಕ್ಷ ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ. ಸುರಪುರದ ನೀಲಕಂಠರಾಯನ ಗಡ್ಡಿ, ಮೇಲಿನ ಗಡ್ಡಿ, ಜಂಗಣ್ಣದೊಡ್ಡಿ ಮುಳುಗಡೆಯಾಗುವ ಸಾಧ್ಯತೆ ಇದ್ದು, ಹೈಅಲರ್ಟ್ ಘೋಷಿಸಲಾಗಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಶೀಲಹಳ್ಳಿ ಸೇತುವೆ, ಹೂವಿನಹೆಡಗಿ ಸೇತುವೆಗಳಿಗೆ ಮುಳುಗಡೆ ಭೀತಿ ಎದುರಾಗಿದೆ.

ನಂದಿಬೆಟ್ಟಕ್ಕೆ ಪ್ರವಾಸಿಗರ ದಂಡು:
ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ಪ್ರವಾಸಿಗರ ದಂಡು ಹೆಚ್ಚಾಗಿದೆ. ಬೆಳಗ್ಗೆ 5 ಗಂಟೆಯಿಂದಲೇ ಕಾರು, ಬೈಕ್‌ಗಳ ಮೂಲಕ ಸಾವಿರಾರು ಮಂದಿ ಪ್ರವಾಸಿಗರು ನಂದಿಬೆಟ್ಟಕ್ಕೆ ಲಗ್ಗೆಯಿಡುತ್ತಿದ್ದಾರೆ. ನಂದಿಬೆಟ್ಟದ ಪಾರ್ಕಿಂಗ್ ಫ್ಲಾಟ್ ವಾಹನಗಳಿಂದ ಹೌಸ್‌ಫುಲ್ ಆಗುತ್ತಿದೆ. ಭಾನುವಾರ ಸಹ ಇಡೀ ನಂದಿಬೆಟ್ಟವನ್ನು ದಟ್ಟಮಂಜು-ಚುಮುಚುಮು ಚಳಿ ಆವರಿಸಿತ್ತು.

TAGGED:heavy rainKarnataka Rainsudupiweatherಉಡುಪಿಕರ್ನಾಟಕಜಲಾಶಯಬೆಂಗಳೂರುಮಳೆ
Share This Article
Facebook Whatsapp Whatsapp Telegram

Cinema Updates

kushi kapoor
ಬಿಕಿನಿಯಲ್ಲಿ ಬೀಚ್ ಬಳಿ ನಟಿ ಖುಷಿ ಕಪೂರ್ ಚಿಲ್
35 minutes ago
shamanth gowda
‘ಲಕ್ಷ್ಮಿ ಬಾರಮ್ಮ’ ನಟನ ಅದ್ಧೂರಿ ಆರತಕ್ಷತೆ- ಸಿನಿ ತಾರೆಯರು ಭಾಗಿ
43 minutes ago
disha madan 1 1
Cannes Film Festival 2025: ರೆಡ್ ಕಾರ್ಪೆಟ್‌ನಲ್ಲಿ ಮಿಂಚಿದ ಕನ್ನಡತಿ ದಿಶಾ ಮದನ್
2 hours ago
salman khan
‘ಸಿಕಂದರ್’ ಸೋಲಿನ ಬಳಿಕ ಆರ್ಮಿ ಆಫೀಸರ್ ಪಾತ್ರದಲ್ಲಿ ಸಲ್ಮಾನ್ ಖಾನ್?
3 hours ago

You Might Also Like

Weather
Bengaluru City

ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ – ಎಲ್ಲೆಲ್ಲಿ?

Public TV
By Public TV
2 minutes ago
America Storm
Crime

ಅಮೆರಿಕದಲ್ಲಿ ಬಿರುಗಾಳಿ ಅಬ್ಬರಕ್ಕೆ 25 ಮಂದಿ ಬಲಿ

Public TV
By Public TV
7 minutes ago
virat kohli suresh raina
Cricket

ವಿರಾಟ್‌ ಕೊಹ್ಲಿಗೆ ‘ಭಾರತ ರತ್ನ’ ನೀಡಬೇಕು: ಸುರೇಶ್‌ ರೈನಾ

Public TV
By Public TV
12 minutes ago
Ricky Rai 2
Districts

ಫೈರಿಂಗ್ ಪ್ರಕರಣ – ವಿಚಾರಣೆಗೆ ಹಾಜರಾಗಲು 20 ದಿನಗಳ ಸಮಯಾವಕಾಶ ಕೋರಿದ ರಿಕ್ಕಿ ರೈ

Public TV
By Public TV
15 minutes ago
HD Devegowda Birthday 3
Bengaluru City

ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಹುಟ್ಟುಹಬ್ಬ – ಮೋದಿ, ಸಿದ್ದರಾಮಯ್ಯ ಸೇರಿ ಗಣ್ಯರಿಂದ ಶುಭಾಶಯ

Public TV
By Public TV
28 minutes ago
Hyderabad Gulzar House Fire
Crime

Hyderabad | ಚಾರ್‌ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿ ಬೆಂಕಿ ಅವಘಡ – 17 ಮಂದಿ ಸಜೀವ ದಹನ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?