Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Rain Alert: ಉಡುಪಿಯ ಬ್ರಹ್ಮಾವರದಲ್ಲಿ ಕೃಷಿ ಭೂಮಿ ಜಲಾವೃತ – ಚಿಕ್ಕಮಗಳೂರು, ದಾವಣಗೆರೆ, ಕೊಪ್ಪಳದಲ್ಲೂ ಹೆಚ್ಚಿದ ಭೀತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | Rain Alert: ಉಡುಪಿಯ ಬ್ರಹ್ಮಾವರದಲ್ಲಿ ಕೃಷಿ ಭೂಮಿ ಜಲಾವೃತ – ಚಿಕ್ಕಮಗಳೂರು, ದಾವಣಗೆರೆ, ಕೊಪ್ಪಳದಲ್ಲೂ ಹೆಚ್ಚಿದ ಭೀತಿ

Belgaum

Rain Alert: ಉಡುಪಿಯ ಬ್ರಹ್ಮಾವರದಲ್ಲಿ ಕೃಷಿ ಭೂಮಿ ಜಲಾವೃತ – ಚಿಕ್ಕಮಗಳೂರು, ದಾವಣಗೆರೆ, ಕೊಪ್ಪಳದಲ್ಲೂ ಹೆಚ್ಚಿದ ಭೀತಿ

Public TV
Last updated: July 21, 2024 8:30 pm
Public TV
Share
3 Min Read
Urupi Rain 2
SHARE

ಬೆಂಗಳೂರು: ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ (Heavy Rain) ಮುಂದುವರಿದಿದೆ. ಉಡುಪಿಯ ಬ್ರಹ್ಮಾವರ ತಾಲೂಕಿನ ಬೇಸಾಯ ಭೂಮಿಗಳು ಜಲಾವೃತವಾಗಿದೆ. ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನೀರಿನಲ್ಲಿ ಭತ್ತದ ಗದ್ದೆಗಳು ಕೊಳೆಯುತ್ತಿವೆ. ಬೈಂದೂರು ಸೋಮೇಶ್ವರ ದೇವಳದ ಮೇಲ್ಭಾಗದಲ್ಲಿ ರಸ್ತೆಗೆ ಗುಡ್ಡಕುದಿದೆ. ಖಾಸಗಿ ರೆಸಾರ್ಟ್ ಕಾಮಗಾರಿ- ರಸ್ತೆ ನಿರ್ಮಾಣ ಹಿನ್ನೆಲೆಯಲ್ಲಿ ಸಮಸ್ಯೆ ಸಂಭವಿಸಿದೆ.

Urupi Rain

ಹೆಬ್ಬಾಳೆ-ಹೊರನಾಡು ಸಂಪರ್ಕ ಸೇತುವೆ ಮುಳುಗಡೆ:
ಇನ್ನೂ ಚಿಕ್ಕಮಗಳೂರಿನ (Chikkamagaluru) ಕಳಸ ಬಳಿ ಭದ್ರೆಯ ಅಬ್ಬರದಿಂದಾಗಿ ಹೆಬ್ಬಾಳೆ-ಹೊರನಾಡು ಸಂಪರ್ಕ ಸೇತುವೆ ಮುಳುಗಿದೆ. ಕೊಪ್ಪ ತಾಲೂಕಿನ ಬಸರೀಕಟ್ಟೆ ಸಮೀಪ ಅಬ್ಬಿಕಲ್ಲು ಜಲಪಾತ ಭೋರ್ಗರೆಯುತ್ತಿದೆ. ಮುಳ್ಳಯ್ಯನಗಿರಿಯಲ್ಲಿ ಭಾರೀ ಮಳೆ ಹಿನ್ನೆಲೆ ಚಿಕ್ಕಮಗಳೂರು ನಗರಕ್ಕೆ ನೀರುಣಿಸುವ ಹಿರೇಕೊಳಲೇ ಕೆರೆ ಕೋಡಿ ಬಿದ್ದಿದೆ. ಹೀಗಾಗಿ, ಕೆರೆಗೆ ಶಾಸಕ ಎಚ್‌.ಡಿ ತಮ್ಮಯ್ಯ, ಎಂಎಲ್‌ಸಿ ಸಿಟಿ ರವಿ, ಭೋಜೇಗೌಡ ಭಾಗಿನ ಅರ್ಪಿಸಿದ್ದಾರೆ.

Urupi Rain 3

ಮೈದುಂಬಿ ಹರಿಯುತ್ತಿದೆ ತುಂಗಾಭದ್ರಾ ನದಿ:
ಶಿವಮೊಗ್ಗದ ಸಾಗರದ ಶುಂಠಿಕೊಪ್ಪದ ಬಳಿ ವರದಾನದಿಯಿಂದಾಗಿ ಕೃಷಿ ಭೂಮಿ ಜಲಾವೃತಗೊಂಡಿದೆ. ಸೊರಬದ ಲಕ್ಕವಳ್ಳಿಯಲ್ಲಿ ವರದಾ-ದಂಡಾವತಿ ಸಂಗಮಕ್ಷೇತ್ರ ಜೈನಮಠ ಹೊಳೆಲಿಂಗೇಶ್ವರ ದೇವಾಲಯ ಸೇರಿದಂತೆ ಗದ್ದೆ, ತೋಟಗಳ ಮುಳುಗಿವೆ. ಶಿಕಾರಿಪುರದ ಧನರಾಜ್ ಹೇಮರಾಮ್ ಸರ್ಕಾರಿ ಶಾಲೆಯಲ್ಲಿ ನೀರು ತುಂಬಿಕೊಂಡಿದೆ. ದಾವಣಗೆರೆಯ ಹರಿಹರ ಪಕ್ಕದಲ್ಲಿ ತುಂಗಾಭದ್ರಾ ನದಿ ಮೈದುಂಬಿ ಹರೀತಿದೆ. ಕೊಪ್ಪಳದ ತುಂಗಭದ್ರಾ ಡ್ಯಾಮ್‌ಗೆ 1.27 ಲಕ್ಷ ಕ್ಯುಸೆಕ್‌ ಒಳಹರಿವಿದ್ದು, 105 ಟಿಎಂಸಿ ಪೈಕಿ 80 ಟಿಎಂಸಿಗೂ ಹೆಚ್ಚು ನೀರಿನ ಸಂಗ್ರವಾಗಿದೆ. 2 ಸಾವಿರ ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ. ವಿಜಯನಗರ ಹಗರಿಬೊಮ್ಮನಹಳ್ಳಿಯ ಮಾಲವಿ ಜಲಾಶಯಕ್ಕೆ ಶಾಸಕ ನೇಮಿರಾಜ್ ನಾಯ್ಕ್ ಮುಂದಾಳತ್ವದಲ್ಲಿ ರಾಜವಾಳ್ ಜಾಕ್ ವೆಲ್ ಮೂಲಕ ನೀರು ಬಿಡುಗಡೆ ಮಾಡಲಾಯಿತು.

Urupi Rain 4

ಬೆಳಗಾವಿಯಲ್ಲೂ ಪ್ರವಾಹ ಭೀತಿ:
ಮಹಾರಾಷ್ಟ್ರದಲ್ಲಿ ಭಾರೀ ಮಳೆಗೆ ಬೆಳಗಾವಿ, ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಭೀತಿ, ಅವಾಂತರಗಳು ಸಂಭವಿಸಿವೆ. ಕೃಷ್ಣೆಯ ಒಳ ಹರಿವು 1.50 ಲಕ್ಷ ಕ್ಯೂಸೆಕ್ ದಾಟಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ದೂದ್‌ಗಂಗಾ, ವೇದಗಂಗಾ ಹಾಗೂ ಹೀರಣ್ಯಕೇಶಿ ನದಿಗಳ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ. ರೈತರ ಜಮೀನುಗಳಿಗೆ ನದಿ ನೀರು ನುಗ್ಗಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ 4 ಸೇತುವೆಗಳು ಮುಳುಗಡೆಯಾಗಿವೆ. 4 ಸೇತುವೆಗಳ 2 ಬದಿಯಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸರನ್ನು ನಿಯೋಜಿಸಲಾಗಿದೆ.

ಕೃಷ್ಣಾ ನದಿಗೆ 1.60 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ:
ಪ್ರವಾಹ ಎದುರಾಗುವ ಭೀತಿಗೆ ನದಿ ದಡದಲ್ಲಿರುವ ಪಂಪ್‌ಸೆಟ್‌ಗಳನ್ನು ರೈತರು ತೆಗೆದಿಟ್ಟಿದ್ದಾರೆ. ಖಾನಾಪೂರ ತಾಲೂಕಿನ ಜಾಂಬೋಟಿ ಬಳಿ ಕಸಮಳಿ ಬ್ರಿಡ್ಜ್ ಮೇಲೆ ಭಾರೀ ವಾಹನ ಸಂಚಾರ ನಿಷೇಧಿಸಲಾಗಿದೆ. ಪರಿಣಾಮ ಬೆಳಗಾವಿ – ಗೋವಾ ಸರಕು ಸಾಗಣೆಯ ಮೇಲೆ ಭಾರೀ ಪರಿಣಾಮ ಬೀರಿದೆ. ಗೋವಾದಿಂದ ಬರುವ ಎಲ್ಲಾ ವಾಹನಗಳನ್ನು ತಡೆ ಹಿಡಿಯಲಾಗಿದೆ. ಕಿತ್ತೂರಿನ ಹುಣಶೀಕಟ್ಟಿಯ ಮಲಪ್ರಭಾ ನದಿಯಲ್ಲಿ ರೈತರ ಸಮಸ್ಯೆ ಹಿನ್ನೆಲೆಯಲ್ಲಿ ಡಿ.ಸಿ ಮೊಹಮ್ಮದ್ ರೋಷನ್ ಭೇಟಿ ನೀಡಿದರು. ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸಲು ಸರ್ಕಾರಕ್ಕೆ ಮನವಿ ಕಳುಹಿಸುವ ಭರವಸೆ ನೀಡಿದರು. ನಿಪ್ಪಾಣಿ ನಗರದ ಜತ್ರಾಟ್‌ವೇಸ್‌ನಲ್ಲಿ ಗೋಡೆ ಕುಸಿದು 45 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಯಾದಗಿರಿಯ ನಾರಾಯಣಪುರ ಜಲಾಶಯ 33 ಟಿಎಂಸಿ ಸಾಮರ್ಥ್ಯದ ಪೈಕಿ 28 ಟಿಎಂಸಿ ನೀರು ಸಂಗ್ರಹವಾಗಿದೆ. ಡ್ಯಾಮ್‌ನಿಂದ ಕೃಷ್ಣಾ ನದಿಗೆ 1.60 ಲಕ್ಷ ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ. ಸುರಪುರದ ನೀಲಕಂಠರಾಯನ ಗಡ್ಡಿ, ಮೇಲಿನ ಗಡ್ಡಿ, ಜಂಗಣ್ಣದೊಡ್ಡಿ ಮುಳುಗಡೆಯಾಗುವ ಸಾಧ್ಯತೆ ಇದ್ದು, ಹೈಅಲರ್ಟ್ ಘೋಷಿಸಲಾಗಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಶೀಲಹಳ್ಳಿ ಸೇತುವೆ, ಹೂವಿನಹೆಡಗಿ ಸೇತುವೆಗಳಿಗೆ ಮುಳುಗಡೆ ಭೀತಿ ಎದುರಾಗಿದೆ.

ನಂದಿಬೆಟ್ಟಕ್ಕೆ ಪ್ರವಾಸಿಗರ ದಂಡು:
ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ಪ್ರವಾಸಿಗರ ದಂಡು ಹೆಚ್ಚಾಗಿದೆ. ಬೆಳಗ್ಗೆ 5 ಗಂಟೆಯಿಂದಲೇ ಕಾರು, ಬೈಕ್‌ಗಳ ಮೂಲಕ ಸಾವಿರಾರು ಮಂದಿ ಪ್ರವಾಸಿಗರು ನಂದಿಬೆಟ್ಟಕ್ಕೆ ಲಗ್ಗೆಯಿಡುತ್ತಿದ್ದಾರೆ. ನಂದಿಬೆಟ್ಟದ ಪಾರ್ಕಿಂಗ್ ಫ್ಲಾಟ್ ವಾಹನಗಳಿಂದ ಹೌಸ್‌ಫುಲ್ ಆಗುತ್ತಿದೆ. ಭಾನುವಾರ ಸಹ ಇಡೀ ನಂದಿಬೆಟ್ಟವನ್ನು ದಟ್ಟಮಂಜು-ಚುಮುಚುಮು ಚಳಿ ಆವರಿಸಿತ್ತು.

TAGGED:heavy rainKarnataka Rainsudupiweatherಉಡುಪಿಕರ್ನಾಟಕಜಲಾಶಯಬೆಂಗಳೂರುಮಳೆ
Share This Article
Facebook Whatsapp Whatsapp Telegram

Cinema news

Sanvi Sudeep 1
ʻನನ್ನ ದೇಹ ಚರ್ಚೆಯ ವಿಷಯವಲ್ಲʼ – ಮಗಳು ಸಾನ್ವಿ ಹೇಳಿಕೆ ಸಮರ್ಥಿಸಿಕೊಂಡ ಸುದೀಪ್
Bengaluru City Cinema Latest Sandalwood Top Stories
vijayalakshmi 1 1
ನನ್ನ ದೂರಿಗೆ ನಿರ್ಲಕ್ಷ್ಯ, ಬೇರೆ ಮಹಿಳೆಯ ದೂರಿಗೆ ಒಂದೇ ದಿನದಲ್ಲಿ ಕ್ರಮ: ವಿಜಯಲಕ್ಷ್ಮಿ ಬೇಸರ
Bengaluru City Cinema Crime Latest Main Post
sunny leone
ಮಥುರಾದಲ್ಲಿ ಸನ್ನಿ ಲಿಯೋನ್ ʻDJ Nightʼ ನ್ಯೂ ಇಯರ್ ಕಾರ್ಯಕ್ರಮ ರದ್ದು
Bollywood Cinema Latest National Top Stories
father movie team
ಭಾವುಕ ಪ್ರಪಂಚಕ್ಕೆ ಕರೆದೊಯ್ಯುವ ‘ಫಾದರ್’ ಥೀಮ್ ಸಾಂಗ್
Cinema Latest Sandalwood Top Stories

You Might Also Like

Ellyse Perry
Cricket

ಆರ್‌ಸಿಬಿಗೆ ಶಾಕ್‌ ನೀಡಿದ್ದ ಪೆರ್ರಿ ನ್ಯೂಜಿಲೆಂಡ್‌ ಲೀಗ್‌ನಲ್ಲಿ ಭರ್ಜರಿ ಆಟ

Public TV
By Public TV
16 minutes ago
Swiss ski resort explosion
Latest

ಸ್ವಿಸ್ ಸ್ಕೀ ರೆಸಾರ್ಟ್‌ನ ಬಾರ್‌ನಲ್ಲಿ ಸ್ಫೋಟ; 40 ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

Public TV
By Public TV
56 minutes ago
future husband and Brother kill sisters Ex lover in Chikkamagaluru
Chikkamagaluru

ಹಳೆ ಲವ್ವರ್‌ಗೆ ವಿಶ್‌ ಮಾಡಿದ್ದಕ್ಕೆ ಚಾಕು ಇರಿದು ಕೊಂದೇ ಬಿಟ್ಟ ಭಾವಿ ಪತಿ!

Public TV
By Public TV
58 minutes ago
liquor alcohol
Bagalkot

ಹೊಸ ವರ್ಷ ಸಂಭ್ರಮಾಚರಣೆ – ಮದ್ಯ ಮಾರಾಟದಿಂದ ದಾಖಲೆಯ ಆದಾಯ ಸಂಗ್ರಹ

Public TV
By Public TV
1 hour ago
Basanagouda Patil Yatnal 1
Bengaluru City

ಜಮೀರ್‌ಗೆ ದೇಶ, ರಾಜ್ಯ ಬೇಡ, ತಮ್ಮ ಜನಸಂಖ್ಯೆ, ಮತದಾರರು ಹೆಚ್ಚಾಗಬೇಕು ಅಂತ ಮನೆ ಕೊಡ್ತಿದ್ದಾರೆ – ಯತ್ನಾಳ್

Public TV
By Public TV
1 hour ago
dharmasthala
Dakshina Kannada

ಹೊಸ ವರ್ಷಾಚರಣೆ; ಹೂವಿನಿಂದ ಸಿಂಗಾರಗೊಂಡ ಧರ್ಮಸ್ಥಳ – ಭಕ್ತರಿಂದ ಅಲಂಕಾರ ಸೇವೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?