Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Landslide In Karnataka: ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ತಪ್ಪಿದ ಭಾರೀ ಅನಾಹುತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | Landslide In Karnataka: ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ತಪ್ಪಿದ ಭಾರೀ ಅನಾಹುತ

Dakshina Kannada

Landslide In Karnataka: ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ತಪ್ಪಿದ ಭಾರೀ ಅನಾಹುತ

Public TV
Last updated: July 30, 2024 5:01 pm
Public TV
Share
3 Min Read
Hassan Rain effect 2
SHARE

ಹಾಸನ/ಮಂಗಳೂರು: ರಾಜ್ಯಾದ್ಯಂತ ಮಳೆಯ (Heavy Rain) ಆರ್ಭಟ ಮುಂದುವರಿದ ಕಾರಣ ವಿವಿಧ ಜಿಲ್ಲೆಗಳಲ್ಲಿ ಅವಾಂತರಗಳು ಮುಂದುವರಿದಿವೆ. ಹಾಸನ-ಚಿಕ್ಕಮಗಳೂರಿನ ಘಾಟ್ ಪ್ರದೇಶದಲ್ಲಿ ಭಾರೀ ಭೂಕುಸಿತಗಳು (Landslide) ಸಂಭವಿಸಿವೆ.

ಸಕಲೇಶಪುರದ ದೊಡ್ಡತಪ್ಲು ಬಳಿಯ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುಡ್ಡ ಕುಸಿತ (Shiradi Ghat Landslide) ಉಂಟಾಗಿದೆ. ಈ ಸಂದರ್ಭದಲ್ಲಿ ಹಾದುಹೋಗ್ತಿದ್ದ ಎರಡು ಕಾರು, ಗ್ಯಾಸ್ ಟ್ಯಾಂಕರ್ (Gas Tanker), ಲಾರಿ ಸೇರಿ ಆರು ವಾಹನಗಳ ಮೇಲೆ ಗುಡ್ಡ ಕುಸಿದು ಅನಾಹುತ ಸಂಭವಿಸಿದೆ. ಮಣ್ಣು ಬಿದ್ದಿರುವ ಧಾಟಿಗೆ ಗ್ಯಾಸ್ ಟ್ಯಾಂಕರ್ ಮತ್ತು ಲಾರಿ ಪಲ್ಟಿ ಹೊಡೆದಿವೆ. ಅದೃಷ್ಟವಶಾತ್ ವಾಹನಗಳಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Hassan Rain effect

ಗ್ಯಾಸ್ ಟ್ಯಾಂಕರ್ ಪಲ್ಟಿ ಹೊಡೆದ ಪರಿಣಾಮ ಗ್ಯಾಸ್ ಸೋರಿಕೆ ಭೀತಿ ಎದುರಾಗಿದೆ. ಭಾರೀ ಮಳೆ ನಡುವೆಯೇ ಮಣ್ಣು ತೆರವು ಕಾರ್ಯ ನಡೆದಿದೆ. ಇದೇ ವೇಳೆ, ಎತ್ತಿನಹೊಳೆ ಯೋಜನೆ ಕಾಮಗಾರಿಯ ಪರಿಣಾಮ ಸಕಲೇಶಪುರದ ಕುಂಬರಡಿ-ಹಾರ್ಲೆ ಎಸ್ಟೇಟ್ ನಡುವೆ ಗುಡ್ಡ ಕುಸಿದು ಸುಮಾರು 200 ಅಡಿಯಷ್ಟು ದೂರದವರೆಗೂ ರಸ್ತೆಯೇ ಕತ್ತರಿಸಿಹೋಗಿದೆ. ಇಲ್ಲಿ ರಸ್ತೆಯೇ ಕಾಣುತ್ತಿಲ್ಲ. ಇದರಿಂದ ಬಾರ್ಲಿ-ಮಲ್ಲಗದ್ದೆ-ಕಾಡುಮನೆ ಸೇರಿ ಸುಮಾರು 10 ಗ್ರಾಮಗಳಿಗೆ ಸಂಪರ್ಕವೇ ಇಲ್ಲವಾಗಿದೆ.

Hassan Rain effect 3

ಈ ರಸ್ತೆ ಸಮೀಪವೇ ಎತ್ತಿನಹೊಳೆ ಯೋಜನೆ ಹಾದುಹೋಗಿದೆ. ದುರಂತಕ್ಕೆ ಅವೈಜ್ಞಾನಿಕ ಕಾಮಗಾರಿ ಕಾರಣ ಎಂಬ ಆರೋಪ ಕೇಳಿಬಂದಿದೆ. ಇವೆಲ್ಲವುಗಳ ಪರಿಣಾಮ ಶಿರಾಡಿಘಾಟ್‌ನಲ್ಲಿ ಎರಡು ಬದಿಯ ರಸ್ತೆ ಸಂಚಾರ ಬಂದ್ ಆಗಿದೆ. ನೂರಾರು ವಾಹನಗಳು ನಡುರಸ್ತೆಯಲ್ಲಿ ಸಿಲುಕಿ ಸವಾರರು ಪರದಾಡುತ್ತಿದ್ದಾರೆ. ಇದನ್ನೂ ಓದಿ: Wayanad Landslides: ತಮಿಳುನಾಡಿನಿಂದ 5 ಕೋಟಿ ನೆರವು – ಅಗತ್ಯ ಸಹಕಾರ ನೀಡೋದಾಗಿ ಕರ್ನಾಟಕ ಸಿಎಂ ಭರವಸೆ

ಮಂಗಳೂರು ಉಪ್ಪಿನಂಗಡಿ ಮಾರ್ಗ ಸಂಪೂರ್ಣ ಬಂದ್:
ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಪರಿಣಾಮ ಸರಳಿಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಗುಡ್ಡ ಕುಸಿದು ಅಜಿಲಮೊಗರು – ಸರಳಿಕಟ್ಟೆ – ಉಪ್ಪಿನಂಗಡಿ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಪಂಜುಕ್ಕು ಪ್ರಯಾಣಿಕರ ತಂಗುದಾಣದ ಬಳಿಯೇ ಘಟನೆ ನಡೆದಿದೆ. ಸದ್ಯ ಬಸ್‌ಗೆ ಯಾವುದೇ ಹಾನಿಯಾಗಿಲ್ಲ. ಗುಡ್ಡ ಕುಸಿತದಿಂದ ವಿದ್ಯುತ್ ಕಂಬಗಳು ಧರೆಗುಳಿದಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹಾಗಾಗಿ ಉಪ್ಪಿನಂಗಡಿ, ಪುತ್ತೂರು, ಬಿ.ಸಿರೋಡು ತೆರಳುವ ಪ್ರಯಾಣಿಕರು ಬದಲಿ ರಸ್ತೆ ಬಳಸುವಂತೆ ಜಿಲ್ಲಾಡಳಿತ ಸೂಚಿಸಿದೆ. ಇದನ್ನೂ ಓದಿ: ಸಚಿವ ಸಂಪುಟ ಪುನರ್ ರಚನೆ ಹೈಕಮಾಂಡ್ ತೀರ್ಮಾನವೇ ಅಂತಿಮ: ಸಲೀಂ ಅಹಮದ್

ಕರಾವಳಿಯಲ್ಲೂ ಅವಾಂತರ:
ಕರಾವಳಿ-ಮಲೆನಾಡು ಭಾಗದಲ್ಲಿ ಮಳೆಯಾರ್ಭಟ ಜೋರಾಗಿದೆ. ಚಿಕ್ಕಮಗಳೂರಿನ ಮಹಲ್ಗೋಡು ಸೇತುವೆಗೆ ಜಲಬೇಲಿ ಹಾಕಿದೆ. ಬಾಳೆಹೊನ್ನೂರು-ಕಳಸ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಬಾಳೆಹೊನ್ನೂರಲ್ಲಿ ಪ್ರವಾಹದಲ್ಲಿ ಸಿಲುಕಿ ಪರದಾಡುತ್ತಿದ್ದ ಜನರನ್ನು ಬೋಟ್ ಮೂಲಕ ರಕ್ಷಿಸಲಾಗಿದೆ. ಶೃಂಗೇರಿಯ ನೆಮ್ಮಾರು ಬಳಿ ರಸ್ತೆ ಮೇಲೆಯೇ ಅಪಾರ ನೀರು ಹರಿಯುತ್ತಿದ್ದು, ಶೃಂಗೇರಿ-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಮಾಡಲಾಗಿದೆ. ಇದನ್ನೂ ಓದಿ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದ ಮನು ಭಾಕರ್, ಸರಬ್ಜೋತ್ ಸಿಂಗ್‌ಗೆ ಪಿಎಂ, ಸಿಎಂ ಅಭಿನಂದನೆ

ಶೃಂಗೇರಿ ಪಟ್ಟಣ ಮತ್ತೆ ಜಲಾವೃತವಾಗಿದೆ. ಚಾರ್ಮಾಡಿ ಘಾಟ್‌ನಲ್ಲಿ ಬೃಹತ್ ಮರವೊಂದು ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಕೊಟ್ಟಿಗೆಹಾರದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಕಾವೇರಿ ಅಬ್ಬರಕ್ಕೆ ಭಾಗಮಂಡಲ ರಸ್ತೆಗಳು, ಹೆಮ್ಮಾಡು ಗ್ರಾಮ ಜಲಾವೃತವಾಗಿದೆ. ತ್ರಿವೇಣಿ ಸಂಗಮ ತುಂಬಿ ಭಗಂಡೇಶ್ವರ ಸನ್ನಿಧಿಯ ಮೆಟ್ಟಿಲುವರೆಗೆ ನೀರು ಆವರಿಸಿದೆ. ನಾಪೋಕ್ಲು ರಸ್ತೆ ಮತ್ತು ಮಡಿಕೇರಿ ರಸ್ತೆ ಮುಳುಗಡೆಯಾಗಿದೆ. ವಿರಾಜಪೇಟೆಯ ಕಾಕೋಟು-ಪರಂಬಿಯಲ್ಲಿ ಪ್ರವಾಹದಲ್ಲಿ ಸಿಲುಕಿದ್ದ 6 ಮಂದಿಯನ್ನು ರಕ್ಷಿಸಲಾಗಿದೆ. ಗಡಿಭಾಗದ ಪೆರಾಜೆಯಲ್ಲಿ ಅಡಿಕೆತೋಟದ ಮೇಲೆ ಗುಡ್ಡ ಕುಸಿದಿದೆ.

ದಕ್ಷಿಣ ಕನ್ನಡದಲ್ಲಿ ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿದೆ. ಉಪ್ಪಿನಂಗಡಿಯಲ್ಲಿ ಬಸ್ ನಿಲ್ದಾಣದ ಬಳಿಯೇ ಗುಡ್ಡ ಕುಸಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಉಡುಪಿಯ ಮಣಿಪುರ ಸಮೀಪದ ಕಿಂಡಿ ಅಣೆಕಟ್ಟಿನಲ್ಲಿ ದೋಣಿ ಸಿಲುಕಿದೆ. ಬೇಲೂರಿನ ಬಿರಡಳ್ಳಿ ಬಳಿ ಸೇತುವೆ ಮುಳುಗಡೆಯಾಗಿದೆ. ಸುಳ್ಳಕ್ಕಿಯಲ್ಲಿ ರಸ್ತೆಯೇ ಕೊಚ್ಚಿ ಹೋಗಿದೆ. ಆಲೂರಿನ ಮುತ್ತಿಗೆ ಬಳಿ ರಸ್ತೆ ಮೇಲೆ ಭಾರೀ ಪ್ರಮಾಣದಲ್ಲಿ ನೀರು ಹರೀತಿದೆ. ನೂರಾರು ಎಕರೆ ಜಮೀನು ಜಲಾವೃತವಾಗಿದೆ. ಇದನ್ನೂ ಓದಿ: Wayanad Landslides: ಕೊಚ್ಚಿ ಹೋಯ್ತು 200ಕ್ಕೂ ಹೆಚ್ಚು ಮನೆಗಳು, ಸಾವಿನ ಸಂಖ್ಯೆ 54ಕ್ಕೆ ಏರಿಕೆ

TAGGED:karnatakaKarnataka RainsRain EffectShiradi Ghat Landslideಕರ್ನಾಟಕ ಭೂಕುಸಿತಮಳೆಶಿರಾಡಿ ಘಾಟ್ಹಾಸನ
Share This Article
Facebook Whatsapp Whatsapp Telegram

Cinema news

Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood
Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories
Mohanlal CJ Roy 1
ಸಿಜೆ ರಾಯ್‌ ‘ಸ್ನೇಹಿತನಿಗೂ ಮಿಗಿಲು’ – ನಟ ಮೋಹನ್ ಲಾಲ್ ಭಾವನಾತ್ಮಕ ಪೋಸ್ಟ್‌
Bengaluru City Cinema Latest South cinema Top Stories
yash mother pushpa compound demolition 1
ನಟ ಯಶ್‌ ತಾಯಿ ಹಾಸನ ಸೈಟ್‌ ಜಟಾಪಟಿ – ಕಾಂಪೌಂಡ್‌ ಕೆಡವಿದ್ದ ಮಾಲೀಕನ ಜೊತೆ ವಾಗ್ವಾದ
Cinema Hassan Latest Main Post Sandalwood

You Might Also Like

Price Hike 3
Bengaluru City

ಬೇಸಿಗೆಗೂ ಮುನ್ನವೇ ಬೆಲೆ ಏರಿಕೆ ಹೊಡೆತ – ಅಕ್ಕಿ, ಬೇಳೆಕಾಳುಗಳ ಬೆಲೆ ಹೆಚ್ಚಳ!

Public TV
By Public TV
1 hour ago
Team India 3
Cricket

ಸಿಡಿಲಬ್ಬರದ ಬ್ಯಾಟಿಂಗ್‌, ಬೆಂಕಿ ಬೌಲಿಂಗ್‌ – ರನ್‌ ಮಳೆಯಲ್ಲಿ ಗೆದ್ದ ಭಾರತ, 4-1 ರಲ್ಲಿ ಸರಣಿ ಜಯ

Public TV
By Public TV
2 hours ago
Inspector Govindaraju Lokayukta Trap
Bengaluru City

ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್ ಗೋವಿಂದರಾಜು – ವಿಚಾರಣೆಯಲ್ಲಿ ಮತ್ತಷ್ಟು ವಿಚಾರ ಬೆಳಕಿಗೆ

Public TV
By Public TV
3 hours ago
Suryakumar Yadav and Ishan Kishan
Cricket

ಸಿಕ್ಸರ್‌, ಬೌಂಡರಿಯಿಂದಲೇ 84 ರನ್‌ – ಇಶಾನ್‌ ಕಿಶನ್‌ ಸಿಡಿಲಬ್ಬರದ ಶತಕ, ಕಿವೀಸ್‌ ಕಂಗಾಲು

Public TV
By Public TV
3 hours ago
Nikhil Kumaraswamy
Districts

ನಾನು ಯಾವ ಕ್ಷೇತ್ರದಲ್ಲಿ ನಿಲ್ಲಬೇಕು, ಯಾವಾಗ ನಿಲ್ಲಬೇಕು ಎಂದು ಜನ ತೀರ್ಮಾನಿಸುತ್ತಾರೆ: ನಿಖಿಲ್

Public TV
By Public TV
3 hours ago
Epstein files
Latest

ಅಮೆರಿಕದ ಎಪ್‌ಸ್ಟೀನ್ ಲೈಂಗಿಕ ಕೇಸ್‌ನ ಮತ್ತೊಂದು ಫೈಲ್ ರಿಲೀಸ್; ಟ್ರಂಪ್ ಹೆಸರು, ಮೋದಿ ಇಸ್ರೇಲ್ ಭೇಟಿಯ ಉಲ್ಲೇಖ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?