ಬೆಳಗಾವಿ: ಕರ್ನಾಟಕ ರಾಜ್ಯೋತ್ಸವಕ್ಕೆ (Karnataka Rajyotsava) ಪ್ರತಿಯಾಗಿ ಎಂಇಎಸ್ (MES) ನಡೆಸಿದ ಕರಾಳ ದಿನಾಚರಣೆ ಸಂಬಂಧ 45ಕ್ಕೂ ಹೆಚ್ಚು ಎಂಇಎಸ್ ನಾಯಕರು ಹಾಗೂ ಕಾರ್ಯಕರ್ತರ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನೀಡದಿದ್ದರೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ಮನವಿಗೆ ಸ್ಪಂದಿಸಿ ಕಾರ್ಯಕರ್ತರು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ನಾಲ್ಕು ಅನುಮಾನಗಳಿಗೆ ಕಾರಣವಾದ ಗುರುಪ್ರಸಾದ್ ಸಾವು!
ಕರ್ನಾಟಕ ಸರ್ಕಾರವು ಕಾಲಕಾಲಕ್ಕೆ ನಾಯಕರು ಮತ್ತು ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ಗಡಿ ಒಡೆಯಲು ಪ್ರಯತ್ನಿಸುತ್ತಿದೆ. ಆದರೆ ಕರ್ನಾಟಕ ಸರ್ಕಾರವು ಈ ಬಾರಿ ಮರಾಠಿ ಭಾಷಿಕ ಪತ್ರಕರ್ತರು ಮತ್ತು ವಕೀಲರ ವಿರುದ್ಧವೂ ಪ್ರಕರಣಗಳನ್ನು ದಾಖಲಿಸಿದೆ ಎಂದು ಸಮಿತಿ ಈಗ ಆರೋಪ ಮಾಡಿದೆ.
ಮಾಜಿ ಶಾಸಕ ಮನೋಹರ ಕಿಣೇಕರ, ಮಾಜಿ ಮೇಯರ್ ಮಾಲೋಜಿ ಅಷ್ಟೇಕರ, ಪ್ರಕಾಶ ಮರಗಾಳೆ, ರಮಾಕಾಂತ ಕೊಂಡುಸ್ಕರ್, ರಂಜಿತ್ ಚವ್ಹಾಣ, ಅಮರ ಯಳೂರಕರ, ಗಜಾನನ ಪಾಟೀಲ, ನೇತಾಜಿ ಜಾಧವ, ಅಂಕುಶ ಕೇಸರಕರ, ವಿಕಾಸ ಕಲಘಟಗಿ, ಮದನ ಬಾಮನೆ, ಸಚಿನ ಕೇಳೇಕರ, ಪ್ರಶಾಂತ ಭಾಮನೆ, ಪ್ರಶಾಂತ್, ಕಿರಣ್ ಗಾವಡೆ, ಮಹಾದೇವ ಪಾಟೀಲ, ಶುಭಂ ಶೆಲ್ಕೆ, ರೇಣು ಕಿಲ್ಲೇಕರ್, ಸರಸ್ವತಿ ಪಾಟೀಲ, ಸರಿತಾ ಪಾಟೀಲ, ಕಿರಣ ಹುದ್ದಾರ್, ದತ್ತಾ ಉಘಾಡೆ, ಶ್ರೀಕಾಂತ ಕದಂ, ಚಂದ್ರಕಾಂತ ಕೊಂಡುಸ್ಕರ, ಸಂತೋಷ ಕೃಷ್ಣಾಚೆ, ಗುಂಡು ಕದಂ, ಸುನೀಲ ಬಾಳೇಕುಂದ್ರಿ, ಗಣೇಶ ದಡ್ಡಿಕರ, ಪ್ರಕಾಶ ಶಿರೋಲ್ಕರ್, ಆರ್. ಎಂ. ಚೌಗುಲೆ, ಸುಧೀರ ಚವ್ಹಾಣ, ಮಲ್ಲಪ್ಪ ಪಾಟೀಲ, ನಾಗೇಶ ಪಾಟೀಲ, ಸೂರಜ್ ಯಳ್ಳೂರಕರ, ಶ್ರೀಕಾಂತ ಚವ್ಹಾಣ, ಸದಾ ಚವ್ಹಾಣ, ಕಿರಣ ಮೋದಗೇಕರ, ಶಿವಾಜಿ ಮಂಡೋಳಕರ ಸೇರಿದಂತೆ ಹಲವು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ಆತ್ಮಹತ್ಯೆ ಮಾಡಿಕೊಂಡ ಪತಿ ಗುರುಪ್ರಸಾದ್ ನೋಡಲು ಕಣ್ಣೀರಿಡುತ್ತಲೇ ಧಾವಿಸಿದ 2ನೇ ಪತ್ನಿ