Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಂಗಳೂರು ವಿವಿಗೆ ಡಾ. ಮನಮೋಹನ್‌ ಸಿಂಗ್‌ ಹೆಸರಿಡಲು ಜೆಡಿಎಸ್‌ ವಿರೋಧ

Public TV
Last updated: March 9, 2025 12:05 pm
Public TV
Share
2 Min Read
bengaluru university manmohan singh
SHARE

– ಮೈಸೂರಲ್ಲಿ ಕಟ್ಟುತ್ತಿರೋ ನಿಮ್ಮ ಹೊಸ ಮನೆಗೆ ‘ಮನಮೋಹನ್‌ ಸಿಂಗ್’‌ ಅಂತ ಹೆಸರಿಡಿ
– ನಿಮ್ಮ ಸೊಸೆ ಒಡೆತನದ ಕ್ಲಬ್‌ಗೆ ಮರುನಾಮಕರಣ ಮಾಡಿ ಅಂತ ಸಿದ್ದರಾಮಯ್ಯಗೆ ಟಾಂಗ್‌

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯಕ್ಕೆ (Bengaluru University) ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ (Manmohan Singh) ಅವರ ಹೆಸರಿಡಲು ಜೆಡಿಎಸ್‌ ವಿರೋಧ ವ್ಯಕ್ತಪಡಿಸಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಜೆಡಿಎಸ್‌, ಸಿಎಂ ಸಿದ್ದರಾಮಯ್ಯ ಅವರೇ, ಬೆಂಗಳೂರು ವಿಶ್ವವಿದ್ಯಾಲಯ ನಿಮ್ಮ ಮನೆತನದ ಆಸ್ತಿಯಲ್ಲ. ಕಾಂಗ್ರೆಸ್ ಪಕ್ಷದ ಆಸ್ತಿಯೂ ಅಲ್ಲ ಎಂದು ಟಾಂಗ್‌ ಕೊಟ್ಟಿದೆ. ಇದನ್ನೂ ಓದಿ: ಹಠಾತ್‌ ಎದೆನೋವು – ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಆಸ್ಪತ್ರೆಗೆ ದಾಖಲು

‘ @siddaramaiah ಅವರೇ ಬೆಂಗಳೂರು ವಿಶ್ವವಿದ್ಯಾಲಯ ನಿಮ್ಮ ಮನೆತನದ ಆಸ್ತಿಯಲ್ಲ. ಕಾಂಗ್ರೆಸ್ ಪಕ್ಷದ ಆಸ್ತಿಯೂ ಅಲ್ಲ..

“ಬೆಂಗಳೂರು” ಎಂಬುದು ಈ ನೆಲಮೂಲದ ಹೆಗ್ಗುರುತು. ಸಮಸ್ತ ಕನ್ನಡಿಗರ ಹೆಮ್ಮೆ. ಹಾಗೂ ಕನ್ನಡಿಗರ ಪ್ರತಿಧ್ವನಿ. ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆದ ನಗರ. ಬೆಂಗಳೂರು ಎಂಬುದೇ ಒಂದು ವಿಶ್ವ ಪ್ರಸಿದ್ಧ…

— Janata Dal Secular (@JanataDal_S) March 9, 2025

ಎಕ್ಸ್‌ ಪೋಸ್ಟ್‌ನಲ್ಲಿ ಏನಿದೆ?
ಸಿಎಂ ಸಿದ್ದರಾಮಯ್ಯ ಅವರೇ ಬೆಂಗಳೂರು ವಿಶ್ವವಿದ್ಯಾಲಯ ನಿಮ್ಮ ಮನೆತನದ ಆಸ್ತಿಯಲ್ಲ. ಕಾಂಗ್ರೆಸ್ ಪಕ್ಷದ ಆಸ್ತಿಯೂ ಅಲ್ಲ. ‘ಬೆಂಗಳೂರು’ ಎಂಬುದು ಈ ನೆಲಮೂಲದ ಹೆಗ್ಗುರುತು. ಸಮಸ್ತ ಕನ್ನಡಿಗರ ಹೆಮ್ಮೆ. ಹಾಗೂ ಕನ್ನಡಿಗರ ಪ್ರತಿಧ್ವನಿ. ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆದ ನಗರ. ಬೆಂಗಳೂರು ಎಂಬುದೇ ಒಂದು ವಿಶ್ವ ಪ್ರಸಿದ್ಧ ಬ್ರ್ಯಾಂಡ್. ಅದೇ ಬೆಂಗಳೂರು ಹೆಸರಿಗೆ ಇರುವ ಶಕ್ತಿ.

ನಮಗೆ ಡಾ.ಮನಮೋಹನ್ ಸಿಂಗ್ ಅವರ ಮೇಲೆ ಅಪಾರವಾದ ಗೌರವವಿದೆ. ಆದರೆ, ‘ಬೆಂಗಳೂರು ನಗರ ವಿವಿ’ಗೆ ಪರ್ಯಾಯವಾಗಿ ಬೇರೆ ಯಾವುದೇ ಹೆಸರಿಡಲು ತೀವ್ರ ವಿರೋಧವಿದೆ. ಈ ವಿಚಾರದಲ್ಲಿ ಕರ್ನಾಟಕದ ಜನತೆಯೂ ಸಹ ಕಾಂಗ್ರೆಸ್‌ ಸರ್ಕಾರದ ಈ ನಿರ್ಧಾರವನ್ನು ಒಪ್ಪುವುದಿಲ್ಲ.

ರಾಜ್ಯದಲ್ಲಿ ಕನ್ನಡ ಭಾಷೆ, ನೆಲ, ಜಲ ನಾಡಿಗಾಗಿ ಹೋರಾಡಿದ ಸಾವಿರಾರು ಕನ್ನಡಿಗ ಸಾಧಕರು ಇದ್ದಾರೆ. ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಕರ್ನಾಟಕಕ್ಕೆ ಕೀರ್ತಿ ತಂದ ಮಹನೀಯರಿದ್ದಾರೆ. ಆ ಕನ್ನಡಿಗರು ಕಾಂಗ್ರೆಸ್ಸಿಗರ ಕಣ್ಣಿಗೆ ಬೀಳಲಿಲ್ಲವೇ?

cm siddaramaiah 1

ಸಿದ್ದರಾಮಯ್ಯನವರೇ.. ಅಷ್ಟು ಅಭಿಮಾನ, ಗೌರವ ಇದ್ದರೆ ಮೈಸೂರಿನಲ್ಲಿ ನಿರ್ಮಿಸುತ್ತಿರುವ ನಿಮ್ಮ ಹೊಸ ಮನೆಗೆ ಮನಮೋಹನ್ ಸಿಂಗ್ ನಿವಾಸ ಎಂದು ಹೆಸರಿಟ್ಟುಕೊಳ್ಳಿ. ನಿಮ್ಮ ಸೊಸೆಯ ಒಡೆತನದಲ್ಲಿರುವ ಬಹುಕೋಟಿ ಮೌಲ್ಯದ ಐಶಾರಾಮಿ ಕ್ಲಬ್‌ಗೆ ಮರುನಾಮಕರಣ ಮಾಡಿಕೊಳ್ಳಿ.

ದೆಹಲಿಯ ಹೊಸದಾಗಿ ನಿರ್ಮಿಸಿದ ಕಾಂಗ್ರೆಸ್‌ ಕಚೇರಿಗೆ ‘ಇಂದಿರಾ ಭವನ’ ಎಂದು ಹೆಸರಿಟ್ಟಿರಿ. ಅದಕ್ಕೆ ಮನಮೋಹನ್‌ ಸಿಂಗ್‌ ಹೆಸರಿಡಲು ಇಟಲಿ ಕಾಂಗ್ರೆಸ್‌ನ ಆಪ್ತರ ಗುಂಪು ಒಪ್ಪಲಿಲ್ಲ ಎಂಬುದು ತಮಗೆ ತಿಳಿದಿರುವ ವಿಷಯ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಆಡಳಿತವಿರುವ ಕಾರಣ ‘ಗುಲಾಮಿ ಕಾಂಗ್ರೆಸ್‌’ ನಾಯಕರು, ಬೆಂಗಳೂರಿನಲ್ಲಿ ಬೇಳೆ ಬೇಯಿಸಿಕೊಳ್ಳುತ್ತೀರಿ. ಇದನ್ನೂ ಓದಿ: ಏ.4ರಿಂದ 14ರವರೆಗೆ ಬೆಂಗಳೂರು ಕರಗ – 20 ಲಕ್ಷ ಜನ ಭಾಗಿ ನಿರೀಕ್ಷೆ

ಕೆಲ ತಿಂಗಳ ಹಿಂದಷ್ಟೆ ಬೆಂಗಳೂರಿನಲ್ಲಿ ರಾಜೀವ್ ಗಾಂಧಿ ಕಂಚಿನ ಪ್ರತಿಮೆ ಅನಾವರಣಗೊಳಿಸಲಾಗಿತ್ತು. ಈಗ ಬೆಂಗಳೂರು ವಿವಿಗೆ ಮನಮೋಹನ್‌ ಸಿಂಗ್‌ ಹೆಸರು ನಾಮಕರಣ ಮಾಡುವುದಾಗಿ ಘೋಷಿಸಿದ್ದೀರಿ. ಹೈಕಮಾಂಡ್‌ ಗುಲಾಮಗಿರಿಗೆ ಸದಾ ‘ಸಿದ್ಧ’ರಾಮಯ್ಯ ಎಂದು ಜೆಡಿಎಸ್‌ ಕಾಲೆಳೆದಿದೆ.

TAGGED:bengaluru universityjdsManmohan Singhsiddaramaiahಜೆಡಿಎಸ್ಬೆಂಗಳೂರು ವಿಶ್ವವಿದ್ಯಾಲಯಮನಮೋಹನ್ ಸಿಂಗ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Jyothi Rai
ʻಕಿಲ್ಲರ್‌ʼ ಬ್ಯೂಟಿಯ ಮಾದಕ ಲುಕ್‌ಗೆ ಪಡ್ಡೆ ಹುಡುಗರು ಫಿದಾ – ಟ್ಯಾಟೂ ಮಸ್ತ್‌ ಆಗಿದೆ ಅಂದ್ರು ಫ್ಯಾನ್ಸ್‌!
3 hours ago
honne gowda
ದರ್ಶನ್ ಮೇಕಪ್ ಆರ್ಟಿಸ್ಟ್ ಹೊನ್ನೆಗೌಡ ನಿಧನ- ಭಾವುಕ ಪೋಸ್ಟ್ ಹಂಚಿಕೊಂಡ ದಚ್ಚು
6 hours ago
Ranya Rao 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ | ನಟಿ ರನ್ಯಾರಾವ್‌ಗೆ ಜಾಮೀನು ಮಂಜೂರು
3 hours ago
Pavi Poovappa 2
ಮುದ್ದಿನ ನಾಯಿಗೋಸ್ಕರ ಪವಿ ಪೂವಪ್ಪ ಲವ್ ಬ್ರೇಕಪ್ – ಕಣ್ಣೀರಿಟ್ಟ ‘ಬಿಗ್ ಬಾಸ್’ ಸ್ಪರ್ಧಿ
6 hours ago

You Might Also Like

DK Shivakumar 5
Bengaluru City

ತಗ್ಗು ಪ್ರದೇಶಗಳಲ್ಲಿ ಬೇಸ್ಮೆಂಟ್‌ ನಿರ್ಮಾಣಕ್ಕೆ ಅವಕಾಶವಿಲ್ಲ – ಹೊಸ ಕಾನೂನು ತರುತ್ತೇನೆ ಎಂದ ಡಿಕೆಶಿ

Public TV
By Public TV
3 minutes ago
Asim Munir
Latest

ಭಾರತದ ದಾಳಿಗೆ ಬೆಚ್ಚಿ ಬಚ್ಚಿಟ್ಟುಕೊಂಡಿದ್ದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್‌ಗೆ ಫೀಲ್ಡ್ ಮಾರ್ಷಲ್ ಆಗಿ ಬಡ್ತಿ

Public TV
By Public TV
31 minutes ago
Brigadier Mudit Mahajan
Latest

ಪಾಕ್ ಮತ್ತೆ ಸವಾಲು ಹಾಕಿದ್ರೆ, ನಾವು ಮಾತಿನಿಂದಲ್ಲ.. ಬೆಂಕಿ, ರಾಷ್ಟ್ರದ ದೃಢ ಸಂಕಲ್ಪದೊಂದಿಗೆ ಪ್ರತಿಕ್ರಿಯಿಸ್ತೇವೆ – ಮುದಿತ್ ಮಹಾಜನ್

Public TV
By Public TV
33 minutes ago
Bank Mannager
Bengaluru City

ಕನ್ನಡ ಮಾತಾಡಿ ಅಂದಿದ್ದಕ್ಕೆ SBI ಬ್ಯಾಂಕ್ ಮ್ಯಾನೇಜರ್ ಕಿರಿಕ್ – ಯಾವತ್ತೂ ಕನ್ನಡ ಮಾತಾಡಲ್ಲ ಅಂತ ದರ್ಪ!

Public TV
By Public TV
1 hour ago
cdr phone
Latest

ಸ್ಪೇನ್‌ನಲ್ಲಿ ಮತ್ತೆ ಮೊಬೈಲ್ ನೆಟ್‌ವರ್ಕ್‌ಗಳು ಅಸ್ತವ್ಯಸ್ತ

Public TV
By Public TV
2 hours ago
Mallikarjun Kharge
Bellary

ಪಹಲ್ಗಾಮ್‌ ದಾಳಿ ಬಗ್ಗೆ ಮೋದಿಗೆ ಗೊತ್ತಿತ್ತು, ಅದಕ್ಕೆ ಕಾಶ್ಮೀರ ಭೇಟಿ ಕ್ಯಾನ್ಸಲ್‌ ಮಾಡಿಸಿದ್ರು – ಮಲ್ಲಿಕಾರ್ಜುನ ಖರ್ಗೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?