Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೆಡಿಎಸ್, ಕಾಂಗ್ರೆಸ್ ಮೈತ್ರಿ: 2019ರಲ್ಲಿ ಮೋದಿಗೆ ಹಿನ್ನಡೆ ಆಗುತ್ತಾ? ರಾಜಕೀಯ ಲೆಕ್ಕಾಚಾರ ಹೇಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜೆಡಿಎಸ್, ಕಾಂಗ್ರೆಸ್ ಮೈತ್ರಿ: 2019ರಲ್ಲಿ ಮೋದಿಗೆ ಹಿನ್ನಡೆ ಆಗುತ್ತಾ? ರಾಜಕೀಯ ಲೆಕ್ಕಾಚಾರ ಹೇಗೆ?

Bengaluru City

ಜೆಡಿಎಸ್, ಕಾಂಗ್ರೆಸ್ ಮೈತ್ರಿ: 2019ರಲ್ಲಿ ಮೋದಿಗೆ ಹಿನ್ನಡೆ ಆಗುತ್ತಾ? ರಾಜಕೀಯ ಲೆಕ್ಕಾಚಾರ ಹೇಗೆ?

Public TV
Last updated: May 23, 2018 11:16 am
Public TV
Share
3 Min Read
modi rahul hdk sonia karnataka
SHARE

ಬೆಂಗಳೂರು: 2019ರ ಲೋಕಸಭಾ ಚುನಾವಣೆ ಮೋದಿಯನ್ನು ಮಣಿಸಲು ವಿರೋಧ ಪಕ್ಷಗಳು ಮಹಾಮೈತ್ರಿಗೆ ಕರೆ ನೀಡಿದ ಪರಿಣಾಮ ದಕ್ಷಿಣ ಭಾರತದಲ್ಲಿ ಕರ್ನಾಟಕದ ಮೂಲಕ ಪ್ರವೇಶಿಸಲು ಮುಂದಾಗಿದ್ದ ಬಿಜೆಪಿಯ ಬಾಗಿಲು ಬಂದ್ ಆಗಿದೆ. ಬಿಜೆಪಿಗೆ ಅಧಿಕಾರ ತಪ್ಪಿಸಲು ಜೆಡಿಎಸ್ ಕಾಂಗ್ರೆಸ್ ತೆಗೆದುಕೊಂಡ ರಾಜಕೀಯ ನಡೆ 2019ರಲ್ಲಿ ಲೋಕಸಭಾ ಚುನಾವಣೆಯ ವೇಳೆ ಪ್ರಧಾನಿ ಮೋದಿಯ ಶಕ್ತಿಯನ್ನು ಕುಂದಿಸುತ್ತಾ ಎನ್ನುವ ಪ್ರಶ್ನೆ ಈಗ ಎದ್ದಿದೆ.

ಹೌದು, ಇಲ್ಲಿಯವರೆಗೆ ಹಳೆ ಮೈಸೂರಿನಲ್ಲಿ ಜಾಸ್ತಿ ಪ್ರಭಾವ ಹೊಂದಿದ್ದ ಜೆಡಿಎಸ್ ಈಗ ಸರ್ಕಾರ ರಚಿಸಿದ ಪರಿಣಾಮ ಮುಂದೆ ರಾಜ್ಯವ್ಯಾಪಿ ತನ್ನ ಬಲವನ್ನು ವಿಸ್ತರಿಸುತ್ತಾ? ಕಾಂಗ್ರೆಸ್ ಶಕ್ತಿಯನ್ನು ಕಡಿಮೆ ಮಾಡುತ್ತಾ? ಅಥವಾ ಲೋಕಸಭಾ ಚುನಾವಣೆಯಲ್ಲಿ ಈ ಎರಡು ಪಕ್ಷಗಳು ಬಿಜೆಪಿಯನ್ನು ಸೋಲಿಸುತ್ತಾ ಎನ್ನುವ ವಿಶ್ಲೇಷಣೆ ಆರಂಭವಾಗಿದೆ.

ಸದ್ಯಕ್ಕೆ ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಭದ್ರ ನೆಲೆ ಇರುವುದು ಕರ್ನಾಟಕದಲ್ಲಿ. ಹೀಗಾಗಿ ಕಾಂಗ್ರೆಸ್ ಜೆಡಿಎಸ್ ಜೊತೆ ಚುನಾವಣಾ ಪೂರ್ವಮೈತ್ರಿ ಮಾಡಿಕೊಂಡರೆ ಒಟ್ಟು 28 ಕ್ಷೇತ್ರಗಳಿರುವ ಕರ್ನಾಟಕದಲ್ಲಿ ಬಿಜೆಪಿಗೆ ಬಲವಾದ ಹೊಡೆತ ಬೀಳುವ ಸಾಧ್ಯತೆಯಿದೆ. ಯಾಕೆಂದರೆ ಮೂರು ಲೋಕಸಭಾ ಚುನಾವಣೆಯ ಮತಗಳಿಕೆಯ ಪ್ರಮಾಣವನ್ನು ತೆಗೆದುಕೊಂಡು ದಳ ಮತ್ತು ಕಾಂಗ್ರೆಸ್ ಮತವನ್ನು ಸೇರಿಸಿದರೆ 50%ಕ್ಕೂ ಹೆಚ್ಚು ಮತಗಳು ಆಗುತ್ತದೆ. ಒಂದು ವೇಳೆ ಮಾತುಕತೆ ಯಶಸ್ವಿಯಾಗಿ ಈ ಚುನಾವಣೆಯಲ್ಲೂ ಮೈತ್ರಿ ಮಾಡಿಕೊಂಡರೆ ಬಿಜೆಪಿಗೆ ಹೊಡೆತ ನೀಡುವ ಸಾಧ್ಯತೆಯನ್ನು ಅಲ್ಲಗೆಳೆಯುವಂತಿಲ್ಲ.

rahul gandhi hd kumaraswamy

ಲೆಕ್ಕಾಚಾರ ಹೇಗೆ?
2004ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 18, ಕಾಂಗ್ರೆಸ್ 8, ಜೆಡಿಎಸ್ 2 ಸ್ಥಾನಗಳನ್ನು ಗೆದ್ದಿತ್ತು. ಈ ಚುನಾವಣೆಯಲ್ಲಿ ಬಿಜೆಪಿಗೆ 34.8% ಮತ, ಕಾಂಗ್ರೆಸ್ 36.8% ಮತಗಳನ್ನು ಪಡೆದರೆ ಜೆಡಿಎಸ್ 20.4% ಮತವನ್ನು ಪಡೆದಿತ್ತು.

2009ರ ಚುನಾವಣೆಯಲ್ಲಿ ಬಿಜೆಪಿ 19, ಕಾಂಗ್ರೆಸ್ 6, ಜೆಡಿಎಸ್ 3 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಈ ಚುನಾವಣೆಯಲ್ಲಿ ಬಿಜೆಪಿ 41.6%, ಕಾಂಗ್ರೆಸ್ 37.6%, ಜೆಡಿಎಸ್‍ಗೆ 13.6% ಮತ ಬಿದ್ದಿತ್ತು.

ಇನ್ನು 2014ರಲ್ಲಿ ಮೋದಿ ಅಲೆಯಿಂದಾಗಿ ಬಿಜೆಪಿ ಅತಿ ಹೆಚ್ಚು ಸ್ಥಾನವನ್ನು ಗೆದ್ದರೂ 2009ಕ್ಕೆ ಹೋಲಿಸಿದರೆ 2 ಸ್ಥಾನ ಕಡಿಮೆ ಗೆದ್ದುಕೊಂಡಿತ್ತು. ಬಿಜೆಪಿ 17, ಕಾಂಗ್ರೆಸ್, 9 ಜೆಡಿಎಸ್ 2 ಕ್ಷೇತ್ರಗಳಲ್ಲಿ ವಿಜಯದ ನಗೆ ಬೀರಿತ್ತು. ಬಿಜೆಪಿಗೆ 43.4% ಮತ ಬಿದ್ದಿದ್ದರೆ, ಕಾಂಗ್ರೆಸ್ 41.2%, ಜೆಡಿಎಸ್‍ಗೆ 11.1% ಮತಗಳು ಬಿದ್ದಿತ್ತು.

ಒಂದು ವೇಳೆ ಮೈತ್ರಿ ನಡೆದು ಈ ಲೆಕ್ಕಾಚಾರದ ಪ್ರಕಾರ ಮತ ಬಿದ್ದರೆ ಬಿಜೆಪಿ ಭಾರೀ ಹೊಡೆತ ಬೀಳುವುದು ನಿಶ್ಚಿತ. ಆದರೆ ಈ ಮೈತ್ರಿ ಹೇಳಿದಷ್ಟು ಸುಲಭವೇ ಎನ್ನುವ ಪ್ರಶ್ನೆಗೆ ಸದ್ಯಕ್ಕೆ ಇಲ್ಲ ಎನ್ನುವ ಉತ್ತರ ಸಿಗುತ್ತದೆ.

ಯಾಕೆ ಕಷ್ಟ?
ಮಂಡ್ಯ, ಮೈಸೂರಿನಲ್ಲಿ ಜೆಡಿಎಸ್ ಪ್ರಾಬಲ್ಯವಿರುವ ಕಾರಣ ಕಾಂಗ್ರೆಸ್ ಈ ಕ್ಷೇತ್ರಗಳನ್ನು ಬಿಟ್ಟುಕೊಡಬಹುದು. ಆದರೆ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಬಲಿಷ್ಟವಾಗಿದೆ. ಈ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಿರಂತರವಾಗಿ ಗೆಲ್ಲುತ್ತಿರುವ ಕಾರಣ ಈ ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟುಕೊಡುವ ಸಾಧ್ಯತೆ ಕಡಿಮೆ.

ಹಳೆ ಮೈಸೂರು ಭಾಗದ ಜೊತೆ ರಾಯಚೂರು, ವಿಜಯಪುರದಲ್ಲಿ ಜೆಡಿಎಸ್ ಬಲವಾಗಿದ್ದರೂ ಕಾಂಗ್ರೆಸ್ ಅಷ್ಟೇ ಪ್ರಬಲವಾಗಿದೆ. ಹೀಗಾಗಿ ಮೈತ್ರಿಗೆ ಇಲ್ಲಿನ ಸ್ಥಳೀಯ ನಾಯಕರ ಪ್ರಭಾವವು ಇರುತ್ತದೆ. ಒಂದು ವೇಳೆ ಎರಡು ಪಕ್ಷಗಳ ಮಾತುಕತೆ ಯಶಸ್ವಿಯಾಗಿ ಸ್ಥಾನ ಹಂಚಿಕೆಯಾದಲ್ಲಿ ಮೋದಿಗೆ ಹಿನ್ನಡೆಯಾಗಬಹುದು ಎನ್ನುವ ವಿಶ್ಲೇಷಣೆ ಆರಂಭವಾಗಿದೆ.

Modi 1

ಏನು ಆಗಲ್ಲ:
ಈ ವಿಧಾನಸಭಾ ಚುನಾವಣೆಯಲ್ಲಿ ಜನ ಸಿದ್ದರಾಮಯ್ಯನವರ ಆಡಳಿತದಿಂದ ರೋಸಿ ಹೋಗಿ ಜನ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಿದ್ದಾರೆ ಹೊರತು ಬಿಜೆಪಿ ವಿರುದ್ಧದ ದ್ವೇಷದಿಂದ ಅಲ್ಲ. ರಾಜ್ಯದಲ್ಲಿ ಆಡಳಿತದಲ್ಲಿರುವ ಪಕ್ಷವನ್ನು ಕರ್ನಾಟಕದ ಜನ ಒಪ್ಪುತ್ತಾರೆ ಎನ್ನುವುದು ಶುದ್ಧ ಸುಳ್ಳು. ಈ ವಾದವನ್ನು ಮುಂದಿಟ್ಟರೆ 2014ರಲ್ಲೂ ಇಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನವನ್ನು ಗೆಲ್ಲಬೇಕಿತ್ತು. ಸದ್ಯ ವಿರೋಧ ಪಕ್ಷಗಳಲ್ಲಿ ಮೋದಿಗೆ ಸರಿಸಮಾನವಾದ ನಾಯಕರಿಲ್ಲ. ಸಂಪುಟ ರಚನೆಯಾಗುವಾಗಲೇ ಭಿನ್ನಾಭಿಪ್ರಾಯಗಳು ಬಂದಿದ್ದು, ಅವರಿಗೆ ಅವರ ಶಾಸಕರ ಮೇಲೆ ನಂಬಿಕೆ ಇಲ್ಲದೇ ಅವರನ್ನು ರೆಸಾರ್ಟ್ ನಲ್ಲಿ ಕೂಡಿ ಹಾಕಿದ್ದಾರೆ. ಹೀಗಿರುವಾಗ ಸರ್ಕಾರ ಒಂದು ವರ್ಷ ಪೂರೈಸುತ್ತದೆ ಎನ್ನುವ ನಂಬಿಕೆಯೇ ನಮಗಿಲ್ಲ. 2019ರ ಚುನಾವಣೆಯಲ್ಲಿ ಎಲ್ಲಾ 28 ಕ್ಷೇತ್ರಗಳನ್ನು ಗೆಲ್ಲಲು ನಾವು ಪ್ರಯತ್ನ ಮಾಡುತ್ತೇವೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

dks hdk congress jds

TAGGED:bjpcongresselectionsjdskarnatakaloksabhanarendra modiಎಚ್‍ಡಿ ದೇವೇಗೌಡಕರ್ನಾಟಕಕಾಂಗ್ರೆಸ್ಜೆಡಿಎಸ್ನರೇಂದ್ರ ಮೋದಿಬಿಜೆಪಿರಾಹುಲ್ ಗಾಂಧಿಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

public tv vidhyapeeta education expo
Bengaluru City

ವಿದ್ಯಾಪೀಠ 9ನೇ ಆವೃತ್ತಿ ಭರ್ಜರಿ ಯಶಸ್ಸು – ಎರಡು ದಿನಗಳಲ್ಲಿ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಎಕ್ಸ್‌ಪೋಗೆ ಭೇಟಿ

Public TV
By Public TV
6 minutes ago
IPL 2026 GT won by 8 wickets
Cricket

ಸಾಯಿ ಸುದರ್ಶನ್‌ ಕಮಾಲ್‌ – ಚೆನೈ ವಿರುದ್ಧ ಗುಜರಾತ್‌ಗೆ 8 ವಿಕೆಟ್‌ಗಳ ಜಯ

Public TV
By Public TV
10 minutes ago
Harbhajan Singh
Latest

ಹರ್ಭಜನ್‌ ಸಿಂಗ್‌ಗೆ ನೀಡಿದ್ದ ಭದ್ರತೆ ಹಿಂತೆಗೆದುಕೊಂಡ ಪಂಜಾಬ್‌ ಸರ್ಕಾರ

Public TV
By Public TV
1 hour ago
H D Kumaraswamy
Chitradurga

ಡಿ.ಸುಧಾಕರ್‌ ಸ್ಥಿತಿ ಗಂಭೀರ – ಕೆಲ‌ವರು ಇಂತಹ ಸಂದರ್ಭ ದುರ್ಬಳಕೆ ಮಾಡಿಕೊಳ್ಳುವುದರಲ್ಲಿ ಎಕ್ಸ್‌ಪರ್ಟ್‌ ಎಂದ ಹೆಚ್‌ಡಿಕೆ

Public TV
By Public TV
2 hours ago
DK Shivakumar 1 1
Bengaluru City

ನಾಯಕತ್ವ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ: ಡಿಕೆಶಿ

Public TV
By Public TV
2 hours ago
US AWACS aircraft
Latest

ಇರಾನ್ ದಾಳಿಯಲ್ಲಿ ಅಮೆರಿಕದ ನೆಲೆಗಳಿಗೆ ಭಾರಿ ಹಾನಿ – ದುರಸ್ತಿಗೆ ಬೇಕು ಶತಕೋಟಿ ಡಾಲರ್‌

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?