ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಕಿತರ ಸಂಖ್ಯೆಯಲ್ಲಿ ಇತ್ತೀಚೆಗೆ ಏರಿಳಿತಗಳು ಆಗುತ್ತಲೇ ಇದೆ. ಇಂದು ರಾಜ್ಯದಲ್ಲಿ 1,992 ಮಂದಿಗೆ ಸೋಕು ತಗುಲಿದ್ದು, ಮೂವರು ಮೃತಪಟ್ಟಿರುವ ಪ್ರಕರಣ ದಾಖಲಾಗಿದೆ.
ಇಂದು ರಾಜ್ಯದಲ್ಲಿ 2,107 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 39,63,294 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇದುವರೆಗೆ ಒಟ್ಟು 40,111 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಇಂದಿನ ಪಾಸಿಟಿವಿಟಿ ದರ ಶೇ.6.46 ಇದೆ. 11,067 ಸಕ್ರಿಯ ಪ್ರಕರಣಗಳಿವೆ. ಇದನ್ನೂ ಓದಿ: ಖರ್ಗೆ ಸಮ್ಮುಖದಲ್ಲಿ ನ್ಯಾಷನಲ್ ಹೆರಾಲ್ಡ್ ಕಚೇರಿ ಶೋಧ: ಅಧಿವೇಶನದ ಮಧ್ಯೆ ಸಮನ್ಸ್ ಜಾರಿಗೆ ಕಾಂಗ್ರೆಸ್ ಕಿಡಿ
ಇಂದು 30,834 ಮಂದಿಯನ್ನು (8,598 ರ್ಯಾಪಿಡ್ ಆಂಟಿಜನ್, 22,236 ಆರ್ಟಿ-ಪಿಸಿಆರ್) ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೆ 6,95,46,678 ಮಂದಿಯನ್ನು ಟೆಸ್ಟ್ ಮಾಡಲಾಗಿದೆ. ಇಂದು 51,020 ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಭಾರೀ ಮಳೆ- ಶುಕ್ರವಾರ ಮಂಡ್ಯ, ಚಾಮರಾಜನಗರ ಜಿಲ್ಲೆಯ ಶಾಲೆಗಳಿಗೆ ರಜೆ
ಆರೋಗ್ಯ ಇಲಾಖೆ ಬುಲೆಟಿನ್ ಪ್ರಕಾರ ಬೆಂಗಳೂರು ನಗರದಲ್ಲಿ 1,342 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ 35, ಬಾಗಲಕೋಟೆ 13, ಬಳ್ಳಾರಿ 54, ಬೆಳಗಾವಿ 68, ಬೀದರ್ 6, ಚಾಮರಾಜನಗರ 13, ಚಿಕ್ಕಬಳ್ಳಾಪುರ 12, ಚಿಕ್ಕಮಗಳೂರು 7, ಚಿತ್ರದುರ್ಗ 4, ದಕ್ಷಿಣ ಕನ್ನಡ 20, ದಾವಣಗೆರೆ 20, ಧಾರವಾಡ 48, ಗದಗ 17, ಹಾಸನ 39, ಹಾವೇರಿ 6, ಕಲಬುರಗಿ 10, ಕೊಡಗು 23, ಕೋಲಾರ 21, ಕೊಪ್ಪಳ 7, ಮಂಡ್ಯ 35, ಮೈಸೂರು 92, ರಾಯಚೂರು 24, ರಾಮನಗರ 3, ಶಿವಮೊಗ್ಗ 12, ತುಮಕೂರು 34, ಉಡುಪಿ 4, ಉತ್ತರ ಕನ್ನಡ 15, ವಿಜಯಪುರ 5 ಹಾಗೂ ಯಾದಗಿರಿಯಲ್ಲಿ 3 ಪ್ರಕರಣ ಪತ್ತೆಯಾಗಿದೆ. ಧಾರವಾಡ, ಗದಗ, ತುಮಕೂರು ಜಿಲ್ಲೆಗಳಲ್ಲಿ ಮೂವರು ಬಲಿ ಆಗಿದ್ದಾರೆ.