ಬೆಂಗಳೂರು: ದಿನೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ನಿನ್ನೆ 1,800 ಇದ್ದ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಇಂದು ದಿಢೀರನೆ 2 ಸಾವಿರ ಗಡಿ ದಾಟಿದೆ. ರಾಜ್ಯದಲ್ಲಿಂದು 2,130 ಹೊಸ ಪ್ರಕರಣಗಳು ದಾಖಲಾಗಿದ್ದು, ನಾಲ್ವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಇಂದು ರಾಜ್ಯದಲ್ಲಿ 1,395 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 39,53,776 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇಂದು 32,685 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೆ 6,77,36,222 ಮಂದಿಯನ್ನು ಟೆಸ್ಟ್ ಮಾಡಲಾಗಿದೆ. ಇದನ್ನೂ ಓದಿ: ಸಿಂಗಾಪುರ ಭೇಟಿ ರದ್ದು – ನಾನು ಯಾರನ್ನೂ ದೂಷಿಸಲ್ಲ: ಕೇಜ್ರಿವಾಲ್
ಕೋವಿಡ್ನಿಂದ ಇಂದು 4 ಮರಣ ಪ್ರಕರಣ ದಾಖಲಾಗಿದ್ದು, ಇದುವೆರೆಗೆ ಒಟ್ಟು 40,101 ಮಂದಿ ಜೀವ ಕಳೆದುಕೊಂಡಿದ್ದಾರೆ. ಇಂದಿನ ಪಾಸಿಟಿವಿಟಿ ದರ ಶೇ.6.51 ಇದೆ. 9,866 ಸಕ್ರಿಯ ಪ್ರಕರಣಗಳಿವೆ. ಇಂದು 32,685 ಮಂದಿಯನ್ನು (24,496 ರ್ಯಾಪಿಡ್ ಆಂಟಿಜನ್, 8,189 ಆರ್ಟಿ-ಪಿಸಿಆರ್) ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೇ ಇಂದು 95,524 ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: MIG-21 ವಿಮಾನವನ್ನು ಸೇವೆಯಿಂದ ವಜಾಗೊಳಿಸೋದು ಯಾವಾಗ? – ವರುಣ್ ಗಾಂಧಿ
ಬೆಂಗಳೂರು ನಗರದಲ್ಲೇ 1,615 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ 6, ಬಾಗಲಕೋಟೆ 15, ಬಳ್ಳಾರಿ 27, ಬೆಳಗಾವಿ 34, ಬೀದರ್ 13, ಚಾಮರಾಜನಗರ 7, ಚಿಕ್ಕಬಳ್ಳಾಪುರ 15, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ತಲಾ ಒಂದೊಂದು ಪ್ರಕರಣ, ದಕ್ಷಿಣ ಕನ್ನಡ 20, ದಾವಣಗೆರೆ 6, ಧಾರವಾಡ 70, ಗದಗ 1, ಹಾಸನ 40, ಹಾವೇರಿ 8, ಕಲಬುರಗಿ 33, ಕೊಡಗು 47, ಕೋಲಾರ 18, ಕೊಪ್ಪಳ 3, ಮಂಡ್ಯ 22, ಮೈಸೂರು 51, ರಾಯಚೂರು 6, ರಾಮನಗರ 3, ಶಿವಮೊಗ್ಗ 12, ತುಮಕೂರು 41, ಉಡುಪಿ 7, ಉತ್ತರ ಕನ್ನಡ 6, ವಿಜಯಪುರ 2 ಹಾಗೂ ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.