ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸಂಖ್ಯೆ ಇಳಿಕೆಯಾದಂತೆ ಕಾಣುತ್ತಿದೆ. ಇಂದು 1,286ಕ್ಕೆ ಇಳಿಕೆಯಾಗಿದೆ. ಮೂವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಇಂದು ರಾಜ್ಯದಲ್ಲಿ 2,358 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 39,97,181 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇಂದು 27,668 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೆ 6,84,91,097 ಮಂದಿಯನ್ನು ಟೆಸ್ಟ್ ಮಾಡಲಾಗಿದೆ. ಇದನ್ನು ಓದಿ: ಉರಿಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ
ಕೋವಿಡ್ನಿಂದ ಇಂದು ಎರಡು ಮರಣ ಪ್ರಕರಣ ದಾಖಲಾಗಿದ್ದು, ಇದುವೆರೆಗೆ ಒಟ್ಟು 40,182 ಮಂದಿ ಜೀವ ಕಳೆದುಕೊಂಡಿದ್ದಾರೆ. ಇಂದಿನ ಪಾಸಿಟಿವಿಟಿ ದರ ಶೇ.4.64 ಇದೆ. 8,700 ಸಕ್ರಿಯ ಪ್ರಕರಣಗಳಿವೆ. ಇಂದು 27,668 ಮಂದಿಯನ್ನು (7,387 ರ್ಯಾಪಿಡ್ ಆಂಟಿಜನ್, 20,281 ಆರ್ಟಿ-ಪಿಸಿಆರ್) ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೇ ಇಂದು 30,173 ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ರಾಕೆಟ್ರಿ’ ಸಿನಿಮಾದಲ್ಲಿ ಇಸ್ರೊಗೆ ಕಳಂಕ ತರುವಂತಹ ಸುಳ್ಳುಗಳನ್ನು ಹೇಳಲಾಗಿದೆ: ಮಾಜಿ ವಿಜ್ಞಾನಿಗಳ ಆರೋಪ
ಬೆಂಗಳೂರು ನಗರದಲ್ಲೇ 796 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ 6, ಬಾಗಲಕೋಟೆ 3, ಬಳ್ಳಾರಿ 33, ಬೆಳಗಾವಿ 16, ಬೀದರ್ 3, ಚಾಮರಾಜನಗರ 17, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 20, ಚಿತ್ರದುರ್ಗ 4, ದಕ್ಷಿಣ ಕನ್ನಡ 18, ದಾವಣಗೆರೆ 5, ಧಾರವಾಡ 23, ಗದಗ 0, ಹಾಸನ 40, ಹಾವೇರಿ 6, ಕಲಬುರಗಿ 17, ಕೊಡಗು 46, ಕೋಲಾರ 43, ಕೊಪ್ಪಳ 3, ಮಂಡ್ಯ 20, ಮೈಸೂರು 64, ರಾಯಚೂರು 16, ರಾಮನಗರ 24, ಶಿವಮೊಗ್ಗ 19, ತುಮಕೂರು 12, ಉಡುಪಿ 7, ಉತ್ತರ ಕನ್ನಡ 17, ವಿಜಯಪುರದಲ್ಲಿ 2 ಹಾಗೂ ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.