ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯ ವಾತಾವರಣ ಮುಂದುವರಿಯಲಿದೆ.
ರಾಜ್ಯ ಕರಾವಳಿಯಲ್ಲಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮುಂದುವರಿಸಲಾಗಿದೆ. ಇಂದು ಆರೆಂಜ್ ಜೋನ್ ನಲ್ಲಿದ್ದ ಕರಾವಳಿಯ ಎರಡು ಜಿಲ್ಲೆಗಳಿಗೆ ನಾಳೆ ಮತ್ತೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲರ್ಟ್ ನೀಡಿರೋ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಜೋರು ಗಾಳಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ 30 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಕೊಡಗು ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್, ಗರಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 26-19
ಮಂಗಳೂರು: 27-25
ಶಿವಮೊಗ್ಗ: 25-21
ಬೆಳಗಾವಿ: 23-21
ಮೈಸೂರು: 27-20
ಮಂಡ್ಯ: 27-21
ಮಡಿಕೇರಿ: 19-16
ರಾಮನಗರ: 27-21
ಹಾಸನ: 23-19
ಚಾಮರಾಜನಗರ: 27-21
ಚಿಕ್ಕಬಳ್ಳಾಪುರ: 26-20
ಕೋಲಾರ: 27-21
ತುಮಕೂರು: 26-20
ಉಡುಪಿ: 27-24
ಕಾರವಾರ: 27-26
ಚಿಕ್ಕಮಗಳೂರು: 22-18
ದಾವಣಗೆರೆ: 26-21
ಹುಬ್ಬಳ್ಳಿ: 24-21
ಚಿತ್ರದುರ್ಗ: 26-21
ಹಾವೇರಿ: 25-21
ಬಳ್ಳಾರಿ: 29-23
ಗದಗ: 26-21
ಕೊಪ್ಪಳ: 27-22
ರಾಯಚೂರು: 30-23
ಯಾದಗಿರಿ: 30-24
ವಿಜಯಪುರ: 27-22
ಬೀದರ್: 28-22
ಕಲಬುರಗಿ: 29-27
ಬಾಗಲಕೋಟೆ: 27-23
Web Stories